BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಅಡಿಕೆ ತೋಟದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಗಿಡಗಳು ನೆಲಸಮ
  • ಗ್ರಾಮ ದೇವತೆ ಅಮ್ಮನವರ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ
  • ಗ್ರಾಮೀಣ ಜನರು ಯೋಜನೆಯ ಸದುಪಯೋಗ ಪಡೆಯುವಂತೆ ಸಿಇಒ ಅಶ್ವಿಜ ಮನವಿ
  • ೯ ಕೋಟಿ ಗಣಿ ಹಣ ನೀರಿನಲ್ಲಿ ಹೋಮ
  • ತಾಲೂಕಿನಲ್ಲಿ ಈ ವರ್ಷ ಭೀಕರ ಬರದ ಛಾಯೆ ನಿಶ್ಚಿತ!
  • ೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ
  • ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ
  • ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಾನವ ಜನ್ಮ ಪಡೆದಾಗಿನಿಂದ ಅವನ ಹಕ್ಕು ಆರಂಭವಾಗುತ್ತದೆ : ರೂಪಕ್ ಕುಮಾರ್ ದತ್ತಾ
ಇತರೆ ಸುದ್ಧಿಗಳು

ಮಾನವ ಜನ್ಮ ಪಡೆದಾಗಿನಿಂದ ಅವನ ಹಕ್ಕು ಆರಂಭವಾಗುತ್ತದೆ : ರೂಪಕ್ ಕುಮಾರ್ ದತ್ತಾ

By News Desk BenkiyabaleUpdated:January 17, 2020 6:28 pm

 ತುಮಕೂರು:

      ಪ್ರತಿಯೊಬ್ಬರೂ ತಮಗೆ ಸಿಗಬೇಕಾಗಿರುವ ಹಕ್ಕು ಬೇರೆಯವರಿಗೂ ಸಿಗಬೇಕು, ನಮಗೆ ಏನು ಆಗಬಾರದೆಂದು ಬಯಸುತ್ತೇವೆಯೋ ಅದು ಬೇರೆಯವರಿಗೂ ಆಗಬಾರದೆಂದು ಅರಿತಾಗ ನಿಜವಾದ ಮಾನವನ ಹಕ್ಕು ಲಭಿಸಿದಂತಾಗುತ್ತದೆ. ಮಾನವ ಜನಿಸಿದಾಗಿನಿಂದಲೆ ಅವನ ಹಕ್ಕು ಆರಂಭವಾಗುತ್ತದೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ರೂಪಕ್ ಕುಮಾರ್ ದತ್ತಾ ಅವರು ತಿಳಿಸಿದರು.

      ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿಶ್ವ ಮಾನವ ಹಕ್ಕುಗಳ ಸೇವಾ ಕೇಂದ್ರ ಹಾಗೂ ಸ್ನಾತಕೋತ್ತರ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಯೋಗದಲ್ಲಿಂದು ತುಮಕೂರು ವಿಶ್ವವಿದ್ಯಾನಿಲಯದ ಡಾ||ಪಿ.ಸದಾನಂದಮಯ್ಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮಾನವ ಹಕ್ಕುಗಳ ಅರಿವು, ರಕ್ಷಣೆ, ನೆರವು ಸಂರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಾನವ ಸಂಸಾರಕ್ಕೆ ಬಂದಾಗಿನಿಂದಲೂ ಮಾನವ ಹಕ್ಕುಗಳು ಬಂದಿವೆ ಎಂದರು.

      ಸಾರ್ವಜನಿಕ ಸೇವೆಯಲ್ಲಿರುವವರು ಜನರ ಹಿತಕ್ಕಾಗಿ ಕೆಲಸ ಮಾಡುವ ಮನೋಭಾವ ರೂಢಿಸಿಕೊಳ್ಳಬೇಕು. ಮಾನವನ ಹಕ್ಕು ಉಲ್ಲಂಘನೆಯಾದ ಪ್ರತಿಯೊಬ್ಬರೂ ತಮ್ಮ ಹಕ್ಕಿಗಾಗಿ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸುವ ಅವಕಾಶವಿದೆ. ದೂರು ಸಲ್ಲಿಸಲು ಯಾವುದೇ ನಮೂನೆಗಳಿರುವುದಿಲ್ಲ. ಆದರೆ ದೂರು ಸಲ್ಲಿಸುವವರ ಸಂಪೂರ್ಣ ವಿಳಾಸ ಇರಬೇಕು. ಪ್ರಕರಣಗಳು ನ್ಯಾಯಾಲದಲ್ಲಿ ಚಾಲ್ತಿಯಲ್ಲಿರಬಾರದು ಎಂದು ಅವರು ತಿಳಿಸಿದರು.

      ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್ ಅವರು ಮಾತನಾಡಿ, ನಾವೆಲ್ಲಾ ಕಾನೂನಿನ ಚೌಕಟ್ಟಿನಡಿಯಲ್ಲಿ ಜೀವನ ಸಾಗಿಸುತ್ತಿದ್ದೇವೆ. ಆದರೆ ನಿಜ ಜೀವನದಲ್ಲಿ ಕಾನೂನು ಮತ್ತು ಸಂವಿಧಾನದ ನಿಯಮ ಪಾಲನೆ ಯಲ್ಲಿ ಹಿಂದುಳಿದಿದ್ದೇವೆ ಎಂದರು.

      ಭಾರತದ ಭವ್ಯ ಪ್ರಜೆಗಳಾಗುವ ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಅಗತ್ಯವಾಗಿದೆ. ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಕಾನೂನಿನ ಅರಿವು ಮೂಡಿಸಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.

      ಮಾನವ ಹಕ್ಕುಗಳ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಿಶ್ವ ಮಾನವ ಹಕ್ಕುಗಳ ಸೇವಾ ಕೇಂದ್ರ ಕಾರ್ಯನಿರ್ವಹಿಸುತ್ತಿವೆ ಎಂದು ಅವರು ನುಡಿದರು.

      ವಿಶ್ವ ಮಾನವ ಹಕ್ಕುಗಳ ಸೇವಾ ಕೇಂದ್ರದ ಸಂಸ್ಥಾಪಕ ಅಧ್ಯಕ್ಷ ಸಿದ್ಧಲಿಂಗೇಗೌಡ ಮಾತನಾಡಿ, ಜಗತ್ತು ಎರಡು ಮಹಾಯುದ್ಧ ಕಂಡಿದೆ. ಈ ಎರಡೂ ಮಹಾಯುದ್ದಗಳೂ ಪ್ರಕೃತಿಯ ಮೇಲೆ ಘೋರ ಪರಿಣಾಮ ಬೀರಿವೆ. ಅದನ್ನು ಮನಗಂಡ ವಿಶ್ವ ಮಾನವ ಹಕ್ಕುಗಳ ಆಯೋಗ ಮಾನವ ಹಕ್ಕುಗಳು ಜೀವಿಸುವ ಪ್ರತಿಯೊಬ್ಬರಿಗೂ ಅನಿವಾರ್ಯತೆ ಎನ್ನುವುದನ್ನು ಎತ್ತಿ ಹಿಡಿದಿದೆ ಎಂದು ಅವರು ತಿಳಿಸಿದರು.

      ದೇಶದಲ್ಲಿರುವ ಅಂಗನವಾಡಿ ಕೇಂದ್ರಗಳ ಸ್ಥಿತಿ ಶೋಚನೀಯವಾಗಿದೆ. ಹಾಗಾಗಿ ಅವುಗಳಿಗೆ ಮೂಲ ಭೂತ ಸೌಕರ್ಯಗಳನ್ನು ಕಲ್ಪಿಸುವ ಸೂಕ್ತ ಕ್ರಮ ಜರುಗಿಸಬೇಕಾಗಿದೆ. ಎಲ್ಲಾ ಮಕ್ಕಳಿಗೂ ಅವರ ಹಕ್ಕು ಸಿಗುವಂತಾಗಬೇಕು. ದೇಶದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಹೆಚ್ಚುತ್ತಿದೆ. ಇದರ ಜೊತೆಗೆ ಸರಿಯಾದ ನ್ಯಾಯ ಸಿಗುವಲ್ಲಿ ವಿಳಂಬವಾಗುತ್ತಿದೆ ಎಂದರು.

      ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ ಮಾತನಾಡಿ, ಹಕ್ಕು ಮತ್ತು ಕರ್ತವ್ಯ ಎರಡೂ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಹಾಗಾಗಿ ನಾವೆಲ್ಲರೂ ಕರ್ತವ್ಯಕ್ಕೆ ಹೆಚ್ಚು ಮನ್ನಣೆ ನೀಡಬೇಕು. ಹಕ್ಕುಗಳನ್ನು ಪಡೆಯುವ ಬಗ್ಗೆನೂ ಜಾಗೃತರಾಗಬೆಕು ಆಗ ಮಾತ್ರ ಉತ್ತಮ ಪ್ರಜಾಪ್ರಭುತ್ವ ಕಟ್ಟಲು ಸಾಧ್ಯ ಎಂದರು.

