BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ‘ಸಹಕಾರ ಸಂಸ್ಥೆಗಳಿಗೆ ಆತ್ಮವಿಶ್ವಾಸ, ಸದಸ್ಯರ ವಿಶ್ವಾಸ ಅಗತ್ಯ’
  • ಈ ಬೇಸಿಗೆಗಾದರೂ ಪ್ರಯಾಣಿಕರಿಗೆ ಕುಡಿಯುವ ನೀರು ಕೊಡಿ
  • ಪರಿಶಿಷ್ಟ ಜಾತಿಯ ಉಪ ಜಾತಿ ಸಮೀಕ್ಷೆಗೆ ಹಾಜರಾಗದ ಗಣತಿದಾರರಿಗೆ ಶೋಕಾಸ್ ನೋಟಿಸ್‌: ಡೀಸಿ ಖಡಕ್ ಸೂಚನೆ
  • ಮೇ ೨೫ ಸ್ಲಂ ಜನರ ಹಬ್ಬ, ಸಮಾವೇಶ
  • ಗಂಬೀರ ಕಾಯಿಲೆಗಳಿಗೆ ವೈದ್ಯಕೀಯ ತಾಂತ್ರಿಕ ಸಂಶೋಧನೆಗಳು ಉತ್ತರ ನೀಡಿವೆ
  • ಅಕ್ರಮ ಕಲ್ಲುಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳುವಂತೆ ರೈತರಿಂದ ಆಹೋ ರಾತ್ರಿ ಪ್ರತಿಭಟನೆ
  • ಹೇಮರೆಡ್ಡಿ ಮಲ್ಲಮ್ಮ, ಭಾರತೀಯ ಗೃಹಿಣಿಯರಿಗೆ ಮಾದರಿ
  • ಯುದ್ಧದ ಕಾರ್ಮೋಡ: ತುಮಕೂರು ರೈಲ್ವೆ ನಿಲ್ದಾಣದಲ್ಲಿ ಮುಂಜಾಗೃತ ತಪಾಸಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಐಟಿ ದಾಳಿಗೂ ಬಿಜೆಪಿಗೂ ಸಂಬಂಧವಿಲ್ಲ – ಸಂಸದ ಜಿ.ಎಸ್.ಬಸವರಾಜು
ತುಮಕೂರು ಜಿಲ್ಲಾ ಸುದ್ಧಿಗಳು

ಐಟಿ ದಾಳಿಗೂ ಬಿಜೆಪಿಗೂ ಸಂಬಂಧವಿಲ್ಲ – ಸಂಸದ ಜಿ.ಎಸ್.ಬಸವರಾಜು

By News Desk BenkiyabaleUpdated:October 14, 2019 6:26 pm

ಗುಬ್ಬಿ :

      ಐಟಿ ದಾಳಿಗೂ ಬಿಜೆಪಿಗೂ ಸಂಬಂಧವಿಲ್ಲ. ವೈಯಕ್ತಿಕ ದ್ವೇಷದ ಮಾತು ಇಲ್ಲಿ ಬರುವಂತಿಲ್ಲ. ಕಾಂಗ್ರೆಸ್ ಮುಖಂಡರನ್ನು ಗುರಿಯಾಗಿಸಿಕೊಂಡಿರುವ ಸಿದ್ದರಾಮಯ್ಯನವರ ಆರೋಪ ಸತ್ಯಕ್ಕೆ ದೂರವಾದದು ಎಂದು ಸಂಸದ ಜಿ.ಎಸ್.ಬಸವರಾಜು ಸ್ಪಷಪಡಿಸಿದರು.

