ಗುಬ್ಬಿ :

      ಕೆರೆಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಸಿ ಎಸ್ ಪುರದಲ್ಲಿ ನಡೆದಿದ್ದು ಮೃತ ಬಾಲಕನ್ನು ಶ್ರೀನಿವಾಸ್ ಎಂದು ಪತ್ತೆ ಹಚ್ಚಲಾಗಿದೆ.

      ಗುರುವಾರ ಬೆಳಗ್ಗೆ 10 ಗಂಟೆಯಲ್ಲಿ ಸ್ನೇಹಿತರೊಂದಿಗೆ ಸಿ ಎಸ್ ಪುರ ಕೆರೆಗೆ ಈಜಲು ಹೋದ ಶ್ರೀನಿವಾಸ್ ಅಚಾನಕ್ ಆಗಿ ನೀರಿನಲ್ಲಿ ಮುಳುಗಿದ್ದಾನೆ. ಇದನ್ನು ಕಂಡ ಸ್ನೇಹಿತರೆಲ್ಲರು ಭಯದಿಂದ ಓಡಿ ಹೋಗಿದ್ದಾರೆ. ಘಟನೆ ಬಗ್ಗೆ ತಿಳಿದ ಸ್ಥಳೀಯ ವ್ಯಕ್ತಿಗಳು ಅವನನ್ನು ರಕ್ಷಿಸಲು ಮುಂದಾಗಿದ್ದು ಅಷ್ಟರಲ್ಲಾಗಲೇ ಶ್ರೀನಿವಾಸ್ ಮೃತಪಟ್ಟಿದ್ದನು

ಸ್ಥಳಕ್ಕೆ ಸಿ.ಎಸ್.ಪುರ ಪೆÇಲೀಸ್ ಠಾಣೆಯ ಎ ಎಸ್ ಐ ಬಸವರಾಜ್ ಭೇಟಿ ನೀಡಿ ಪ್ರಕರಣವನ್ನು ಪ್ರಕರಣ ದಾಖಲಿಸಿಕೊಂಡಿದ್ದಾರೆ.

(Visited 21 times, 1 visits today)