BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗ್ರಾಮಾಂತರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ
  • ಭೈರಪ್ಪನವರ ಕೃತಿಗಳು ಜೀವನಾನುಭವ, ತತ್ವಶಾಸ್ತçದ ಮಿಶ್ರಣ: ಡಾ. ಜಿ. ಬಿ. ಹರೀಶ್
  • ಯೋಗ ಮನೋದೈಹಿಕ ಆರೋಗ್ಯ ವೃದ್ಧಿಗೆ ಸಹಕಾರಿ
  • ಶಿಕ್ಷಣದಿಂದ ಸಮಾಜದ ಉನ್ನತ ಹುದ್ದೆ ಅಲಂಕರಿಸಲು ಸಾದ್ಯ
  • ಸಚಿವ ವಿ. ಸೋಮಣ್ಣ ಅವರಿಂದ ಕಿತ್ತೂರು ರಾಣಿ ಚೆನ್ನಮ್ಮನವರ ೨೦೧ನೇ ವಿಜಯೋತ್ಸವಕ್ಕೆ ಚಾಲನೆ
  • ಸಾಮಾಜಕ್ಕೆ ನೀನಾಸಂ ನಿಂದ ಸಂದೇಶ
  • ಕಿತ್ತೂರು ರಾಣಿ ಚೆನ್ನಮ್ಮ ಮಹಿಳಾ ಶೌರ್ಯದ ಸಂಕೇತ: ನಹೀದಾ ಜಮ್ ಜಮ್ ಹೇಳಿಕೆ
  • ವೃದ್ಧಿ ಕಾಮತ್ ರಂಗಪ್ರವೇಶ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ರೈತರಿಂದ ರಾಷ್ಟ್ರಪತಿಗಳಿಗೆ ಮುಷ್ಕರದ ನೋಟೀಸ್!
Trending

ರೈತರಿಂದ ರಾಷ್ಟ್ರಪತಿಗಳಿಗೆ ಮುಷ್ಕರದ ನೋಟೀಸ್!

By News Desk BenkiyabaleUpdated:January 03, 2020 6:40 pm

ತುಮಕೂರು :

     ಸುಮಾರು 200ಕ್ಕೂ ಹೆಚ್ಚಿನ ರೈತ ಸಂಘಟನೆಗಳನ್ನು ಒಳಗೊಂಡ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ (AIKSCC) ನೇತೃತ್ವದಲ್ಲಿ ದೇಶದಾದ್ಯಂತ ಹೋರಾಟ ನಡೆಸಿ ಪಾರ್ಲಿಮೆಂಟ್ ಚಲೋ ನಂತರ ವಿಶೇಷ ಸಂಸತ್ ನಡೆಸಲು ಒತ್ತಾಯಿಸಿ, ಭಾರತೀಯ ರೈತರ ಪ್ರನಾಳಿಕೆಯನ್ನು ಅಂಗೀಕರಿಸಿ ರೈತರ ಋಣಮುಕ್ತ ಮಸೂದೆ-2018 ಮತ್ತು ಕೃಷಿ ಉತ್ಪನ್ನಗಳಿಗೆ ಲಾಭದಾಯಕ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಮಸೂದೆ-2018ನ್ನು ಜಾರಿಗೊಳಿಸಲು ಒತ್ತಾಯಿಸಿ ನಡೆದ ಹೋರಾಟವನ್ನು ಕೇಂದ್ರ ಸರ್ಕಾರ ಪರಿಗಣಿಸದೇ ಇರುವುದನ್ನು ಖಂಡಿಸಿ ಜನವರಿ 3ರಂದು ರಾಷ್ಪ್ರಪತಿಗಳಿಗೆ ಮುಷ್ಕರದ ನೋಟೀಸ್ ನೀಡಿ ಈ ಬೇಡಿಕೆಗಳು ಈಡೇರದಿದ್ದಲ್ಲಿ ಜನವರಿ 8ರಂದು ದೇಶಾದ್ಯಂತ ಗ್ರಾಮೀಣಾ ಭಾರತ್ ಬಂದ್ ನಡೆಸಲಾಗುವುದು ಎಂದು ತೀರ್ಮಾನಿಸಲಾಗಿದೆ.

