BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಹಿಂದೆ ಗುರು ಮುಂದೆ ಗುರಿ ಇದ್ದರೆ ಸಾಧನೆ ಸಾದ್ಯ
  • ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಮುಂದಾದ ಅಕ್ಕಪಡೆ
  • ಪಾಲಿಕೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ
  • ಎನ್‌ಎಸ್‌ಎಸ್ ಪುನಶ್ಚೇತನ ಕಾರ್ಯಕ್ರಮ ಉದ್ಘಾಟನೆ
  • ಭಾರತಕ್ಕಾಗಿ ದುಡಿದು, ಮಡಿದವರು ಇಂದಿರಾ ಗಾಂದಿ
  • ಗ್ರಾಮ ಸ್ವರಾಜ್ ಯಶಸ್ವಿಯಾಗಲು ಉತ್ತಮ ಸುಸಜ್ಜಿತ ಕಟ್ಟಡ ಅಗತ್ಯ: ಚಿದಾನಂದ್ ಎಂ.ಗೌಡ
  • ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ ಪ್ರತಿಭಟನೆ
  • ವ್ಯಕ್ತಿ ಮತ್ತು ಘಟನೆಗಳಿಂದ ಅನೇಕರು ಸ್ಪೂರ್ತಿ ಪಡೆದುಕೊಳ್ಳುತ್ತಾರೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರು :  ಪಾಲಿಕೆಯಿಂದ ವ್ಯಾಕ್ಸಿನೇಷನ್ -ಸೋಂಕಿತ ಬಡವರ ವೆಚ್ಚಕ್ಕೆ ಕ್ರಮ
Trending

ತುಮಕೂರು :  ಪಾಲಿಕೆಯಿಂದ ವ್ಯಾಕ್ಸಿನೇಷನ್ -ಸೋಂಕಿತ ಬಡವರ ವೆಚ್ಚಕ್ಕೆ ಕ್ರಮ

By News Desk BenkiyabaleUpdated:May 10, 2021 6:43 pm

ತುಮಕೂರು : 

      ಮಹಾನಗರ ಪಾಲಿಕೆ, ಎನ್.ಆರ್ ಕಾಲೋನಿ ಅಭಿವೃದ್ಧಿ ಸಂಘ ಹಾಗೂ ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ಜಂಟಿಯಾಗಿ ನಗರದ 19 ಮತ್ತು 20ನೇ ವಾರ್ಡಿನ ಮುಖಂಡರ ಸಭೆಯನ್ನು ಎನ್,ಆರ್ ಕಾಲೋನಿ ಶೈಕ್ಷಣಿಕ ಭವನದಲ್ಲಿ ಕರೆದು ಕೋವಿಡ್ 2ನೇ ಅಲೆಯ ಮುಂಜಾಗ್ರತೆ ಹಾಗೂ ಲಸಿಕೆ ಜಾಗೃತಿಗೆ ಸಂಬಂಧಿಸಿದಂತೆ ಮೇಯರ್ ಮತ್ತು ಆಯುಕ್ತರಿಂದ ಅರಿವಿನ ಕಾರ್ಯಕ್ರಮ ಮಾಡಲಾಯಿತು.

      ಸಭೆಯಲ್ಲಿ ಮೊದಲಿಗೆ ಕೋತಿತೋಪಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ಮಹೇಶ್ ಮತ್ತು ಪಾವನ ಆಸ್ಪತ್ರೆಯ ಡಾ. ಮುರುಳೀಧರ್ ಮಾತನಾಡಿ ಪ್ರತಿನಿತ್ಯ 2 ವಾರ್ಡ್‍ಗಳಿಂದ 50 ರಿಂದ 60 ಸೋಂಕಿತರು ಪತ್ತೆಯಾಗುತ್ತಿದ್ದು ಕೋವಿಡ್ 2ನೇ ಅಲೆಯಲ್ಲಿನ ಅಪಾಯದ ಬಗ್ಗೆ ತಿಳಿವಳಿಕೆಯಿಲ್ಲದ ಬಹುತೇಕ ಈ ಭಾಗದ ಬಡವರಿಗೆ ಚಿಕಿತ್ಸೆ ಪಡೆಯಲು ಕಷ್ಟವಾಗಿದೆ. ಕೊನೆಯ ಹಂತದಲ್ಲಿ ಚಿಕಿತ್ಸೆಗೆ ಬಂದಾಗ ಚಿಕಿತ್ಸೆ ನೀಡಲು ಸಾಧ್ಯವಾಗುವುದಿಲ್ಲ ಕೃತಕವಾಗಿ ಬೆಡ್ ಅಭಾವವನ್ನು ಸೃಷ್ಟಿಸಿ ಅಗತ್ಯವಿದ್ದವರು ಅಡ್ಮಿಟ್ ಆಗಲು ಒತ್ತಡ ಏರುತ್ತಿದ್ದು ಅಗತ್ಯವಿರುವವರಿಗೆ ಬೆಡ್ ಸಿಗದಿರುವುದು ಕಾರಣವಾಗಿದೆ. ಹಾಗಾಗಿ ಎಲ್ಲರು ಲಸಿಕೆಯನ್ನು ಪಡೆಯಲು ಜಾಗೃತಿ ಕೈಗೊಳ್ಳಬೇಕೆಂದರು.

