BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕನಕದ ದಾಸರಾಗುವುದು ಬೇಡ, ಕನಕದಾಸರಾಗೋಣ
  • ಕೊರಟಗೆರೆ ಪಪಂಅನ್ನ ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಿದ ಸಚಿವರು
  • ಪ.ಪಂ. ಸದಸ್ಯರಿಂದ ಲೋಕಾಯುಕ್ತ ತನಿಖೆಗೆ ಆಗ್ರಹ
  • ನಗರದಲ್ಲಿ ಕ್ಯಾನ್ಸರ್ ಜಾಗೃತಿ ಜಾಥಾ
  • ೬೪೫ ಕೋಟಿ ರೂ. ವೆಚ್ಚದ ಕಾಮಗಾರಿಗಳ ಉದ್ಘಾಟನೆ, ಅಡಿಗಲ್ಲು
  • ‘ಜ್ಞಾನಸಿರಿ’ ಜ್ಞಾನ ಪ್ರವಾಹದ ಸಂಕೇತ: ಥಾವರ್‌ಚಂದ್ ಗೆಹ್ಲೋಟ್
  • ಅಧಿಕಾರದಿಂದ ವರ್ಗಾವಣೆ ಬಳಿಕವೂ ಚೆಕ್ ಡ್ರಾ
  • ವಿದ್ಯಾರ್ಥಿ, ಶಿಕ್ಷಕರ ನಡುವೆ ಪರಸ್ಪರ ನಂಬಿಕೆ-ವಿಶ್ವಾಸ ಮುಖ್ಯ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ರೈತರ ಆಕ್ರೋಶಕ್ಕೆ ನಡುಗಿತು ರಾಜಧಾನಿ : ಬೇಡಿಕೆ ಈಡೇರಿಕೆಗೆ 15 ದಿನ ಗಡುವು
ಕರ್ನಾಟಕ ಸುದ್ಧಿಗಳು

ರೈತರ ಆಕ್ರೋಶಕ್ಕೆ ನಡುಗಿತು ರಾಜಧಾನಿ : ಬೇಡಿಕೆ ಈಡೇರಿಕೆಗೆ 15 ದಿನ ಗಡುವು

By News Desk BenkiyabaleUpdated:November 19, 2018 6:30 pm

ಬೆಂಗಳೂರು:

      ಕಬ್ಬಿನ ಬಾಕಿ ಬಿಡುಗಡೆ ಹಾಗೂ ಬೆಂಬಲ ಬೆಲೆ ನಿಗದಿ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕಬ್ಬು ಬೆಳೆಗಾರರು ಸೋಮವಾರ ವಿಧಾನಸೌಧ ಮುತ್ತಿಗೆ ಹಾಕುವ ಮೂಲಕ ಸರಕಾರಕ್ಕೆ ಬಿಸಿ ಮುಟ್ಟಿಸಿದರು.

      ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಬಿಜಾಪುರ, ಬಾಗಲಕೋಟೆ, ಹಾಸನ, ಮಂಡ್ಯ, ಮೈಸೂರು, ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸಿ, ನಗರದ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಬೃಹತ್ ಮೆರವಣಿಗೆ ನಡೆಸಿದ ನೂರಾರು ರೈತರು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದ ಸ್ವಾತಂತ್ರ ಉದ್ಯಾನವದವರೆಗೂ ಮೆರವಣಿಗೆ ಸಾಗಿ ವಿಧಾನಸೌಧದತ್ತ ತೆರಳಲು ಪ್ರಯತ್ನಿಸಿದರೂ, ಪೊಲೀಸರ ಮಧ್ಯಪ್ರವೇಶದಿಂದಾಗಿ ಅಲ್ಲಿಯೇ ಧರಣಿ ನಡೆಸಿದರು.

