ತುಮಕೂರು:


ಹಲವಾರು ವರ್ಷಗಳಿಂದ ತಮ್ಮ ಸ್ವತ್ತಿನ ಹೆಸರು ತಿದ್ದುಪಡಿ, ಅಳತೆಯಲ್ಲಿನ ವೆತ್ಯಾಸ, ಜನನ, ಮರಣ ಪತ್ರದಲ್ಲಿ ದಿನಾಂಕ, ಹೆಸರು ತಿದ್ದುಪಡಿ, ನಲ್ಲಿ, ಮನೆ ಕಂದಾಯ, ಯುಜಿಡಿ ಸಂಪರ್ಕ ಸೇರಿದಂತೆ ಹಲವು ಸೇವೆಯನ್ನು ತ್ವರಿತವಾಗಿ ಜನರಿಗೆ ಒದಗಿಸುವ ಉದ್ದೇಶದಿಂದ ಪಾಲಿಕೆವತಿಯಿಂದ ತ್ವರಿತ ಸೇವೆ ಆಭಿಯಾನವನ್ನು ಪಾಲಿಕೆ ಆವರಣದಲ್ಲಿ ಹಮ್ಮಿಕೊಂಡಿದ್ದು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಆಯುಕ್ತರಾದ ಆಶ್ವಿಜ ತಿಳಿಸಿದ್ದಾರೆ.
ಅಭಿಯಾನದ ಮೇಲುಸ್ತುವಾರಿ ವಹಿಸಿಕೊಂಡು ಸ್ತಳದಲ್ಲಿಯೇ ಹಾಜರಿದ್ದು ಸಿಬ್ಬಂದಿಗಳಿಗೆ ಮಾರ್ಗದರ್ಶನ ನೀಡುತ್ತಿದ್ದ ಆಯುಕ್ತರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ,ಹತ್ತಾರು ವರ್ಷಗಳಿಂದ ತಮ್ಮ ಆಸ್ತಿ, ಜನನ, ಮರಣ ಪತ್ರಗಳಲ್ಲಿ ಆಗಿರುವ ಸಣ್ಣ, ಪುಟ್ಟ ತಪ್ಪುಗಳಿಂದ ಜನರು ಸಾಕಷ್ಟು ತೊಂದರೆ ಅನುಭವಿಸುತಿದ್ದಾರೆ. ಇಂತಹವರಿಗೆ ಅನುಕೂಲವಾಗಲೆಂದು ಈ ಅಭಿಯಾನವನ್ನು ಆಯೋಜಿಸಲಾಗಿದೆ ಎಂದರು.
ಇAದು ಪಾಲಿಕೆಯ ಅವರಣದಲ್ಲಿ ೬ ಕೌಂಟರ್‌ಗಳನ್ನು ತೆರೆದು,ಜನನ,ಮರಣ,ಅಳತೆಯಲ್ಲಿನ ವೆತ್ಯಾಸ,ಮತದಾರರ ನೊಂದಣಿ, ನಲ್ಲಿ ಮತ್ತು ಯುಜಿಡಿ ಸಮಪರ್ಕ,ಟ್ರೆಡ್ ಲೈಸನ್ಸ್ಗೆ ಸಂಬAಧಿಸಿದAತೆ ದಾಖಲೆಗಳ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ.ಹಿರಿಯ ನಾಗರಿಕರಿಗೆ ಪ್ರತ್ಯೇಕ ಲೈನ್ ಮಾಡಿ,ತ್ವರಿತವಾಗಿ ಅವರ ಕೆಲಸಗಳನ್ನು ಪೂರೈಸಿಕೊಡಲಾಗುತ್ತಿದೆ. ಮರುಪರಿಶೀಲನೆ ಇರುವ ಕೆಲಸಗಳನ್ನು ನಿಗಧಿತ ಅವಧಿಯೊಳಗೆ ಪೂರೈಸಲು ಎಲ್ಲ ಕ್ರಮಗಳನ್ನು ಪಾಲಿಕೆ ವತಿಯಿಂದ ತೆಗೆದು ಕೊಳ್ಳಲಾಗುವುದು.ಇದೇ ರೀತಿ ಮುಂದಿನ ದಿನಗಳಲ್ಲಿ ಪ್ರತಿತಿಂಗಳ ೨ ಮತ್ತು ೪ನೇ ಶುಕ್ರವಾರ ನಡೆಸುವಂತೆ ಸಾರ್ವಜನಿಕರಿಂದ ಮನವಿ ಮುಂದೆ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ತಿಳಿಸಿದರು.
ಮೇಯರ್ ಶ್ರೀಮತಿ ಪ್ರಭಾವತಿ ಸುಧೀಶ್ವರ್ ಮಾತನಾಡಿ, ಆಯುಕ್ತರು ಮತ್ತು ಅಧಿಕಾರಿಗಳ ಜೊತೆ ನಡೆಸಿದ ಚರ್ಚೆಯಂತೆ ಪಾಲಿಕೆಯಲ್ಲಿ ಇಂದು ತ್ವರಿತ ಸೇವೆ ಆಭಿಯಾನ ಆಯೋಜಿಸಲಾಗಿದೆ. ಬೆಳಗ್ಗೆಯಿಂದ ನೂರಾರು ಜನರು ಕ್ಯೂನಲ್ಲಿ ನಿಂತು ತಮ್ಮ ದಾಖಲಾತಿ ಸರಿಪಡಿಸಿಕೊಳ್ಳಲು ಅರ್ಜಿ ಸಲ್ಲಿಸುತ್ತಿದ್ದಾರೆ.ಯಾವ ವಿಚಾರದ ಬಗ್ಗೆ ಹೆಚ್ಚಿನ ಅರ್ಜಿಗಳು ಬರುತ್ತಿವೆ ಎಂಬುದನ್ನು ಮನಗಂಡು ಮುಂದಿನ ದಿನಗಳಲ್ಲಿ ಐದು ವಾರ್ಡುಗಳಿಗೆ ಒಂದು ದಿನ ಇಂತಹ ಅದಾಲತ್‌ಗಳನ್ನು ಆಯೋಜಿಸಲು ಚಿಂತನೆ ನಡೆಸಿದ್ದು, ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದರು.
ಈ ವೇಳೆ ಪಾಲಿಕೆಯ ಉಪಮೇಯರ್ ಟಿ.ಕೆ.ನರಸಿಂಹಮೂರ್ತಿ,ಪಾಲಿಕೆಯ ಸದಸ್ಯರುಗಳು ಉಪಸ್ಥಿತರಿದ್ದರು.

(Visited 1 times, 1 visits today)