      ಪಟ್ಟಣದ ಶ್ರೀ ಗೋಸಲ ಚನ್ನಬಸವೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿ ಶನಿವಾರ ದೇವಾಲಯ ಜೀಣೋದ್ದಾರ ಸಮಿತಿ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಆದಾಯ ತೆರಿಗೆ ಇಲಾಖೆ ಅವರ ಕರ್ತವ್ಯವನ್ನು ಕಾನೂನು ರೀತಿ ನಡೆಸಿದ್ದಾರೆ. ಮೆಡಿಕಲ್ ಸೀಟ್ ಮಾರಾಟ ದಂಧೆ ನಡೆದಿರುವ ದೂರಿನ ಹಿನ್ನಲೆಯಲ್ಲಿ ಈ ದಾಳಿ ನಡೆಯುತ್ತಿದೆ. ಪರಮೇಶ್ವರ್ ಅವರು ನನಗೆ ಒಳ್ಳೆಯ ಸ್ನೇಹಿತ. ಅವರ ವ್ಯವಹಾರದ ಬಗ್ಗೆ ತಿಳಿದಿರಲಿಲ್ಲ ಎಂದರು.

      ಸೇವಾ ಕಾರ್ಯ ನಡೆಸಬೇಕಾದ ಶಿಕ್ಷಣರಂಗ ಸಂಪೂರ್ಣ ಕಮರ್ಷಿಯಲ್ ಆಗಿ ಕಲುಷಿತಗೊಂಡಿರುವುದು ವಿಷಾದಕರ ಸಂಗತಿ. ಪರಮೇಶ್ವರ್ ಆಪ್ತ ಸಹಾಯಕನ ಆತ್ಮಹತ್ಯೆ ನೋವಿನ ಘಟನೆ. ಹಿನ್ನಲೆತಿಳಿಯಲು ಪೊಲೀಸ್ ಇಲಾಖೆ ತನಿಖೆ ನಡೆಸಲಿದೆ ಎಂದ ಅವರು ಹೇಮಾವತಿ ಡಿಸೆಂಬರ್ ಮಾಹೆವರೆಗೆ ಜಿಲ್ಲೆಗೆ ಹರಿಯಲಿದೆ. ಗುಬ್ಬಿ ತಾಲ್ಲೂಕಿನ ಎಲ್ಲಾ ಕೆರೆಗಳಿಗೂ ನೀರು ಹರಿಸಲು ಬದ್ದನಾಗಿದ್ದೇನೆ. ಕುಡಿಯುವ ನೀರು ಒದಗಿಸುವ ಕೆಲ ಯೋಜನೆಗೆ ಕಾಯಕಲ್ಪ ನೀಡಲಾಗಿದೆ. ಈ ಜತೆಗೆ ಹೊಸ ಯೋಜನೆಗಳಿಗೂ ರೂಪುರೇಷ ಸಿದ್ದಗೊಳಿಸಲಾಗಿದೆ. ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಕೇಂದ್ರ ಸಚಿವರೊಂದಿಗೆ ಚರ್ಚಿಸಲಾಗಿದೆ. ಸ್ಥಳಕ್ಕೆ ರೈಲ್ವೆ ಸಚಿವರೇ ಆಗಮಿಸಿ ಅಸ್ತು ನೀಡಲಿದ್ದಾರೆ ಎಂದರು.

        ನೆರೆ ಸಂತ್ರಸ್ತರಿಗೆ ಪರಿಹಾರ ಒದಗಿಸಲು ಕೇಂದ್ರ ಸರ್ಕಾರ ನೀಡಿದ 1200 ಕೋಟಿ ರೂಗಳ ನೆರವಿನೊಂದಿಗೆ ರಾಜ್ಯ ಸರ್ಕಾರ ಕನಿಷ್ಠ 15 ಸಾವಿರ ಕೋಟಿ ರೂಗಳ ಅನುದಾನವನ್ನು ಆ ಪ್ರದೇಶಗಳಿಗೆ ನೀಡಲು 224 ಶಾಸಕರ ನಿಧಿಯಿಂದ ಶೇ.50 ರಷ್ಟು ಅನುದಾನವನ್ನು ವಾಪಾಸ್ ತರಲಾಗಿದೆ. ಈ ಹಣ ಸದ್ಬಳಕೆಗೆ ಮಾಡುವ ನಿಟ್ಟಿನಲ್ಲಿ ಶಾಸಕರೂ ಕೂಡ ಒಪ್ಪಿದ್ದಾರೆ. ಆದರೆ ಸ್ಥಳೀಯ ಸಂಸ್ಥೆಗಳಲ್ಲಿ ಬಳಕೆಯಾಗದೆ ಉಳಿದ ಹಣವನ್ನು ವಾಪಸ್ ತರಲಾಗುತ್ತಿದೆ. ಗುಬ್ಬಿ ಪಟ್ಟಣ ಪಂಚಾಯಿತಿಯ 10 ಕೋಟಿ ಹಣ ಕಳೆದ ಒಂದು ವರ್ಷದಿಂದ ಬಳಕೆಯಾಗದ ಹಿನ್ನಲೆಯಲ್ಲಿ ಅನುದಾನ ಮರಳಿ ಸರ್ಕಾರ ಪಡೆದುಕೊಂಡಿದೆ. ಇಲ್ಲಿಯೇ ತಿಳಿಯುತ್ತದೆ ಪಪಂ ಅಭಿವೃದ್ದಿ ಹೇಗೆ ಸಾಗಿದೆ ಎಂದು ವ್ಯಂಗ್ಯವಾಡಿದರು.

