BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಜು.೧೯ರಂದು ಚಿತ್ರದುರ್ಗದಲ್ಲಿ ಭೋವಿ ಜನೋತ್ಸವ: ಡಾ.ಎಂ.ರಾಮಪ್ಪ
  • ಉಪಮುಖ್ಯಮಂತ್ರಿಗಳ ಮೇಲಿನ ಆರೋಪ ಸರಿಯಲ್ಲ
  • ಕನಿಷ್ಠ ವೇತನ, ಪಿಎಫ್-ಇ.ಎಸ್.ಐ ಮಿತಿ ರದ್ದುಗೊಳಿಸಿ: ಸಿಐಟಿಯು ಪ್ರತಿಭಟನೆ
  • ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ
  • ೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ
  • ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು
  • ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ
  • ರೈಫಲ್ ಶೂಟಿಂಗ್ ಕ್ರೀಡೆಯಲ್ಲಿ ತುಮಕೂರು ಜಿಲ್ಲೆಗೆ ೧೯ ಪದಕ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮರಾಠ ಪ್ರಾಧಿಕಾರ ಕೈ ಬಿಡಲು ಆಗ್ರಹಿಸಿ ಜ.9 ರಂದು ರೈಲು ಬಂದ್ ಚಳವಳಿ
Trending

ಮರಾಠ ಪ್ರಾಧಿಕಾರ ಕೈ ಬಿಡಲು ಆಗ್ರಹಿಸಿ ಜ.9 ರಂದು ರೈಲು ಬಂದ್ ಚಳವಳಿ

By News Desk BenkiyabaleUpdated:December 28, 2020 7:08 pm

ತುಮಕೂರು : 

      ರಾಜ್ಯದಲ್ಲಿ ಮರಾಠ ಪ್ರಾಧಿಕಾರ ರಚನೆ ಮಾಡಿರುವುದನ್ನು ಕೈಬಿಡಬೇಕು ಎಂದು ಆಗ್ರಹಿಸಿ ಕನ್ನಡ ಒಕ್ಕೂಟದ ವತಿಯಿಂದ ಜ. 9 ರಂದು ರಾಜ್ಯಾದ್ಯಂತ ರೈಲು ಬಂದ್ ಚಳವಳಿ ಹಮ್ಮಿಕೊಂಡಿರುವುದಾಗಿ ವಾಟಾಳ್ ನಾಗರಾಜ್ ತಿಳಿಸಿದರು.

      ರಾಜ್ಯದಲ್ಲಿ ಮರಾಠ ಪ್ರಾಧಿಕಾರವನ್ನು ರಚನೆ ಮಾಡಿರುವ ಸರ್ಕಾರ ಹಿಂದಕ್ಕೆ ಪಡೆಯುವ ಸೂಚನೆಯನ್ನು ತೋರಿಸುತ್ತಿಲ್ಲ. ಹೀಗಾಗಿ ರಾಜ್ಯದ ಎಲ್ಲ ಕಡೆ ಚಳವಳಿ ನಡೆಸಲಾಗುತ್ತಿದೆ ಎಂದರು.

     ನಗರದ ರೈಲ್ವೆ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜ. 9 ರಂದು ರಾಜ್ಯದ 500 ಸ್ಥಳಗಳಲ್ಲಿ ರೈಲು ಸಂಚಾರ ಬಂದ್ ಮಾಡಿ ರೈಲ್ವೆ ಹಳಿಗಳ ಮೇಲೆ ಕುಳಿತು ಸತ್ಯಾಗ್ರಹ ನಡೆಸುವುದಾಗಿ ಹೇಳಿದರು.

      ಜ. 9 ರಂದು ರೈಲುಗಳನ್ನು ಓಡಿಸುವಾಗ ಎಚ್ಚರದಿಂದ ಓಡಿಸಬೇಕು. ಈಗ ನಿಗದಿಪಡಿಸಿರುವ 500 ಸ್ಥಳಗಳು ಮುಂದೆ 1 ಸಾವಿರ ಸ್ಥಳಗಳಾಗಬಹುದು. ಹಾಗಾಗಿ ಅಂದು ರೈಲುಗಳನ್ನು ಚಾಲಕರು ಎಚ್ಚರಿಕೆಯಿಂದ ಓಡಿಸಬೇಕು ಎಂದು ಅವರು ಒತ್ತಾಯಿಸಿದರು.

