BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ
  • ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ
  • ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ
  • ರೈಲುಗಳು ನಮ್ಮ ಜೀವನಾಡಿಗಳಾಗಿವೆ
  • ಶಾಸಕ ಟಿ.ಬಿ. ಜಯಚಂದ್ರ ರಾಜೀನಾಮೆ ಸುಳಿವು
  • ಆರ್ಥಿಕ ಸಾಕ್ಷರತಾ ಶಿಬಿರ ಯಶಸ್ವಿ
  • ೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ
  • ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕಸ ವಿಲೇವಾರಿ ಘಟಕದಿಂದ ತೀವ್ರ ಸಮಸ್ಯೆ ವಿರೋಧಿಸಿ ಸಾರ್ವಜನಿಕರ ಪ್ರತಿಭಟನೆ
Trending

ಕಸ ವಿಲೇವಾರಿ ಘಟಕದಿಂದ ತೀವ್ರ ಸಮಸ್ಯೆ ವಿರೋಧಿಸಿ ಸಾರ್ವಜನಿಕರ ಪ್ರತಿಭಟನೆ

By News Desk BenkiyabaleUpdated:January 22, 2020 6:32 pm

ಗುಬ್ಬಿ :

      ಕಳೆದ ಐದು ವರ್ಷದಿಂದ ಕಸ ವಿಲೇವಾರಿ ಘಟಕದಿಂದ ತೀವ್ರ ಸಮಸ್ಯೆ ಉಂಟಾಗಿದ್ದು ಈ ಬಗ್ಗೆ ಸ್ಥಳೀಯ ಪಟ್ಟಣ ಪಂಚಾಯಿತಿ ಯಾವುದೇ ಪರಿಹಾರ ಕಂಡುಕೊಳ್ಳದೇ ಮಾರುತಿನಗರ ಬಡಾವಣೆಯ ನಿವಾಸಿಗಳಿಗೆ ಅನಾರೋಗ್ಯಕ್ಕೆ ತುತ್ತು ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದ ಗ್ರಾಮಸ್ಥರು ಘಟಕದಲ್ಲಿ ಕೆಲಸ ಮಾಡಲು ಬಂದ ಜೆಸಿಬಿ ಯಂತ್ರವನ್ನು ತಡೆದು ಅಧಿಕಾರಿಗಳನ್ನು ಘೇರಾವ್ ಮಾಡಿ ಪ್ರತಿಭಟಿಸಿದ ಘಟನೆ ನಡೆಯಿತು.

      ಕಳೆದ 10 ವರ್ಷದ ಹಿಂದೆ ಕಸ ವಿಲೇವಾರಿ ಘಟಕವನ್ನು ಪಟ್ಟಣದ ಹೊರವಲಯದ ಮಾರುತಿನಗರ ಬಡಾವಣೆ ಸಮೀಪ ನಿರ್ಮಾಣ ಮಾಡಿದ ಪಟ್ಟಣ ಪಂಚಾಯಿತಿ ಕಸವನ್ನು ಈ ಸ್ಥಳದ 4 ಎಕರೆ ಪ್ರದೇಶದಲ್ಲೇ ಶೇಖರಿಸಲಾಯಿತು. ಈ ಕಸವನ್ನು ಯಾವುದೇ ರೀತಿ ಪರಿಷ್ಕರಿಸದೇ ಒಣ ಮತ್ತು ಹಸಿ ಕಸವನ್ನು ವಿಂಗಡಿಸದೇ ಎಲ್ಲಂದರಲ್ಲಿ ಕಸವನ್ನು ಬಿಸಾಡಲಾಗಿದೆ. ಈ ಜತೆಗೆ ಸತ್ತ ಜಾನುವಾರುಗಳ ಕಳೇಬರ, ಕೋಳಿ ತ್ಯಾಜ್ಯವನ್ನು ಸಹ ಇಲ್ಲಿ ಎಸೆಯಲಾಗಿದೆ. ತ್ಯಾಜ್ಯ ತಿನ್ನಲು ಬರುವ ನಾಯಿಗಳ ಹಿಂಡು ಕಸವನ್ನೇ ಕೆದಕಿ ದುರ್ವಾಸನೆಯನ್ನು ಹರಡುತ್ತಿದೆ. ಚೇಳೂರು ರಸ್ತೆಯ ಹಾದು ಹೋಗುವ ಸಂದರ್ಭದಲ್ಲಿ ಸುಮಾರು 500 ಮೀಟರ್ ಕಸದ ಕೆಟ್ಟ ವಾಸನೆ ಮೂಗಿಗೆ ಬಡಿಯುತ್ತದೆ. ಈ ಜತೆಗೆ ಮಾರುತಿನಗರ ಬಡಾವಣೆಯ ನಿವಾಸಿಗಳಲ್ಲಿ ಅನಾರೋಗ್ಯ ಕಾಣಿಸಿಕೊಂಡಿದೆ. ಕಸಕ್ಕೆ ಬೆಂಕಿ ಇಟ್ಟು ಮೂರ್ನಾಲ್ಕು ದಿನ ಹೊಗೆಯ ಜತೆ ಬುದುಕು ಸಾಗಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದ ಸ್ಥಳೀಯರು ಕಸವನ್ನು ಒಂದಡೆ ಸಂಗ್ರಹ ಮಾಡಲು ಬಂದ ಜೆಸಿಬಿ ಯಂತ್ರವನ್ನು ತಡೆದು ಘಟಕದ ಬಾಗಿಲು ಮುಚ್ಚಿ ಪ್ರತಿಭಟನೆ ನಡೆಸಿದರು.