       ಧಾರ್ಮಿಕ ಕಾರ್ಯಗಳ ಬಗ್ಗೆ ಆಸಕ್ತಿ ಇರುವ ಹಿನ್ನಲೆಯಲ್ಲೇ ಚನ್ನಬಸವೇಶ್ವರಸ್ವಾಮಿ ದೇವಾಲಯ ಜೀರ್ಣೋದ್ದಾರ ಕಾರ್ಯ ನಡೆಸಲಾಯಿತು. ಈಗ ಭವ್ಯ ದೇವಾಲಯ ಪ್ರವಾಸಿಗರನ್ನು ಆಕರ್ಷಿಸಿದೆ. ಪ್ರವಾಸೋದ್ಯಮ ಇಲಾಖೆ ಮೂಲಕ ಹಲವು ಅಭಿವೃದ್ದಿ ಕೆಲಸ ನಡೆಸಲಾಗುವುದು. ಯಾತ್ರಿ ನಿವಾಸ ಕಟ್ಟಡ ನಿರ್ಮಾಣ ನೆನೆಗುದಿಗೆ ಬಿದ್ದ ಬಗ್ಗೆ ಸಾಕಷ್ಟು ದೂರುಗಳಿವೆ. ಇದಕ್ಕೆ ಸಂಬಂಧಿಸಿದ 46 ಲಕ್ಷ ರೂಗಳೊಂದಿಗೆ ಸರ್ಕಾರದಿಂದ 70 ಲಕ್ಷ ಹಣ ಬಿಡುಗಡೆಗೊಳಿಸಿ ಸುಂದರ ಯಾತ್ರಿ ನಿವಾಸ ಇಲ್ಲಿ ನಿರ್ಮಿಸಲಾಗುವುದು. ಯಡಿಯೂರು ಮಾದರಿ ಪುಣ್ಯಕ್ಷೇತ್ರವಾಗಿ ಗುಬ್ಬಿಯನ್ನು ದೇಶದೆಲ್ಲೆಡೆ ಖ್ಯಾತಿಗೊಳಿಸಲು ಮಹಾದ್ವಾರ ಕಾರ್ಯ ಶೀಘ್ರದಲ್ಲಿ ಆರಂಭಿಸಲಾಗುವುದು. 108 ಅಡಿಗಳ ಉದ್ದದ ಮಹಾಗೋಪುರ ಜತೆಗೆ ರಜತರಥ ನಿರ್ಮಾಣ ಮಾಡಲಾಗುವುದು ಎಂದರು.

       ಇದೇ ಸಂದರ್ಭದಲ್ಲಿ ಜೀರ್ಣೋದ್ದಾರ ಸಮಿತಿ ವತಿಯಿಂದ ರಜತ ಶಿವಲಿಂಗ ವಿಗ್ರಹ ನೀಡಿ ಗೌರವಿಸಲಾಯಿತು. ಪಟ್ಟಣದ ವಿವಿಧ ಸಂಘಸಂಸ್ಥೆಗಳು, ವಿವಿಧ ಕೋಮಿನ ಮುಖಂಡರು ಸಂಸದರಿಗೆ ಸನ್ಮಾನಿಸಿ ಅಭಿನಂದಿಸಿದರು.