      ಮರಾಠ ಪ್ರಾಧಿಕಾರ ರಚನೆ ವಿಚಾರದಲ್ಲಿ ರಾಜ್ಯ ಸರ್ಕಾರ ತನ್ನ ದ್ವಂದ್ವ ನೀತಿಯನ್ನು ಕೈ ಬಿಡಬೇಕು. ಮರಾಠ ಪ್ರಾಧಿಕಾರವನ್ನು ರಚನೆಯಿಂದ ಕನ್ನಡಿಗರಿಗೆ ಭಾರೀ ಅಪಾಯ ಇದೆ ಎಂದರು.

      ರಾಜ್ಯದ ಬೆಳಗಾವಿ, ಖಾನಾಪುರ, ಕಾರವಾರ ಇವೆಲ್ಲವನ್ನು ಮಹಾರಾಷ್ಟ್ರಕ್ಕೆ ಸೇರಿಸಲು ಸುಪ್ರೀಂ ಕೋರ್ಟ್‍ನಲ್ಲಿ ದಾವೆ ಹೂಡಲಾಗಿದೆ. ಅವರು ನಮ್ಮ ಮೇಲೆ ದಾಳಿ ಆಗಾಗ್ಗೆ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಬೆಳಗಾವಿ ಭಾಗವನ್ನು ಬಿಟ್ಟು ಕೊಡುವುದಿಲ್ಲ ಎಂದರು.

      ಮುಖ್ಯಮಂತ್ರಿ ಯಡಿಯೂರಪ್ಪನವರು ಈ ಪ್ರಾಧಿಕಾರ ರಚನೆ ಮಾಡುವಾಗ ಯಾವುದೇ ಚಿಂತನೆ ಮಾಡದೆ, ಶಾಸನ ಸಭೆಯಲ್ಲೂ ಚರ್ಚೆ ಮಾಡದೆ, ಮಂತ್ರಿ ಮಂಡಲದಲ್ಲೂ ಚರ್ಚಿಸದೆ ತಾವೇ ನಿರ್ಧಾರ ಕೈಗೊಂಡು ಪ್ರಾಧಿಕಾರ ರಚನೆ ಮಾಡಿದ್ದಾರೆ. ವಿಧಾನಸೌಧದಲ್ಲಿ ಪರಭಾಷೆಯ ಪ್ರಾಧಿಕಾರ ಮಾಡಿ ಮಂತ್ರಿ ಸ್ಥಾನಮಾನ ಕೊಡುತ್ತಿರುವುದು ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲು. ಯಾವ ಮುಖ್ಯಮಂತ್ರಿಗಳು ಇಂಥ ಕೆಲಸವನ್ನು ಮಾಡಿಲ್ಲ. ಈ ಮುಖ್ಯಮಂತ್ರಿಗಳಿಗೆ ಗಡಿನಾಡ ಬಗ್ಗೆ ಚಿಂತನೆ ಇಲ್ಲ, ಕನ್ನಡ ಬೆಳೆಸುವ ಕಾಳಜಿ ಇಲ್ಲ, ಪ್ರಾಮಾಣಿಕತೆಯೂ ಇಲ್ಲ ಎಂದು ಹರಿಹಾಯ್ದರು.

      ಜ. 9 ರಂದು ರಾಜ್ಯದಾದ್ಯಂತ ರೈಲು ಬಂದ್ ಮಾಡಿ ಹೋರಾಟ ನಡೆಸುವ ಜತೆಗೆ ಬೆಳಗಾವಿಯಲ್ಲಿ ಕನ್ನಡ ಧ್ವಜವನ್ನು ಹಾರಿಸಲು ಕನ್ನಡಪರ ಸಂಘಟನೆಗಳು ಸಿದ್ದಗೊಂಡಿವೆ. ಕನ್ನಡದ ಅಸ್ತಿತ್ವಕ್ಕಾಗಿ ಹೋರಾಟ ಅನಿವಾರ್ಯ, ನಮ್ಮನ್ನು ಜೈಲಿಗೆ ಹಾಕಿದರೂ ಚಿಂತೆಯಿಲ್ಲ ಹೋರಾಟ ಮಾಡಿಯೇ ತೀರುತ್ತೇವೆ ಎಂದರು.

