BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಎನ್‌ಡಿಎ ಪಕ್ಷದ ಹೋರಾಟದ ಪಲವಾಗಿ ಜಿಲ್ಲೆಗೆ ಹೇಮಾವತಿ ನೀರು
  • ಸಣ್ಣ ಸಮುದಾಯಗಳು ಮುಂದೆ ಬರಬೇಕೆಂದರೆ  ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಸಾಧ್ಯ
  • ಚನ್ನಬಸವ ರಾಜೇಂದ್ರ ಸ್ವಾಮಿಗಳ ಮಾಸಿಕ ಪುಣ್ಯಸ್ಮರಣೆ
  • ಮುಸ್ಲಿಂ ಮಹಿಳೆಯರು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಬೇಕು
  • ಸ್ವಾತಂತ್ರೊeತ್ಸವದ ಸಂಭ್ರಮಕ್ಕೆ ರೋಟರಿ ಸೇವಾ ಸ್ಪರ್ಶ
  • ಬೆಂಕಿಗೆ ಸುಟ್ಟು ಬೂದಿಯಾದ ರೇಷ್ಮೆ ಬೆಳೆಗಾರನ ಬದುಕು
  • ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು
  • ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಎಲ್‍ಕೆಜಿ-ಯುಕೆಜಿಯನ್ನು ಅಂಗನವಾಡಿಗಳಲ್ಲೇ ಆರಂಭಿಸಲು ಆಗ್ರಹ
ತುಮಕೂರು ಜಿಲ್ಲಾ ಸುದ್ಧಿಗಳು

ಎಲ್‍ಕೆಜಿ-ಯುಕೆಜಿಯನ್ನು ಅಂಗನವಾಡಿಗಳಲ್ಲೇ ಆರಂಭಿಸಲು ಆಗ್ರಹ

By News Desk BenkiyabaleUpdated:March 19, 2020 6:42 pm

ತುಮಮಕೂರು :

      ಅಂಗನವಾಡಿಗಳಲ್ಲಿ ಪೌಷ್ಠಿಕ ಆಹಾರ ದೊರೆಯುತ್ತಿದೆ. ಹೀಗಾಗಿ ಶಾಲಾಪೂರ್ವ ಶಿಕ್ಷಣವಾದ ಎಲ್‍ಕೆಜಿ, ಯುಕೆಜಿಯನ್ನು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯಾಧ್ಯಕ್ಷೆ ಎಸ್.ವರಲಕ್ಷ್ಮಿ ಒತ್ತಾಯಿಸಿದರು.

       ತುಮಕೂರಿನ ಗಾಂಧೀನಗರದಲ್ಲಿರುವ ಜನಚಳವಳಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಅಂಗವಾಡಿಗಳಲ್ಲಿ ಶಾಲಾ ಪೂರ್ವ ಶಿಕ್ಷಣ ಆರಂಭಿಸುವ ಸಾಧಕ-ಬಾಧಕಗಳ ಕುರಿತ ಸಮಾಲೋಚನ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

      ಅಂಗನವಾಡಿಗಳಲ್ಲಿ ಮಕ್ಕಳ ಲಾಲನೆ-ಪಾಲನೆಯ ಜೊತೆಯಲ್ಲಿ ಶಾಲಾಪೂರ್ವ ಶಿಕ್ಷಣ ನೀಡಿದರೆ ಕಲಿಕೆ ಉತ್ತಮವಾಗಿರುತ್ತದೆ. ಈಗಾಗಲೇ ಅಂಗನವಾಡಿಗಳಲ್ಲಿ ಬೋಧಿಸಲು ಪಠ್ಯವೂ ಇದೆ. ಅಂಗನವಾಡಿಗಳಲ್ಲಿ ಮಕ್ಕಳಿಗೆ ವಿಟಮಿನ್, ಪ್ರೋಟೀನ್ ಅಂಶವುಳ್ಳ ಆಹಾರ ನೀಡಲಾಗುತ್ತಿದೆ. ಆರೋಗ್ಯದ ಕಡೆಯು ಗಮನ ನೀಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಮಕ್ಕಳ ಹಾರೈಕೆಯು ಮುಖ್ಯವಾಗಿದೆ ಎಂದು ಹೇಳಿದರು.

