BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸಾಹೇ ವಿವಿ ಅಂತರ್‌ಕಾಲೇಜು ವಾಲಿಬಾಲ್ ಪಂದ್ಯವಳಿ: ಎಸ್‌ಎಸ್‌ಐಟಿ ತಂಡಕ್ಕೆ ಟ್ರೋಫಿ
  • ಭಕ್ತರು ಕಾಲಬೈರೆವೇಶ್ವರ ಸ್ವಾಮಿಯನ್ನು ಶ್ರದ್ದಾಭಕ್ತಯಿಂದ ಪೂಜಿಸಿದರೆ ಇಷ್ಠಾರ್ಥ ನೆರವೇರುವುದು: ಮಹಾಸ್ವಾಮೀಜಿ
  • ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ
  • ಹುಳಿಯಾರು ಪಪಂಗೆ ಅಧ್ಯಕ್ಷರ ಅವಿರೋಧ ಆಯ್ಕೆ
  • ಸೋಲಿನ ನಿರಾಶೆಗಿಂತ, ಮಾನವೀಯ ಮೌಲ್ಯ ತುಂಬುವುದು ಮುಖ್ಯ
  • ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾ. ಶಾಖೆ ಆರಂಭ
  • ದಾಖಲೆ ಸಮೇತ ಗ್ರಾಮಸ್ಥರ ಆರೋಪ
  • ಬೆಳಗಾವಿಯಲ್ಲಿ ತುಮಕೂರು ಗ್ರಾಮಾಂತರ ಅಭಿವೃದ್ಧಿಯ ಕುರಿತು ಸಿಎಂ ಗಮನ ಸೆಳೆದ ಶಾಸಕ ಸುರೇಶ್ ಗೌಡ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮನೆಗಳಿಗೆ ಭೇಟಿ ನೀಡಿ ಮತಪಟ್ಟಿ ಪರಿಶೀಲಿಸಿದ ಕಾರ್ಯದರ್ಶಿ ಮಣಿವಣ್ಣನ್
Trending

ಮನೆಗಳಿಗೆ ಭೇಟಿ ನೀಡಿ ಮತಪಟ್ಟಿ ಪರಿಶೀಲಿಸಿದ ಕಾರ್ಯದರ್ಶಿ ಮಣಿವಣ್ಣನ್

By News Desk BenkiyabaleUpdated:January 30, 2020 6:56 pm

 ತುಮಕೂರು :

     ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ-2020ಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕರು ಹಾಗೂ ಕಾರ್ಮಿಕ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಮಣಿವಣ್ಣನ್ ಅವರು ಜಿಲ್ಲೆಯ ತುರುವೇಕೆರೆ, ಕುಣಿಗಲ್, ಗುಬ್ಬಿ, ಚಿಕ್ಕನಾಯಕನಹಳ್ಳಿ ಹಾಗೂ ತಿಟಪೂರು ತಾಲೂಕಿನ ವಿವಿಧ ಗ್ರಾಮಗಳ ಮನೆಗಳಿಗೆ ಇಂದು ಭೇಟಿ ನೀಡಿ ಮತದಾರರ ಪಟ್ಟಿ ಪರಿಶೀಲನೆ ನಡೆಸಿದರು.

      ಜಿಲ್ಲೆಯ ತುರುವೇಕೆರೆ ತಾಲೂಕಿನ ಜಿ.ದೊಡ್ಡೇರಿ, ಶೆಟ್ಟಿಗೊಂಡನಹಳ್ಳಿ, ಗುಬ್ಬಿ ತಾಲೂಕಿನ ಕಲ್ಲೂರು, ನಿಟ್ಟೂರು, ತಿಪಟೂರು ತಾಲೂಕಿನ ಕೆ.ಬಿ ಕ್ರಾಸ್, ಚಿಕ್ಕನಾಯಕನಹಳ್ಳಿ ತಾಲೂಕಿನ ಜೆ.ಸಿ.ಪುರ ಗ್ರಾಮಗಳ ಮನೆಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿಯನ್ನು ಪರಿಶೀಲನೆ ನಡೆಸಿದರು.

      ವೀಕ್ಷಕರಾದ ಮಣಿವಣ್ಣನ್ ಅವರು ಮನೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮತದಾರರ ಪಟ್ಟಿಯಲ್ಲಿ ಮನೆಯ ಸದಸ್ಯರೆಲ್ಲರ ಹೆಸರು ಸೇರ್ಪಡೆಯಾಗಿರುವ, ಮರಣ ಹೊಂದಿದವರ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕಿರುವ ಹಾಗೂ ಒಂದು ಮತಗಟ್ಟೆಯಿಂದ ಮತ್ತೊಂದು ಮತಗಟ್ಟೆಗೆ ಸ್ಥಳಾಂತರಗೊಂಡಿರುವ ಮತದಾರರ ಹೆಸರನ್ನು ಪಟ್ಟಿಯಲ್ಲಿ ಸೇರಿಸಿರುವ ಬಗ್ಗೆ ಪರಿಶೀಲಿಸಿದರು.

