BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಅಧ್ಯಯನದಿಂದ ಯಶಸ್ಸು ಸಾಧ್ಯ
  • ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು
  • ತಾಲೂಕು ಕರ‍್ಯನಿರತ ಪತ್ರರ‍್ತರ ಸಂಘದ ಅಧ್ಯಕ್ಷರಾಗಿ ವಿ.ಕೆ ಮರ‍್ತಿ ಆಯ್ಕೆ
  • 41 ಸಾವಿರ ಸರಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ಯತ್ನ
  • ವಿದ್ಯಾರ್ಥಿಗಳೇ ತಮ್ಮ ಅರಿವನ್ನ ಎಚ್ಚರಗೊಳಿಸಿ
  • ೨೨ ಮಹಾರ್ ವೀರ ಸೈನಿಕರ ಹೆಸರುಗಳನ್ನು ಸರ್ಕಾರಿ ಅಜ್ಞೆಯಂತೆ ವಿಜಯ ಸ್ತಂಭವನ್ನು ಸ್ಥಾಪಿಸಲಾಗಿದೆ
  • ಶೋಷಿತರ ಶೌರ್ಯದ ಸಂಕೇತವೇ ಕೋರೆಗಾಂವ್
  • ಉತ್ತಮ ಆಡಳಿತ ವಾರ ಕಾರ್ಯಕ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ
Trending

ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ

By News Desk BenkiyabaleUpdated:December 06, 2018 4:43 pm

 ತುಮಕೂರು:

      ತ್ರಿವಿಧ ದಾಸೋಹಿ, ನಡೆದಾಡುವ ದೇವರು, ಸಿದ್ದಗಂಗಾ ಮಠಾಧ್ಯಕ್ಷರಾದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದ ಕಾರಣ ರಾತ್ರಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಠಿಯಾಗಿತ್ತು. ಆದರೆ ವೈದ್ಯರು ಚಿಕಿತ್ಸೆ ನೀಡಿದ ಬಳಿಕ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಇಂದು ಬೆಳಿಗ್ಗೆಯಿಂದ ಎಂದಿನಂತೆ ಲವಲವಿಕೆಯಿಂದ ಇದ್ದಾರೆ.

       ಕಳೆದ ರಾತ್ರಿ ಶ್ರೀಗಳ ಹೃದಯಬಡಿತದಲ್ಲಿ ಕೊಂಚ ಏರುಪೇರಾಗಿತ್ತು. ಅಲ್ಲದೆ ಶೀತ, ಕೆಮ್ಮು, ಜ್ವರ ಸಹ ಕಾಣಿಸಿಕೊಂಡಿತ್ತು. ಇದರಿಂದ ಶ್ರೀಕ್ಷೇತ್ರ ಸೇರಿದಂತೆ ಕಲ್ಪತರುನಾಡಿನಲ್ಲಿ ಆತಂಕದ ವಾತಾವರಣ ಸೃಷ್ಠಿಯಾಗಿತ್ತು.
ಶ್ರೀಗಳ ಆರೋಗ್ಯದಲ್ಲಿ ಏರುಪೇರಾಗಿರುವ ವಿಚಾರ ತಿಳಿಯುತ್ತಿದ್ದಂತೆ ಶ್ರೀಗಳ ಆಪ್ತ ವೈದ್ಯರಾದ ಡಾ. ಪರಮೇಶ್ ನೇತೃತ್ವದ ತಂಡ ಮಠಕ್ಕೆ ತೆರಳಿ ಶ್ರೀಗಳಿಗೆ ಚಿಕಿತ್ಸೆ ನೀಡಿದರು.

