BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೆಳೆ ನಷ್ಟ ಅನುಭವಿಸಿದ ರೈತರಿಗೆ ಸೂಕ್ತ ಪರಿಹಾರಕ್ಕಾಗಿ ಜಿಲ್ಲಾಧಿಕಾರಿಗೆ ಮನವಿ
  • ಕ್ರೀಡೆ ಮನುಷ್ಯನಿಗೆ ಜೀವನದ ಪಾಠ ಕಲಿಸುತ್ತದೆ
  • ಶಿಕ್ಷಣವೆಂದರೆ ಮಗುವಿನ ಸರ್ವತೋಮುಖ ಬೆಳವಣಿಗೆ
  • ನಗರದ ವಿವಿಧೆಡೆ ಉಪಲೋಕಾಯುಕ್ತರಿಂದ ಬಿರುಸಿನ ಕಾರ್ಯಾಚರಣೆ
  • ಮಕ್ಕಳು ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ಸಂಸ್ಕಾರ ಮುಖ್ಯ
  • ಮಕ್ಕಳ ರಕ್ಷಣಾ ಕಾಯ್ದೆ ಬಗ್ಗೆ ಜಾಗೃತಿ ಅವಶ್ಯಕ
  • ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ದಿಗ್ವಿಜಯ: ಸಂಭ್ರಮ
  • ವೃಕ್ಷಮಾತೆ ಅಜಾರಾಮರ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಮಾಜವನ್ನು ಮುನ್ನಡೆಸುವ ಪ್ರಯತ್ನ ಯುವಜನಾಂಗದ ಮೇಲಿದೆ : ಬಿ.ವೈ.ವಿಜಯೇಂದ್ರ
Trending

ಸಮಾಜವನ್ನು ಮುನ್ನಡೆಸುವ ಪ್ರಯತ್ನ ಯುವಜನಾಂಗದ ಮೇಲಿದೆ : ಬಿ.ವೈ.ವಿಜಯೇಂದ್ರ

By News Desk BenkiyabaleUpdated:January 14, 2019 4:36 pm

ಗುಬ್ಬಿ : 

      ಕೆಲ ದುಷ್ಟಶಕ್ತಿಗಳು ಈ ಸಮಾಜವನ್ನು ಒಡೆಯುವ ಹಂತದಲ್ಲಿದ್ದು ಈಗಲಾದರೂ ಸಮಾಜವನ್ನು ಮುನ್ನಡೆಸುವ ಪ್ರಯತ್ನ ಯುವಜನಾಂಗದ ಮೇಲಿದೆ ಎಂದು ರಾಜ್ಯ ಭಾರತೀಯ ಜನತಾ ಪಕ್ಷದ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಸಮಾಜದ ಯುವಕರಿಗೆ ಎಚ್ಚರಿಕೆ ನೀಡಿದರು.

      ನಿಟ್ಟೂರು ಹೋಬಳಿಯ ಬಾಗೂರು ಗೇಟ್‍ನ ಸಮೀಪವಿರುವ ಬೆಟ್ಟದಹಳ್ಳಿ ಗವೀಮಠದಿಂದ ಆಯೋಜಿಸಲಾದ 846ನೇ ಸಿದ್ದರಾಮೇಶ್ವರ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು ಧರ್ಮ ಜಾಗೃತಿಗಾಗಿ ಅನೇಕ ಸಂತರುಗಳು ತಮ್ಮ ಜೀವಿತಾವಧಿಯನ್ನು ಕಳೆದಿದ್ದು ಈ ನೆಲದಲ್ಲಿ ನಡೆದಾಡುವ ದೇವರಾದ ಶ್ರೀ ಶ್ರೀ ಸಿದ್ದಗಂಗಾ ಶ್ರೀಗಳ ಆರ್ಶೀವಾದವಿದ್ದು ಇಲ್ಲಿಯವರೆಗೂ ನಡೆದಂತಹ ಜಯಂತೋತ್ಸವಕ್ಕಿಂತ ಲಕ್ಷಾಂತರ ಭಕ್ತರನ್ನು ಜಯಂತೋತ್ಸವದ ಅಧ್ಯಕ್ಷರಾದ ಚಂದ್ರಶೇಖರ ಮಹಾಸ್ವಾಮಿಗಳ ಅಪಾರ ನಂಬಿಕೆ ಹಾಗೂ ರಾಜ್ಯದ ಮಠಾಧೀಶರುಗಳ ಆರ್ಶೀವಾದದಿಂದ ಇಂತಹ ಅಭೂತಪೂರ್ವ ಜಯಂತೋತ್ಸವವನ್ನು ಆಚರಿಸುತ್ತಿರುವುದು ಈ ಸಮಾಜದ ಒಳಿತಿಗಾಗಿ ಎಂದು ತಿಳಿಸಿದರು.

