BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ
  • ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ
  • ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು
  • ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ
  • ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ
  • ವಿಶೇಷ ರೋಜ್ಗಾರ್ ದಿನಾಚರಣೆಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಕುರಿತು ಸಮಗ್ರ ಮಾಹಿತಿ
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕೀಳರಿಮೆ ಬಿಟ್ಟು ಸರ್ಕಾರದ ಸವಲತ್ತು ಪಡೆದುಕೊಳ್ಳಿ: ಡಾ.ದೇವರಾಜು
ತುಮಕೂರು ಜಿಲ್ಲಾ ಸುದ್ಧಿಗಳು

ಕೀಳರಿಮೆ ಬಿಟ್ಟು ಸರ್ಕಾರದ ಸವಲತ್ತು ಪಡೆದುಕೊಳ್ಳಿ: ಡಾ.ದೇವರಾಜು

By News Desk BenkiyabaleUpdated:December 25, 2018 5:43 pm

 ತುಮಕೂರು:

      ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳುವಲ್ಲಿ ತಳ ಸಮುದಾಯದವರಿಗೆ ಇರುವ ಕೀಳರಿಮೆ, ಮುಜುಗರ, ಊಹಾಪೋಹಗಳಿಂದ ಅರ್ಜಿ ಹಾಕುವುದೇ ಬೇಡ ಎನ್ನುವ ಮನಸ್ಥಿತಿಯಿಂದ ಹೊರಬಂದು, ಸರ್ಕಾರದ ಸವಲತ್ತುಗಳನ್ನು ಬಳಸಿಕೊಂಡು ಯಶಸ್ಸು ಸಾಧಿಸಬೇಕು ಎಂದು ಸಮಾಜಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಡಾ.ಜಿ.ಪಿ.ದೇವರಾಜು ಹೇಳಿದರು.

      ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಅಂಬೇಡ್ಕರ್ ಕೋಚಿಂಗ್ ಸೆಂಟರ್ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸೌಲಭ್ಯವಿಲ್ಲದ ದಿನಗಳಲ್ಲಿ ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿ ಓದಿದ ತಳಸಮುದಾಯದ ವಿದ್ಯಾರ್ಥಿಗಳು, ಉನ್ನತ ವಿದ್ಯಾಭ್ಯಾಸವನ್ನು ಮಾಡುವ ಮೂಲಕ ಉನ್ನತ ಅಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇತ್ತಿಚೆಗೆ ಸೌಲಭ್ಯ ಹೆಚ್ಚಾಗುತ್ತಿದ್ದರೆ, ವಿದ್ಯಾರ್ಥಿಗಳಲ್ಲಿ, ತಳಸಮುದಾಯದಲ್ಲಿ ಕ್ರಿಯಾಶೀಲತೆ ಕಡಿಮೆಯಾಗುತ್ತಿದೆ, ಸರ್ಕಾರ ಸಾವಿರಾರು ಕೋಟಿ ರೂಗಳನ್ನು ವೆಚ್ಚ ಮಾಡಿ, ಸ್ಪರ್ಧಾತ್ಮಕ ತರಬೇತಿಗಳನ್ನು ನೀಡಿದರೂ ವಿದ್ಯಾರ್ಥಿಗಳು ಉತೀರ್ಣರಾಗುತ್ತಿಲ್ಲ ಎಂದರು.

      ಲಕ್ಷಾಂತರ ರೂಪಾಯಿ ನೀಡಿ ಖಾಸಗಿ ತರಬೇತಿ ಸಂಸ್ಥೆಗಳಲ್ಲಿ ತರಬೇತಿ ಪಡೆದವರು ಯಶಸ್ವಿಯಾಗುತ್ತಿಲ್ಲ, ವ್ಯಾಪಾರಿ ದೃಷ್ಠಿಕೋನವನ್ನು ಹೊಂದಿರುವ ಖಾಸಗಿ ಸಂಸ್ಥೆಗಳಲ್ಲಿ ಕಲಿಯುವವರು ಹಿಂದೇ ಬೀಳುತ್ತಿದ್ದಾರೆ, ಅಂಬೇಡ್ಕರ್ ಉಚಿತ ಕೋಚಿಂಗ್ ಸೆಂಟರ್‍ನಲ್ಲಿ ತರಬೇತಿ ಪಡೆದವರು, ಯಶಸ್ವಿಯಾಗುತ್ತಿರುವುದಕ್ಕೆ ಅವರಲ್ಲಿನ ಶ್ರದ್ಧೆಯೇ ಕಾರಣ, ನಿಸ್ವಾರ್ಥವಾಗಿ ಸಮುದಾಯ ಸೇವೆ ಮಾಡುವವರ ಸಂಖ್ಯೆ ಹೆಚ್ಚಳವಾಗಬೇಕಿದೆ ಎಂದು ಅಭಿಪ್ರಾಯಪಟ್ಟರು.

