BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಿಸಿಎಂಯಿದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ
  • ಐಸಿಎಚ್-೫ ತಳಿಯ ಹರಳು ಬೆಳೆದರೆ ಕೈ ತುಂಬ ದುಡ್ಡು
  • ಚಿಗುರು ಬಾಲ ಪ್ರತಿಭೆಗಳಿಗೆ ಪ್ರೋತ್ಸಾಹ ಕಾರ್ಯಕ್ರಮ
  • ಕನ್ನಡಪರ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕೆ ಒತ್ತಾಯ
  • ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ
  • ಉದ್ಯಮ ಸಂಸ್ಥೆ ಜೊತೆ ಎಸ್‌ಎಸ್‌ಐಟಿ ಒಡಂಬಡಿಕೆ
  • ವಿಬಿ ಜಿ ರಾಮ್ ಜಿ ಯೋಜನೆಯಡಿ ಜನರಿಗೆ ಉದ್ಯೋಗ ನೀಡಿ: ಜನರು ಗುಳೆ ಹೋಗುವುದನ್ನು ತಪ್ಪಿಸಿ
  • ಒಂದೇ ನಲ್ಲಿಯಲ್ಲಿ ೧೦೦ ಮನೆಯವರು ನೀರು ಹಿಡಿಯುವ ದುಸ್ಥಿತಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಂಜೀವಿನಿ ತಾಣ ಸಿದ್ದರಬೆಟ್ಟಕ್ಕೆ ಮೂಲಸೌಕರ್ಯ ಒದಗಿಸುವಂತೆ ಭಕ್ತಾಧಿಗಳ ಆಗ್ರಹ
ತುಮಕೂರು ಜಿಲ್ಲಾ ಸುದ್ಧಿಗಳು

ಸಂಜೀವಿನಿ ತಾಣ ಸಿದ್ದರಬೆಟ್ಟಕ್ಕೆ ಮೂಲಸೌಕರ್ಯ ಒದಗಿಸುವಂತೆ ಭಕ್ತಾಧಿಗಳ ಆಗ್ರಹ

By News Desk BenkiyabaleUpdated:November 15, 2018 6:28 pm

ಕೊರಟಗೆರೆ:

      ಸಂಜೀವಿನಿ ತಾಣ ಮತ್ತು ಸಾಧುಸಂತರ ತಪೋಭೂಮಿ ಎಂದೇ ಪ್ರಸಿದ್ದಿ ಪಡೆದಿರುವ ಸಿದ್ದರಬೇಟ್ಟದ ಶ್ರೀಸಿದ್ದೇಶ್ವರ ಸ್ವಾಮಿ ಸನ್ನಿಧಾನದಲ್ಲಿ ಕಾರ್ತಿಕ ಮಾಸದ ಲಕ್ಷದಿಪೋತ್ಸವ ಕಾರ್ಯಕ್ರಮವನ್ನು ಡಿ.3ರ ಸೋಮವಾರ ಏರ್ಪಡಿಸಲಾಗಿದೆ ಎಂದು ಸಿದ್ದರಬೇಟ್ಟ ಮಠದ ಶ್ರೀವೀರಭದ್ರ ಶಿವಚಾರ್ಯ ಸ್ವಾಮೀಜಿ ತಿಳಿಸಿದರು.

      ತಾಲೂಕಿನ ಚನ್ನರಾಯನದುರ್ಗ ಹೋಬಳಿ ಸಿದ್ದರಬೇಟ್ಟ ಕ್ಷೇತ್ರದ ಶ್ರೀಸಿದ್ದೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿ ಮುಜರಾಯಿ ಇಲಾಖೆ ವತಿಯಿಂದ ಗುರುವಾರ ಏರ್ಪಡಿಸಲಾಗಿದ್ದ ಲಕ್ಷದಿಪೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯ ದಿವ್ಯಾ ಸಾನಿಧ್ಯ ವಹಿಸಿ ಮಾತನಾಡಿದರು.