      ಈ ರಾಜ್ಯದಲ್ಲಿ ಈ ಸಮಾಜದ ಮುಖಂಡರುಗಳು ಯಾರು ನಾಯಕರಾಗಬಾರದೆಂಬ ಕಲ್ಪನೆ ಕೆಲವರಲ್ಲಿದೆ. ರಾಜ್ಯದ ಜನರು ಬರದ ಭೀತಿ, ನೀರಿನ ತೊಂದರೆಯಿಂದ ಬಳಲುತ್ತಿದ್ದರೂ ಯಾವುದೇ ಅಭಿವೃದ್ದಿಕಾರ್ಯಗಳನ್ನು ಮಾಡದೆ ಕೇವಲ ತಮ್ಮ ಅಧಿಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಸರ್ಕಸ್ ನಡೆಸುತ್ತಿದ್ದಾರೆ. ಕೇಂದ್ರದ ನರೇಂದ್ರಮೋದಿಯವರ ಕನಸನ್ನು ನಸಸು ಮಾಡುವ ಜವಾಬ್ದಾರಿ ಇಂದಿನ ಯುವಸಮಾಜದ ಮೇಲಿದೆ. ಬಿ.ಎಸ್.ಯಡಿಯೂರಪ್ಪನವರ ಕನಸು ಸಮಾಜದ ಯಾವುದೇ ವ್ಯಕ್ತಿಯೂ ತಳಮಟ್ಟದಲ್ಲಿರಬಾರದು. ರೈತರು ಸುಖೀ ಜೀವನ ನಡೆಸುವಂತಾಗಬೇಕು. ನಿರುದ್ಯೋಗಿ ಯುವಕರಿಗೆ ಉದ್ಯೋಗವನ್ನು ದೊರಕಿಸಿಕೊಡುವ ನಿಟ್ಟಿನಲ್ಲಿ ನಮ್ಮ ಅಪ್ಪಾಜಿಯವರು ಶ್ರಮಸುತ್ತಿದ್ದಾರೆ ಎಂದರು.

      ಅಧ್ಯಕ್ಷತೆ ವಹಿಸಿ ಮಾತನಾಡಿದ ಬೆಟ್ಟದಹಳ್ಳಿ ಶ್ರೀ ಚಂದ್ರಶೇಖರ ಮಹಾಸ್ವಾಮಿಗಳು ಗುಬ್ಬಿ ತಾಲ್ಲೂಕಿಗೂ ಶಿವಯೋಗಿ ಸಿದ್ದರಾಮರಿಗೂ ಭೌತಿಕ ಸಂಪರ್ಕವಿದ್ದು ಇವರು ತಮ್ಮ ಕಡೆಯ ದಿನಗಳಲ್ಲಿ ನಮ್ಮ ತಾಲ್ಲೂಕಿನ ಕಾರೇಕುರ್ಚಿಯ ದೊಣೆ ಎಂಬಲ್ಲಿ ಉಗ್ರ ತಪಸ್ಸನ್ನು ಮಾಡಿದ ಇತಿಹಾಸವಿದೆ. ಯಾವುದೇ ಮನುಷ್ಯನು ಜಾತಿಬೇಧ ಮರೆತು ಗುರುಹಿರಿಯರಲ್ಲಿ ಹೆಚ್ಚಿನ ಭಕ್ತಿ ಇಟ್ಟು ದೇವರನ್ನು ಒಲಿಸಿಕೊಳ್ಳುವ ನಿಟ್ಟಿನಲ್ಲಿ ಚಿಂತಿಸುವ ಅಗತ್ಯವಿದೆ ಎಂದ ಅವರು ಶರಣ ಸಮಾಜದಲ್ಲಿ ಅತಿ ಹೆಚ್ಚಿನ ಮಹತ್ವ ಪಡೆದ ಸಿದ್ದರಾಮರ ಜಯಂತಿಯನ್ನು ಸುಮಾರು ದೇಶದ ನಾನಾ ಭಾಗದಿಂದ ಬಂದಂತಹ ಲಕ್ಷಾಂತರ ಜನರು ಸಿದ್ದರಾಮರ ಆಶೀರ್ವಾದ ಪಡೆದಿದ್ದು ನಾನಾ ಭಾಗಗಳಿಂದ ಬಂದ ಮಠಾಧೀಶರುಗಳು ಆರ್ಶೀವಾದವನ್ನು ಈ ಸಮಾರಂಭದಲ್ಲಿ ಪಡೆದಿದ್ದು ಇದರಿಂದ ಸಮಾಜದ ಒಳಿತಿಗಾಗಿ ಕಾರ್ಯನಿರ್ವಹಿಸಲು ಎಲ್ಲಾ ರಾಜಕಾರಣಿಗಳು ತಮ್ಮ ರಾಜಕೀಯ ಇಚ್ಛಾಶಕ್ತಿಯನ್ನು ಮರೆತು ಒಂದಾಗಿ ಸಮಾಜದ ಏಳಿಗೆಯನ್ನು ಕಾಪಾಡಬೇಕೆಂದು ತಿಳಿಸಿದರು.