      ರಾಜ್ಯ ಸರ್ಕಾರದ ಅಧಿಕಾರಿಗಳಲ್ಲಿ ಹೊಂದಾಣಿಕೆ ಇಲ್ಲ ಎಂಬುದಕ್ಕೆ ಇಬ್ಬರು ಐಪಿಎಸ್ ಅಧಿಕಾರಿಗಳು ತಮಗೆ ಮನ ಬಂದಂತೆ ಕೆಸರೆರಚಾಟ, ಜಟಾಪಟಿ ನಡೆಸುತ್ತಿರುವುದೇ ಸಾಕ್ಷಿಯಾಗಿದೆ. ನಿರ್ಭಯ ನಿಧಿ ಟೆಂಡರ್‍ಗೆ ಸಂಬಂಧಿಸಿದಂತೆ ಅವ್ಯವಹಾರ ನಡೆದಿದೆ ಒಬ್ಬರಿಗೊಬ್ಬರು ಆರೋಪ-ಪ್ರತ್ಯಾರೋಪ ಮಾಡಿಕೊಳ್ಳುತ್ತಿದ್ದಾರೆ. ಈ ವಿಚಾರದಲ್ಲಿ ಮುಖ್ಯ ಕಾರ್ಯದರ್ಶಿ ಮಾತಿಗೂ ಬೆಲೆ ಇಲ್ಲ ಎಂದರು.

    ನಿರ್ಭಯಾ ನಿಧಿ ಯೋಜನೆಗೆ 612 ಕೋಟಿ ಅವಶ್ಯಕತೆ ಇಲ್ಲ. ನಿರ್ಭಯ ಎನ್ನುವ ಹೆಸರಿನಲ್ಲಿ ಲೂಟಿ ಹೊಡೆಯಲು ಸಂಚು ನಡೆದಿದೆ ಎಂದು ಅವರು ದೂರಿದರು.

       ಟ್ರಾಫಿಕ್‍ಗಳಲ್ಲೂ ಪೊಲೀಸರಂತೆ ಗೊಂಬೆ ನಿಲ್ಲಿಸಲಾಗಿತ್ತು. ಇದಕ್ಕಾಗಿ ಕೋಟಿ ಕೋಟಿ ಖರ್ಚಾಗಿತ್ತು. ಆದರೆ ಈಗ ಆ ಗೊಂಬೆಗಳೇ ಇಲ್ಲ ಎಂದರು.  ಪೊಲೀಸರ ಹಿತರಕ್ಷಣೆಗಾಗಿ ಔರಾದ್‍ಕರ್ ವರದಿಯನ್ನು ಕೂಡಲೇ ಜಾರಿ ಮಾಡಬೇಕು. ಪೊಲೀಸರ ವಾಸದ ಮನೆಗಳು ಮೋರಿಯಾಗಿವೆ. ಅದನ್ನು ಸರಿಪಡಿಸಿ ಅನುಕೂಲ ಕಲ್ಪಿಸಬೇಕು ಎಂದ ಅವರು ಜನವರಿ ಅಂತ್ಯದವರೆಗೂ ಕಾಯುತ್ತೇವೆ. ಅಷ್ಟರೊಳಗೆ ಔರಾದ್‍ಕರ್ ವರದಿ ಜಾರಿ ಮಾಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

(Visited 16 times, 1 visits today)
Previous Articleಹುಳಿಯಾರಿನಲ್ಲಿ ಅವರೆಕಾಯಿ ಮಾರಾಟ ಜೋರು
Next Article ಗ್ರಾಮ ಪಂಚಾಯಿತಿ ಚುನಾವಣೆ : ಇಂದು ಮತ ಎಣಿಕೆ
News Desk Benkiyabale

