BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಎನ್‌ಬಿಎ ಮಾನ್ಯತೆಗೆ ಹರ್ಷ ವ್ಯಕ್ತಪಡಿಸಿದ ಡಾ.ಜಿ.ಪರಮೇಶ್ವರ
  • ಕೆರೆ ಅಂಗಳದ ಬಫರ್ ಝೋನ್ ಅಳತೆ
  • ವೀರಶೈವ, ಲಿಂಗಾಯಿತರು ತಮ್ಮ ಅಸ್ತಿತ್ವಕ್ಕಾಗಿ ಹೋರಾಡಿ: ಶಾಸಕ
  • ಪೌರ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಪ.ಪಂ ಜನಪ್ರತಿನಿಧಿ, ಕಾರ್ಯನಿರತ ಪರ್ತಕರ್ತರ ಸಂಘ ಬೆಂಬಲ
  • ನಿಯಮ ಉಲ್ಲಂಘಿಸಿ ಕಾಮಗಾರಿ ಪ್ರಾರಂಭ: ಆರೋಪ
  • “ಯುವ ಜನತೆಯು ದೇಶದ ಪ್ರಬಲ ಶಕ್ತಿ’
  • ದಲಿತರ ಮೇಲೆ ಹೆಚ್ಚಾಗುತ್ತಿರುವ ಕೊಲೆ, ದೌರ್ಜನ್ಯ ಮರ್ಯಾದೆ ಹತ್ಯೆ
  • ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪೊಲೀಸರೇ ಎಚ್ಚರ..! ವರ್ಗಾವಣೆ ಕೇಳಿದರೆ ಸಿಗಲಿದೆ ಕಡ್ಡಾಯ ನಿವೃತ್ತಿ!
ಕರ್ನಾಟಕ ಸುದ್ಧಿಗಳು

ಪೊಲೀಸರೇ ಎಚ್ಚರ..! ವರ್ಗಾವಣೆ ಕೇಳಿದರೆ ಸಿಗಲಿದೆ ಕಡ್ಡಾಯ ನಿವೃತ್ತಿ!

By News Desk BenkiyabaleUpdated:November 22, 2018 7:44 am

ಬೆಂಗಳೂರು :

      ಅನಾರೋಗ್ಯದ ಕಾರಣ ನೀಡಿ ವರ್ಗಾವಣೆಗೆ ಕೋರುವ ಪೊಲೀಸರನ್ನು ಕಡ್ಡಾಯವಾಗಿ ಸೇವೆಯಿಂದ ನಿವೃತ್ತಿಗೊಳಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಟಿ.ಪಿ.ಶಿವಕ ಸುತ್ತೋಲೆ ಹೊರಡಿಸಿದ್ದಾರೆ.

      ಅನಾರೋಗ್ಯದ ನಿಮಿತ್ತ ಬೇರೆ ಠಾಣೆಗಳಿಗೆ ವರ್ಗಾವಣೆ ಕೋರಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್‌ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಹಾಯಕ ಸಬ್‌ ಇನ್ಸ್‌ಪೆಕ್ಟರ್‌, ಹೆಡ್‌ ಕಾನ್‌ಸ್ಟೇಬಲ್‌ ಹಾಗೂ ಕಾನ್‌ಸ್ಟೇಬಲ್‌ಗಳು ಅರ್ಜಿ ಸಲ್ಲಿಸಿದ್ದಾರೆ. ಇದರ ಜತೆ ವೈದ್ಯಕೀಯ ದಾಖಲೆಗಳನ್ನು ಸಹ ಲಗತ್ತಿಸಲಾಗಿದೆ. ಈ ದಾಖಲೆಗಳನ್ನು ಪರಿಶೀಲಿಸಿದಾಗ ರಕ್ತದೊತ್ತಡ, ಸಕ್ಕರೆ ಖಾಯಿಲೆ ಹಾಗೂ ಇನ್ನಿತರೆ ಗುರುತರವಲ್ಲದ ಆರೋಗ್ಯ ಸಮಸ್ಯೆಯನ್ನು ನೀಡಿ ಪೊಲೀಸರು ವರ್ಗಾವಣೆ ಬಯಸಿರುವುದಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

