BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕೊರಟಗೆರೆ ಪಪಂಅನ್ನ ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಿದ ಸಚಿವರು
  • ಪ.ಪಂ. ಸದಸ್ಯರಿಂದ ಲೋಕಾಯುಕ್ತ ತನಿಖೆಗೆ ಆಗ್ರಹ
  • ನಗರದಲ್ಲಿ ಕ್ಯಾನ್ಸರ್ ಜಾಗೃತಿ ಜಾಥಾ
  • ೬೪೫ ಕೋಟಿ ರೂ. ವೆಚ್ಚದ ಕಾಮಗಾರಿಗಳ ಉದ್ಘಾಟನೆ, ಅಡಿಗಲ್ಲು
  • ‘ಜ್ಞಾನಸಿರಿ’ ಜ್ಞಾನ ಪ್ರವಾಹದ ಸಂಕೇತ: ಥಾವರ್‌ಚಂದ್ ಗೆಹ್ಲೋಟ್
  • ಅಧಿಕಾರದಿಂದ ವರ್ಗಾವಣೆ ಬಳಿಕವೂ ಚೆಕ್ ಡ್ರಾ
  • ವಿದ್ಯಾರ್ಥಿ, ಶಿಕ್ಷಕರ ನಡುವೆ ಪರಸ್ಪರ ನಂಬಿಕೆ-ವಿಶ್ವಾಸ ಮುಖ್ಯ
  • ಜಿಲ್ಲಾ ಆಸ್ಪತ್ರೆಯಾಗುತ್ತಿದೆ ಖಾಸಗೀಕರಣ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಶ್ರೀಗಳ ಸ್ಮರಣಾರ್ಥ ಸರ್ಕಾರಿ ಕಾರ್ಯಕ್ರಮ ರೂಪಿಸಲು ಆಯವ್ಯಯದಲ್ಲಿ ಮಂಡನೆ
Trending

ಶ್ರೀಗಳ ಸ್ಮರಣಾರ್ಥ ಸರ್ಕಾರಿ ಕಾರ್ಯಕ್ರಮ ರೂಪಿಸಲು ಆಯವ್ಯಯದಲ್ಲಿ ಮಂಡನೆ

By News Desk BenkiyabaleUpdated:January 25, 2019 4:33 pm

 ತುಮಕೂರು:

      ಲಿಂಗೈಕ್ಯ ಸಿದ್ದಗಂಗಾ ಶ್ರೀಗಳ ಸ್ಮರಣಾರ್ಥ ಸರ್ಕಾರದ ವತಿಯಿಂದ ಕಾರ್ಯಕ್ರಮವೊಂದನ್ನು ರೂಪಿಸಲು ಬರುವ ಆಯವ್ಯಯದಲ್ಲಿ ಮಂಡಿಸುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಈಗಾಗಲೇ ಚರ್ಚಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ತಿಳಿಸಿದರು.

      ಮಠಕ್ಕೆ ಶುಕ್ರವಾರ ಭೇಟಿ ನೀಡಿ ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಲಿಂಗೈಕ್ಯ ಪರಮ ಪೂಜ್ಯ ಡಾ: ಶ್ರೀ ಶಿವಕುಮಾರ ಸ್ವಾಮೀಜಿಯವರ ಅವರ ನೆನಪು ಉಳಿಯುವಂತಹ ಸರ್ಕಾರದಿಂದ ಯಾವುದಾದರೊಂದು ಕಾರ್ಯಕ್ರಮದ ಬಗ್ಗೆ ಘೋಷಣೆ ಮಾಡಲು ಬರುವ ಆಯವ್ಯಯದಲ್ಲಿ ಮಂಡಿಸಬೇಕೆಂದು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದೇನೆ ಎಂದು ಹೇಳಿದರು.Displaying DSC_9958.JPG