      ರೈತರು ಬೆಳೆದ ಕಬ್ಬು ಸೇರಿದಂತೆ ಎಲ್ಲ ಬೆಳೆಗಳಿಗೆ ಬೆಂಬಲ ಬೆಲೆ ನೀಡದೇ ರೈತರನ್ನು ವಂಚಿಸಲಾಗುತ್ತಿದೆ. ಈ ಮೂಲಕ ರೈತರ ಬದುಕಿನ ಜತೆ ಚೆಲ್ಲಾಟ ಆಡಲಾಗುತ್ತಿದೆ ಎಂದು ಸರಕಾರ ವಿರುದ್ಧ ಕಿಡಿಕಾರಿದರು.

ಸಿಎಂ ವಿರುದ್ಧ ಕಿಡಿ:

       ರವಿವಾರ ನಗರದ ಜಿಕೆವಿಕೆಯಲ್ಲಿ ನಡೆದ ಕೃಷಿಮೇಳದ ಸಮಾರೋಪದ ಭಾಷಣದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ರೈತ ಮಹಿಳೆಯ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಾರೆ. ಮಣ್ಣಿನ ಮಗ ಎನ್ನುವ ಕುಮಾರಸ್ವಾಮಿ ಈ ರೀತಿಯಾಗಿ ಮಾತನಾಡಿರುವುದು ಎಷ್ಟು ಸರಿ. ರೈತರನ್ನು ಪಕ್ಷಾತೀತವಾಗಿ ಕಾಣಬೇಕಿದೆ. ಆದರೆ, ಜೆಡಿಎಸ್‌ಗೆ ಮತ ಹಾಕಿಲ್ಲ ಎಂಬ ಕಾರಣಕ್ಕೆ ಮುಖ್ಯಮಂತ್ರಿ ಹೀಗೆ ಮಾತನಾಡಿರುವುದು ಸರಿಯೇ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದ್ದಾರೆ.

      ಕ್ಷಮೆ ಯಾಚಿಸಬೇಕು: ಮುಖ್ಯಮಂತ್ರಿ ಕುಮಾರಸ್ವಾಮಿ ಮಹಿಳೆಯ ಬಗ್ಗೆ ಅವಮಾನಕರವಾಗಿ ಮಾತನಾಡಿರುವುದಕ್ಕೆ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ನಾವು ಯಾರು ಸಭೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

      ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ ನಾನು ಯಾರಿಗೂ ಅಗೌರವ ತೋರುವ ರೀತಿಯಲ್ಲಿ ಮಾತನಾಡುವುದಿಲ್ಲ, ಎಚ್ಚರಿಕೆಯಿಂದ ಮಾತನಾಡುತ್ತೇನೆ. ನನ್ನ ಹೇಳಿಕೆಯಲ್ಲಿ ಯಾವುದೇ ಅವಮಾನಕರವಾದ ಪದ ಬಳಕೆ ಮಾಡಿಲ್ಲ. ‘ತಾಯಿ’ ಎಂಬ ಪದ ಬಳಕೆ ಮಾಡಿದ್ದೇನೆ. ಗ್ರಾಮೀಣ ಭಾಷೆಯಲ್ಲಿ ನಾನು ಮಾತನಾಡಿದ್ದೇನೆ ಎಂದು ಹೇಳಿದ್ದಾರೆ.

      ರೈತ ಮುಖಂಡ ಕೆ.ಪಿ.ಗಂಗಾದರ್ ಮಾತನಾಡಿ, ಪ್ರತಿಭಟನೆ ನಡೆಸುವವರು ಗೂಂಡಾಗಳು ಎನ್ನುವ ಸಿಎಂ ಹೇಳಿಕೆ ಅನ್ನದಾತರಿಗೆ ಮಾಡಿದ ಅವಮಾನವಾಗಿದೆ. ರೈತರ ವಿಚಾರದಲ್ಲಿ ರಾಜಕೀಯ ನಡೆಸಿರುವುದು ಸರಿಯಲ್ಲ. ಅದರಲ್ಲಿಯೂ ಪ್ರತಿಭಟನೆ ನಡೆಸುತ್ತಿದ್ದ ರೈತ ಮಹಿಳೆ ಕುರಿತು ಹಗುರವಾಗಿ ಮಾತನಾಡಿರುವುದು ಘೋರ ಅಪರಾಧ ಎಂದರು.