      ಸಿದ್ದರಬೇಟ್ಟ ಪುಣ್ಯಕ್ಷೇತ್ರದಲ್ಲಿ ನಡೆಯುವ ಲಕ್ಷದಿಪೋತ್ಸವ ಕಾರ್ಯಕ್ರಮಕ್ಕೆ ರಾಜ್ಯ ಮತ್ತು ಹೊರರಾಜ್ಯದಿಂದ ಸಾವಿರಾರು ಭಕ್ತಾಧಿಗಳು ಬರುವ ನೀರಿಕ್ಷೆ ಇದೆ. ಪ್ರವಾಸಿ ಕ್ಷೇತ್ರಕ್ಕೆ ಬರುವ ಭಕ್ತಾಧಿಗಳಿಗೆ ಸೂಕ್ತ ಮೂಲಸೌಕರ್ಯ ಕಲ್ಪಿಸುವಂತೆ ಸೂಚಿಸಿಲಾಗಿದೆ. ಕಾರ್ಯಕ್ರಮ ಯಶಸ್ವಿಗಾಗಿ ಸ್ಥಳೀಯ ಮುಖಂಡರು ಮತ್ತು ಭಕ್ತಾಧಿಗಳ ಸಹಕಾರ ಅಗತ್ಯವಾಗಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿ ಗೊಳಿಸಬೇಕು ಎಂದರು.

      ತಹಶೀಲ್ದಾರ್ ನಾಗರಾಜು ಮಾತನಾಡಿ ಮುಜರಾಯಿ ಇಲಾಖೆ ಮತ್ತು ಭಕ್ತರ ಸಹಕಾರದಿಂದ ಪ್ರತಿವರ್ಷದಂತೆ ಲಕ್ಷದಿಪೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮ ಯಶಸ್ವಿಗಾಗಿ ತಾಲೂಕು ಆಡಳಿತ ಸಕಲ ಸಿದ್ದತೆಯನ್ನು ಮಾಡಿಕೊಂಡಿದೆ. ಸ್ಥಳೀಯ ಗ್ರಾಪಂ, ಅರಣ್ಯ ಇಲಾಖೆ, ಬೆಸ್ಕಾಂ ಮತ್ತು ಶ್ರೀಮಠದ ಸಹಕಾರ ಅಗತ್ಯವಾಗಿದೆ. ಅಧಿಕಾರಿ ವರ್ಗ ತಮಗೆ ಸೂಚಿಸಿರುವ ಕೆಲಸವನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು ಎಂದು ಎಚ್ಚರಿಕೆ ನೀಡಿದರು.

      ಮೂಲಸೌಕರ್ಯ ಕಲ್ಪಿಸುವಂತೆ ಆಗ್ರಹ:-

      ಸಂಜೀವಿನಿ ತಾಣ ಸಿದ್ದರಬೇಟ್ಟ ಕ್ಷೇತ್ರದಲ್ಲಿ ಕತ್ತಲು ಕವಿದಿದೆ. ಕುಡಿಯಲು ನೀರಿನ ವ್ಯವಸ್ಥೆ ಇಲ್ಲ. ಸ್ವಚ್ಚತೆ ಮಾಯವಾಗಿದೆ. ಶೌಚಾಲಯಗಳಿಗೆ ಬೀಗ ಹಾಕಲಾಗಿದೆ. ಮಂಡೆ ತೆಗೆಯುವ ಭಕ್ತರಿಗೆ ನೀರಿನ ವ್ಯವಸ್ಥೆ ಮರೀಚಿಕೆ ಆಗಿದೆ. ಕೆರೆ ಕಟ್ಟೆಯ ನೀರಿನಲ್ಲಿ ಸ್ನಾನ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಮತ್ತು ಹೊರರಾಜ್ಯದಿಂದ ಪ್ರವಾಸಕ್ಕಾಗಿ ಬರುವ ಸಾವಿರಾರು ಭಕ್ತರ ಪಾಡು ಕೇಳುವವರು ಇಲ್ಲದಾಗಿದೆ ಎಂದು ಸ್ಥಳೀಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

