ತುಮಕೂರು:

      ಸ್ಮಾರ್ಟ್‍ಸಿಟಿ ಯೋಜನೆ ಯಲ್ಲಿ 2 ಬಸ್ ನಿಲ್ದಾಣ ಹಾಗೂ ಬಸ್ ಡಿಪೋಗಳನ್ನು 175 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಗೊಳಿಸುವ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ತಿಳಿಸಿದರು.

ಅವರಿಂದು ನಗರಕ್ಕೆ ಭೇಟಿ ನೀಡಿ ಬಸ್ ನಿಲ್ದಾಣ ಹಾಗೂ ಡಿಪೋ ವೀಕ್ಷಿಸಿ ಮಾತನಾಡುತ್ತಿದ್ದರು.ನಾಲ್ಕೂವರೆ ಎಕರೆ ಜಾಗದಲ್ಲಿರುವ ಬಸ್ ನಿಲ್ದಾಣ ವನ್ನು ಆಧುನೀಕರಣಗೊಳಿಸಿ ಅದರಲ್ಲಿ ಬಸ್ ನಿಲ್ದಾಣ ಹಾಗೂ ವಾಣಿಜ್ಯ ಸಂಕೀರ್ಣಗಳ ನಿರ್ಮಾಣ ಮಾಡುವು ದಾಗಿ ತಿಳಿಸಿದ ಅವರು, ಮೂರು ಹಂತದ ಕಟ್ಟಡದಲ್ಲಿ ಕೆಳ ಹಂತದ ಕಟ್ಟಡದಲ್ಲಿ ದುರಸ್ತಿ ವಿಭಾಗ ಹಾಗೂ ಡಿಪೋ ಇರಲಿದ್ದು, ಇನ್ನೊಂದು ಹಂತದ ಕಟ್ಟಡದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗುವುದು ಅವರು ತಿಳಿಸಿದರು.

      ತುಮಕೂರು ನಗರವು ದಿನೇ ದಿನೇ ಬೆಳೆಯುತ್ತಿದ್ದು, ಇಲ್ಲಿ ಸೂಕ್ತವಾದ ಸಾಮಾನ್ಯ ಪಾರ್ಕಿಂಗ್ ವ್ಯವಸ್ಥೆ ಇಲ್ಲದಿರು ವುದರಿಂದ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು ಹೆಚ್ಚಿನ ಒತ್ತು ನೀಡಲಾಗುವುದು ಎಂದರು.
ನಗರದಲ್ಲಿ ಎಲ್ಲಿಯೂ ವಾಹನಗಳ ನಿಲುಗಡೆಗೆ ಸೂಕ್ತ ವ್ಯವಸ್ಥೆ ಇಲ್ಲದಿರುವುದರ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ ಅವರು, ಮಹಾನಗರ ಪಾಲಿಕೆ ವತಿಯಿಂದ ಹಣ ನೀಡಿ ಬಳಕೆ ಮಾಡುವ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸುವುದರಿಂದ ಸರ್ಕಾರಕ್ಕೂ ಹೆಚ್ಚಿನ ಆದಾಯ ಬರಲಿದೆ ಎಂದು ಅವರು ತಿಳಿಸಿದರು.

      ತುಮಕೂರು ನಗರವು ಬೆಳೆ ಯುತ್ತಿದ್ದು, ವಸಂತ ನರಸಾಪುರ ಕೈಗಾರಿಕಾ ಪ್ರದೇಶವು ಹೆಚ್ಚು ಅಭಿವೃದ್ಧಿ ಹೊಂದುತ್ತಿದ್ದು, 18 ಸಾವಿರ ಎಕರೆ ಪ್ರದೇಶದಲ್ಲಿ ಕೈಗಾರಿಕೆಗಳು ಸ್ಥಾಪನೆ ಯಾಗುತ್ತಿದ್ದು, 30ರಿಂದ 35 ಎಕರೆ ಜಮೀನನ್ನು ಪಡೆದು ಬಸ್ ನಿಲ್ದಾಣ, ಡಿಪೋ ಹಾಗೂ ಟರ್ಕ್ ಟ್ರಮಿನಲ್ ಸ್ಥಾಪನೆಗೆ ಹೆಚ್ಚಿನ ಒತ್ತು ನೀಡುವ ಆಲೋಚನೆ ಯನ್ನು ತಾವು ಹೊಂದಿರು ವುದಾಗಿ ತಿಳಿಸಿದ ಅವರು, ಈ ಬಗ್ಗೆ ಅಧಿಕಾರಿಗಳೊಂದಿಗೆ ಈಗಾಗಲೇ ಚರ್ಚಿಸಿದ್ದು, ಸೂಕ್ತ ಸ್ಥಳ ಪರಿಶೀಲಿಸುವಂತೆ ಸೂಚನೆ ನೀಡಿರುವು  ದಾಗಿ ತಿಳಿಸಿದರು.

      ಸ್ಥಳ ನಿಗಧಿಪಡಿಸಿದ ನಂತರ ಈ ಬಗ್ಗೆ ಜಿಲ್ಲಾಧಿಕಾರಿ ಗಳೊಂದಿಗೆ ಚರ್ಚಿಸಿ, ಭೂಸ್ವಾಧೀನ ಪ್ರಕ್ರಿಯೆಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ, ಈ ವರ್ಷದಲ್ಲಿಯೇ ಈ ಕಾರ್ಯಕ್ಕೆ ಚಾಲನೆ ನೀಡುವುದಾಗಿ ತಿಳಿಸಿದರು.
ಸಚಿವರೊಂದಿಗೆ ಪಾಲಿಕೆ ಆಯುಕ್ತ ಮಂಜುನಾಥ ಸ್ವಾಮಿ, ಸಾರಿಗೆ ಇಲಾಖೆಯ ಅಧಿಕಾರಿಗಳು ಮತ್ತಿತರರು ಇದ್ದರು.

(Visited 44 times, 1 visits today)