Related Posts

ಜು.೧೯ರಂದು ಚಿತ್ರದುರ್ಗದಲ್ಲಿ ಭೋವಿ ಜನೋತ್ಸವ: ಡಾ.ಎಂ.ರಾಮಪ್ಪ

July 10, 2026 12:00 pm news

ಉಪಮುಖ್ಯಮಂತ್ರಿಗಳ ಮೇಲಿನ ಆರೋಪ ಸರಿಯಲ್ಲ

July 10, 2026 11:58 am news

ಕನಿಷ್ಠ ವೇತನ, ಪಿಎಫ್-ಇ.ಎಸ್.ಐ ಮಿತಿ ರದ್ದುಗೊಳಿಸಿ: ಸಿಐಟಿಯು ಪ್ರತಿಭಟನೆ

July 10, 2026 11:56 am news
ತಾಜಾ ಸುದ್ಧಿಗಳು

ಜು.೧೯ರಂದು ಚಿತ್ರದುರ್ಗದಲ್ಲಿ ಭೋವಿ ಜನೋತ್ಸವ: ಡಾ.ಎಂ.ರಾಮಪ್ಪ

July 10, 2026 12:00 pm

ಉಪಮುಖ್ಯಮಂತ್ರಿಗಳ ಮೇಲಿನ ಆರೋಪ ಸರಿಯಲ್ಲ

July 10, 2026 11:58 am

ಕನಿಷ್ಠ ವೇತನ, ಪಿಎಫ್-ಇ.ಎಸ್.ಐ ಮಿತಿ ರದ್ದುಗೊಳಿಸಿ: ಸಿಐಟಿಯು ಪ್ರತಿಭಟನೆ

July 10, 2026 11:56 am

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

July 09, 2026 4:59 pm

೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ

July 09, 2026 4:35 pm

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

July 09, 2026 2:53 pm
Our Youtube Channel
Our Picks

ಜು.೧೯ರಂದು ಚಿತ್ರದುರ್ಗದಲ್ಲಿ ಭೋವಿ ಜನೋತ್ಸವ: ಡಾ.ಎಂ.ರಾಮಪ್ಪ

July 10, 2026 12:00 pm

ಉಪಮುಖ್ಯಮಂತ್ರಿಗಳ ಮೇಲಿನ ಆರೋಪ ಸರಿಯಲ್ಲ

July 10, 2026 11:58 am

ಕನಿಷ್ಠ ವೇತನ, ಪಿಎಫ್-ಇ.ಎಸ್.ಐ ಮಿತಿ ರದ್ದುಗೊಳಿಸಿ: ಸಿಐಟಿಯು ಪ್ರತಿಭಟನೆ

July 10, 2026 11:56 am

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

July 09, 2026 4:59 pm

೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ

July 09, 2026 4:35 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಜು.೧೯ರಂದು ಚಿತ್ರದುರ್ಗದಲ್ಲಿ ಭೋವಿ ಜನೋತ್ಸವ: ಡಾ.ಎಂ.ರಾಮಪ್ಪ

By News Desk BenkiyabaleJuly 10, 2026 12:00 pm

ತುಮಕೂರು: ಭೋವಿ ಗುರುಪೀಠದ ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರ ೧೭ನೇ ಪಟ್ಟಾಭಿಷೇಕ ಹಾಗೂ ೪೦ನೇ ಜನ್ಮ ವರ್ಧಂತ್ಯೋತ್ಸವ ಅಂಗವಾಗಿ…

ಉಪಮುಖ್ಯಮಂತ್ರಿಗಳ ಮೇಲಿನ ಆರೋಪ ಸರಿಯಲ್ಲ

July 10, 2026 11:58 am

ಕನಿಷ್ಠ ವೇತನ, ಪಿಎಫ್-ಇ.ಎಸ್.ಐ ಮಿತಿ ರದ್ದುಗೊಳಿಸಿ: ಸಿಐಟಿಯು ಪ್ರತಿಭಟನೆ

July 10, 2026 11:56 am

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

July 09, 2026 4:59 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.