ಚಾಮರಾಜನಗರ: 

      ಸುಳವಾಡಿ ವಿಷ ಪ್ರಸಾದ ಸೇವನೆ ದುರಂತಕ್ಕೆ ಸಂಬಂಧಿಸಿದ ನಾಲ್ವರು ಆರೋಪಿಗಳ ನ್ಯಾಯಾಂಗ ಬಂಧನವನ್ನು ಜ.16ರ ವರೆಗೆ ವಿಸ್ತರಿಸಲಾಗಿದೆ.

      ಮೈಸೂರಿನ ಕಾರಾಗೃಹದಲ್ಲಿದ್ದ ನಾಲ್ವರು ಆರೋಪಿಗಳಾದ ಸಾಲೂರು ಮಠದ ಕಿರಿಯ ಸ್ವಾಮೀಜಿ ಆಗಿದ್ದ ಇಮ್ಮಡಿ ಮಹದೇವ ಸ್ವಾಮಿ,‌ ಅಂಬಿಕಾ, ಮಾದೇಶ್ ಮತ್ತು ದೊಡ್ಡಯ್ಯರನ್ನು ಗುರುವಾರ ಬೆಳಗ್ಗೆ 11.30 ಗಂಟೆ ವೇಳೆ ಜಿಲ್ಲಾ ಪೊಲೀಸರು ಕೊಳ್ಳೇಗಾಲದ ಹಿರಿಯ ಶ್ರೇಣಿ ನ್ಯಾಯಾಧೀಶ ಎಸ್.ಜೆ.ಕೃಷ್ಣ ಅವರ ಎದುರು ಹಾಜರು ಪಡಿಸಿದ್ದರು.

      ಇಮ್ಮಡಿ ಮಹದೇವ ಸ್ವಾಮಿ ಬಿಳಿ ಪಂಚೆ, ಶರ್ಟ್, ಶಲ್ಯ ಹಾಕಿಕೊಂಡು ನ್ಯಾಯಾಲಯಕ್ಕೆ ಹಾಜರಾಗಿದ್ದರು.

(Visited 27 times, 1 visits today)