      ಹಳೆಯ ಎಪಿಕ್ ಕಾರ್ಡುಗಳಿಗೆ ಮಾನ್ಯತೆ ಇಲ್ಲದಿರುವುದರಿಂದ 18 ವರ್ಷ ತುಂಬಿದ ಎಲ್ಲಾ ಅರ್ಹ ಮತದಾರರು, ಚುನಾವಣಾ ಆಯೋಗದಿಂದ ನೀಡಲಾಗುವ ಹೊಸ ಎಪಿಕ್ ಕಾರ್ಡುಗಳನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ಮನವರಿಕೆ ಮಾಡಿದರು. ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆ, ಮರಣ ಹೊಂದಿದವರ ಹೆಸರನ್ನು ಪಟ್ಟಿಯಿಂದ ಕೈಬಿಡುವ ಕಾರ್ಯವನ್ನು ಉತ್ತಮವಾಗಿ ನಿರ್ವಹಿಸಲಾಗುತ್ತಿದೆ ಎಂದು ತುರುವೇಕೆರೆ ತಹಶೀಲ್ದಾರ್ ನಯೀಮ್ ಉನ್ನೀಸಾ ಅವರು ವೀಕ್ಷಕರ ಗಮನಕ್ಕೆ ತಂದರು.

      ಇದಕ್ಕೂ ಮುನ್ನ ಕುಣಿಗಲ್ ತಾಲೂಕು ದೊಡ್ಡಮದುರೆ ಗ್ರಾಮದ ರಾಮಣ್ಣ ಎಂಬ ಮತದಾರರನ ಮನೆಗೆ ಭೇಟಿ ನೀಡಿದ ಅವರು ಮನೆಯವರೆಲ್ಲರ ಭಾವಚಿತ್ರವಿರುವ ಮತದಾರರ ಗುರುತಿನ ಚೀಟಿ ಹಾಗೂ ಮತದಾರರ ಪಟ್ಟಿಯಲ್ಲಿ ಅವರ ಹೆಸರಿರುವ ಬಗ್ಗೆ ಪರಿಶೀಲಿಸಿದರು. ನಂತರ ತಹಶೀಲ್ದಾರ್ ವಿಶ್ವನಾಥ್ ಅವರಿಗೆ ಕುಣಿಗಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದರು.

      ನಂತರ ಗುಬ್ಬಿ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 165 ಆಡಗೊಂಡನಹಳ್ಳಿ ಗ್ರಾಮದ ಮನೆಯೊಂದಕ್ಕೆ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಮತದಾರರ ಪಟ್ಟಿಯ ಕ್ರಮ ಸಂಖ್ಯೆ 10ರಲ್ಲಿರುವ ಮತದಾರರ ನಿಖಿಲ್ ಗೌಡ ಬಿನ್ ಲಕ್ಷ್ಮಿನಾರಾಯಣ ಅವರು ಗ್ರಾಮದಲ್ಲಿ ವಾಸವಿಲ್ಲದಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಪರಿಶೀಲಿಸಿ ವರದಿ ನೀಡಬೇಕೆಂದು ತಹಶೀಲ್ದಾರ್ ಮಮತಾ ಅವರಿಗೆ ಸೂಚನೆ ನೀಡಿದರು.

      ಮತದಾರರ ಪಟ್ಟಿ, ನಮೂನೆ-6, 7, 8, 8ಎ ಮೂಲಕ ಸ್ವೀಕೃತ ಅರ್ಜಿ ಹಾಗೂ ವಿಲೇವಾರಿಯಾದ ಅರ್ಜಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

(Visited 22 times, 1 visits today)
Previous Articleತುಮಕೂರು : ಮಹಿಳೆಯರಿಗೊಲಿದ ಪಾಲಿಕೆ ಮೇಯರ್, ಉಪಮೇಯರ್ ಸ್ಥಾನ
Next Article ಡೆನ್ಮಾರ್ಕ್ ದೇಶದ ಅಲ್ಬೋರ್ಗ್ ಮಹಾನಗರದ ಮಾದರಿಯಲ್ಲಿ ತುಮಕೂರು ನಗರ ಅಭಿವೃದ್ಧಿಗೆ ಒತ್ತು
News Desk Benkiyabale

Related Posts

ಡಿ. 12 ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ

December 12, 2025 3:48 pm ತುಮಕೂರು

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ: ಶೇ. ೬೦.೭೧ರಷ್ಟು ಪ್ರಗತಿ

December 12, 2025 3:25 pm ತುಮಕೂರು

ಸರ್ಕಾರಿ ಯೋಜನೆಗಳ ಸಮಗ್ರ ಅನುಷ್ಠಾನಕ್ಕೆ ಡಿಸಿ ಸೂಚನೆ

December 08, 2025 4:21 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಸಾಹೇ ವಿವಿ ಅಂತರ್‌ಕಾಲೇಜು ವಾಲಿಬಾಲ್ ಪಂದ್ಯವಳಿ: ಎಸ್‌ಎಸ್‌ಐಟಿ ತಂಡಕ್ಕೆ ಟ್ರೋಫಿ