      ಶ್ರೀಗಳು ಲಿಂಗೈಕ್ಯರಾಗಿ ಇಂದಿಗೆ 5 ದಿನಗಳು ಕಳೆದಿದ್ದು, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆ ಮಾಡಿರುವ ಶ್ರೀಗಳಂತಹ ಪುಣ್ಯ ಪುರುಷರು ಮತ್ತೊಮ್ಮೆ ಸಾರ್ವಜನಿಕ ಬದುಕಿನಲ್ಲಿ ಹುಟ್ಟಿ ಬರಲು ಸಾಧ್ಯವಿಲ್ಲ. ಅವರ ಕಾಲಘಟ್ಟದಲ್ಲಿ ಬದುಕಿದ್ದೆವು ಎನ್ನುವುದು ನಮ್ಮೆಲ್ಲರ ಭಾಗ್ಯ. ಜನಸಮುದಾಯಕ್ಕಾಗಿ ಅವರು ಮಾಡಿರುವ ಕಲ್ಯಾಣ ಕಾರ್ಯಕ್ರಮಗಳು ನಾವೆಂದೂ ಮರೆಯುವಂತಿಲ್ಲ. ಲಕ್ಷಾಂತರ ಕುಟುಂಬಗಳ ಮನೆಯನ್ನು ಬೆಳಗಿದ ಜ್ಯೋತಿಯಾಗಿದ್ದ ಶ್ರೀಗಳು ಭೌತಿಕವಾಗಿ ನಮ್ಮೊಡನೆ ಇರದಿದ್ದರೂ ಅವರ ಸೇವಾ ಕಾರ್ಯಗಳು ಸದಾ ನಮ್ಮ ನೆನಪಿನಲ್ಲಿರುತ್ತದೆ ಎಂದರು.

      ಅವರ ಅಂತಿಮ ದರ್ಶನಕ್ಕೆ ಲಕ್ಷಾಂತರ ಭಕ್ತಾದಿಗಳು ಆಗಮಿಸಿದ್ದರೂ ಯಾವುದೇ ತೊಂದರೆಯಿಲ್ಲದೆ ಕಾರ್ಯಗಳು ಸುಸೂತ್ರವಾಗಿ ಜರುಗಿವೆ. ದರ್ಶನಕ್ಕೆ ಬರಲು ಸಾಧ್ಯವಾಗದ ಭಕ್ತಾದಿಗಳು ಮಾಧ್ಯಮಗಳ ಮೂಲಕ ಶ್ರೀಗಳ ಅಂತ್ಯಕ್ರಿಯೆಯನ್ನು ವೀಕ್ಷಿಸಿ ಗೌರವವನ್ನು ಸಲ್ಲಿಸಿದ್ದಾರೆ ಎಂದರು.

Displaying DSC_9985.JPG

      ಶ್ರೀಗಳನ್ನು ಸಮಾಜದಲ್ಲಿ ದೈವೀಪುರುಷರನ್ನಾಗಿ ಮುಂದಿನ ದಿನಗಳಲ್ಲಿ ನಾವು ನೆನಪಿಸಿಕೊಳ್ಳುತ್ತೇವೆ. ಈ ಸಿದ್ದಗಂಗಾ ಕ್ಷೇತ್ರದ ಬೆಳವಣಿಗೆಗೆ ಅವರ ಆಶೀರ್ವಾದ ಸದಾ ಇರುತ್ತದೆ ಎಂದು ಭಾವಿಸಿದ ಅವರು ಶ್ರೀಗಳ ಅಗಲಿಕೆಯಿಂದ ಕಿರಿಯ ಸ್ವಾಮೀಜಿ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಮೇಲೆ ಬಹುದೊಡ್ಡ ಜವಾಬ್ದಾರಿಯಿದ್ದು, ಕ್ಷೇತ್ರದ ಅಭಿವೃದ್ಧಿಗಾಗಿ ಕಿರಿಯ ಶ್ರೀಗಳೊಂದಿಗೆ ನಾವೆಲ್ಲ ಸದಾ ಇರುತ್ತೇವೆ ಎಂದು ತಿಳಿಸಿದರು.