      ಪ್ರತಿಯೊಬ್ಬ ಮಗುವಿಗೂ ಸಾಮಾಜಿಕರಣದ ಶಿಕ್ಷಣ ಸಿಗಬೇಕು. ಸಮಾಜದಲ್ಲಿ ಮತ್ತು ಪ್ರಕೃತಿಯ ನಡುವೆ ಬೆರೆತು ಸಂವಹನ ನಡೆಸುತ್ತಾ ಮಗುವಿನ ಬೆಳವಣಿಗೆ ಆಗುತ್ತದೆ. ಆನಂತರ ಬೇಕಾದರೆ ಔಪಚಾರಿಕ ಶಿಕ್ಷಣ ನೀಡಿದರೆ ಹೆಚ್ಚು ಅನುಕೂಲವಾಗುತ್ತದೆ ಎಂದು ಪ್ರತಿಪಾದಿಸಿದರು.
ಪ್ರಸ್ತುತ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯಲ್ಲಿ ಸಾವಿರಾರು ಶಿಕ್ಷಕರ ಕೊರತೆ ಇದೆ. ಶಿಕ್ಷಕರಿಲ್ಲದೆ ಶಿಕ್ಷಣಕ್ಕೆ ಹಿನ್ಡೆಯಾಗುತ್ತಿದೆ. ಇಂತಹ ಹೊತ್ತಿನಲ್ಲಿ ಎಲ್.ಕೆ.ಜಿ ಮತ್ತು ಯುಕೆಜಿಗಳನ್ನು ಅಂಗನವಾಡಿಗಳಲ್ಲೇ ಆರಂಭಿಸುವುದು ಸೂಕ್ತ ಎಂದು ತಿಳಿಸಿದರು.

       ಸಾಮಾಜಿಕ ಹೋರಾಟಗಾರ ಶ್ರೀಪಾದ್ ಭಟ್ ಮಾತನಾಡಿ, ಸಂದಿಗ್ದ ಪರಿಸ್ಥಿತಿಯಲ್ಲಿ ಅಂಗನವಾಡಿಗಳು ಉಳಿಯಬೇಕು, ಸರ್ಕಾರಿ ಶಿಕ್ಷಣ ವ್ಯವಸ್ಥೆಯೂ ಉಳಿಯಬೇಕು. ಹಲವು ವರ್ಷಗಳಿಂದ ನಡೆಸಿಕೊಂಡು ಬಂದಿರುವ ಅಂಗನವಾಡಿಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಯೋಚಿಸಬೇಕು. ಈ ಸಂಬಂಧ ಚರ್ಚೆ ನಡೆಸಿ ಮುಂದೆ ಸಾಗಬೇಕು ಎಂದು ಹೇಳಿದರು. ಪೂರ್ವ ಶಾಲಾ ಶಿಕ್ಷಣವನ್ನು ಜೊತೆಜೊತೆಯಲ್ಲೇ ತೆಗೆದುಕೊಂಡು ಹೋಗಬೇಕು ಎಂದು ಸರ್ಕಾರ ಯೋಚಿಸುವ ಹೊತ್ತಿನಲ್ಲಿ ಶಾಲಾಪೂರ್ವ ಶಿಕ್ಷಣ ಪ್ರತ್ಯೇಕಿಸುವುದು ಹೇಗೆ ಎಂಬ ಬಗ್ಗೆ ಚಿಂತನೆ ನಡೆಯಬೇಕು ಎಂದು ಸಲಹೆ ನೀಡಿದರು.

      ಜನಪರ ಚಿಂತಕ ಕೆ.ದೊರೈರಾಜ್ ಮಾತನಾಡಿ, ಎಲ್ಲರಿಗೂ ಶಿಕ್ಷಣ ಲಭ್ಯವಾಗಬೇಕು ಎಂಬ ಹಿಂದಿನ ಸಂಘರ್ಷದಿಂದ ಪರಿಸ್ಥಿತಿ ಬದಲಾಗಿದೆ. ಶಿಕ್ಷಣ ಸೇವೆಯಾಗದೆ ಉದ್ಯಮವಾಗಿ ವಾಣಿಜ್ಯೀಕರಣಗೊಂಡಿದೆ. ಶಿಕ್ಷಣದ ಖಾಸಗೀಕರಣದಿಂದಾಗಿ ಆಕರ್ಷಕ ರೂಪಗಳಲ್ಲಿ ಪೋಷಕರನ್ನು ಸೆಳೆಯುತ್ತಿರುವ ಖಾಸಗೀಕರಣ ಪ್ರಭುತ್ವಗಳ ಮೇಲೆ ಒತ್ತಡ ಹೇರುತ್ತಿದೆ. ಹಾಗಾಗಿ ದುರ್ಬಲ ವರ್ಗಗಳಿಗೆ ಅಗತ್ಯವಾದ ಶೈಕ್ಷಣಿಕ ವ್ಯವಸ್ಥೆಯನ್ನು ಸರ್ಕಾರ ನಿರ್ಲಕ್ಷಿಸುತ್ತಿದೆ ಎಂದು ಆಪಾದಿಸಿದರು.