      ಉನ್ನತ ವಿದ್ಯಾಭ್ಯಾಸವನ್ನು ಪಡೆದವರು, ಭಾರತದ ಭೌಗೋಳಿಕ ಲಕ್ಷಣಗಳನ್ನು ಹೇಳುತ್ತಿಲ್ಲ, ಇದಕ್ಕೆ ಅವರಲ್ಲಿ ಕಲಿಕೆಯ ಆಸಕ್ತಿ ಇಲ್ಲದೇ ಇರುವುದೇ ಕಾರಣ, ಸರ್ಕಾರದ ವತಿಯಿಂದ ನಡೆಯುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಲಿಯಲು ಅರ್ಜಿ ಹಾಕುವರ ಸಂಖ್ಯೆ ಕಡಿಮೆ ಆಗಿದೆ, ಎಸ್ಸಿ-ಎಸ್ಟಿ ವಿದ್ಯಾರ್ಥಿ ಸೀಟು ಖಾಲಿ ಉಳಿಯುತ್ತಿದೆ, ಪೋಷಕರು ಖಾಸಗಿ ಶಾಲೆಗಳಿಗೆ ಪ್ರಾಮುಖ್ಯತೆ ನೀಡುತ್ತಾರೆಯೇ ಹೊರತು, ಸರ್ಕಾರಿ ವಸತಿ ಶಾಲೆಗೆ ಪ್ರಾಮುಖ್ಯತೆ ನೀಡುವುದಿಲ್ಲ, ಖಾಸಗಿ ಶಾಲೆಗಳಿಂತ ಸರ್ಕಾರಿ ವಸತಿ ಶಾಲೆಗಳಲ್ಲಿ ಉತ್ತಮ ಸೌಕರ್ಯ ಒದಗಿಸಲಾಗಿದೆ ಎಂದರು.

      ವಸತಿ ಶಾಲೆಗಳಲ್ಲಿ ಉನ್ನತ ವಿದ್ಯಾಭ್ಯಾಸವನ್ನು ನೀಡುವ ನಿಟ್ಟಿನಲ್ಲಿ ಸರ್ಕಾರ ಯೋಜನೆ ರೂಪಿಸುತ್ತಿದ್ದು, ಎಂಜನಿಯರಿಂಗ್, ಡಿಪ್ಲೊಮೊ ಶಿಕ್ಷಣವನ್ನು ನೀಡುವ ಯೋಜನೆಯ ಬಗ್ಗೆ ಸರ್ಕಾರ ಪರಾಮರ್ಶೆ ನಡೆಸಿದ್ದು, ತಳಸಮುದಾಯದ ಮಕ್ಕಳನ್ನು ಪಿಯುಸಿವರೆಗೆ ವಸತಿ ಶಾಲೆಗಳಲ್ಲಿ ಓದಿಸಬೇಕಾಗಿದೆ ಎನ್ನುವುದು ಪೋಷಕರು ಮನಗಾಣಬೇಕಿದೆ, ಸರ್ಕಾರ ಪಿಯುಸಿ ನಂತರ ವಿದೇಶದಲ್ಲಿ ವಿದ್ಯಾಭ್ಯಾಸವನ್ನು ಮಾಡಲು ಅವಕಾಶ ಕಲ್ಪಿಸಿದ್ದು, ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದರು.

      ಜಿಲ್ಲಾ ಪರಿಶಿಷ್ಠ ಪಂಗಡಗಳ ಕಲ್ಯಾಣಾಧಿಕಾರಿ ರಾಜಕುಮಾರ್ ಮಾತನಾಡಿ, 2011ರ ಜನಗಣತಿ ಪ್ರಕಾರ ಜಿಲ್ಲೆಯಲ್ಲಿ 7 ಲಕ್ಷ ಎಸ್ಸಿ-ಎಸ್ಟಿ ಜನಸಂಖ್ಯೆ ಇದೆ, ಅಂದಾಜು 25 ಕೋಟಿ ವಿದ್ಯಾರ್ಥಿ ವೇತನ, 10 ಕೋಟಿ ಬಹುಮಾನ ಮೊತ್ತವನ್ನು ನೀಡುತ್ತಿದ್ದೇವೆ, ಆದರೆ ಇಲ್ಲಿನ ತರಬೇತಿಯಲ್ಲಿ ಭಾಗವಹಿಸಿದರ ಸಂಖ್ಯೆ ಕೇವಲ 75, 1 ಲಕ್ಷ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿರುವ ಜಿಲ್ಲೆಯಲ್ಲಿ 75 ಸ್ಪರ್ಧಾರ್ಥಿಗಳು ತರಬೇತಿ ಪಡೆದುಕೊಂಡಿದ್ದಾರೆ, ಅವಕಾಶಗಳು ಎಲ್ಲರಿಗೂ ದೊರಕುವುದಿಲ್ಲ, ಉತ್ತಮ ಮಾರ್ಗದರ್ಶನ ದೊರಕುವುದೇ ಕಷ್ಟ ಅಂತಹದರಲ್ಲಿ ಕೆಲವರ ಇಚ್ಛಾಶಕ್ತಿಯಿಂದ ದೊರಕುತ್ತಿರುವ ತರಬೇತಿಯನ್ನು ಎಸ್ಸಿ-ಎಸ್ಟಿ ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