      ಧರಣಿ ನೇತೃತ್ವ ವಹಿಸಿದ್ದ ಗ್ರಾಪಂ ಸದಸ್ಯ ಯತೀಶ್ ಮಾತನಾಡಿ ಕಸ ವಿಲೇವಾರಿ ಘಟಕವನ್ನು ಜನರು ವಾಸಿಸುವ ಸ್ಥಳದಲ್ಲಿ ನಿರ್ಮಾಣ ಮಾಡಿ ಇಲ್ಲಿನ ಸುಮಾರು 80 ಕುಟುಂಬಕ್ಕೆ ತೀವ್ರ ಸಮಸ್ಯೆ ಉಂಟು ಮಾಡಿದ ಪಟ್ಟಣ ಪಂಚಾಯಿತಿ ಘಟಕಕ್ಕೆ ಕಸ ತರುವ ಕೆಲಸ ಮಾತ್ರ ಮಾಡಿದೆ. ಈ ಬಗ್ಗೆ ಕಳೆದ್ ಐದಾರು ವರ್ಷದಿಂದ ಹಲವು ಬಾರಿ ಧರಣಿ ನಡೆಸಲಾಗಿದೆ. ಮನವಿ ಸಲ್ಲಿಸಲಾಗಿದೆ. ಆದರೂ ಯಾವುದೇ ಕ್ರಮವಹಿಸದ ಪಪಂ ಸಿಬ್ಬಂದಿಗಳು ಘಟಕದಲ್ಲಿ ಯಾವ ಯೋಜನೆಯನ್ನೂ ಅಳವಡಿಸಿಲ್ಲ. ಕಸ ವಿಂಗಡಣೆ, ಸಂಸ್ಕರಣೆ, ಗೊಬ್ಬರ ತಯಾರಿಕೆಗೆ ಯಂತ್ರ ಅಳವಡಿಸಿ ಘಟಕವನ್ನು ಆಧುನಿಕವಾಗಿ ಮಾರ್ಪಡಿಸಲು ಸ್ವಚ್ಚ ಭಾರತ್ ಯೋಜನೆಯಿಂದ 2 ಕೋಟಿ ರೂಗಳು ಮಂಜೂರು ಮಾಡಲಾಗಿತ್ತು. ಆದರೆ ಯಾವುದೇ ಕೆಲಸ ಮಾಡದೇ ಈ 2 ಕೋಟಿ ರೂ ಅವ್ಯವಹಾರ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಸ್ಥಳ ಪರಿಶೀಲನೆಗೆ ಬರಲಿದ್ದಾರೆ ಎಂಬ ಕಾರಣಕ್ಕೆ ಮುಖ್ಯಾಧಿಕಾರಿಗಳು 10 ವರ್ಷದ ಕಸವನ್ನು ಒಮ್ಮೇಲೇ ಎತ್ತಿಸಿ ಗುಂಡಿಯಲ್ಲಿ ಮುಚ್ಚಿ ಘಟಕ ಸ್ವಚ್ಚತೆಗೆ ಮುಂದಾಗಿರುವುದು ಖಂಡನೀಯ. ಜಿಲ್ಲಾಧಿಕಾರಿಗಳ ಭೇಟಿ ನಂತರವೇ ಘಟಕ ಸ್ವಚ್ಚತೆ ನಡೆಸಲಿ. ಅಧಿಕಾರಿಗಳಿಗೆ ವಾಸ್ತವ ಸ್ಥಿತಿ ಅರಿವಾಗಲಿ ಎಂದು ಕಿಡಿಕಾರಿದರು.