       ನಂತರ ಪ್ರೊ ಕೆ,ದೊರೈರಾಜ್ ಮಾತನಾಡಿ ಸ್ಲಂಗಳಲ್ಲಿ ಸೋಂಕಿಗೆ ಒಳಗಾದವರು ಮನೆಯಲ್ಲಿ ಚಿಕಿತ್ಸೆ ಪಡೆಯಲು ಸಾಧ್ಯವಿಲ್ಲ. ಅಂತವರಿಗೆ ನಗರ ಪಾಲಿಕೆಯಿಂದ ವಲಯವಾರು ಕೋವಿಡ್ ಕೇರ್ ಸೆಂಟರ್‍ಗಳನ್ನು ಪ್ರಾರಂಭಿಸಿ ಕೈಲಾಗದ ಬಡವರ ಚಿಕಿತ್ಸಾ ವೆಚ್ಚವನ್ನು ನಗರ ಪಾಲಿಕೆಯಿಂದ ಭರಿಸಲು ಮೇಯರ್ ಮತ್ತು ಆಯುಕ್ತರು ಕ್ರಮವಹಿಸುವಂತೆ ಕೋರಿದರು.

       20ನೇ ವಾರ್ಡಿನ ನಗರ ಪಾಲಿಕೆ ಸದಸ್ಯರಾದ ಎ.ಶ್ರೀನಿವಾಸ್ ಮತ್ತು 19ನೇ ವಾರ್ಡಿನ ಮುಖಂಡರಾದ ಶೆಟ್ಟಾಳಯ್ಯ ಮಾತನಾಡಿ ಎನ್.ಆರ್ ಕಾಲೋನಿಯಲ್ಲಿ ತಿಳುವಳಿಕೆಯ ಕೊರತೆಯಿಂದ ಲಸಿಕೆ ಪಡೆಯಲು ಜನರು ಗೊಂದಲದಲ್ಲಿ ಸಿಲುಕಿದ್ದು ಅರಿವು ಮೂಡಿಸುವ ಅಗತ್ಯವಿದ್ದು ಕೋವಿಡ್ ಪರೀಕ್ಷೆ ಪಲಿತಾಂಶವನ್ನು ತುರ್ತಾಗಿ ನೀಡಲು ಆರೋಗ್ಯ ಇಲಾಖೆ ಕ್ರಮ ವಹಿಸುವಂತೆ ಒತ್ತಾಯಿಸಿದರು. ಸ್ಲಂ ಜನಾಂದೋಲನ ಕರ್ನಾಟಕದ ಎ,ನರಸಿಂಹಮೂರ್ತಿ ಮಾತನಾಡಿ ಕೊಳಗೇರಿಗಳಲ್ಲಿ ಜನಸಾಂದ್ರತೆ ಮತ್ತು ಒತ್ತೊತ್ತಾದ ಮನೆಗಳಿರುವುದರಿಂದ ಹೋಮ್ ಐಶೋಲೇಷನಲ್ಲಿ ಚಿಕಿತ್ಸೆ ಪಡೆಯಲು ಸಾಧ್ಯವಿಲ್ಲ. ಅಂತವರ ಯೋಗಕ್ಷೇಮ ವಿಚಾರಿಸಲು ಸ್ವಯಂ ಕಾರ್ಯಕರ್ತರಾಗಿ ಕೊಳಗೇರಿ ಸಮಿತಿ ಮತ್ತು ಎನ್,ಆರ್ ಕಾಲೋನಿ ಅಭಿವೃದ್ಧಿ ಸಂಘದಿಂದ ಸಹಕಾರ ನೀಡಲು ಸಿದ್ಧವಾಗಿದ್ದು ನಗರ ಪಾಲಿಕೆ ಅಗತ್ಯ ಬೆಂಬಲವನ್ನು ನೀಡುವಂತೆ ಕೋರಿದರು.
