BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಜಾತಿ ನಿಂದನೆ ಕಾಯಿದೆಯನ್ನು ಸ್ವಾರ್ಥಕ್ಕೆ ಬಳಸಿಕೊಳ್ಳಲಾಗುತ್ತಿದೆ
  • ಕಾಂಗ್ರೆಸ್ ಸರ್ಕಾರ ಜನರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲ
  • ಕೈಗಾರಿಕಾ ಪ್ರದೇಶಗಳ ಸುರಕ್ಷತೆಗಾಗಿ ಅಗತ್ಯ ಕ್ರಮ
  • ೫.೬೧ ಕೋಟಿ ಮೊತ್ತದ ವಸ್ತು ಜಪ್ತಿ
  • ತುಮಕೂರು ಜಿಲ್ಲೆಗೆ ಭವ್ಯವಾದ ಸಾಹಿತ್ಯದ ಇತಿಹಾಸವಿದೆ
  • ತುರುವೇಕೆರೆ: ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ
  • ಜಿಪಂ, ತಾಪಂ, ಬಿಬಿಎಂಪಿ ಚುನಾವಣೆಗಳನ್ನು ನಡೆಸಲು ಸರ್ಕಾರ ನಿರ್ಧಾರ ಕೈಗೊಳ್ಳಲಿ
  • ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಆರ್.ಟಿ.ಇ. ಕಾಯ್ದೆಯಡಿ ದಾಖಲಾದ ಮಕ್ಕಳನ್ನು ಬೇಧ-ಭಾವದಿಂದ ಕಾಣುತ್ತಿರುವುದು ಆತಂಕಕಾರಿ
Trending

ಆರ್.ಟಿ.ಇ. ಕಾಯ್ದೆಯಡಿ ದಾಖಲಾದ ಮಕ್ಕಳನ್ನು ಬೇಧ-ಭಾವದಿಂದ ಕಾಣುತ್ತಿರುವುದು ಆತಂಕಕಾರಿ

By News Desk BenkiyabaleUpdated:February 26, 2021 7:26 pm

ತುಮಕೂರು : 

      ಖಾಸಗಿ ಶಾಲೆಗಳಲ್ಲಿ ಆರ್.ಟಿ.ಇ. ಮೂಲಕ ದಾಖಲಾದ ಮಕ್ಕಳನ್ನು ಬೇಧ-ಭಾವದಿಂದ ಕಾಣುತ್ತಿರುವುದು ಆತಂಕಕಾರಿ ವಿಷಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್ ಅಭಿಪ್ರಾಯಪಟ್ಟರು.

ನಗರದ ಎಂಪ್ರೆಸ್ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸರ್ಕಾರಿ/ ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳ ಮುಖ್ಯಸ್ಥರು, ಸಮಾಲೋಚಕರು, ಸಾಂತ್ವಾನ ಕೇಂದ್ರಗಳ ಮುಖ್ಯಸ್ಥರು, ಸಮಾಲೋಚಕರುಗಳಿಗೆ ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಪಾತ್ರ ಹಾಗೂ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಒದಗಿಸಬೇಕಾದ ಸೌಲಭ್ಯಗಳ ಕುರಿತು ಇತ್ತೀಚೆಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಖಾಸಗಿ ಶಾಲೆಗಳಲ್ಲಿ ಆರ್.ಟಿ.ಇ. ಮುಖಾಂತರ ಮಕ್ಕಳನ್ನು ದಾಖಲು ಮಾಡಿಕೊಳ್ಳುವಲ್ಲಿ ಆಗುತ್ತಿರುವ ತೊಂದರೆ ಹಾಗೂ ಆರ್.ಟಿ.ಇ ಕಾಯ್ದೆಯಡಿ ದಾಖಲಾದ ಮಕ್ಕಳಿಗೆ ಭೇದ-ಭಾವ ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇದು ಆತಂಕಕಾರಿ ವಿಷಯವಾಗಿದೆ. ಶಾಲೆಯಲ್ಲಿ ಎಲ್ಲಾ ಮಕ್ಕಳನ್ನು ಸಮಾನವಾಗಿ ಕಾಣಬೇಕು ಎಂದು ತಿಳಿಸಿದರಲ್ಲದೆ, ಪೊಕ್ಸೊ ಕಾಯ್ದೆ ಬಗ್ಗೆ ವiಕ್ಕಳಿಗೆ ಹೆಚ್ಚಿನ ಅರಿವು ಮೂಡಿಸಿ ಅಪರಾಧ ನಡೆಯದಂತೆ ಹಾಗೂ ಅಪರಾಧ ನಡೆದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಆಗುವಂತೆ ಕ್ರಮವಹಿಸುವ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು. ಈಗಲೂ ಕೆಲವು ಮಕ್ಕಳಿಗೆ ಜನನ ಪ್ರಮಾಣ ಪತ್ರ ದೊರೆಯದೇ ಕೋರ್ಟ್ ಮುಖಾಂತರ ಪಡೆಯುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಮಕ್ಕಳಿಗೆ ಜನನ ಪ್ರಮಾಣ ಪತ್ರ ನೀಡಲು ಸೂಕ್ತ ಕ್ರಮವಹಿಸಬೇಕು ಎಂದು ತಿಳಿಸಿದರು.

      ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಅಶೋಕ್ ಯರಗಟ್ಟಿ ಅವರು ಮಾತನಾಡುತ್ತಾ, ಮಕ್ಕಳ ರಕ್ಷಣೆಗಾಗಿ ಕಾನೂನುಗಳು ರಚನೆಯಾಗಿದ್ದು, ಕಾನೂನುಗಳ ಪಾಲನೆ ಮತ್ತು ಅನುಷ್ಟಾನ ಪ್ರಮುಖ ವಿಷಯವಾಗಿರುತ್ತದೆ. ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಮಕ್ಕಳಿಗೆ ಒದಗಿಸಬೇಕಾದ ಅಗತ್ಯ ಮೂಲಭೂತ ಸೌಲಭ್ಯಗಳನ್ನು ನೀಡುವುದರ ಜೊತೆಗೆ ಅಗತ್ಯ ದಾಖಲೆಗಳನ್ನು ಸಹ ನಿರ್ವಹಣೆ ಮಾಡಬೇಕು ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಟರಾಜು ಎಸ್. ಮಾತನಾಡುತ್ತಾ, ತುಮಕೂರು ಜಿಲ್ಲೆಯಲ್ಲಿ ಈ ಹಿಂದೆ ಒಟ್ಟು 32 ನಿರ್ಗತಿಕ ಕುಟೀರಗಳಿದ್ದು, ಮಕ್ಕಳಿಗೆ ಕನಿಷ್ಠ ಸೌಲಭ್ಯಗಳನ್ನು ಒದಗಿಸದೇ ಇರುವುದರಿಂದ ಹಲವಾರು ಕುಟೀರಗಳನ್ನು ಸ್ಥಗಿತಗೊಳಿಸಲಾಗಿದೆ. ಪ್ರಸ್ತುತ 13 ಕುಟೀರಗಳನ್ನು ನಡೆಸಲು ಮಾತ್ರ ಅನುಮತಿ ನೀಡಲಾಗಿದೆ. ನಿರ್ಗತಿಕ ಮಕ್ಕಳ ಕುಟೀರಗಳನ್ನು ಸರ್ಕಾರಿ ಅನುದಾನಕ್ಕಾಗಿ ನಡೆಸದೇ, ಮಕ್ಕಳಿಗೆ ಗುಣಮಟ್ಟದ ಆಹಾರ ಮತ್ತು ಇತರೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕೆಂದು ತಿಳಿಸಿದರು.