      ಸ್ವಚ್ಚತೆಗೆ ಮುಂದಾದ ಮುಖ್ಯಾಧಿಕಾರಿ ನಾಗೇಂದ್ರ ಮತ್ತು ಆರೋಗ್ಯ ನಿರೀಕ್ಷಕಿ ವಿದ್ಯಾ ಅವರನ್ನು ಘೇರಾವ್ ಹಾಕಿ ಜೆಸಿಬಿ ಯಂತ್ರವನ್ನು ಘಟಕದಲ್ಲೇ ನಿಲ್ಲಿಸಿದ್ದ ಪ್ರತಿಭಟನಾಕಾರರು ಒಂದು ತಾಸು ಸ್ಥಳದಲ್ಲೇ ಮೊಕ್ಕಂ ಹೂಡಿದ್ದರು. ನಂತರ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಎಂ.ಮಮತಾ ಘಟಕದೊಳಗಿನ ವಾಸ್ತವ ಸ್ಥಿತಿ ಅವಲೋಕಿಸಿದರು. ಸ್ಥಳದಲ್ಲಿದ್ದ ಸ್ಥಳೀಯ ನಿವಾಸಿಗಳು ಕಸ ವಿಲೇವಾರಿಯಿಂದ ಆಗುತ್ತಿರುವ ತೊಂದರೆಗಳನ್ನು ಎಳೆ ಎಳೆಯಾಗಿ ವಿವರಿಸಿದರು. ದಿಢೀರ್ ಸ್ವಚ್ಚತೆಗೆ ಬಂದ ಅಧಿಕಾರಿಗಳ ವರ್ತನೆ, 2 ಕೋಟಿ ರೂಗಳ ಅವ್ಯವಹಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಕಳೆದ 10 ವರ್ಷದಿಂದ ಆದ ಸಮಸ್ಯೆ ಬಗ್ಗೆ ತಿಳಿಸಿದ ಬಿಜೆಪಿ ಮುಖಂಡರಾದ ಜಿ.ಎನ್.ಬೆಟ್ಟಸ್ವಾಮಿ ಮತ್ತು ಎಚ್.ಟಿ.ಭೈರಪ್ಪ ಘಟಕದ ಸುತ್ತಲಿನ ನಿವಾಸಿಗಳಲ್ಲಿ ಕಾಣಿಸಿಕೊಂಡ ರೋಗಗಳ ಬಗ್ಗೆ ಮಾಹಿತಿ ನೀಡಿದರು. 2 ಕೋಟಿ ರೂಗಳ ಅನುದಾನದ ಬಗ್ಗೆ, ಕಸಕ್ಕೆ ಬೆಂಕಿ ಇಡುವ ಬಗ್ಗೆ, ಕಾವಲುಗಾರರ ನೇಮಕದ ಬಗ್ಗೆ ವಿವರಿಸಿದರು.

      ಸ್ಥಳೀಯ ಲಕ್ಷ್ಮಮ್ಮ ಮಾತನಾಡಿ ಕಳೆದ 10 ವರ್ಷದಿಂದ 15 ಬಾರಿ ಮನವಿ ನೀಡಿದ್ದೇವೆ. ಬರೀ ಭರವಸೆಗಳನ್ನು ನೀಡಿ ಕಸವನ್ನು ಮತ್ತೇ ಅದೇ ರೀತಿ ಬಿಸಾಡಲಾಗಿದೆ. ಮಾರುತಿನಗರ ಬಡಾವಣೆ ಜತೆಗೆ ಪಕ್ಕದಲ್ಲೇ ಸಾಲುಮರದ ತಿಮ್ಮಕ್ಕ ಉದ್ಯಾನವನವಿದೆ. ಸಮೀಪದಲ್ಲೇ ಹೆದ್ದಾರಿ ರಸ್ತೆ ಹಾದು ಹೋಗಿದೆ. ಆದರೂ ಕೊಳೆತು ನಾರುವ ಕಸವನ್ನು ಯಂತ್ರದ ಮೂಲಕ ಈಗ ಎತ್ತಲು ಮುಂದಾಗಿದ್ದಾರೆ. ಬೆಳಿಗ್ಗೆಯಿಂದ ದುರ್ವಾಸನೆಯು ಸುತ್ತಲಿನ ಗ್ರಾಮಗಳಿಗೆ ಹರಿಡಿದೆ. ನಾಯಿಗಳು, ಹಸುಗಳ ಕಳೇಬರ ಮಾರಕ ರೋಗಗಳಿಗೆ ಮೂಲವಾಗಲಿದೆ. ಈ ಬಗ್ಗೆ ಕ್ರಮವಹಿಸದಿದ್ದರೇ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