ನಗರ ಪಾಲಿಕೆ ಆಯುಕ್ತೆ ರೇಣುಕಾ ಮಾತನಾಡಿ ಈಗಾಗಲೇ ನಗರಪಾಲಿಕೆ ಮತ್ತು ಜಿಲ್ಲಾಡಳಿತದಿಂದ ಕ್ಯಾತ್ಸಂದ್ರ ಕೋವಿಡ್ ಸೆಂಟರ್‍ನಲ್ಲಿ 200 ಬೆಡ್‍ಗಳ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದು ಕೊಳಗೇರಿಗಳಲ್ಲಿ ಹೋಂ ಐಸೋಲೇಷನ್ ಸಾಧ್ಯವಿಲ್ಲ. ಆದರು ಮನೆಯಲ್ಲಿ ಚಿಕಿತ್ಸೆ ಪಡೆಯುವವರಿಗೆ ಮಾರ್ಗದರ್ಶನ ನೀಡಲು ವಾರ್ಡ್ ಮಟ್ಟದಲ್ಲಿ ಸ್ವಯಂ ಕಾರ್ಯಕರ್ತರನ್ನು ಗುರುತಿಸಿ ಅವರಿಗೆ ತರಬೇತಿ ನೀಡಿ ಸೋಂಕಿಗೊಳಪಟ್ಟವರಿಗೆ ಔಷಧಿಗಳನ್ನು ಮತ್ತು ಪಲ್ಸ್ ಪರೀಕ್ಷೆಯನ್ನು ಪರಿಶೀಲಿಸುವ ಕಾಲಕಾಲಕ್ಕೆ ಮಾಡುವ ಮಾರ್ಗದರ್ಶನ ನೀಡಿ ಈ ಎರಡು ವಾರ್ಡ್‍ಗಳಿಗೆ ಸಂಬಂಧಿಸಿದಂತೆ ಲಸಿಕೆ ಪಡೆಯಲು ನಾಗರೀಕರಿಗೆ ನಗರ ಪಾಲಿಕೆ ಮತ್ತು ಈ ಭಾಗದ ಸಂಘ ಸಂಸ್ಥೆಗಳ ಮೂಲಕ ಅರಿವು ಕೈಗೊಳ್ಳಲಾಗುವುದು ಎಂದರು.

       ಹಿರಿಯ ಮುಖಂಡರಾದ ನರಸಿಂಹಯ್ಯ ಮಾತನಾಡಿ ಸರ್ಕಾರ ಈಗಾಗಲೇ ಅಗತ್ಯ ಕ್ರಮ ಕೈಗೊಂಡಿದ್ದರು ನಾಗರೀಕರ ಸಹಕಾರ ನಿರೀಕ್ಷಿತ ಮಟ್ಟದಲ್ಲಿಲ್ಲ ಆದ್ದರಿಂದ ಈ ಎರಡು ವಾರ್ಡ್‍ಗಳಲ್ಲಿ ಬರುವ ಎಲ್ಲಾ ಸಮುದಾಯಗಳನ್ನೊಳಗೊಂಡ ಮುಖಂಡರ ಸಹಕಾರದೊಂದಿಗೆ ಲಸಿಕೆ ಪಡೆಯುವವರ ಪಟ್ಟಿ ಸಿದ್ದಗೊಳಿಸಿ ಹಂತಹಂತವಾಗಿ ಹಾಕಿಸಲು ಸಹಕರಿಸುವುದಾಗಿ ಹೇಳಿದರು.