       ಇಂದು ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ನಡೆದ ಸಭೆಯನ್ನುದ್ದೇಶಿಸಿ ಜಿಲ್ಲಾ ಸಂಚಾಲಕ ಸಿ.ಯತಿರಾಜು ಮಾತನಾಡಿ, ರೈತರ ಆತ್ಮಹತ್ಯೆಗಳು ಕರ್ನಾಟಕದಲ್ಲಿ ಹೆಚ್ಚಾಗಿದ್ದು ರೈತರು ಸಾಲವಸೂಲಿಗೆ ಸಿಲುಕಿದ್ದಾರೆ. ಉತ್ಪಾದನಾ ವೆಚ್ಚ ಸಹ ದುಬಾರಿಯಾಗಿದ್ದು ಕೃಷಿಗೆ ಖರ್ಚು ಮಾಡಿದ ಹಣಕ್ಕೆ ಒಂದೂವರೆ ಪಟ್ಟು ಲಾಭ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರೂ ಸಹ ಜಾರಿಗೆ ತರದೆ ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದರು.

      ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜ್ ಮಾತನಾಡಿ, ರೈತರ ಸಮಸ್ಯೆಗಳನ್ನು ಪರಿಹರಿಸುವ ಬದಲು 6 ರೂಪಾಯಿ ಭಿಕ್ಷೆ ನೀಡಿ ಎಲ್ಲಾ ಸಮಸ್ಯೆಗಳು ಪರಿಹಾರವಾಗುತ್ತವೆ ಎಂಬ ಭ್ರಮೆಯನ್ನು ಸೃಷ್ಟಿಸಲಾಗುತ್ತಿದೆ.

      ಜಿಲ್ಲೆಗೆ ಭೇಟಿ ನೀಡಿದ ಪ್ರಧಾನಿ ರೈತರ ಸ್ಥಳೀಯ ಸಮಸ್ಯೆಗಳಿಗಾಗಲಿ, ನೆರೆ-ಬರದಿಂದ ತತ್ತರಿಸಿರುವ ಜನರ ಬದುಕನ್ನು ಉಳಿಸುವ ಮಾರ್ಗವನ್ನು ಘೋಷಿಸದೆ ಕೇವಲ ಅಂಕಿಅಂಶಗಳನ್ನಷ್ಟೇ ನೀಡಿ ತಮ್ಮ ಕರ್ತವ್ಯದಿಂದ ರೈತರನ್ನು ವಂಚಿಸಿದ್ದಾರೆ ಎಂದು ಕಿಡಿಕಾರಿದರು.

      ಕರ್ನಾಟಕ ಪ್ರಾಂತ ರೈತ ಸಂಘದ ಸಂಚಾಲಕ ಬಿ.ಉಮೇಶ್ ಮಾತನಾಡಿ, ಕೃಷಿಯ ಮೂಲ ಸಮಸ್ಯೆಗಳನ್ನು ಪರಿಹರಿಸದೆ ವೃದ್ಧಾಶ್ರಮಗಳಾಗುತ್ತಿರುವ ಗ್ರಾಮಗ¼ನ್ನು ಅಭಿವೃದ್ಧಿಪಡಿಸಲು ಸಾಧ್ಯವಿಲ್ಲ. ಡಾ.ಸ್ವಾಮಿನಾಥನ್ ಆಯೋಗದ ವರದಿಯಂತೆ ಕೃಷಿ ಸಂಬಂಧಿತ ಪರಿಹಾರಗಳನ್ನು ಪ್ರಧಾನಿ ಮೋದಿ ಮೊದಲು ಕೈಗೆತ್ತಿಕೊಳ್ಳಬೇಕು. ಕೃಷಿಯನ್ನು ಕಾರ್ಪೋರೇಟ್ ಮತ್ತು ರಿಯಲ್ ಎಸ್ಟೇಟ್ ದಂಧೆಯಿಂದ ರಕ್ಷಿಸಬೇಕು ಎಂದರು.

       ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಸಿ. ಅಜ್ಜಪ್ಪ ಮಾತನಾಡಿ ಬಗರ್ ಹುಕುಂ ಸಾಗುವಳಿದಾರರ ಭೂಮಿ ಪ್ರಶ್ನೆ, ಜಿಲ್ಲೆಯ ಸಮಗ್ರ ನೀರಾವರಿ, ಕೃಷಿ ಸಂಬಂಧಿತ ಕೈಗಾರಿಕೆಗಳ ಸ್ಥಾಪನೆಯು ಅತ್ಯಂತ ಜರೂರಾಗಿದೆ. ಹೆಚ್ಚು ಜನರಿಗೆ ಉದ್ಯೋಗ ಕೊಡುವ ಕೃಷಿಯನ್ನು ಕಡೆಗಣಿಸಿರುವುದು ಕೇಂದ್ರ-ರಾಜ್ಯ ಸರ್ಕಾರಗಳ ನೀತಿಗಳನ್ನು ಹಿಮ್ಮೆಟ್ಟಿಸಲು ಇಂದು ಮುಷ್ಕರದ ನೋಟೀಸನ್ನು ರಾಷ್ಟ್ರಪತ್ರಿಯವರಿಗೆ ಸಲ್ಲಿಸಿ ಸಮಸ್ಯೆಗಳ ಇತ್ಯರ್ಥಕ್ಕೆ ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಿದರು. ನಂತರ ಸಮಸ್ಯೆಗಳು ಇತ್ಯರ್ಥವಾಗದಿದ್ದರೆ ಜನವರಿ 8ರಂದು ಗ್ರಾಮೀಣ ಕರ್ನಾಟಕ ಬಂದ್ ಮಾಡುವ ಮೂಲಕ ಹಾಲು ಮತ್ತು ತರಕಾರಿ ಇತ್ಯಾದಿ ವಸ್ತುಗಳನ್ನು ಪಟ್ಟಣಕ್ಕೆ ಮಾರಾಟ ಮಾಡದೆ ಸಾಂಕೇತಿಕವಾಗಿ ಗ್ರಾಹಕರಿಗೆ ವಿತರಿಸುವ ಮೂಲಕ ಗ್ರಾಹಕರು ರೈತಕಾರ್ಮಿಕರು ಸೇರಿದಂತೆ ಎಲ್ಲರೂ ಜನವರಿ 8ರ ಮುಷ್ಕರವನ್ನು ಯಶಸ್ವಿಗೊಳಿಸಬೇಕೆಂದು ಕರೆ ನೀಡಲಾಯಿತು.ಪ್ರತಿಭಟನೆಯಲ್ಲಿ ಎಐಕೆಎಸ್‍ನ ಗಿರೀಶ್, ರಾಜ್ಯ ರೈತ ಸಂಘದ ರವೀಶ್, ಚಿಕ್ಕಬೈರೇಗೌಡ, ಮೂಡ್ಲಗಿರಿಯಪ್ಪ, ಬೋರೇಗೌಡ, ಉಮೇಶ್, ಪ್ರಾಂತ ರೈತ ಸಂಘದ ಲೋಕೇಶ್, ನರೇಂದ್ರ, ಲಕ್ಷ್ಮಣ್‍ಗೌಡ, ಶಂಕರಪ್ಪ ಸೇರಿದಂತೆ ತಾಲೂಕು ಮುಖಂಡರು ಉಪಸ್ಥಿತರಿದ್ದರು. ನೋಟೀಸನ್ನು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಕಳಿಸಿಕೊಡಲಾಯಿತು. 

(Visited 15 times, 1 visits today)
Previous Articleಸಿರಾಗೆ ಹೇಮಾವತಿ ನೀರು ಹರಿಸಲು ಒತ್ತಾಯ!
Next Article ತುಮಕೂರು : ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆ ಘೋಷಣೆ
News Desk Benkiyabale

Related Posts

ಹುಳಿಯಾರು ಬಂದ್‌ಗೆ ಕರೆ ಕೊಡಲು ನಿರ್ಧಾರ

October 18, 2025 1:53 pm ತುಮಕೂರು

ಜಿಲ್ಲೆಯಲ್ಲಿ ನೀರಿನ ಜೈವಿಕ ಪರೀಕ್ಷೆ

October 17, 2025 12:04 pm ತುಮಕೂರು

ತಿಪಟೂರಿಗೆ ಮುಂಜಾನೆ ಬಸ್ ಇಲ್ಲದೆ ಪರದಾಟ

October 16, 2025 1:03 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಗ್ರಾಮಾಂತರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