       ನಂತರ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯ ವೈದ್ಯರಾದ ಡಾ. ರವೀಂದ್ರ ನೇತೃತ್ವದ ವೈದ್ಯರ ತಂಡವೂ ಶ್ರೀಕ್ಷೇತ್ರಕ್ಕೆ ಆಗಮಿಸಿ ತಡರಾತ್ರಿವರೆವಿಗೂ ಶ್ರೀಗಳ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ನೀಡಿದರು.
ವೈದ್ಯರ ಚಿಕಿತ್ಸೆ ಬಳಿಕ ಶ್ರೀಗಳು ಚೇತರಿಸಿಕೊಂಡಿದ್ದು, ಇಂದು ಬೆಳಿಗ್ಗೆ ಎಂದಿನಂತೆ ಲವಲವಿಕೆಯಿಂದ ಪರಿಚಾರಕರ ಸಹಾಯದೊಂದಿಗೆ ನಡೆದುಕೊಂಡೇ ಹಳೇಮಠದ ಗದ್ದುಗೆಗೆ ಬಂದು ಕುಳಿತುಕೊಂಡರು.

      ಶ್ರೀಗಳಿಗೆ ವಿಶ್ರಾಂತಿ ಅಗತ್ಯ ಇರುವುದರಿಂದ ಶ್ರೀಗಳ ದರ್ಶನಕ್ಕೆ ಭಕ್ತಾದಿಗಳಿಗೆ ಅವಕಾಶ ನೀಡದಿರಲು ವೈದ್ಯರು ಸಲಹೆ ನೀಡಿದ್ದಾರೆ. ವೈದ್ಯರ ಸಲಹೆ ಮೇರೆಗೆ ಶ್ರೀಗಳು ಸಂಪೂರ್ಣವಾಗಿ ಗುಣಮುಖರಾಗುವವರೆಗೆ ಭಕ್ತಾದಿಗಳು ಸಹಕರಿಸಬೇಕು ಎಂದು ಶ್ರೀಮಠ ಮನವಿ ಮಾಡಿದೆ.

 ಇಷ್ಟಲಿಂಗ ಪೂಜೆ ನೆರವೇರಿಸಿದ ಶ್ರೀಗಳು:

      ಸಿದ್ದಗಂಗಾ ಮಠಾಧ್ಯಕ್ಷರಾದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರು ಇಂದು ಮಧ್ಯಾಹ್ನ ಸುಮಾರು 45 ನಿಮಿಷಗಳ ಕಾಲ ಇಷ್ಟಲಿಂಗ ಪೂಜೆಯನ್ನು ನೆರವೇರಿಸಿದರು.
ಎಂದಿನಂತೆ ಪೂಜಾ ಕೈಂಕರ್ಯದಲ್ಲಿ ತೊಡಗಿದ ಶ್ರೀಗಳು ಪೂಜೆ ಬಳಿಕ ಪ್ರಸಾದ ಸೇವಿಸಿದರು.
ಅನ್ನ, ಸಾಂಬರು, ಸೇಬು, ಸಪೋಟ ಹಣ್ಣುಗಳನ್ನು ಮಾಮೂಲಿನಂತೆ ಲವಲವಿಕೆಯಿಂದಲೇ ಸೇವಿಸಿದರು.

 ಸಿದ್ದಲಿಂಗಶ್ರೀ ಹೇಳಿಕೆ:

      ಕಳೆದ ರಾತ್ರಿ ಶ್ರೀಗಳಿಗೆ ಜ್ವರ ಕಾಣಿಸಿಕೊಂಡಿದ್ದರಿಂದ ವೈದ್ಯರು ಚಿಕಿತ್ಸೆ ನೀಡಿದ್ದು, ಈಗ ಆರಾಮಾಗಿದ್ದಾರೆ. ಸದ್ಯ ಯಾವುದೇ ತೊಂದರೆಯಿಲ್ಲ. ಭಕ್ತರು ತಾಳ್ಮೆಯಿಂದ ಇರಬೇಕು. ಯಾವುದೇ ರೀತಿಯಲ್ಲೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಶ್ರೀಗಳ ದರ್ಶನಕ್ಕೆ ಸ್ವಲ್ಪ ದಿನ ಕಾಯುವುದು ಒಳ್ಳೆಯದು ಎಂದು ಶ್ರೀಮಠದ ಕಿರಿಯ ಶ್ರೀಗಳಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಮನವಿ ಮಾಡಿದ್ದಾರೆ.