      ಲಕ್ಷಾಂತರ ಭಕ್ತಾದಿಗಳು ಅತ್ಯಂತ ಸಂಯಮದಿಂದ ಶ್ರೀಗಳಿಗೆ ಗೌರವ ಸಮರ್ಪಣೆ ಮಾಡುವ ಮೂಲಕ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಶ್ರೀಗಳ ಅಂತಿಮ ದರ್ಶನವು ಎಲ್ಲಿಯೂ ಲೋಪವಾಗದ ರೀತಿಯಲ್ಲಿ ಶಾಂತ ರೀತಿಯಿಂದ ನಡೆಸಲು ವ್ಯವಸ್ಥೆ ಕಲ್ಪಿಸಿದ್ದ ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋನ ವಂಶಿಕೃಷ್ಣ, ಹಿಂದಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ: ದಿವ್ಯಾ ಗೋಪಿನಾಥ್, ಕೇಂದ್ರ ವಲಯದ ಐಜಿಪಿ ದಯಾನಂದ್ ಸೇರಿದಂತೆ ಎಲ್ಲಾ ಅಧಿಕಾರಿ, ಸಿಬ್ಬಂದಿಗಳ ಕಾರ್ಯದ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಹಗಲಿರುಳೆನ್ನದೆ ಲಿಂಗೈಕ್ಯ ಶ್ರೀಗಳ ಹಿನ್ನೆಲೆ, ಅವರು ಬೆಳೆದು ಬಂದ ದಾರಿ, ಸೇವೆ, ಪರಿಶ್ರಮಗಳ ಬಗ್ಗೆ ಮಾಧ್ಯಮಗಳಲ್ಲಿ ಬಿತ್ತರಿಸಿ ಇಡೀ ವಿಶ್ವದ ಜನತೆಗೆ ತಲುಪಿಸಿದ ಮಾಧ್ಯಮ ಮಿತ್ರರಿಗೆ ಧನ್ಯವಾದಗಳನ್ನು ಸೂಚಿಸಿದರು.

      ಶ್ರೀಗಳ ಅಂತಿಮ ದರ್ಶನದಲ್ಲಿ ಪಾಲ್ಗೊಂಡು ಅಂತ್ಯ ಕ್ರಿಯೆಯ ವಿಧಿವಿಧಾನಗಳು ಪೂರ್ಣಗೊಳ್ಳುವವರೆಗೆ ಮಠದಲ್ಲಿಯೇ ಉಪಸ್ಥಿತರಿದ್ದ ಮುಖ್ಯಮಂತ್ರಿಗಳು, ವಿರೋಧಪಕ್ಷದ ನಾಯಕರು, ಸಚಿವರು, ಗಣ್ಯರೆಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.Displaying DSC_9992.JPG

 

      ಬರುವ ಜನವರಿ 31ರಂದು ನಡೆಯಲಿರುವ ಶ್ರೀಗಳ ಪುಣ್ಯಸ್ಮರಣೆ ಸಮಾರಂಭದ ನುಡಿನಮನದಲ್ಲಿ ಮುಖ್ಯಮಂತ್ರಿ ಸೇರಿದಂತೆ ಸಚಿವರು, ಗಣ್ಯರು ಭಾಗವಹಿಸಲಿದ್ದು, ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಸರ್ಕಾರದಿಂದಲೇ ನಡೆಸುವ ಬಗ್ಗೆ ಕಾರ್ಯಕ್ರಮ ರೂಪಿಸಬೇಕೆಂದು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