      ಸಾಮಾಜಿಕ ಕಾರ್ಯಕರ್ತರ ಕಾಡಶೆಟ್ಟಿಹಳ್ಳಿ ಸತೀಶ್ ಮಾತನಾಡಿ, ಎಲ್.ಕೆ.ಜಿ ಮತ್ತು ಯುಕೆಜಿ ಯನ್ನು ಅಂಗನವಾಡಿಗಳಲ್ಲೇ ಆರಂಭಿಸಬೇಕು. ಆಧುನಿಕ ಒತ್ತಡದ ಸಂದರ್ಭದಲ್ಲಿ ಔಪಚಾರಿಕ ಶಿಕ್ಷಣ ಪಡೆಯುತ್ತಿರುವ ಎಲ್.ಕೆ.ಜಿ ಮತ್ತು ಯುಕೆಜಿ ಮಕ್ಕಳು ಅಪೌಷ್ಠಿಕತೆಯಿಂದ ನರಳುತ್ತಿದ್ದಾರೆ. ಹಾಗಾಗಿ ಅಂಗನವಾಡಿಗಳಲ್ಲಿ ಉತ್ತಮ ಪೌಷ್ಠಿಕ ಆಹಾರ ದೊರೆಯುತ್ತಿದ್ದು ಮಕ್ಕಳ ಕಲಿಕೆಗೆ ಸಹಕಾರಿಯಾಗಿದೆ ಎಂದರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷೆ ಬಾ.ಹ.ರಮಾಕುಮಾರಿ ಮಾತನಾಡಿ ಅಂಗನವಾಡಿ ವ್ಯವಸ್ಥೆಯನ್ನು ದುರ್ಬಲಗೊಳಿಸುವುದು ಸಹಿಸಲಾಗದು ಎಂದು ಹೇಳಿದರು.

      ಸಭೆಯ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಜಿ.ಕಮಲ, ವೈದ್ಯೆ ಡಾ.ಅರುಂಧತಿ, ಪತ್ರಕರ್ತರ ಸಂಘ ಜಿಲ್ಲಾಧ್ಯಕ್ಷ ಚಿ.ನಿ.ಪುರುಷೋತ್ತಮ್, ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ ಮಾತನಾಡಿದರು. ಅನಸೂಯ ಸ್ವಾಗತಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುಲ್ಜಾರ್ ಬಾನು ಪ್ರಾಸ್ತಾವಿಕ ಮಾತನಾಡಿದರು. ಪಾರ್ವತಮ್ಮ ವಂದಿಸಿದರು.

(Visited 12 times, 1 visits today)
Previous Article25 ಅರಣ್ಯ ಸಿಬ್ಬಂದಿಗಳಿಂದ ಕಾರ್ಯಾಚರಣೆ : ಚಿರತೆ ಸೆರೆ
Next Article ಚಿಕ್ಕನಾಯಕನಹಳ್ಳಿ : ಆಕಸ್ಮಿಕ ಬೆಂಕಿ ಅವಘಡ : ಸಾಮಗ್ರಿಗಳು ಭಸ್ಮ!
News Desk Benkiyabale

Related Posts

ಎನ್‌ಡಿಎ ಪಕ್ಷದ ಹೋರಾಟದ ಪಲವಾಗಿ ಜಿಲ್ಲೆಗೆ ಹೇಮಾವತಿ ನೀರು

August 17, 2026 5:14 pm news

ಸಣ್ಣ ಸಮುದಾಯಗಳು ಮುಂದೆ ಬರಬೇಕೆಂದರೆ  ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಸಾಧ್ಯ