       ಕಾರ್ಯಕ್ರಮದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ.ಆರ್.ಜಯರಾಜ್, ಜಿಪಂ ಸದಸ್ಯರಾದ ಡಾ.ನವ್ಯಾಬಾಬು, ಜಿ.ಎಚ್.ಜಗನ್ನಾಥ್, ವರ್ತಕ ಪರಮಶಿವಯ್ಯ, ಜೀರ್ಣೋದ್ದಾರ ಸಮಿತಿ ಕಾರ್ಯದರ್ಶಿ ಕೆ.ವಿ.ಪರಮೇಶ್ವರಯ್ಯ, ಖಜಾಂಚಿ ಸಿ.ಎಂ.ಶರಶ್ಚಂದ್ರಬೋಸ್, ಸಹ ಕಾರ್ಯದರ್ಶಿ ಆರ್.ಪ್ರಸನ್ನಕುಮಾರ್, ದಾಸೋಹ ಸಮಿತಿ ಅಧ್ಯಕ್ಷ ನಂಜುಂಡಪ್ಪ, ಮುಖಂಡರಾದ ಜಿ.ಎನ್.ಬೆಟ್ಟಸ್ವಾಮಿ, ಎಸ್.ಡಿ.ದಿಲೀಪ್‍ಕುಮಾರ್, ಪಪಂ ಸದಸ್ಯರಾದ ಜಿ.ಸಿ.ಕೃಷ್ಣಮೂರ್ತಿ, ಜಿ.ಎನ್.ಅಣ್ಣಪ್ಪಸ್ವಾಮಿ ಇತರರು ಇದ್ದರು.

(Visited 47 times, 1 visits today)
Previous Articleಕೊರಟಗೆರೆ: ಅಬಕಾರಿ ಇಲಾಖೆಯಿಂದ ಜಪ್ತಿ ಮಾಡಿದ್ದ  66.09ಲೀ ಮದ್ಯ ನಾಶ!!
Next Article ತುಮಕೂರು : ಕ್ರಷರ್, ಗ್ರಾನೈಟ್ ಮಾಲೀಕರು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ – ಬಿ.ಸುರೇಶ್‍ಗೌಡ
News Desk Benkiyabale

Related Posts

‘ಸಹಕಾರ ಸಂಸ್ಥೆಗಳಿಗೆ ಆತ್ಮವಿಶ್ವಾಸ, ಸದಸ್ಯರ ವಿಶ್ವಾಸ ಅಗತ್ಯ’

May 10, 2025 3:43 pm ತುಮಕೂರು

ಈ ಬೇಸಿಗೆಗಾದರೂ ಪ್ರಯಾಣಿಕರಿಗೆ ಕುಡಿಯುವ ನೀರು ಕೊಡಿ

May 10, 2025 3:42 pm ತುಮಕೂರು

ಮೇ ೨೫ ಸ್ಲಂ ಜನರ ಹಬ್ಬ, ಸಮಾವೇಶ

May 10, 2025 3:37 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

‘ಸಹಕಾರ ಸಂಸ್ಥೆಗಳಿಗೆ ಆತ್ಮವಿಶ್ವಾಸ, ಸದಸ್ಯರ ವಿಶ್ವಾಸ ಅಗತ್ಯ’

May 10, 2025 3:43 pm
ತುಮಕೂರು

ಈ ಬೇಸಿಗೆಗಾದರೂ ಪ್ರಯಾಣಿಕರಿಗೆ ಕುಡಿಯುವ ನೀರು ಕೊಡಿ

May 10, 2025 3:42 pm
ಇತರೆ ಸುದ್ಧಿಗಳು

ಪರಿಶಿಷ್ಟ ಜಾತಿಯ ಉಪ ಜಾತಿ ಸಮೀಕ್ಷೆಗೆ ಹಾಜರಾಗದ ಗಣತಿದಾರರಿಗೆ ಶೋಕಾಸ್ ನೋಟಿಸ್‌: ಡೀಸಿ ಖಡಕ್ ಸೂಚನೆ