       ವೈಯಕ್ತಿಕ ಹಾಗೂ ವೈದ್ಯಕೀಯ ಕಾರಣಗಳಿಗಾಗಿ ನಿಯುಕ್ತಗೊಳಿಸಿರುವ ಠಾಣೆಗಳಲ್ಲಿ ಕನಿಷ್ಠ ವರ್ಗಾವಣೆ ಅವಧಿಯನ್ನು ಪೂರ್ಣಗೊಳಿಸದ ಎಎಸ್‌ಐ, ಎಚ್‌ಸಿ ಹಾಗೂ ಪಿಸಿ ಅವರು ವರ್ಗಾವಣೆಗೆ ಇನ್ನು ಮುಂದೆ ಕಚೇರಿಗೆ (ಎಸ್ಪಿ ಕಚೇರಿ) ನೇರವಾಗಿ ಮನವಿಗಳನ್ನು ಸಲ್ಲಿಸಿದರೆ ಅಂತಹವರನ್ನು ಪೊಲೀಸ್‌ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಲು ಅನರ್ಹರೆಂದು ಪರಿಗಣಿಸಲಾಗುತ್ತದೆ. ಬಳಿಕ ಕೆಸಿಎಸ್‌ಆರ್‌ ನಿಯಮ 285ರ ನಿಯಮಗಳ ಅಡಿಯಲ್ಲಿ ಅವರನ್ನು ಕಡ್ಡಾಯ ನಿವೃತ್ತಿಗೊಳಿಸಲಾಗುತ್ತದೆ ಎಂದು ಗ್ರಾಮಾಂತರ ಜಿಲ್ಲಾ ಪೊಲೀಸ್‌ ಅಧೀಕ್ಷಕರು ಎಚ್ಚರಿಕೆ ನೀಡಿದ್ದಾರೆ.

       ಪೊಲೀಸ್‌ ಇಲಾಖೆಯು ಒಂದು ಶಿಸ್ತಿನ ಇಲಾಖೆಯಾಗಿದೆ. ವರ್ಗಾವಣೆ ಕೋರಿ ಅರ್ಜಿ ಸಲ್ಲಿಸುವ ಮುನ್ನ ಮೇಲಾಧಿಕಾರಿಗಳ ಅನುಮತಿ ಪಡೆಯದೆ ನೇರವಾಗಿ ಮನವಿ ಸಲ್ಲಿಸಿ ಕೆಲವರು ಆಶಿಸ್ತು ಪ್ರದರ್ಶಿಸುತ್ತಿರುತ್ತಾರೆ. ವರ್ಗಾಯಿಸಿರುವ ಠಾಣೆಗಳಲ್ಲಿ ಕನಿಷ್ಠ ಕಾಲಾವಧಿಯಲ್ಲಿ ಸೇವೆ ಸಲ್ಲಿಸದೆ ಕೆಲವರು ವರ್ಗಾವಣೆಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಎಸ್ಪಿ ಹೇಳಿದ್ದಾರೆ.

 

(Visited 19 times, 1 visits today)
Previous Articleಪ್ರೇಮಿಗಳ ಏಕಾಂತದ ವಿಡಿಯೋ ಮಾಡಿ ಬ್ಲಾಕ್​ಮೇಲ್ : ಆತ್ಮಹತ್ಯೆಗೆ ಶರಣು!
Next Article ವ್ಯಕ್ತಿಯ ಅನುಮಾನಸ್ಪದ ಸಾವು
News Desk Benkiyabale

Related Posts

ಕೃಷ್ಣಾ ತಳವಾರ ಪಿಎಚ್.ಡಿ ಪದವಿ

March 07, 2025 6:38 pm ಕರ್ನಾಟಕ ಸುದ್ಧಿಗಳು

ಕೊರಟಗೆರೆ ತಾಲ್ಲೂಕಿನಲ್ಲಿ ನೂತನವಾಗಿ ರಾಗಿ ಖರೀದಿ ಕೇಂದ್ರ

March 07, 2025 6:36 pm ಕರ್ನಾಟಕ ಸುದ್ಧಿಗಳು

ಹರಾಜಿನಲ್ಲಿ ಪಂಪ್ ಮೋಟರ್ ಇಡದೆ ಮೋಸ

March 05, 2025 6:56 pm ಕರ್ನಾಟಕ ಸುದ್ಧಿಗಳು
ತಾಜಾ ಸುದ್ಧಿಗಳು
ತುಮಕೂರು

ಎನ್‌ಬಿಎ ಮಾನ್ಯತೆಗೆ ಹರ್ಷ ವ್ಯಕ್ತಪಡಿಸಿದ ಡಾ.ಜಿ.ಪರಮೇಶ್ವರ

May 30, 2025 3:06 pm
ತುಮಕೂರು

ಕೆರೆ ಅಂಗಳದ ಬಫರ್ ಝೋನ್ ಅಳತೆ

May 30, 2025 2:58 pm
ತುಮಕೂರು

ವೀರಶೈವ, ಲಿಂಗಾಯಿತರು ತಮ್ಮ ಅಸ್ತಿತ್ವಕ್ಕಾಗಿ ಹೋರಾಡಿ: ಶಾಸಕ

May 30, 2025 2:57 pm
ತುಮಕೂರು

ಪೌರ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಪ.ಪಂ ಜನಪ್ರತಿನಿಧಿ, ಕಾರ್ಯನಿರತ ಪರ್ತಕರ್ತರ ಸಂಘ ಬೆಂಬಲ