      ಶ್ರೀಗಳ ಶೋಕಾಚರಣೆ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಎಂ ಖರ್ಗೆ ಅವರು ಬೆಂಗಳೂರಿನಲ್ಲಿ 3 ದಿನಗಳ ಕಾರ್ಯಕ್ರಮವನ್ನು ಉದ್ಘಾಟಿಸಿರುವ ಬಗ್ಗೆ ಪತ್ರಕರ್ತರೊಬ್ಬರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸ್ವಾಮೀಜಿಯವರ ಗೌರವಕ್ಕೆ ಧಕ್ಕೆ ತರುವ ಉದ್ದೇಶದಿಂದ ಕಾರ್ಯಕ್ರಮವನ್ನು ನಡೆಸಿಲ್ಲ. ಅಂತರ್‍ರಾಷ್ಟ್ರೀಯ ಮಟ್ಟದಲ್ಲಿ ಸಂವಿಧಾನದ ಬಗ್ಗೆ ಚರ್ಚಿಸುವ ಪೂರ್ವನಿಯೋಜಿತ ಕಾರ್ಯಕ್ರಮವಾಗಿದ್ದರಿಂದ ದೇಶ-ವಿದೇಶಗಳಿಂದ ಆಗಮಿಸಿದ್ದವರಿಗೆ ಅನಾನುಕೂಲವಾಗಬಾರದೆಂದು ಕಾರ್ಯಕ್ರಮವನ್ನು ನಿಲ್ಲಿಸಲು ಸಾಧ್ಯವಾಗಿಲ್ಲ. ಕಾಯಕವೇ ಕೈಲಾಸ ಎಂಬ ಭಾವನೆಯಿಂದ ಕಾರ್ಯಕ್ರಮವನ್ನು ಸಾಂಕೇತಿಕವಾಗಿ ಉದ್ಘಾಟನೆ ಮಾಡಲಾಗಿದೆ. ಸ್ವಾಮೀಜಿಗಳ ಮೇಲೆ ಅವರಿಗೆ ಅಪಾರ ಗೌರವವಿದೆ. ಆದಾಗ್ಯೂ ತಪ್ಪಾಗಿದ್ದರೆ ಈಗಾಗಲೇ ಕ್ಷಮೆಯನ್ನೂ ಕೂಡ ಕೇಳಿರುವ ಬಗ್ಗೆ ಪ್ರಿಯಾಂಕ್ ಖರ್ಗೆ ತಮ್ಮ ಗಮನಕ್ಕೆ ತಂದಿದ್ದಾರೆ ಎಂದು ತಿಳಿಸಿದರು.

      ಲಿಂ. ಸ್ವಾಮೀಜಿಗಳ ಪುತ್ಥಳಿ ಸ್ಥಾಪನೆ ಕುರಿತಂತೆ ಕಿರಿಯ ಶ್ರೀಗಳೊಂದಿಗೆ ಚರ್ಚಿಸಿದ ನಂತರ ನಿರ್ಣಯ ಕೈಗೊಳ್ಳಲಾಗುವುದೆಂದರು. ನಂತರ ಕಿರಿಯ ಶ್ರೀಗಳಾದ ಸಿದ್ದಲಿಂಗ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಸಾಂತ್ವನ, ಧೈರ್ಯ ನೀಡಿದ ಅವರು, ಪುಣ್ಯ ಸ್ಮರಣೆ ಸಮಾರಂಭದ ಬಗ್ಗೆ ಚರ್ಚಿಸಿದರು.

      ಈ ಸಂದರ್ಭದಲ್ಲಿ ಸಂಸದ ಎಸ್.ಪಿ. ಮುದ್ದಹನುಮೇಗೌಡ, ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್, ಉಪವಿಭಾಗಾಧಿಕಾರಿ ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

(Visited 30 times, 1 visits today)
Previous Articleಶಿಕ್ಷಣ ಸಚಿವರ ನೇಮಕಕ್ಕೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಒತ್ತಾಯ!
Next Article ಶಾಸಕ ಡಿ.ಸಿ.ಗೌರಿಶಂಕರ್ ರಿಂದ ೨೫ ಲಕ್ಷ ರೂ. ಹಫ್ತ ವಸೂಲಿ : ಸುರೇಶ್‌ಗೌಡ ಆರೋಪ
News Desk Benkiyabale

Related Posts

ರೈತರ ಹೋರಾಟಕ್ಕೆ ಹೆಚ್ಚೆತ್ತುಕೊಳ್ಳದ ಸರ್ಕಾರ

November 06, 2025 3:01 pm ತುಮಕೂರು

‘ಸ್ಥಳೀಯ ಮಟ್ಟದಲ್ಲಿ ಡಿಜಿಟಲ್ ಮಾಧ್ಯಮಕ್ಕೆ ಉಜ್ವಲ ಭವಿಷ್ಯ’

November 06, 2025 2:49 pm ತುಮಕೂರು

ತುಮಕೂರು ವಿ.ವಿ.ಗೆ ಡಾ. ಶಿವಕುಮಾರ ಸ್ವಾಮಿಗಳ ಹೆಸರಿಡುವಂತೆ ಡಾ. ಡಿ.ಎನ್.ಯೋಗೀಶ್ವರಪ್ಪ ಆಗ್ರಹ

November 06, 2025 2:47 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಕೊರಟಗೆರೆ ಪಪಂಅನ್ನ ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಿದ ಸಚಿವರು