August 17, 2026 5:12 pm news

ಚನ್ನಬಸವ ರಾಜೇಂದ್ರ ಸ್ವಾಮಿಗಳ ಮಾಸಿಕ ಪುಣ್ಯಸ್ಮರಣೆ

August 17, 2026 5:10 pm news
ತಾಜಾ ಸುದ್ಧಿಗಳು
news

ಎನ್‌ಡಿಎ ಪಕ್ಷದ ಹೋರಾಟದ ಪಲವಾಗಿ ಜಿಲ್ಲೆಗೆ ಹೇಮಾವತಿ ನೀರು

August 17, 2026 5:14 pm
news

ಸಣ್ಣ ಸಮುದಾಯಗಳು ಮುಂದೆ ಬರಬೇಕೆಂದರೆ  ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಸಾಧ್ಯ

August 17, 2026 5:12 pm
news

ಚನ್ನಬಸವ ರಾಜೇಂದ್ರ ಸ್ವಾಮಿಗಳ ಮಾಸಿಕ ಪುಣ್ಯಸ್ಮರಣೆ

August 17, 2026 5:10 pm
news

ಮುಸ್ಲಿಂ ಮಹಿಳೆಯರು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಬೇಕು

August 17, 2026 5:09 pm
news

ಸ್ವಾತಂತ್ರೊeತ್ಸವದ ಸಂಭ್ರಮಕ್ಕೆ ರೋಟರಿ ಸೇವಾ ಸ್ಪರ್ಶ

August 17, 2026 5:07 pm
news

ಬೆಂಕಿಗೆ ಸುಟ್ಟು ಬೂದಿಯಾದ ರೇಷ್ಮೆ ಬೆಳೆಗಾರನ ಬದುಕು

August 17, 2026 5:05 pm
Our Youtube Channel
Our Picks

ಎನ್‌ಡಿಎ ಪಕ್ಷದ ಹೋರಾಟದ ಪಲವಾಗಿ ಜಿಲ್ಲೆಗೆ ಹೇಮಾವತಿ ನೀರು

August 17, 2026 5:14 pm

ಸಣ್ಣ ಸಮುದಾಯಗಳು ಮುಂದೆ ಬರಬೇಕೆಂದರೆ  ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಸಾಧ್ಯ

August 17, 2026 5:12 pm

ಚನ್ನಬಸವ ರಾಜೇಂದ್ರ ಸ್ವಾಮಿಗಳ ಮಾಸಿಕ ಪುಣ್ಯಸ್ಮರಣೆ

August 17, 2026 5:10 pm

ಮುಸ್ಲಿಂ ಮಹಿಳೆಯರು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಬೇಕು

August 17, 2026 5:09 pm

ಸ್ವಾತಂತ್ರೊeತ್ಸವದ ಸಂಭ್ರಮಕ್ಕೆ ರೋಟರಿ ಸೇವಾ ಸ್ಪರ್ಶ

August 17, 2026 5:07 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಎನ್‌ಡಿಎ ಪಕ್ಷದ ಹೋರಾಟದ ಪಲವಾಗಿ ಜಿಲ್ಲೆಗೆ ಹೇಮಾವತಿ ನೀರು

By News Desk BenkiyabaleAugust 17, 2026 5:14 pm

ತುರುವೇಕೆರೆ: ತಾಲ್ಲೂಕಿನ ಎನ್.ಡಿ.ಎ ಪಕ್ಷದ ಹೋರಾಟದ ಪಲವಾಗಿ ಜಿಲ್ಲೆಗೆ ಹೇಮಾವತಿ ನೀರು ಹರಿದಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು. ಪಟ್ಟಣದ…

ಸಣ್ಣ ಸಮುದಾಯಗಳು ಮುಂದೆ ಬರಬೇಕೆಂದರೆ  ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಸಾಧ್ಯ

August 17, 2026 5:12 pm

ಚನ್ನಬಸವ ರಾಜೇಂದ್ರ ಸ್ವಾಮಿಗಳ ಮಾಸಿಕ ಪುಣ್ಯಸ್ಮರಣೆ

August 17, 2026 5:10 pm

ಮುಸ್ಲಿಂ ಮಹಿಳೆಯರು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಬೇಕು

August 17, 2026 5:09 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.