      ರೈತರು ಮುಂದಿಟ್ಟಿರುವ ಬೇಡಿಕೆಗಳನ್ನು ಈಡೇರಿಸಲು ಅಸಾಧ್ಯವೇನಿಲ್ಲ. ಮುಖ್ಯಮಂತ್ರಿಗೆ ಇಚ್ಛಾಶಕ್ತಿಯಿದ್ದರೆ ಒಂದು ದಿನದಲ್ಲಿ ನಮ್ಮ ಬೇಡಿಕೆಗಳನ್ನು ಈಡೇರಿಸಬಹುದು. ಅದರ ಬದಲಿಗೆ ಪ್ರತಿಭಟನೆ ಮಾಡುವವರನ್ನು ಯಾವ ಪಕ್ಷದವರು ಎಂದು ಹೇಳಿಕೆ ನೀಡುವುದು ಸರಿಯಲ್ಲ ಎಂದು ಅವರು ಕಿಡಿಕಾರಿದರು.

ಸಂಚಾರ ಅಸ್ತವ್ಯಸ್ಥ: 

      ಸಿಟಿ ರೈಲು ನಿಲ್ದಾಣದಿಂದ ರೈತರು ಬೃಹತ್ ಮೆರವಣಿಗೆ ನಡೆಸಿ ಸ್ವಾತಂತ್ರ ಉದ್ಯಾನವನದ ರಸ್ತೆಯಲ್ಲಿಯೇ ಧರಣಿ ನಡೆಸಿದ್ದರಿಂದ ವಿವಿಧ ಭಾಗಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿ, ಸಾರ್ವಜನಿಕರು ಪ್ರಯಾಣಿಸಲು ಪರದಾಡುವಂತಾಯಿತು.

      ಮೈಸೂರು ಬ್ಯಾಂಕ್ ವೃತ್ತದಿಂದ ಮೆಜೆಸ್ಟಿಕ್, ಮೆಜೆಸ್ಟಿಕ್‌ನಿಂದ ಯಲಹಂಕ, ಕೋರಮಂಗಲ, ರಾಜಾಜಿನಗರ, ಮಲ್ಲೇಶ್ವರಂ ಸೇರಿದಂತೆ ವಿವಿಧ ರಸ್ತೆಗಳಲ್ಲಿ ಸಂಚಾರ ದಟ್ಟಣೆಯಿಂದ ಕೂಡಿತ್ತು. ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ ಮಾರ್ಗಗಳನ್ನು ಬದಲಾವಣೆ ಮಾಡಿದ್ದರಿಂದ ಪ್ರಯಾಣಿಕರಿಗೆ ತೀವ್ರ ತೊಂದರೆಯುಂಟಾಗಿತ್ತು. ರಸ್ತೆಯಲ್ಲಿಯೇ ಧರಣಿ ನಡೆಸಿದ್ದರಿಂದ ನಗರದಿಂದ ಹೊರಗೆ ಹೋಗುವ ಬಿಎಂಟಿಸಿ, ಕೆಎಸ್ಸಾರ್ಟಿಸಿ ಬಸ್‌ಗಳು, ಖಾಸಗಿ ವಾಹನಗಳು, ಆಟೋಗಳು, ಸರಕು ಸಾಗಾಣಿಕೆ ವಾಹನಗಳು ಗಂಟೆಗಟ್ಟಲೇ ಸಾಲುಗಳಲ್ಲಿ ನಿಲ್ಲುವಂತಾಗಿತ್ತು.