December 16, 2025 4:12 pm
ಇತರೆ ಸುದ್ಧಿಗಳು

ಭಕ್ತರು ಕಾಲಬೈರೆವೇಶ್ವರ ಸ್ವಾಮಿಯನ್ನು ಶ್ರದ್ದಾಭಕ್ತಯಿಂದ ಪೂಜಿಸಿದರೆ ಇಷ್ಠಾರ್ಥ ನೆರವೇರುವುದು: ಮಹಾಸ್ವಾಮೀಜಿ

December 16, 2025 4:11 pm
ಇತರೆ ಸುದ್ಧಿಗಳು

ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

December 16, 2025 4:10 pm
ಇತರೆ ಸುದ್ಧಿಗಳು

ಹುಳಿಯಾರು ಪಪಂಗೆ ಅಧ್ಯಕ್ಷರ ಅವಿರೋಧ ಆಯ್ಕೆ

December 16, 2025 4:09 pm
ಇತರೆ ಸುದ್ಧಿಗಳು

ಸೋಲಿನ ನಿರಾಶೆಗಿಂತ, ಮಾನವೀಯ ಮೌಲ್ಯ ತುಂಬುವುದು ಮುಖ್ಯ

December 16, 2025 4:08 pm
ಇತರೆ ಸುದ್ಧಿಗಳು

ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾ. ಶಾಖೆ ಆರಂಭ

December 16, 2025 4:06 pm
Our Youtube Channel
Our Picks

ಸಾಹೇ ವಿವಿ ಅಂತರ್‌ಕಾಲೇಜು ವಾಲಿಬಾಲ್ ಪಂದ್ಯವಳಿ: ಎಸ್‌ಎಸ್‌ಐಟಿ ತಂಡಕ್ಕೆ ಟ್ರೋಫಿ

December 16, 2025 4:12 pm

ಭಕ್ತರು ಕಾಲಬೈರೆವೇಶ್ವರ ಸ್ವಾಮಿಯನ್ನು ಶ್ರದ್ದಾಭಕ್ತಯಿಂದ ಪೂಜಿಸಿದರೆ ಇಷ್ಠಾರ್ಥ ನೆರವೇರುವುದು: ಮಹಾಸ್ವಾಮೀಜಿ

December 16, 2025 4:11 pm

ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

December 16, 2025 4:10 pm

ಹುಳಿಯಾರು ಪಪಂಗೆ ಅಧ್ಯಕ್ಷರ ಅವಿರೋಧ ಆಯ್ಕೆ

December 16, 2025 4:09 pm

ಸೋಲಿನ ನಿರಾಶೆಗಿಂತ, ಮಾನವೀಯ ಮೌಲ್ಯ ತುಂಬುವುದು ಮುಖ್ಯ

December 16, 2025 4:08 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಸಾಹೇ ವಿವಿ ಅಂತರ್‌ಕಾಲೇಜು ವಾಲಿಬಾಲ್ ಪಂದ್ಯವಳಿ: ಎಸ್‌ಎಸ್‌ಐಟಿ ತಂಡಕ್ಕೆ ಟ್ರೋಫಿ

By News Desk BenkiyabaleDecember 16, 2025 4:12 pm

ತುಮಕೂರು: ಕ್ರೀಡಾಕೂಟಗಳು ವಿದ್ಯಾರ್ಥಿಗಳ ಮನಸ್ಸಿಗೆ ಮತ್ತು ದೇಹಕ್ಕೆ ಹೊಸ ಚೈತನ್ಯವನ್ನು ನೀಡುತ್ತದೆ ಪ್ರತಿನಿತ್ಯ ದೇಹವನ್ನು ದಂಡಿಸಿ ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ…

ಭಕ್ತರು ಕಾಲಬೈರೆವೇಶ್ವರ ಸ್ವಾಮಿಯನ್ನು ಶ್ರದ್ದಾಭಕ್ತಯಿಂದ ಪೂಜಿಸಿದರೆ ಇಷ್ಠಾರ್ಥ ನೆರವೇರುವುದು: ಮಹಾಸ್ವಾಮೀಜಿ

December 16, 2025 4:11 pm

ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

December 16, 2025 4:10 pm

ಹುಳಿಯಾರು ಪಪಂಗೆ ಅಧ್ಯಕ್ಷರ ಅವಿರೋಧ ಆಯ್ಕೆ

December 16, 2025 4:09 pm
News by Date
December 2025
M T W T F S S
1234567
891011121314
15161718192021
22232425262728
293031  
« Nov    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.