      ಶ್ರೀಗಳಿಗೆ ಚಿಕಿತ್ಸೆ ನೀಡಿರುವ ವೈದ್ಯರು ಏನು ತೊಂದರೆಯಿಲ್ಲ ಎಂದು ಹೇಳಿದ್ದಾರೆ. ಶ್ರೀಗಳು ಸಂಪೂರ್ಣ ವಿಶ್ರಾಂತಿ ಪಡೆದರೆ ಶೀಘ್ರ ಗುಣಮುಖರಾಗುತ್ತಾರೆ ಎಂಬುದು ವೈದ್ಯರ ಆಶಯವಾಗಿದೆ. ಹಾಗಾಗಿ ಭಕ್ತಾದಿಗಳು ಸಹಕರಿಸಬೇಕು ಎಂದು ಕೋರಿದ್ದಾರೆ.
 
      ನಿನ್ನೆ ರಾತ್ರಿ ಶ್ರೀಗಳ ಹೃದಯ ಬಡಿತದಲ್ಲಿ ಕೊಂಚ ಏರುಪೇರಾಗಿತ್ತು. ಸ್ವಲ್ಪ ಜ್ವರ ಸಹ ಕಂಡಿತ್ತು. ಹಾಗಾಗಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯ ಡಾ. ರವೀಂದ್ರ ವೈದ್ಯರ ತಂಡ ಚಿಕಿತ್ಸೆ ನೀಡಿ ಹೋಗಿದೆ. ತೊಂದರೆ ಏನಿಲ್ಲ. ಸ್ವಾಮೀಜಿ ಆರೋಗ್ಯವಾಗಿದ್ದಾರೆ ಎಂದು ಶ್ರೀಗಳ ಆಪ್ತ ವೈದ್ಯರಾದ ಡಾ. ಪರಮೇಶ್ ಹೇಳಿದರು.

      ಸ್ಟಂಟ್ ಆಳವಡಿಕೆ‌ ವಿಚಾರದಲ್ಲಿ ನುರಿತ ವೈದ್ಯರ ಸಲಹೆಗಳನ್ನು ಪಡೆಯಬೇಕಿದೆ. ಹಾಗಾಗಿ ಮದರಾಸಿನ ಡಾ. ಮಹಮದ್ ರಿಲ್ಲಾ, ತಮಿಳುನಾಡು ಮೂಲದ ಪಳನಿ ವೇಲುರವರ ಸಲಹೆ ಪಡೆಯಬೇಕಿದೆ. ನಮ್ಮ ವೈದ್ಯರ ತಂಡವೇ ಮದರಾಸ್ ಹಾಗೂ ತಮಿಳುನಾಡಿಗೆ ತೆರಳಿ ಅವರ ಅಭಿಪ್ರಾಯ ಪಡೆಯುತ್ತೇವೆ. ಸದ್ಯ ಸ್ವಾಮೀಜಿ ಅವರನ್ನು ಶಿಫ್ಟ್ ಮಾಡಲ್ಲ ಈಗಾಗ್ಲೇ ‍11 ಸ್ಟಂಟ್ ಆಳವಡಿಸಲಾಗಿದೆ. ಆ ಸ್ಟಂಟ್‌ಗಳನ್ನು ತೆಗೆಯುವುದು ಬಹಳಷ್ಟು ಕಷ್ಟ. ಅದಕ್ಕೆ ನುರಿತ ವೈದ್ಯರ ಸಲಹೆ ಪಡೆಯುತ್ತೇವೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

      ಸರ್ಜರಿ ಮುಖಾಂತರ ಸ್ಟಂಟ್ ತೆಗೆಯಬಹುದಾ ಅಥವಾ ಬೇರೆನಾದ್ರೂ ಮಾಡಬಹುದಾ ಎಂದು ಚರ್ಚೆ ಮಾಡ್ತೇವೆ. ಎಂಡಸ್ಕೋಪಿ ಮುಖಾಂತರ ಏನಾದರೂ ಮಾಡಬಹುದಾ ಎಂದು ಅಭಿಪ್ರಾಯ ಪಡೆಯುತ್ತೇವೆ ಎಂದು ಹೇಳಿದರು.