       ನಂತರ ಮಹಾಪೌರರಾದ ಬಿ.ಜಿ ಕೃಷ್ಣಪ್ಪ ಮಾತನಾಡಿ ನಗರಪಾಲಿಕೆಯಿಂದ ಕೊಳಗೇರಿಗಳಲ್ಲಿ ವ್ಯಾಕ್ಸಿನೇಷನ್ ಪಡೆಯಲು ಜಾಗೃತಿ ಕೈಗೊಳ್ಳಲಾಗುವುದು. ಏಕೆಂದರೆ ಈ ಸಾಂಕ್ರಾಮಿಕಕ್ಕೆ ನಿರ್ಧಿಷ್ಟ ಔಷಧಿ ಸಿಗುವವರೆಗೂ ಬಡವರ ಆರೋಗ್ಯ ಕಾಪಾಡಲು ಲಸಿಕೆ ಪಡೆಯುವುದು ಅಗತ್ಯವಾಗಿದೆ. ಈ ಸೋಂಕಿಗೆ ತುತ್ತಾದ ಅಸಹಾಯಕರು ಮತ್ತು ಚಿಕಿತ್ಸೆ ಭತ್ಯೆ ಬರಿಸಲು ಸಾಧ್ಯವಾಗದ ಸ್ಲಂ ನಿವಾಸಿಳಿಗೆ ಹಾಗೂ ಬಡವರಿಗೆ ಮೇಯರ್ ಅನುಧಾನ ಮತ್ತು 24.10%. 7.25 ಅನುಧಾನಗಳಲ್ಲಿ ವೆಚ್ಚ ಬರಿಸಲು ಕ್ರಮವಹಿಸುವುದಾಗಿ ಹೇಳಿದರು. ಹಾಗೂ 35ವಾರ್ಡ್‍ಗಳ ಎಲ್ಲಾ ಕೊಳಗೇರಿಗಳಲ್ಲಿ ಸ್ಯಾನಿಟೈಜರ್ ವ್ಯವಸ್ಥೆ ಮಾಡಲಾಗುವುದೆಂದರು.

      ಸಭೆಯಲ್ಲಿ ಉಪಮಹಾಪೌರರಾದ ನಾಜೀಮಾಬಿ ಮಾಜಿ ನಗರ ಸಭೆ ಉಪಾಧ್ಯಕ್ಷರಾದ ನರಸೀಯಪ್ಪ, ನಗರಾಭಿ ವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯರಾದ ಜಯಮೂರ್ತಿ ನಗರ ಪಾಲಿಕೆ ಮಾಜಿ ಸದಸ್ಯರಾದ ಬಿ.ಪಿ ಅಂಜಿನ್‍ಮೂರ್ತಿ, ಎನ್,ಆರ್ ಕಾಲೋನಿ ಅಭಿವೃದ್ಧಿ ಸಂಘದ ಪದಾಧಿಕಾರಿಗಳಾದ ಕೆ,ನರಸಿಂಹಮೂರ್ತಿ. ಎನ್.ರಾಜಣ್ಣ, ಮಲ್ಲಿಕಾರ್ಜುನಯ್ಯ, ಕೊಳಗೇರಿ ಸಮಿತಿಯ ಪದಾಧಿಕಾರಿಗಳಾದ ಅರುಣ್, ತೇಜಸ್, ಮೋಹನ್ ಅಂಬೇಡ್ಕರ್ ನಗರ ಮುಖಂಡರಾದ ಗೋಪಾಲ್, ನಿರ್ವಾಣಿ ಲೇಔಟ್ ಮುಖಂಡ ರಾಮು, ಎನ್,ಆರ್ ಕಾಲೋನಿ ಪಿ,ಎನ್, ರಾಮಯ್ಯ, ದೇವರಾಜ್, ಚಂದ್ರು, ಲೋಕೇಶ್, ಹರೀಶ್ ಪಾಲ್ಗೊಂಡಿದ್ದರು.

(Visited 16 times, 1 visits today)
Previous Articleತುರುವೇಕೆರೆ : ಪಟ್ಟಣದಲ್ಲಿ ಕೋವಿಡ್ ನಿಯಮ ಉಲ್ಲಂಘನೆ
Next Article ಹುಳಿಯಾರು ಮುಕ್ತಿಧಾಮಕ್ಕೆ ತಾತ್ಕಾಲಿಕ ವಿದ್ಯುತ್ ವ್ಯವಸ್ಥೆ
News Desk Benkiyabale

