ಕೊರಟಗೆರೆ:

      ಅಕ್ರಮವಾಗಿ ಮರಳು ಶೇಖರಣೆ ಮತ್ತು ಸಾಗಾಣಿಕೆ ಮಾಡುತ್ತೀದ್ದ ಮರಳು ಅಡ್ಡೆಯ ಮೇಲೆ ದಾಳಿ ನಡೆಸಿದ ಪಿಎಸೈ ಮಂಜುನಾಥ ನೇತೃತ್ವದ ಪೊಲೀಸರ ತಂಡ 2ಟ್ರಾಕ್ಟರ್ ಮತ್ತು 1ಲಾರಿಯನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿರುವ ಘಟನೆ ಗುರುವಾರ ನಡೆದಿದೆ.

      ತಾಲೂಕಿನ ಚನ್ನರಾಯನದುರ್ಗ ಹೋಬಳಿ ತೋವಿನಕೆರೆ ಗ್ರಾಪಂ ವ್ಯಾಪ್ತಿಯ ಬೋರಪ್ಪನಹಟ್ಟಿ ಸಮೀಪದ ಗೋಬಲಗುಟ್ಟೆ ಕೆರೆಯ ಮರಳನ್ನು ಟ್ರಾಕ್ಟರ್ ಮೂಲಕ ಮರಳು ಸಾಗಾಣಿಕೆಯ ಮೂಲಕ ಬೋರಪ್ಪನಹಟ್ಟಿ ಸರಕಾರಿ ಶಾಲೆಯ ಹಿಂಭಾಗ ಮರಳು ಶೇಖರಣೆ ಮಾಡಿದ ಮರಳನ್ನು ಲಾರಿಯ ಮೂಲಕ ಬೆಂಗಳೂರಿಗೆ ಸಾಗಾಣಿಕೆ ಮಾಡುತ್ತೀದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

      ಮರಳು ಸಾಗಾಣಿಕೆಯಲ್ಲಿ ತೊಡಗಿದ್ದ ಬೋರಪ್ಪನಹಟ್ಟಿಯ ಗಿರೀಶ್ ಮತ್ತು ಗಟ್ಲಹಳ್ಳಿಯ ಮೋಹನ್ ಎಂಬುವರನ್ನು ಬಂಧಿಸಿದ್ದಾರೆ. ದಾಳಿಯಲ್ಲಿ ಪೊಲೀಸ್ ಇಲಾಖೆಯ ಸದಾನಂದ, ರಾಜಶೇಖರ್, ರಂಗನಾಥ, ಸಿದ್ದಲಿಂಗಪ್ರಸನ್ನ, ಕಿರಣ್ ಇದ್ದರು. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

(Visited 95 times, 1 visits today)