ತುಮಕೂರು:

ತಾಲೂಕು ಬಿದರೆಕಟ್ಟೆಯಲ್ಲಿ ನಿರ್ಮಾಣ ವಾಗುತ್ತಿರುವ ತುಮಕೂರು ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್‌ಗೆ ಶಿಕ್ಷಣ ಭೀಷ್ಮ ಡಾ.ಹೆಚ್.ಎಂ.ಗAಗಾಧರಯ್ಯ ಅವರ ಹೆಸರಿಡಬೇಕೆಂದು ಕನ್ನಡಸೇನೆ, ಹಾಗೂ ವಿವಿಧ ಕನ್ನಡಪರ, ದಲಿತ ಸಂಘಟನೆಗಳ ಮುಖಂಡರು ಇಂದು ತುಮಕೂರು ವಿವಿ ಕುಲಪತಿ ಪ್ರೊ.ಎಂ.ವೆAಕಟೇಶ್ವರಲು ಮತ್ತು ರಿಜಿಸ್ಟಾರ್ ನಾಯಿದಾ ಜಮ್ಹ್, ಜಮ್ಹ್ ಅವರಿಗೆ ಮನವಿ ಸಲ್ಲಿಸಿದರು.

ಕನ್ನಡ ಸೇನೆಯ ಅಧ್ಯಕ್ಷ ಧನಿಯಕುಮಾರ್ ನೇತೃತ್ವದಲ್ಲಿ ಹಿರಿಯ ಕ್ರೀಡಾಪಟು ಟಿ.ಕೆ.ಆನಂದ್, ಉಮೇಶ್, ಪಿ.ಎನ್.ರಾಮಯ್ಯ, ವಕೀಲ ನಾಗೇಶ್ ಸೇರಿದಂತೆ ಹಲವು ಮುಖಂಡರುಗಳು ನಿಯೋಗ ತೆರಳಿ, ಕುಲಪತಿಗಳು ಮತ್ತು ಕುಲಸಚಿವರಿಗೆ ಮನವಿ ಸಲ್ಲಿಸದ್ದಾರೆ. ಈ ವೇಳೆ ಮಾತನಾಡಿದ ಕನ್ನಡ ಸೇನೆಯ ಅಧ್ಯಕ್ಷ ಧನಿಯಕುಮಾರ್,ಕುಣಿಗಲ್ ತಾಲೂಕು ಅಮೃತೂರಿನಲ್ಲಿ ಹುಟ್ಟಿದ ಡಾ.ಹೆಚ್.ಎಮ್.ಗಂಗಾಧರಯ್ಯ ಸ್ವಾತಂತ್ರ ಪೂರ್ವದಲ್ಲಿ ಮಹಾತ್ಮಗಾಂಧಿ, ವಿನೋಭಾ ಭಾವೆ ಅವರ ಕರೆಗಳಿಗೆ ಓಗಟ್ಟು, ಅನೇಕ ಸಮಾಜಮುಖಿ ಕೆಲಸಗಳಲ್ಲಿ ತೊಡಗಿ,ಗ್ರಾಮೀಣ ಭಾಗದ ಬಡ,ದಲಿತ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬ ಆಶಯದೊಂದಿಗೆ ಸನಿವಾಸ ಪ್ರೌಢಶಾಲೆಯೊಂದನ್ನು ಆರಂಭಿಸಿ,ಹAತ ಹಂತವಾಗಿ ಶಾಲಾ, ಕಾಲೇಜುಗಳ ಜೊತೆಗೆ, ಮೆಡಿಕಲ್, ಇಂಜನಿಯರಿAಗ್ ಕಾಲೇಜುಗಳನ್ನು ಸ್ಥಾಪನೆ ಮಾಡಿ ಲಕ್ಷಾಂತರ ಮಕ್ಕಳಿಗೆ ಶಿಕ್ಷಣ ಒದಗಿಸಿದ್ದಾರೆ ಎಂದರು. ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ ಮಾತನಾಡಿ,ದಲಿತ ಸಮುದಾಯದಲ್ಲಿ ಹುಟ್ಟಿ,ತಮ್ಮಂತೆಯೇ ಸಮುದಾಯದ ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬ ಮಹದಾಸೆಯಿಂದ ಹಲವಾರು ಶ್ರೀಸಿದ್ದಾರ್ಥ ಶಿಕ್ಷಣ ಸಂಸ್ಥೆ ಸ್ಥಾಪಿಸಿ ಲಕ್ಷಾಂತರ ಮಕ್ಕಳಿಗೆ ಶಿಕ್ಷಣ ನೀಡಿ ಅವರು ಸ್ವಾವಲಂಬಿ ಬದುಕು ರೂಪಿಸಿಕೊಳ್ಳಲು ಕಾರಣರಾಗಿದ್ದಾರೆ.ಹಾಗಾಗಿ ಅವರ ಹೆಸರನ್ನು ನೂತನ ಕ್ಯಾಂಪಸ್‌ಗೆ ಇಡಬೇಕೆಂಬುದು ನಮ್ಮ ಒತ್ತಾಯವಾಗಿದೆ ಎಂದರು.

ಈ ವೇಳೆ ಮುಖಂಡರಾದ ಪಿ.ಎನ್.ರಾಮಯ್ಯ, ಪ್ರಕಾಶ್ ಚಕ್ರವರ್ತಿ, ಕನ್ನಡ ಪ್ರಕಾಶ್, ಸತೀಶ್, ಉಮೇಶ್,ಕೋಮಲ ವೀರಭದ್ರಯ್ಯ, ಆದಿಲ್ ಪಾಷ ,ಮಹೇಶ್ , ರಾಮಣ್ಣ, ಹಿಂದುಳಿದ ಸಮುದಾಯಗಳ ಒಕ್ಕೂಟದ ಮುಖಂಡರಾದ ಕೆಂಪರಾಜು, ಮಂಜೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

(Visited 1 times, 1 visits today)