May 30, 2025 2:56 pm
ತುಮಕೂರು

ನಿಯಮ ಉಲ್ಲಂಘಿಸಿ ಕಾಮಗಾರಿ ಪ್ರಾರಂಭ: ಆರೋಪ

May 30, 2025 2:55 pm
ತುಮಕೂರು

“ಯುವ ಜನತೆಯು ದೇಶದ ಪ್ರಬಲ ಶಕ್ತಿ’

May 29, 2025 4:22 pm
Our Youtube Channel
Our Picks

ಕುಡಿಯುವ ನೀರು ಕೊಡದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ

May 22, 2025 2:36 pm

ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ

May 29, 2025 4:18 pm

ಭಾರತ ವಿಶ್ವದಲ್ಲಿಯೇ ಹೃದಯ ಶ್ರೀಮಂತಿಕೆ ಹೊಂದಿರುವ ರಾಷ್ಟç

May 23, 2025 2:55 pm

ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ

May 23, 2025 2:51 pm

ಸರ್ಕಾರಿ ಶಾಲೆಯನ್ನು ಆಂಗ್ಲ ಮಾಧ್ಯಮ ಶಾಲೆಯನ್ನಾಗಿ ಪರಿವರ್ತನೆ ಮಾಡುವಂತೆ ಅಧಿಕಾರಿಗಳಿಗೆ ಮನವಿ

May 22, 2025 2:38 pm

ಕುಡಿಯುವ ನೀರು ಕೊಡದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ

May 22, 2025 2:36 pm

ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ

May 29, 2025 4:18 pm

ಭಾರತ ವಿಶ್ವದಲ್ಲಿಯೇ ಹೃದಯ ಶ್ರೀಮಂತಿಕೆ ಹೊಂದಿರುವ ರಾಷ್ಟç

May 23, 2025 2:55 pm

ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ

May 23, 2025 2:51 pm

ಸರ್ಕಾರಿ ಶಾಲೆಯನ್ನು ಆಂಗ್ಲ ಮಾಧ್ಯಮ ಶಾಲೆಯನ್ನಾಗಿ ಪರಿವರ್ತನೆ ಮಾಡುವಂತೆ ಅಧಿಕಾರಿಗಳಿಗೆ ಮನವಿ

May 22, 2025 2:38 pm

ಕುಡಿಯುವ ನೀರು ಕೊಡದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ

May 22, 2025 2:36 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University YSpatil ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ಎನ್‌ಬಿಎ ಮಾನ್ಯತೆಗೆ ಹರ್ಷ ವ್ಯಕ್ತಪಡಿಸಿದ ಡಾ.ಜಿ.ಪರಮೇಶ್ವರ

By News Desk BenkiyabaleMay 30, 2025 3:06 pm

ತುಮಕೂರು: ನಗರದ ಸಾಹೇ ವಿಶ್ವವಿದ್ಯಾಲಯದ ಶ್ರೀ ಸಿದ್ಧಾ ರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿನ ಮೆಕ್ಯಾನಿಕಲ್, ಕಂಪ್ಯೂಟರ್, ಮಾಹಿತಿ ವಿಜ್ಞಾನ, ಎಲೆಕ್ಟಾçನಿಕ್ಸ್ ಮತ್ತು…

ಕೆರೆ ಅಂಗಳದ ಬಫರ್ ಝೋನ್ ಅಳತೆ

May 30, 2025 2:58 pm

ವೀರಶೈವ, ಲಿಂಗಾಯಿತರು ತಮ್ಮ ಅಸ್ತಿತ್ವಕ್ಕಾಗಿ ಹೋರಾಡಿ: ಶಾಸಕ

May 30, 2025 2:57 pm

ಪೌರ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಪ.ಪಂ ಜನಪ್ರತಿನಿಧಿ, ಕಾರ್ಯನಿರತ ಪರ್ತಕರ್ತರ ಸಂಘ ಬೆಂಬಲ

May 30, 2025 2:56 pm
News by Date
May 2025
M T W T F S S
 1234
567891011
12131415161718
19202122232425
262728293031  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.