November 08, 2025 3:09 pm
ಇತರೆ ಸುದ್ಧಿಗಳು

ಪ.ಪಂ. ಸದಸ್ಯರಿಂದ ಲೋಕಾಯುಕ್ತ ತನಿಖೆಗೆ ಆಗ್ರಹ

November 08, 2025 2:46 pm
ಇತರೆ ಸುದ್ಧಿಗಳು

ನಗರದಲ್ಲಿ ಕ್ಯಾನ್ಸರ್ ಜಾಗೃತಿ ಜಾಥಾ

November 08, 2025 2:34 pm
ಇತರೆ ಸುದ್ಧಿಗಳು

೬೪೫ ಕೋಟಿ ರೂ. ವೆಚ್ಚದ ಕಾಮಗಾರಿಗಳ ಉದ್ಘಾಟನೆ, ಅಡಿಗಲ್ಲು

November 08, 2025 2:33 pm
ಇತರೆ ಸುದ್ಧಿಗಳು

‘ಜ್ಞಾನಸಿರಿ’ ಜ್ಞಾನ ಪ್ರವಾಹದ ಸಂಕೇತ: ಥಾವರ್‌ಚಂದ್ ಗೆಹ್ಲೋಟ್

November 07, 2025 4:52 pm
ಇತರೆ ಸುದ್ಧಿಗಳು

ಅಧಿಕಾರದಿಂದ ವರ್ಗಾವಣೆ ಬಳಿಕವೂ ಚೆಕ್ ಡ್ರಾ

November 07, 2025 4:14 pm
Our Youtube Channel
Our Picks

ಕೊರಟಗೆರೆ ಪಪಂಅನ್ನ ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಿದ ಸಚಿವರು

November 08, 2025 3:09 pm

ಪ.ಪಂ. ಸದಸ್ಯರಿಂದ ಲೋಕಾಯುಕ್ತ ತನಿಖೆಗೆ ಆಗ್ರಹ

November 08, 2025 2:46 pm

ನಗರದಲ್ಲಿ ಕ್ಯಾನ್ಸರ್ ಜಾಗೃತಿ ಜಾಥಾ

November 08, 2025 2:34 pm

೬೪೫ ಕೋಟಿ ರೂ. ವೆಚ್ಚದ ಕಾಮಗಾರಿಗಳ ಉದ್ಘಾಟನೆ, ಅಡಿಗಲ್ಲು

November 08, 2025 2:33 pm

‘ಜ್ಞಾನಸಿರಿ’ ಜ್ಞಾನ ಪ್ರವಾಹದ ಸಂಕೇತ: ಥಾವರ್‌ಚಂದ್ ಗೆಹ್ಲೋಟ್

November 07, 2025 4:52 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಕೊರಟಗೆರೆ ಪಪಂಅನ್ನ ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಿದ ಸಚಿವರು

By News Desk BenkiyabaleNovember 08, 2025 3:09 pm

ಕೊರಟಗೆರೆ: ಪಟ್ಟಣ ಪಂಚಾಯಿತಿಯನ್ನ ಪುರಸಭೆಯಾಗಿ ಮೇಲ್ದರ್ಜೆಗೇರಿಸುವ ಸಂಬ0ಧ ಗುರುವಾರ ನೆಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಿ ಮಹತ್ವದ ಆದೇಶವನ್ನ…

ಪ.ಪಂ. ಸದಸ್ಯರಿಂದ ಲೋಕಾಯುಕ್ತ ತನಿಖೆಗೆ ಆಗ್ರಹ

November 08, 2025 2:46 pm

ನಗರದಲ್ಲಿ ಕ್ಯಾನ್ಸರ್ ಜಾಗೃತಿ ಜಾಥಾ

November 08, 2025 2:34 pm

೬೪೫ ಕೋಟಿ ರೂ. ವೆಚ್ಚದ ಕಾಮಗಾರಿಗಳ ಉದ್ಘಾಟನೆ, ಅಡಿಗಲ್ಲು

November 08, 2025 2:33 pm
News by Date
November 2025
M T W T F S S
 12
3456789
10111213141516
17181920212223
24252627282930
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.