      ಬಡತನದಲ್ಲಿ ಬೆಳೆದವರೇ ಉನ್ನತ ಅಧಿಕಾರಿಗಳಾಗಿರುವ ನಿದರ್ಶನಗಳು ನಮ್ಮ ಮುಂದಿವೆ, ಸರ್ಕಾರದಿಂದ ದೊರೆಯುವ ಸವಲತ್ತುಗಳನ್ನು ಪಡೆದು ಬುದ್ಧಿವಂತರಾಗಬೇಕಿದೆ. ಇಂದು ಬಡತನ ಎಂದರೆ ಜ್ಞಾನ ಇಲ್ಲದೇ ಇರುವುದು ಎಂದರ್ಥ, ಸಿಗುವ ಅವಕಾಶಗಳನ್ನು ಪಡೆದುಕೊಂಡು, ಕೀಳರಿಮೆಯನ್ನು ಬಿಟ್ಟು ಮುಂದೆ ಬರಬೇಕಿದೆ, ಯುವಶಕ್ತಿ ಮುಂದೆ ದುರಂತದ ದಿನಗಳಿವೆ, ಅಂಬೇಡ್ಕರ್ ಪರಿಶ್ರಮದಿಂದ ದೊರೆತಿರುವ ಮೀಸಲಾತಿಯನ್ನು ಪಡೆದುಕೊಂಡು, ಶ್ರದ್ಧೆಯಿಂದ ಓದುವ ಮೂಲಕ ಉದ್ಯೋಗವನ್ನು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

      ಅಂಬೇಡ್ಕರ್ ಕೋಚಿಂಗ್ ಸೆಂಟರ್ ಮೂಲಕ ಉಚಿತ ಕೋಚಿಂಗ್ ಪಡೆದು ಅಬಕಾರಿ ಇಲಾಖೆಗೆ ಆಯ್ಕೆಯಾಗಿರುವ ಅಂಬಿಕಾ ಹಾಗೂ ಬೆಂಗಳೂರಿನ ಪೊಲೀಸ್ ಇಲಾಖೆಗೆ ನೇಮಕವಾಗಿರುವ ಎಂ.ಎಂ.ಮಂಜುನಾಥ್ ಅವರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಕೋಚಿಂಗ್ ಸೆಂಟರ್‍ನ ಪಿ.ಜೆ.ಜಯಶೀಲ, ವಿ.ಟಿ.ಕೃಷ್ಣಮೂರ್ತಿ, ನಾಗರಾಜು, ರವೀಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

(Visited 61 times, 1 visits today)
Previous Articleಹಾಡಹಗಲೇ ಜೆಡಿಎಸ್‌ ಮುಖಂಡನ ಬರ್ಬರ ಕೊಲೆ
Next Article ಸಿದ್ದಗಂಗ ಶ್ರೀ ಗಳ ಬಗ್ಗೆ ಅಟಲ್‍ಜೀ ರವರಿಗೆ ಅಪಾರ ಗೌರವ – ಜಿ.ಎಸ್.ಬಸವರಾಜು
News Desk Benkiyabale

Related Posts

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm news

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm news

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm news
ತಾಜಾ ಸುದ್ಧಿಗಳು
news

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm
news

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm
news

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm
news

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm
news

ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ

August 08, 2026 4:28 pm
news

ವಿಶೇಷ ರೋಜ್ಗಾರ್ ದಿನಾಚರಣೆಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಕುರಿತು ಸಮಗ್ರ ಮಾಹಿತಿ

August 08, 2026 4:26 pm
Our Youtube Channel
Our Picks

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm

ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ

August 08, 2026 4:28 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

By News Desk BenkiyabaleAugust 08, 2026 5:13 pm

ತುಮಕೂರು: ಕೇಂದ್ರ ಸರಕಾರ ಸುಮಾರು ೩೦೦೦ ಕೋಟಿ ರೂಖರ್ಚು ಮಾಡುತ್ತಿರುವ ರಾಷ್ಟಿçÃಯ ಹೆದ್ದಾರಿ ೨೦೬ರಲ್ಲಿ ತಿಪಟೂರು ಸಮೀಪದ ಅಯ್ಯನ ಭಾವಿ…

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.