15 ದಿನಗಳ ಗಡುವು

      ಕಬ್ಬಿನ ಬಾಕಿ ಬಿಡುಗಡೆ, ಎಲ್ಲ ಬೆಳೆಗಳಿಗೆ ಬೆಂಬಲ ಬೆಲೆ ನಿಗದಿ, ಶೀಘ್ರ ಸಾಲ ಮನ್ನಾ ಸೇರಿದಂತೆ ಮತ್ತಿತರೆ ಬೇಡಿಕೆಗಳನ್ನು ಮುಂದಿನ 15 ದಿನಗಳೊಳಗೆ ಈಡೇರಿಸಬೇಕು. ಇಲ್ಲದಿದ್ದರೆ, ವಿಧಾನಸೌಧದ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಸರಕಾರಕ್ಕೆ ಎಚ್ಚರಿಕೆ ನೀಡಿ ಪ್ರತಿಭಟನಾ ಧರಣಿಯನ್ನು ವಾಪಸ್ ಪಡೆದರು.

ಬಿಗಿ ಭದ್ರತೆ

      ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ವಿವಿಧ ಕಡೆಗಳಿಂದ ನೂರಾರು ಸಂಖ್ಯೆಯಲ್ಲಿ ರೈತರು ಬೆಂಗಳೂರಿಗೆ ಆಗಮಿಸಿದ್ದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಭದ್ರತೆಯನ್ನು ಕಲ್ಪಿಸಲಾಗಿತ್ತು. ಡಿಸಿಪಿಗಳಾದ ಅನುಚೇತ್ ಹಾಗೂ ಚೇತನ್ ಸಿಂಗ್ ರಾಥೋಡ್ ನೇತೃತ್ವದಲ್ಲಿ ಸ್ವಾತಂತ್ರ ಉದ್ಯಾನವನ, ಮೆಜೆಸ್ಟಿಕ್, ಕೆ.ಆರ್.ವೃತ್ತ, ವಿಧಾನಸೌಧ, ರಾಜಭವನ ಸುತ್ತಮುತ್ತಲೂ ಭಾರಿ ಭದ್ರತೆ ಏರ್ಪಡಿಸಿದ್ದರು. ಸ್ವಾತಂತ್ರ ಉದ್ಯಾನವನದಲ್ಲಿ ಒಂದು ಸಾವಿರ ಪೊಲೀಸ್ ಸಿಬ್ಬಂದಿ, ಕೆಎಸ್‌ಆರ್‌ಪಿ ಕ್ಷಿಪ್ರ ಕಾರ್ಯಾಚರಣೆ ಪಡೆ, ಎರಡು ವಾಟರ್ ಜೆಟ್, ಅಶ್ರುವಾಯು ವಾಹನ, ಅಗ್ನಿಶಾಮಕ ಪಡೆ ಸೇರಿದಂತೆ ವಿವಿಧ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು.

(Visited 33 times, 1 visits today)
Previous Articleಕನಕ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ತೀರ್ಮಾನ
Next Article ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ..? : ಸಿಎಂ ಸ್ಪಷ್ಟನೆ ..!
News Desk Benkiyabale

Related Posts

ನಕಲಿ ದಾಖಲೆಗಳನ್ನು ಸೃಷ್ಟಿಸುವವರ ವಿರುದ್ಧ ಕಾನೂನು ಕ್ರಮ

July 03, 2025 2:30 pm ಕರ್ನಾಟಕ ಸುದ್ಧಿಗಳು

ಕೃಷ್ಣಾ ತಳವಾರ ಪಿಎಚ್.ಡಿ ಪದವಿ

March 07, 2025 6:38 pm ಕರ್ನಾಟಕ ಸುದ್ಧಿಗಳು

ಕೊರಟಗೆರೆ ತಾಲ್ಲೂಕಿನಲ್ಲಿ ನೂತನವಾಗಿ ರಾಗಿ ಖರೀದಿ ಕೇಂದ್ರ

March 07, 2025 6:36 pm ಕರ್ನಾಟಕ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಕನಕದ ದಾಸರಾಗುವುದು ಬೇಡ, ಕನಕದಾಸರಾಗೋಣ