      ಪ್ರತಿಭಟನಾಕಾರರ ದೂರಗಳನ್ನು ಆಲಿಸಿದ ತಹಸೀಲ್ದಾರ್ ಎಂ.ಮಮತಾ ಘಟಕದ ಅಭಿವೃದ್ದಿಗೆ ಬಂದ ಅನುದಾನ ಸೇರಿದಂತೆ ಘಟಕದ ಸ್ವಚ್ಚತೆ ಬಗ್ಗೆ ಅಗತ್ಯ ಕ್ರಮಕೈಗೊಳ್ಳಲು ಒಂದು ವಾರದ ಕಾಲಾವಕಾಶ ಬೇಕಿದೆ. ಜಿಲ್ಲಾಢಳಿತದೊಂದಿಗೆ ಮಾತನಾಡಿ ಇಲ್ಲಿನ ಸಮಸ್ಯಗೆ ಶಾಶ್ವತ ಪರಿಹಾರ ಒದಗಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆದರು.

      ಈ ಸಂದರ್ಭದಲ್ಲಿ ಜಯಕರ್ನಾಟಕ ಸಂಘಟನೆ ಅಧ್ಯಕ್ಷ ವಿನಯ್, ಮುಖಂಡರಾದ ರವಿಕುಮಾರ್, ಸ್ವಾಮಿ, ನಾಗರಾಜು, ಸಾವಿತ್ರಮ್ಮ, ಪಪಂ ಸದಸ್ಯರಾದ ಜಿ.ಸಿ.ಕೃಷ್ಣಮೂರ್ತಿ, ಜಿ.ಎನ್.ಅಣ್ಣಪ್ಪಸ್ವಾಮಿ, ಶಶಿಕುಮಾರ್ ಇತರರು ಇದ್ದರು.

(Visited 36 times, 1 visits today)
Previous Articleಮತಪಟ್ಟಿ ಪರಿಷ್ಕರಣೆ : ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಕಾರ್ಯದರ್ಶಿ!!
Next Article ಹೇಮಾವತಿ ನಾಲೆ ಆಧುನೀಕರಣದಿಂದ ಎಲ್ಲಾ ಕೆರೆಗಳಿಗೆ ನೀರು -ಸಚಿವ
News Desk Benkiyabale

Related Posts

ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ

August 04, 2026 9:55 pm news

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm news

ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ

August 04, 2026 9:37 pm news
ತಾಜಾ ಸುದ್ಧಿಗಳು
news

ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ

August 04, 2026 9:55 pm
news

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm
news

ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ

August 04, 2026 9:37 pm
news

ರೈಲುಗಳು ನಮ್ಮ ಜೀವನಾಡಿಗಳಾಗಿವೆ

August 04, 2026 9:35 pm
news

ಶಾಸಕ ಟಿ.ಬಿ. ಜಯಚಂದ್ರ ರಾಜೀನಾಮೆ ಸುಳಿವು

August 04, 2026 9:33 pm
news

ಆರ್ಥಿಕ ಸಾಕ್ಷರತಾ ಶಿಬಿರ ಯಶಸ್ವಿ

August 04, 2026 9:32 pm
Our Youtube Channel
Our Picks

ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ

August 04, 2026 9:55 pm

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm

ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ

August 04, 2026 9:37 pm

ರೈಲುಗಳು ನಮ್ಮ ಜೀವನಾಡಿಗಳಾಗಿವೆ

August 04, 2026 9:35 pm

ಶಾಸಕ ಟಿ.ಬಿ. ಜಯಚಂದ್ರ ರಾಜೀನಾಮೆ ಸುಳಿವು

August 04, 2026 9:33 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ

By News Desk BenkiyabaleAugust 04, 2026 9:55 pm

ತುಮಕೂರು: ಮಳೆ ಇಲ್ಲದೆ ರಾಜ್ಯದಲ್ಲಿ ತೀವ್ರ ಬರಗಾರ ಪರಿಸ್ಥಿತಿ ಎದುರಾಗಿದೆ. ರೈತರು ಸಂಕಷ್ಟದಲ್ಲಿದ್ದಾರೆ. ಫಸಲ್ ಬೀಮಾ ಯೋಜನೆಯ ವಿಮಾ ಯೋಜನೆಗೆ…

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm

ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ

August 04, 2026 9:37 pm

ರೈಲುಗಳು ನಮ್ಮ ಜೀವನಾಡಿಗಳಾಗಿವೆ

August 04, 2026 9:35 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.