May 10, 2025 3:39 pm
ತುಮಕೂರು

ಮೇ ೨೫ ಸ್ಲಂ ಜನರ ಹಬ್ಬ, ಸಮಾವೇಶ

May 10, 2025 3:37 pm
ತುಮಕೂರು

ಗಂಬೀರ ಕಾಯಿಲೆಗಳಿಗೆ ವೈದ್ಯಕೀಯ ತಾಂತ್ರಿಕ ಸಂಶೋಧನೆಗಳು ಉತ್ತರ ನೀಡಿವೆ

May 10, 2025 3:35 pm
ತುಮಕೂರು

ಅಕ್ರಮ ಕಲ್ಲುಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳುವಂತೆ ರೈತರಿಂದ ಆಹೋ ರಾತ್ರಿ ಪ್ರತಿಭಟನೆ

May 10, 2025 3:34 pm
Our Youtube Channel
Our Picks

ಪರಿಶಿಷ್ಟ ಜಾತಿಯ ಉಪ ಜಾತಿ ಸಮೀಕ್ಷೆಗೆ ಹಾಜರಾಗದ ಗಣತಿದಾರರಿಗೆ ಶೋಕಾಸ್ ನೋಟಿಸ್‌: ಡೀಸಿ ಖಡಕ್ ಸೂಚನೆ

May 10, 2025 3:39 pm

ಕಣ್ಣು ದೇಹದ ಪ್ರಮುಖ ಅಂಗ, ಕಣ್ಣನ್ನು ಚೆನ್ನಾಗಿ ಕಾಪಾಡಿಕೊಳ್ಳಿ

May 09, 2025 2:45 pm

ಆಯುಕ್ತರಿಂದ ಇಂದಿರಾ ಕ್ಯಾಂಟೀನ್ ಪರಿಶೀಲನೆ

May 08, 2025 2:08 pm

ಎಸ್‌ಎಸ್‌ಎಲ್‌ಸಿಯ ಫಲಿತಾಂಶ: ಹರಿಪ್ರಿಯಾಳ ಉತ್ತಮ ಸಾಧನೆ

May 02, 2025 2:34 pm

ಮಾತು ಕೃತಿಗೆ ಬಂದಾಗ ವ್ಯಕ್ತಿಗೆ ಗೌರವ

April 30, 2025 4:11 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University YSpatil ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

‘ಸಹಕಾರ ಸಂಸ್ಥೆಗಳಿಗೆ ಆತ್ಮವಿಶ್ವಾಸ, ಸದಸ್ಯರ ವಿಶ್ವಾಸ ಅಗತ್ಯ’

By News Desk BenkiyabaleMay 10, 2025 3:43 pm

ತುಮಕೂರು: ಆಡಳಿತ ಮಂಡಳಿಯ ಆರ್ಥಿಕ ಶಿಸ್ತು, ಬದ್ಧತೆ, ಆತ್ಮವಿಶ್ವಾಸದಿಂದ ಸಹಕಾರ ಸಂಸ್ಥೆಯನ್ನು ಸದೃಢವಾಗಿ ಬೆಳೆಸಲು ಸಾಧ್ಯವಿದೆ. ಠೇವಣಿದಾರರು ಸಂಸ್ಥೆಯಲ್ಲಿ ಹೂಡಿರುವ…

ಈ ಬೇಸಿಗೆಗಾದರೂ ಪ್ರಯಾಣಿಕರಿಗೆ ಕುಡಿಯುವ ನೀರು ಕೊಡಿ

May 10, 2025 3:42 pm

ಪರಿಶಿಷ್ಟ ಜಾತಿಯ ಉಪ ಜಾತಿ ಸಮೀಕ್ಷೆಗೆ ಹಾಜರಾಗದ ಗಣತಿದಾರರಿಗೆ ಶೋಕಾಸ್ ನೋಟಿಸ್‌: ಡೀಸಿ ಖಡಕ್ ಸೂಚನೆ

May 10, 2025 3:39 pm

ಮೇ ೨೫ ಸ್ಲಂ ಜನರ ಹಬ್ಬ, ಸಮಾವೇಶ

May 10, 2025 3:37 pm
News by Date
May 2025
M T W T F S S
 1234
567891011
12131415161718
19202122232425
262728293031  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.