ತುಮಕೂರು :   

     ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿನ ಎಲ್ಲಾ ಯೋಜನೆಗಳನ್ನು ಸಮರ್ಪಕವಾಗಿ ಕಾರ್ಯಗತಗೊಳಿಸಿ ಶೇ.100ರಷ್ಟು ಗುರಿ ಸಾಧಿಸಬೇಕು. ಇಲ್ಲದಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದ ಜಿ.ಎಸ್. ಬಸವರಾಜು ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಂದು ನಡೆದ ದಿಶಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಕೃಷಿ, ತೋಟಗಾರಿಕೆ, ರೇμÉ್ಮ, ಅರಣ್ಯ ಇಲಾಖೆ ಸೇರಿದಂತೆ ಇತರೆ ಇಲಾಖೆಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಕೂಲಿಕಾರರು ಲಭ್ಯವಿಲ್ಲ ಎಂಬ ಕಾರಣವೊಡ್ಡಿ ಕಾರ್ಯಪ್ರಗತಿಯಲ್ಲಿ ವಿಫಲತೆ ತೋರಬಾರದರು. ವೈಯಕ್ತಿಕ ಕಾಮಗಾರಿಗೆ ಒತ್ತು ಕೊಟ್ಟು ಪ್ರಗತಿ ಸಾಧಿಸಬೇಕು. ಕುಣಿಗಲ್ ತಾಲೂಕಿನಲ್ಲಿ ಕಡಿಮೆ ಸಾಧನೆಯಾಗಿದ್ದು, ಈ ತಾಲೂಕಿನಲ್ಲಿ ನರೇಗಾ ಯೋಜನೆಗೆ ಹೆಚ್ಚು ಆದ್ಯತೆ ನೀಡಬೇಕು ಎಂದು ಸೂಚಿಸಿದರು.

      ಸಾಮಾಜಿಕ ಅರಣ್ಯ ಇಲಾಖೆಯ ಸಾಧನೆ ಸಮಾಧಾನಕರವಾಗಿಲ್ಲ. ನರ್ಸರಿಯಲ್ಲಿ ಹುಣಸೆ, ಮಾವು, ಜಂಬುನೇರಳೆ ಗಿಡಗಳನ್ನು ಹೆಚ್ಚು ಬೆಳೆಸಿ ರೈತರಿಗೆ ವಿತರಣೆ ಮಾಡಬೇಕು. ವಿತರಣೆಯಾದ ಸಸಿಗಳು ಬೆಳೆದು ಫಸಲಿನ ಹಂತಕ್ಕೆ ಬರುವವರೆಗೂ ಸಂರಕ್ಷಣೆಯ ಹೊಣೆಯನ್ನು ತಾವೇ ತೆಗೆದುಕೊಳ್ಳಬೇಕು ಎಂದು ಸಾಮಾಜಿಕ ಅರಣ್ಯ ಇಲಾಖಾಧಿಕಾರಿಗೆ ಸೂಚಿಸಿದರು.

      ಮಾರಾಟ ಮಳಿಗೆ ಸ್ಥಾಪನೆಗೆ ಸ್ಥಳ ಗುರುತಿಸಿ, ಸ್ಮಾರ್ಟ್ ಸಿಟಿಯಲ್ಲಿ ಉಳಿತಾಯದ ಹಣ ಬಳಕೆ ಮಾಡಿಕೊಂಡು ಮಳಿಗೆ ಸ್ಥಾಪಿಸಬಹುದಾಗಿದೆ. ಹಾಗಾಗಿ ಮೊದಲು ಯೋಜನಾ ವರದಿ ತಯಾರಿಸುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಅಧಿಕಾರಿಗಳಿಗೆ ನಿರ್ದೇಶಿಸಿದರು.

‘ಮಗುವಿಗೊಂದು ಮರ-ಶಾಲೆಗೊಂದು ವನ’ ಕಾರ್ಯಕ್ರಮದಡಿ ನೆರಳು, ಫಲ ನೀಡುವ ಸಸಿಗಳನ್ನು ನೆಡಬೇಕು. ಅರಣ್ಯ ಮತ್ತು ಶಿಕ್ಷಣ ಇಲಾಖೆ ಸಮನ್ವಯ ಸಾಧಿಸಿ ಈ ಯೋಜನೆಯನ್ನು ಯಶಸ್ವಿಗೊಳಿಸಬೇಕು ಎಂದರಲ್ಲದೆ ಎಸ್ಸೆಸ್ಸೆಲ್ಸಿಯಲ್ಲಿ ವಿದ್ಯಾರ್ಥಿಗಳು ಹೆಚ್ಚು ಅಂಕ ಗಳಿಸಲು ಒತ್ತು ನೀಡಬೇಕು. ಫಲಿತಾಂಶದಲ್ಲಿ ಜಿಲ್ಲೆ ಉತ್ತಮ ಸ್ಥಾನಕ್ಕೇರಲು ಶ್ರಮಿಸಬೇಕು ಎಂದು ತುಮಕೂರು ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಡಿಡಿಪಿಐಗಳಿಗೆ ಸಂಸದರು ನಿರ್ದೇಶಿಸಿದರು.

(Visited 8 times, 1 visits today)