      ಪುಣ್ಯಭೂಮಿ ಈಗ ಮರುಭೂಮಿ:- ಮುಜರಾಯಿ ಇಲಾಖೆ ಖಜಾನೆಯಲ್ಲಿ ಸಿದ್ದರಬೇಟ್ಟದ 2ಕೋಟಿ ಹಣ ಭದ್ರವಾಗಿದೆ. ಕ್ಷೇತ್ರದ ಅಭಿವೃದ್ದಿಗಾಗಿ ಸರಕಾರದಿಂದ ಬಿಡುಗಡೆ ಆದ 2ಕೋಟಿ ಹಣ ಅಧಿಕಾರಿಗಳ ನಿರ್ಲಕ್ಷದಿಂದ ಸರಕಾರದ ಖಜಾನೆಗೆ ಹಿಂದಕ್ಕೆ ಹೋಗಿದೆ. ಚುನಾವಣೆ ವೇಳೆ ಕಾರ್ಯಕ್ರಮ ಆಯೋಜನೆಗೆ ಮಾತ್ರ ಕ್ಷೇತ್ರವನ್ನು ರಾಜಕೀಯ ವರ್ಗ ಬಳಸಿಕೊಂಡು ಈಗ ಮರೆತಿರುವುದು ದುರದುಷ್ಟಕರ. ಬೇಟ್ಟ ಹತ್ತುವ ಭಕ್ತಾರ ಗೋಳು ಕೇಳೊರೇ ಇಲ್ಲದಾಗಿದೆ. ಮಾನ್ಯ ಜಿಲ್ಲಾಧಿಕಾರಿ ಕ್ಷೇತ್ರಕ್ಕೆ ಒಮ್ಮೆ ಬೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಸ್ಥಳೀಯ ಭಕ್ತರು ಒತ್ತಾಯ ಮಾಡಿದರು.

     ಪೂರ್ವಭಾವಿ ಸಭೆಯಲ್ಲಿ ಇಓ ಶಿವಪ್ರಕಾಶ್, ಪಿಡಿಓ ನವ್ಯಾ, ಕಂದಾಯ ಇಲಾಖೆಯ ಕೃಷ್ಣಪ್ಪ, ರಮೇಶ್, ಪಾರುಪತ್ತೇದಾರ್ ವೀರಮಲ್ಲಯ್ಯ, ಅರ್ಚಕ ಲೊಕೇಶ್‍ರಾಧ್ಯ, ಮಹೇಶ್, ಮುಖಂಡರಾದ ನಂಜುಂಡಸ್ವಾಮಿ, ರತ್ನಾಕರ, ಹುಲಿರಾಮಯ್ಯ, ಗಿರೀಶ್, ಪ್ರದೀಪ್, ಹನುಮೇಶ್, ನಾಗರಾಜು, ಹನುಮಂತರಾಜು, ಸುರೇಶ್, ಶಿವಲಿಂಗಯ್ಯ, ರಘುನಂದನ್, ಶಿವಾನಂದ, ರಮೇಶ್ ಸೇರಿದಂತೆ ಇತರರು ಇದ್ದರು.

     ಸಿದ್ದರಬೇಟ್ಟ ಕ್ಷೇತ್ರದಲ್ಲಿ ಕಳೆದ 6ವರ್ಷದಿಂದ ಶೌಚಾಲಯ, ಕುಡಿಯುವ ನೀರಿನ ತೊಟ್ಟಿ ಮತ್ತು ಚಿಂದಿ ಕಸವನ್ನು ಆಯ್ದು ಸ್ವಚ್ಚತೆಯ ಕೆಲಸ ಮಾಡುತ್ತೀದ್ದೆನೆ. ಭಕ್ತಾಧಿಗಳು ನೀಡುವ ಐದು, ಹತ್ತು ರೂ ಹಣದಿಂದಲೇ ಜೀವನ ಸಾಗಿಸಬೇಕು. ಮುಜರಾಯಿ ಇಲಾಖೆಯಿಂದ ಕೂಲಿ ಕೊಡುವುದಾಗಿ ಆಶ್ವಾಸನೆ ಮಾತ್ರ ನೀಡುತ್ತಾರೆ. ನನಗೆ ಇಲ್ಲಿಯವರೇಗೆ ಒಂದು ಪೈಸೆಯೂ ನೀಡಿಲ್ಲ.