      ಇದೇ ಸಂದರ್ಭದಲ್ಲಿ ನಿಟ್ಟೂರಿನಿಂದ 1008 ಧ್ವಜ ಹಾಗೂ 1008 ಕುಂಭಕಳಸ ಹಾಗೂ ವಿವಿಧ ಜಾನಪದ ಕಲಾಮೇಳದೊಂದಿಗೆ ಹಾಗೂ ಗುಬ್ಬಿ ಚನ್ನಬಸವೇಶ್ವರ ದೇವಾಲಯದಿಂದ 101 ಟ್ರಾಕ್ಟರ್‍ಗಳ ಮೆರವಣಿಗೆ ನಡೆಯಿತು. ವೇದಿಕೆಯ ಆವರಣದಲ್ಲಿ ವಿವಿಧ ಇಲಾಖೆಗಳಿಂದ ವಸ್ತುಪ್ರದರ್ಶನ ಏರ್ಪಡಿಸಲಾಗಿತ್ತು. 2 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಈ ಸಮಾರಂಭದಲ್ಲಿ ಭಾಗವಹಿಸಿದ್ದರು.

(Visited 28 times, 1 visits today)
Previous Articleಗಣರಾಜ್ಯೋತ್ಸವ : ಜಿಲ್ಲಾಡಳಿತದಿಂದ ವಿಜೃಂಭಣೆಯ ಆಚರಣೆಗೆ ನಿರ್ಧಾರ
Next Article ಪ್ರತಿಯೊಬ್ಬರಿಗೂ ಸೂರು ಯೋಜನೆಯಡಿ 400 ಮನೆಗಳ ನಿರ್ಮಾಣ
News Desk Benkiyabale

Related Posts

ನಗರದ ವಿವಿಧೆಡೆ ಉಪಲೋಕಾಯುಕ್ತರಿಂದ ಬಿರುಸಿನ ಕಾರ್ಯಾಚರಣೆ

November 15, 2025 4:32 pm ತುಮಕೂರು

ಸಮಾಜದಲ್ಲಿ ತಾಂಡವಾಡುತ್ತಿರುವ ಅಜ್ಞಾನ ಹೋಗಿ ಸುಜ್ಞಾನ ಬರಲಿ: ಸ್ವಾಮೀಜಿ

November 10, 2025 2:20 pm ತುಮಕೂರು

ಅನ್ಯಾಯದ ವಿರುದ್ಧ ಧ್ವನಿ ಎತ್ತುವುದೇ ವಿದ್ಯಾರ್ಥಿಗಳ ಲಕ್ಷಣ

November 10, 2025 2:15 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಬೆಳೆ ನಷ್ಟ ಅನುಭವಿಸಿದ ರೈತರಿಗೆ ಸೂಕ್ತ ಪರಿಹಾರಕ್ಕಾಗಿ ಜಿಲ್ಲಾಧಿಕಾರಿಗೆ ಮನವಿ