Related Posts

ನಗರದ ವಿವಿಧೆಡೆ ಉಪಲೋಕಾಯುಕ್ತರಿಂದ ಬಿರುಸಿನ ಕಾರ್ಯಾಚರಣೆ

November 15, 2025 4:32 pm ತುಮಕೂರು

ಸಮಾಜದಲ್ಲಿ ತಾಂಡವಾಡುತ್ತಿರುವ ಅಜ್ಞಾನ ಹೋಗಿ ಸುಜ್ಞಾನ ಬರಲಿ: ಸ್ವಾಮೀಜಿ

November 10, 2025 2:20 pm ತುಮಕೂರು

ಅನ್ಯಾಯದ ವಿರುದ್ಧ ಧ್ವನಿ ಎತ್ತುವುದೇ ವಿದ್ಯಾರ್ಥಿಗಳ ಲಕ್ಷಣ

November 10, 2025 2:15 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಹಿಂದೆ ಗುರು ಮುಂದೆ ಗುರಿ ಇದ್ದರೆ ಸಾಧನೆ ಸಾದ್ಯ

November 19, 2025 3:39 pm
ಇತರೆ ಸುದ್ಧಿಗಳು

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಮುಂದಾದ ಅಕ್ಕಪಡೆ

November 19, 2025 2:43 pm
ಇತರೆ ಸುದ್ಧಿಗಳು

ಪಾಲಿಕೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ

November 19, 2025 2:35 pm
ಇತರೆ ಸುದ್ಧಿಗಳು

ಎನ್‌ಎಸ್‌ಎಸ್ ಪುನಶ್ಚೇತನ ಕಾರ್ಯಕ್ರಮ ಉದ್ಘಾಟನೆ

November 19, 2025 2:33 pm
ಇತರೆ ಸುದ್ಧಿಗಳು

ಭಾರತಕ್ಕಾಗಿ ದುಡಿದು, ಮಡಿದವರು ಇಂದಿರಾ ಗಾಂದಿ

November 19, 2025 2:30 pm
ಇತರೆ ಸುದ್ಧಿಗಳು

ಗ್ರಾಮ ಸ್ವರಾಜ್ ಯಶಸ್ವಿಯಾಗಲು ಉತ್ತಮ ಸುಸಜ್ಜಿತ ಕಟ್ಟಡ ಅಗತ್ಯ: ಚಿದಾನಂದ್ ಎಂ.ಗೌಡ

November 18, 2025 3:53 pm
Our Youtube Channel
Our Picks

ಹಿಂದೆ ಗುರು ಮುಂದೆ ಗುರಿ ಇದ್ದರೆ ಸಾಧನೆ ಸಾದ್ಯ

November 19, 2025 3:39 pm

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಮುಂದಾದ ಅಕ್ಕಪಡೆ

November 19, 2025 2:43 pm

ಪಾಲಿಕೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ

November 19, 2025 2:35 pm

ಎನ್‌ಎಸ್‌ಎಸ್ ಪುನಶ್ಚೇತನ ಕಾರ್ಯಕ್ರಮ ಉದ್ಘಾಟನೆ

November 19, 2025 2:33 pm

ಭಾರತಕ್ಕಾಗಿ ದುಡಿದು, ಮಡಿದವರು ಇಂದಿರಾ ಗಾಂದಿ

November 19, 2025 2:30 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಹಿಂದೆ ಗುರು ಮುಂದೆ ಗುರಿ ಇದ್ದರೆ ಸಾಧನೆ ಸಾದ್ಯ

By News Desk BenkiyabaleNovember 19, 2025 3:39 pm

ಚಿಕ್ಕನಾಯಕನಹಳ್ಳಿ: ನಮ್ಮ ದೇಸಿ ಕ್ರೀಡೆಗಳಿಗೆ ಅವಕಾಶಗಳನ್ನು ನೀಡಿ ಅವುಗಳನ್ನು ಉಳಿಸಿ ಬೆಳೆಸುತ್ತಿರುವುದು ನಮ್ಮ ಗ್ರಾಮೀಣ ಭಾಗದಲ್ಲಿ ಅಂತಹ ಕೆಲಸವನ್ನು ಗೋಡೆಕೆರೆಯ…

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಮುಂದಾದ ಅಕ್ಕಪಡೆ

November 19, 2025 2:43 pm

ಪಾಲಿಕೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ

November 19, 2025 2:35 pm

ಎನ್‌ಎಸ್‌ಎಸ್ ಪುನಶ್ಚೇತನ ಕಾರ್ಯಕ್ರಮ ಉದ್ಘಾಟನೆ

November 19, 2025 2:33 pm
News by Date
November 2025
M T W T F S S
 12
3456789
10111213141516
17181920212223
24252627282930
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.