ತುಮಕೂರು : ಭೂಮಿಯ ಮೇಲ್ಮೈ ಮತ್ತು ಒಳಗಿರಬಹುದಾದ ರಚನೆಗಳನ್ನು ವೈಜ್ಞಾನಿಕವಾಗಿ ತಿಳಿದುಕೊಂಡು ಸೂಕ್ತ ಪ್ರದೇಶಗಳಲ್ಲಿ ಕಾಮಗಾರಿಗಳನ್ನು ಅನುಷ್ಟಾನ ಮಾಡಲು ಜಿಐಎಸ್ ತಂತ್ರಜ್ಞಾನವು ತುಂಬಾ ಸಹಕಾರಿಯಾಗಿದೆ ಎಂದು ಜಿಲ್ಲಾ ಪಂಚಾಯತ್ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರಸ್ವಾಮಿ ಜಿ.ಎಂ ತಿಳಿಸಿದರು. ಜಿಲ್ಲಾ ಪಂಚಾಯಿತಿಯಲ್ಲಿಂದು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಜಿ.ಐ.ಎಸ್ ಆಧಾರಿತ ಕ್ರಿಯಾ ಯೋಜನೆ ತಯಾರಿಸುವ ಬಗ್ಗೆ ತುಮಕೂರು, ಬೆಂಗಳೂರು ಗ್ರಾಮಾಂತರ, ಹಾಸನ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ನರೇಗಾ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಸಹಾಯಕ ನಿರ್ದೇಶಕರು(ಗ್ರಾ.ಉ), ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕರುಗಳಿಗಾಗಿ ಜಿ.ಐ.ಎಸ್ ಆಧಾರಿತ ಕ್ರಿಯೋಯೋಜನೆ ತಯಾರಿಸುವ ಕುರಿತು ಹಮ್ಮಿಕೊಂಡಿದ್ದ 4 ದಿನಗಳ ಪ್ರಾಯೋಗಿಕ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ತರಬೇತಿ ಕಾರ್ಯಕ್ರಮದಲ್ಲಿ ಶ್ರದ್ಧೆಯಿಂದ ಭಾಗವಹಿಸಿ ಸಂಪನ್ಮೂಲ ವ್ಯಕ್ತಿಗಳು ವಿವರಿಸುವ ತಾಂತ್ರಿಕ ಸಲಹೆಗಳನ್ನು ಕಲಿತು ತಮ್ಮ…
ಮುಂದೆ ಓದಿ...Day: February 17, 2021
“ಬಾಲಕಾರ್ಮಿಕ ಮುಕ್ತ ನಡೆ ತುಮಕೂರು ಕಡೆ” ಡಿಸಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ
ತುಮಕೂರು : ತುಮಕೂರು ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸುವ ಉದ್ದೇಶದಿಂದ “ಬಾಲ ಕಾರ್ಮಿಕ ಮುಕ್ತ ನಡೆ ತುಮಕೂರು ಕಡೆ” ಎಂಬ ಘೋಷ ವಾಕ್ಯದೊಂದಿಗೆ ಫೆಬ್ರವರಿ 26ರಂದು ನಡೆಯುವ ಉದ್ಘಾಟನಾ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿಂದು ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಫೆಬ್ರವರಿ 26ರಂದು ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರು ಉದ್ಘಾಟಿಸಲಿದ್ದಾರೆ. ಶಿಷ್ಟಾಚಾರದಂತೆ ಆಹ್ವಾನಪತ್ರಿಕೆಯನ್ನು ಮುದ್ರಿಸಿ ಗಣ್ಯರಿಗೆ ವಿತರಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂದು ಅವರು ನಿರ್ದೇಶಿಸಿದರು. ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಕೊರೊನಾ ನಿಯಮಾವಳಿಯನ್ನು ಪಾಲಿಸಬೇಕು. ಕಾರ್ಯಕ್ರಮದ ಸಂಪೂರ್ಣ ಯಶಸ್ವಿಗೆ ರೂಪುರೇಷೆಗಳನ್ನು ಸಿದ್ದಪಡಿಸಿಕೊಳ್ಳಬೇಕು. ಆ ಮಾದರಿಯಲ್ಲಿಯೇ ಕಾರ್ಯಕ್ರಮ ನಡೆಸಿ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು. ತುಮಕೂರು ನಗರದಲ್ಲಿ…
ಮುಂದೆ ಓದಿ...