November 08, 2025 4:12 pm
ಇತರೆ ಸುದ್ಧಿಗಳು

ಕೊರಟಗೆರೆ ಪಪಂಅನ್ನ ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಿದ ಸಚಿವರು

November 08, 2025 3:09 pm
ಇತರೆ ಸುದ್ಧಿಗಳು

ಪ.ಪಂ. ಸದಸ್ಯರಿಂದ ಲೋಕಾಯುಕ್ತ ತನಿಖೆಗೆ ಆಗ್ರಹ

November 08, 2025 2:46 pm
ಇತರೆ ಸುದ್ಧಿಗಳು

ನಗರದಲ್ಲಿ ಕ್ಯಾನ್ಸರ್ ಜಾಗೃತಿ ಜಾಥಾ

November 08, 2025 2:34 pm
ಇತರೆ ಸುದ್ಧಿಗಳು

೬೪೫ ಕೋಟಿ ರೂ. ವೆಚ್ಚದ ಕಾಮಗಾರಿಗಳ ಉದ್ಘಾಟನೆ, ಅಡಿಗಲ್ಲು

November 08, 2025 2:33 pm
ಇತರೆ ಸುದ್ಧಿಗಳು

‘ಜ್ಞಾನಸಿರಿ’ ಜ್ಞಾನ ಪ್ರವಾಹದ ಸಂಕೇತ: ಥಾವರ್‌ಚಂದ್ ಗೆಹ್ಲೋಟ್

November 07, 2025 4:52 pm
Our Youtube Channel
Our Picks

ಕನಕದ ದಾಸರಾಗುವುದು ಬೇಡ, ಕನಕದಾಸರಾಗೋಣ

November 08, 2025 4:12 pm

ಕೊರಟಗೆರೆ ಪಪಂಅನ್ನ ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಿದ ಸಚಿವರು

November 08, 2025 3:09 pm

ಪ.ಪಂ. ಸದಸ್ಯರಿಂದ ಲೋಕಾಯುಕ್ತ ತನಿಖೆಗೆ ಆಗ್ರಹ

November 08, 2025 2:46 pm

ನಗರದಲ್ಲಿ ಕ್ಯಾನ್ಸರ್ ಜಾಗೃತಿ ಜಾಥಾ

November 08, 2025 2:34 pm

೬೪೫ ಕೋಟಿ ರೂ. ವೆಚ್ಚದ ಕಾಮಗಾರಿಗಳ ಉದ್ಘಾಟನೆ, ಅಡಿಗಲ್ಲು

November 08, 2025 2:33 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಕನಕದ ದಾಸರಾಗುವುದು ಬೇಡ, ಕನಕದಾಸರಾಗೋಣ

By News Desk BenkiyabaleNovember 08, 2025 4:12 pm

ತುಮಕೂರು: ಹಣ,ಅಂತಸ್ತಿನ ಬೆನ್ನಟ್ಟಿರುವ ನಾವು ಮೌಲ್ಯಾಧಾರಿತ ಜೀವನವನ್ನು ಮರೆತಿದ್ದೇವೆ, ಕನಕದ ದಾಸರಾಗುವ ಬದಲು ಕನಕದಾಸರಾಗೋಣ ಎಂದು ತುಮಕೂರು ವಿಶ್ವವಿದ್ಯಾನಿಲಯದ ವಿಜ್ಞಾನ…

ಕೊರಟಗೆರೆ ಪಪಂಅನ್ನ ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಿದ ಸಚಿವರು

November 08, 2025 3:09 pm

ಪ.ಪಂ. ಸದಸ್ಯರಿಂದ ಲೋಕಾಯುಕ್ತ ತನಿಖೆಗೆ ಆಗ್ರಹ

November 08, 2025 2:46 pm

ನಗರದಲ್ಲಿ ಕ್ಯಾನ್ಸರ್ ಜಾಗೃತಿ ಜಾಥಾ

November 08, 2025 2:34 pm
News by Date
November 2025
M T W T F S S
 12
3456789
10111213141516
17181920212223
24252627282930
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.