      ಸಂಮೃದ್ಧಿ ಸಮಾಜ ನಿರ್ಮಾಣ ಯುವ ಜನರ ಕೈಯಲ್ಲಿದೆ. ಯುವಕರು ಈ ನಿಟ್ಟಿನಲ್ಲಿ ಜವಬ್ದಾರಿಯುತ ಜೀವನ ಸಾಗಿಸಲು ಮುಂದಾಗಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

      ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾ  ಪೊಲೀಸ್ ವರಿಷ್ಠಾಧಿಕಾರಿ ಟಿ.ಜಿ.ಉದೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜ್, ವಿಶ್ವವಿದ್ಯಾನಿಲಯದ ಕುಲಸಚಿವ ಕೆ.ಎನ್.ಗಂಗಾನಾಯ್ಕ್ ಸೇರಿದಂತೆ ಅಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

(Visited 15 times, 1 visits today)
Previous Articleಸಿದ್ಧಗಂಗಾ ಶ್ರೀಗಳ ಗದ್ದುಗೆ ದರ್ಶನ ಪಡೆದ ಈಶ್ವರ ಖಂಡ್ರೆ
Next Article ಚಿರತೆ ಹಿಡಿಯಲು ಕಡೆಗೂ ಬೋನು ಇಟ್ಟ ಅರಣ್ಯ ಇಲಾಖೆ
News Desk Benkiyabale

Related Posts

ಅಡಿಕೆ ತೋಟದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಗಿಡಗಳು ನೆಲಸಮ

August 27, 2026 5:55 pm news

ಗ್ರಾಮ ದೇವತೆ ಅಮ್ಮನವರ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

August 27, 2026 5:53 pm news

ಗ್ರಾಮೀಣ ಜನರು ಯೋಜನೆಯ ಸದುಪಯೋಗ ಪಡೆಯುವಂತೆ ಸಿಇಒ ಅಶ್ವಿಜ ಮನವಿ

August 27, 2026 5:52 pm news
ತಾಜಾ ಸುದ್ಧಿಗಳು
news

ಅಡಿಕೆ ತೋಟದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಗಿಡಗಳು ನೆಲಸಮ

August 27, 2026 5:55 pm
news

ಗ್ರಾಮ ದೇವತೆ ಅಮ್ಮನವರ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

August 27, 2026 5:53 pm
news

ಗ್ರಾಮೀಣ ಜನರು ಯೋಜನೆಯ ಸದುಪಯೋಗ ಪಡೆಯುವಂತೆ ಸಿಇಒ ಅಶ್ವಿಜ ಮನವಿ

August 27, 2026 5:52 pm
news

೯ ಕೋಟಿ ಗಣಿ ಹಣ ನೀರಿನಲ್ಲಿ ಹೋಮ

August 27, 2026 5:50 pm
news

ತಾಲೂಕಿನಲ್ಲಿ ಈ ವರ್ಷ ಭೀಕರ ಬರದ ಛಾಯೆ ನಿಶ್ಚಿತ!

August 27, 2026 5:48 pm
news

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

August 26, 2026 4:41 pm
Our Youtube Channel
Our Picks

ಅಡಿಕೆ ತೋಟದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಗಿಡಗಳು ನೆಲಸಮ

August 27, 2026 5:55 pm

ಗ್ರಾಮ ದೇವತೆ ಅಮ್ಮನವರ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

August 27, 2026 5:53 pm

ಗ್ರಾಮೀಣ ಜನರು ಯೋಜನೆಯ ಸದುಪಯೋಗ ಪಡೆಯುವಂತೆ ಸಿಇಒ ಅಶ್ವಿಜ ಮನವಿ

August 27, 2026 5:52 pm

೯ ಕೋಟಿ ಗಣಿ ಹಣ ನೀರಿನಲ್ಲಿ ಹೋಮ

August 27, 2026 5:50 pm

ತಾಲೂಕಿನಲ್ಲಿ ಈ ವರ್ಷ ಭೀಕರ ಬರದ ಛಾಯೆ ನಿಶ್ಚಿತ!

August 27, 2026 5:48 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಅಡಿಕೆ ತೋಟದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಗಿಡಗಳು ನೆಲಸಮ

By News Desk BenkiyabaleAugust 27, 2026 5:55 pm

ಪಾವಗಡ: ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಜೋಡಿ ಹಚ್ಚಮ್ಮನಹಳ್ಳಿ ಸರ್ವೆ ನಂಬರ್ ೮/೧ರ ವ್ಯಾಪ್ತಿಯ ಮೇಗಳಪಾಳ್ಯ ಗ್ರಾಮದ ಸಮೀಪ, ಆಂಜನೇಯ ದೇವಸ್ಥಾನದ…

ಗ್ರಾಮ ದೇವತೆ ಅಮ್ಮನವರ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

August 27, 2026 5:53 pm

ಗ್ರಾಮೀಣ ಜನರು ಯೋಜನೆಯ ಸದುಪಯೋಗ ಪಡೆಯುವಂತೆ ಸಿಇಒ ಅಶ್ವಿಜ ಮನವಿ

August 27, 2026 5:52 pm

೯ ಕೋಟಿ ಗಣಿ ಹಣ ನೀರಿನಲ್ಲಿ ಹೋಮ

August 27, 2026 5:50 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.