-ದೇವರಾಜಮ್ಮ. ಸ್ವಚ್ಚತೆ ಮಾಡುವ ಮಹಿಳೆ. ಸಿದ್ದರಬೇಟ್ಟ.

ಮುಜರಾಯಿ ಇಲಾಖೆಯ ಖರ್ಚು ವೆಚ್ಚದ ಲೆಕ್ಕಾ ಪರಿಶೋಧನೆಯಲ್ಲಿ 60ಲಕ್ಷದ ಲೋಪದೋಷ ಆಗಿದೆ. ಕಳೆದ ಎರಡು ವರ್ಷದಿಂದ ದೇವಾಲಯಕ್ಕೆ ಸುಣ್ಣಬಣ್ಣ ಬಳೆದಿರುವ ಹಣವನ್ನು ನೀಡಿಲ್ಲ. ಖರ್ಚು ವೆಚ್ಚ ಮತ್ತು ಚರಾಸ್ಥಿ, ಸ್ಥಿರಾಸ್ಥಿಯ ಮಾಹಿತಿ ಕೇಳಿದರೇ ಅಧಿಕಾರಿ ವರ್ಗ ಉಡಾಫೆ ಉತ್ತರ ನೀಡುತ್ತಾರೆ. ಪುಣ್ಯಕ್ಷೇತ್ರದ ಗೋಳು ಕೇಳೋರೇ ಇಲ್ಲವೇ.

ಸಿದ್ದಗಿರಿನಂಜುಂಡಸ್ವಾಮಿ. ಅಧ್ಯಕ್ಷ. ಪ್ರಕೃತಿ ಮತ್ತು ಸಂಸ್ಕøತಿ ಸಂರಕ್ಷಣಾ ವೇದಿಕೆ. ಸಿದ್ದರಬೇಟ್ಟ.

ಸಿದ್ದರಬೇಟ್ಟ ಕ್ಷೇತ್ರದಲ್ಲಿ ಮೂಲ ಸೌಕರ್ಯದ ಬಗ್ಗೆ ಖುದ್ದಾಗಿ ಸ್ಥಳ ಪರಿಶೀಲನೆ ನಡೆಸಿದ್ದೇನೆ. ಕ್ಷೇತ್ರಕ್ಕೆ ತ್ವರಿತವಾಗಿ ಬೇಕಾದ ಕುಡಿಯುವ ನೀರು ಮತ್ತು ಶೌಚಾಲಯ ವ್ಯವಸ್ಥೆಗಾಗಿ ನಮ್ಮ ಮೇಲಾಧಿಕಾರಿ ಗಮನಕ್ಕೆ ತಂದು ಸರಿಪಡಿಸುತ್ತೇವೆ. ಕ್ಷೇತ್ರದ ಅಭಿವೃದ್ದಿಗೆ ಬೇಕಾದ ಅನುಧಾನಕ್ಕೆ ಸರಕಾರದ ಗಮನಕ್ಕೆ ತರುವ ಪ್ರಯತ್ನ ಮಾಡುತ್ತೇವೆ.