October 24, 2025 1:30 pm
ಇತರೆ ಸುದ್ಧಿಗಳು

ಭೈರಪ್ಪನವರ ಕೃತಿಗಳು ಜೀವನಾನುಭವ, ತತ್ವಶಾಸ್ತçದ ಮಿಶ್ರಣ: ಡಾ. ಜಿ. ಬಿ. ಹರೀಶ್

October 24, 2025 1:29 pm
ಇತರೆ ಸುದ್ಧಿಗಳು

ಯೋಗ ಮನೋದೈಹಿಕ ಆರೋಗ್ಯ ವೃದ್ಧಿಗೆ ಸಹಕಾರಿ

October 24, 2025 1:28 pm
ಇತರೆ ಸುದ್ಧಿಗಳು

ಶಿಕ್ಷಣದಿಂದ ಸಮಾಜದ ಉನ್ನತ ಹುದ್ದೆ ಅಲಂಕರಿಸಲು ಸಾದ್ಯ

October 23, 2025 4:43 pm
ಇತರೆ ಸುದ್ಧಿಗಳು

ಸಚಿವ ವಿ. ಸೋಮಣ್ಣ ಅವರಿಂದ ಕಿತ್ತೂರು ರಾಣಿ ಚೆನ್ನಮ್ಮನವರ ೨೦೧ನೇ ವಿಜಯೋತ್ಸವಕ್ಕೆ ಚಾಲನೆ

October 23, 2025 4:42 pm
ಇತರೆ ಸುದ್ಧಿಗಳು

ಸಾಮಾಜಕ್ಕೆ ನೀನಾಸಂ ನಿಂದ ಸಂದೇಶ

October 23, 2025 4:41 pm
Our Youtube Channel
Our Picks

ಗ್ರಾಮಾಂತರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

October 24, 2025 1:30 pm

ಭೈರಪ್ಪನವರ ಕೃತಿಗಳು ಜೀವನಾನುಭವ, ತತ್ವಶಾಸ್ತçದ ಮಿಶ್ರಣ: ಡಾ. ಜಿ. ಬಿ. ಹರೀಶ್

October 24, 2025 1:29 pm

ಯೋಗ ಮನೋದೈಹಿಕ ಆರೋಗ್ಯ ವೃದ್ಧಿಗೆ ಸಹಕಾರಿ

October 24, 2025 1:28 pm

ಶಿಕ್ಷಣದಿಂದ ಸಮಾಜದ ಉನ್ನತ ಹುದ್ದೆ ಅಲಂಕರಿಸಲು ಸಾದ್ಯ

October 23, 2025 4:43 pm

ಸಚಿವ ವಿ. ಸೋಮಣ್ಣ ಅವರಿಂದ ಕಿತ್ತೂರು ರಾಣಿ ಚೆನ್ನಮ್ಮನವರ ೨೦೧ನೇ ವಿಜಯೋತ್ಸವಕ್ಕೆ ಚಾಲನೆ

October 23, 2025 4:42 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಗ್ರಾಮಾಂತರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

By News Desk BenkiyabaleOctober 24, 2025 1:30 pm

ತುಮಕೂರು: ತುಮಕೂರು ಗ್ರಾಮಾಂತರ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಶಾಸಕ ಬಿ.ಸುರೇಶ್‌ಗೌಡರು ಕೋಟ್ಯಾಂತರ ರೂ.ಗಳ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ…

ಭೈರಪ್ಪನವರ ಕೃತಿಗಳು ಜೀವನಾನುಭವ, ತತ್ವಶಾಸ್ತçದ ಮಿಶ್ರಣ: ಡಾ. ಜಿ. ಬಿ. ಹರೀಶ್

October 24, 2025 1:29 pm

ಯೋಗ ಮನೋದೈಹಿಕ ಆರೋಗ್ಯ ವೃದ್ಧಿಗೆ ಸಹಕಾರಿ

October 24, 2025 1:28 pm

ಶಿಕ್ಷಣದಿಂದ ಸಮಾಜದ ಉನ್ನತ ಹುದ್ದೆ ಅಲಂಕರಿಸಲು ಸಾದ್ಯ

October 23, 2025 4:43 pm
News by Date
October 2025
M T W T F S S
 12345
6789101112
13141516171819
20212223242526
2728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.