November 17, 2025 4:48 pm
ಇತರೆ ಸುದ್ಧಿಗಳು

ಕ್ರೀಡೆ ಮನುಷ್ಯನಿಗೆ ಜೀವನದ ಪಾಠ ಕಲಿಸುತ್ತದೆ

November 17, 2025 4:47 pm
ಇತರೆ ಸುದ್ಧಿಗಳು

ಶಿಕ್ಷಣವೆಂದರೆ ಮಗುವಿನ ಸರ್ವತೋಮುಖ ಬೆಳವಣಿಗೆ

November 15, 2025 4:33 pm

ನಗರದ ವಿವಿಧೆಡೆ ಉಪಲೋಕಾಯುಕ್ತರಿಂದ ಬಿರುಸಿನ ಕಾರ್ಯಾಚರಣೆ

November 15, 2025 4:32 pm
ಇತರೆ ಸುದ್ಧಿಗಳು

ಮಕ್ಕಳು ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ಸಂಸ್ಕಾರ ಮುಖ್ಯ

November 15, 2025 4:31 pm
ಇತರೆ ಸುದ್ಧಿಗಳು

ಮಕ್ಕಳ ರಕ್ಷಣಾ ಕಾಯ್ದೆ ಬಗ್ಗೆ ಜಾಗೃತಿ ಅವಶ್ಯಕ

November 15, 2025 4:29 pm
Our Youtube Channel
Our Picks

ಬೆಳೆ ನಷ್ಟ ಅನುಭವಿಸಿದ ರೈತರಿಗೆ ಸೂಕ್ತ ಪರಿಹಾರಕ್ಕಾಗಿ ಜಿಲ್ಲಾಧಿಕಾರಿಗೆ ಮನವಿ

November 17, 2025 4:48 pm

ಕ್ರೀಡೆ ಮನುಷ್ಯನಿಗೆ ಜೀವನದ ಪಾಠ ಕಲಿಸುತ್ತದೆ

November 17, 2025 4:47 pm

ಶಿಕ್ಷಣವೆಂದರೆ ಮಗುವಿನ ಸರ್ವತೋಮುಖ ಬೆಳವಣಿಗೆ

November 15, 2025 4:33 pm

ಮಕ್ಕಳು ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ಸಂಸ್ಕಾರ ಮುಖ್ಯ

November 15, 2025 4:31 pm

ಮಕ್ಕಳ ರಕ್ಷಣಾ ಕಾಯ್ದೆ ಬಗ್ಗೆ ಜಾಗೃತಿ ಅವಶ್ಯಕ

November 15, 2025 4:29 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಬೆಳೆ ನಷ್ಟ ಅನುಭವಿಸಿದ ರೈತರಿಗೆ ಸೂಕ್ತ ಪರಿಹಾರಕ್ಕಾಗಿ ಜಿಲ್ಲಾಧಿಕಾರಿಗೆ ಮನವಿ

By News Desk BenkiyabaleNovember 17, 2025 4:48 pm

ತುಮಕೂರು:  ಪ್ರ‍್ರಕೃತಿಕ ವಿಕೋಪಗಳಿಂದ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು,ಕೃಷಿ ಉತ್ಪನ್ನಗಳ ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು…

ಕ್ರೀಡೆ ಮನುಷ್ಯನಿಗೆ ಜೀವನದ ಪಾಠ ಕಲಿಸುತ್ತದೆ

November 17, 2025 4:47 pm

ಶಿಕ್ಷಣವೆಂದರೆ ಮಗುವಿನ ಸರ್ವತೋಮುಖ ಬೆಳವಣಿಗೆ

November 15, 2025 4:33 pm

ನಗರದ ವಿವಿಧೆಡೆ ಉಪಲೋಕಾಯುಕ್ತರಿಂದ ಬಿರುಸಿನ ಕಾರ್ಯಾಚರಣೆ

November 15, 2025 4:32 pm
News by Date
November 2025
M T W T F S S
 12
3456789
10111213141516
17181920212223
24252627282930
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.