ನಾಗರಾಜು. ತಹಶೀಲ್ದಾರ್. ಕೊರಟಗೆರೆ

(Visited 36 times, 1 visits today)
Previous Articleಮಾಜಿ ಮೇಯರ್ ರವಿ ಕೊಲೆ ಹಿಂದಿತ್ತಾ ಸೈಲೆಂಟ್ ಸುನಿಲನ ಕರಿನೆರಳು..?
Next Article ಹಾಲುಗಲ್ಲದ ಹಸುಗೂಸನ್ನ ಪೊದೆಯಲ್ಲಿಟ್ಟಿದ್ಯಾರು ಗೊತ್ತಾ..?
News Desk Benkiyabale

Related Posts

ಡಿಸಿಎಂಯಿದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ

August 13, 2026 5:39 pm news

ಐಸಿಎಚ್-೫ ತಳಿಯ ಹರಳು ಬೆಳೆದರೆ ಕೈ ತುಂಬ ದುಡ್ಡು

August 13, 2026 5:38 pm news

ಚಿಗುರು ಬಾಲ ಪ್ರತಿಭೆಗಳಿಗೆ ಪ್ರೋತ್ಸಾಹ ಕಾರ್ಯಕ್ರಮ

August 13, 2026 5:36 pm news
ತಾಜಾ ಸುದ್ಧಿಗಳು
news

ಡಿಸಿಎಂಯಿದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ

August 13, 2026 5:39 pm
news

ಐಸಿಎಚ್-೫ ತಳಿಯ ಹರಳು ಬೆಳೆದರೆ ಕೈ ತುಂಬ ದುಡ್ಡು

August 13, 2026 5:38 pm
news

ಚಿಗುರು ಬಾಲ ಪ್ರತಿಭೆಗಳಿಗೆ ಪ್ರೋತ್ಸಾಹ ಕಾರ್ಯಕ್ರಮ

August 13, 2026 5:36 pm
news

ಕನ್ನಡಪರ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕೆ ಒತ್ತಾಯ

August 13, 2026 5:35 pm
news

ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ

August 12, 2026 5:37 pm
news

ಉದ್ಯಮ ಸಂಸ್ಥೆ ಜೊತೆ ಎಸ್‌ಎಸ್‌ಐಟಿ ಒಡಂಬಡಿಕೆ

August 12, 2026 5:35 pm
Our Youtube Channel
Our Picks

ಡಿಸಿಎಂಯಿದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ

August 13, 2026 5:39 pm

ಐಸಿಎಚ್-೫ ತಳಿಯ ಹರಳು ಬೆಳೆದರೆ ಕೈ ತುಂಬ ದುಡ್ಡು

August 13, 2026 5:38 pm

ಚಿಗುರು ಬಾಲ ಪ್ರತಿಭೆಗಳಿಗೆ ಪ್ರೋತ್ಸಾಹ ಕಾರ್ಯಕ್ರಮ

August 13, 2026 5:36 pm

ಕನ್ನಡಪರ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕೆ ಒತ್ತಾಯ

August 13, 2026 5:35 pm

ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ

August 12, 2026 5:37 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಡಿಸಿಎಂಯಿದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ

By News Desk BenkiyabaleAugust 13, 2026 5:39 pm

ತುಮಕೂರು: ಸರ್ಕಾರದ ಮಹತ್ವಾಕಾಂಕ್ಷೆಯ ಭಾರತ್ ಜೋಡೋ ಯುವ ಮಿಷನ್ ಯೋಜನೆಯು ಯುವಜನರಲ್ಲಿ ಶಿಸ್ತು, ಸೇವಾ ಮನೋಭಾವ, ಸಾಮಾಜಿಕ ಜವಾಬ್ದಾರಿ, ನಾಯಕತ್ವ…

ಐಸಿಎಚ್-೫ ತಳಿಯ ಹರಳು ಬೆಳೆದರೆ ಕೈ ತುಂಬ ದುಡ್ಡು

August 13, 2026 5:38 pm

ಚಿಗುರು ಬಾಲ ಪ್ರತಿಭೆಗಳಿಗೆ ಪ್ರೋತ್ಸಾಹ ಕಾರ್ಯಕ್ರಮ

August 13, 2026 5:36 pm

ಕನ್ನಡಪರ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕೆ ಒತ್ತಾಯ

August 13, 2026 5:35 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.