(Visited 25 times, 1 visits today)
Previous Articleರೈಲ್ವೆ ಪ್ರಯಾಣಿಕರ ಸುರಕ್ಷತಾ ಸಪ್ತಾಹ
Next Article ಜೇಷ್ಠತೆ ವಿಸ್ತರಿಸುವ ಕಾಯ್ದೆ 2017 ಜಾರಿಗೆ ಒತ್ತಾಯ
News Desk Benkiyabale

Related Posts

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm ತುಮಕೂರು

ಡಿ. 12 ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ

December 12, 2025 3:48 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm
ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm
ಇತರೆ ಸುದ್ಧಿಗಳು

ತಾಲೂಕು ಕರ‍್ಯನಿರತ ಪತ್ರರ‍್ತರ ಸಂಘದ ಅಧ್ಯಕ್ಷರಾಗಿ ವಿ.ಕೆ ಮರ‍್ತಿ ಆಯ್ಕೆ

January 05, 2026 3:36 pm
ಇತರೆ ಸುದ್ಧಿಗಳು

41 ಸಾವಿರ ಸರಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ಯತ್ನ

January 02, 2026 3:50 pm
ಇತರೆ ಸುದ್ಧಿಗಳು

ವಿದ್ಯಾರ್ಥಿಗಳೇ ತಮ್ಮ ಅರಿವನ್ನ ಎಚ್ಚರಗೊಳಿಸಿ

January 02, 2026 3:20 pm
ಇತರೆ ಸುದ್ಧಿಗಳು

೨೨ ಮಹಾರ್ ವೀರ ಸೈನಿಕರ ಹೆಸರುಗಳನ್ನು ಸರ್ಕಾರಿ ಅಜ್ಞೆಯಂತೆ ವಿಜಯ ಸ್ತಂಭವನ್ನು ಸ್ಥಾಪಿಸಲಾಗಿದೆ

January 02, 2026 2:54 pm
Our Youtube Channel
Our Picks

ತಾಲೂಕು ಕರ‍್ಯನಿರತ ಪತ್ರರ‍್ತರ ಸಂಘದ ಅಧ್ಯಕ್ಷರಾಗಿ ವಿ.ಕೆ ಮರ‍್ತಿ ಆಯ್ಕೆ

January 05, 2026 3:36 pm

41 ಸಾವಿರ ಸರಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ಯತ್ನ

January 02, 2026 3:50 pm

ವಿದ್ಯಾರ್ಥಿಗಳೇ ತಮ್ಮ ಅರಿವನ್ನ ಎಚ್ಚರಗೊಳಿಸಿ

January 02, 2026 3:20 pm

೨೨ ಮಹಾರ್ ವೀರ ಸೈನಿಕರ ಹೆಸರುಗಳನ್ನು ಸರ್ಕಾರಿ ಅಜ್ಞೆಯಂತೆ ವಿಜಯ ಸ್ತಂಭವನ್ನು ಸ್ಥಾಪಿಸಲಾಗಿದೆ

January 02, 2026 2:54 pm

ಶೋಷಿತರ ಶೌರ್ಯದ ಸಂಕೇತವೇ ಕೋರೆಗಾಂವ್

January 02, 2026 2:46 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

By News Desk BenkiyabaleJanuary 05, 2026 3:41 pm

ತುರುವೇಕೆರೆ: ವಿದ್ಯಾರ್ಥಿಗಳು ಬಹಳ ಶ್ರದ್ಧೆಯಿಂದ ಅಧ್ಯಯನ ಮಾಡಿದಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಸಿಪಿಐ ಲೋಹಿತ್ ಹೇಳಿದರು. ಪಟ್ಟಣದ ಜೆಪಿ…

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm

ತಾಲೂಕು ಕರ‍್ಯನಿರತ ಪತ್ರರ‍್ತರ ಸಂಘದ ಅಧ್ಯಕ್ಷರಾಗಿ ವಿ.ಕೆ ಮರ‍್ತಿ ಆಯ್ಕೆ

January 05, 2026 3:36 pm

41 ಸಾವಿರ ಸರಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ಯತ್ನ

January 02, 2026 3:50 pm
News by Date
January 2026
M T W T F S S
 1234
567891011
12131415161718
19202122232425
262728293031  
« Dec    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.