ಸರ್ಕಾರಿ ಪದವಿ ಪೂರ್ವ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಜಯಶೀಲ ಮಾತನಾಡುತ್ತಾ, ಮಕ್ಕಳ ಪಾಲನಾ ಸಂಸ್ಥೆಗಳು ಸಮಾಜಮುಖಿ ಮನೋಭಾವನೆಯಿಂದ ಮಕ್ಕಳಿಗೆ ಉತ್ತಮ ಭವಿಷ್ಯವನ್ನು ಕಟ್ಟಿಕೊಳ್ಳಲು ಸಹಕಾರಿಯಾಗಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ವಾಸಂತಿ ಉಪ್ಪಾರ್, ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಪಾತ್ರ, ಮಕ್ಕಳ ಪಾಲನಾ ಸಂಸ್ಥೆಗಳು ಹಾಗೂ ಸಾಂತ್ವಾನ ಕೇಂದ್ರಗಳ ಸಮನ್ವಯತೆಯ ಕುರಿತು ಉಪನ್ಯಾಸ ನೀಡಿದರು.
ಮತ್ತೋರ್ವ ಸಂಪನ್ಮೂಲ ವ್ಯಕ್ತಿ ಶಿವಣ್ಣ ಕೆ.ಎಸ್. ರಕ್ಷಣಾಧಿಕಾರಿ (ಅಸಾಂಸ್ಥಿಕ ಸೇವೆ), ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ತುಮಕೂರು ಇವರು ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಒದಗಿಸಬೇಕಾದ ಸೌಲಭ್ಯಗಳು ಮತ್ತು ನಿರ್ವಹಿಸಬೇಕಾದ ದಾಖಲೆಗಳ ಬಗ್ಗೆ ಕುರಿತು ಮಾಹಿತಿ ನೀಡಿದರು.

     ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂಪ್ರೆಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಷಣ್ಮುಖ ವಹಿಸಿದ್ದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ (ಸಾಂಸ್ಥಿಕ ಸೇವೆ) ಗೌತಮ ಎನ್. ನಿರೂಪಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಸರ್ಕಾರಿ ಹಾಗೂ ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳ ಹಾಗೂ ಸಾಂತ್ವಾನ ಕೇಂದ್ರಗಳ ಮುಖ್ಯಸ್ಥರು, ಸಮಾಲೋಚಕರು, ಮಕ್ಕಳ ಸಹಾಯವಾಣಿ ಸಿಬ್ಬಂದಿಯವರು ಮತ್ತು ಸಖಿ ಕೇಂದ್ರದ ಸಿಬ್ಬಂದಿಗಳು ಭಾಗವಹಿಸಿದ್ದರು.

(Visited 50 times, 1 visits today)
Previous Articleತೈಲ ದರ ಏರಿಕೆ ; ಪ್ರಧಾನಿ ಶೀಘ್ರದಲ್ಲಿ ಪರಿಹಾರ ಕಂಡುಕೊಳ್ಳಲಿದ್ದಾರೆ : ವಿ.ಸೋಮಣ್ಣ
Next Article ತುಮಕೂರಿನ ಹೊನ್ನೇನಹಳ್ಳಿಯಲ್ಲಿ ವಿಜಯನಗರಕ್ಕೆ ಸೇರಿದ ಶಾಸನ ಪತ್ತೆ
News Desk Benkiyabale

Related Posts

ಜಾತಿ ನಿಂದನೆ ಕಾಯಿದೆಯನ್ನು ಸ್ವಾರ್ಥಕ್ಕೆ ಬಳಸಿಕೊಳ್ಳಲಾಗುತ್ತಿದೆ

June 18, 2025 4:30 pm ತುಮಕೂರು

ಕಾಂಗ್ರೆಸ್ ಸರ್ಕಾರ ಜನರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲ

June 18, 2025 4:28 pm ತುಮಕೂರು

ಕೈಗಾರಿಕಾ ಪ್ರದೇಶಗಳ ಸುರಕ್ಷತೆಗಾಗಿ ಅಗತ್ಯ ಕ್ರಮ

June 18, 2025 4:26 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ಜಾತಿ ನಿಂದನೆ ಕಾಯಿದೆಯನ್ನು ಸ್ವಾರ್ಥಕ್ಕೆ ಬಳಸಿಕೊಳ್ಳಲಾಗುತ್ತಿದೆ

June 18, 2025 4:30 pm
ತುಮಕೂರು

ಕಾಂಗ್ರೆಸ್ ಸರ್ಕಾರ ಜನರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲ

June 18, 2025 4:28 pm
ತುಮಕೂರು

ಕೈಗಾರಿಕಾ ಪ್ರದೇಶಗಳ ಸುರಕ್ಷತೆಗಾಗಿ ಅಗತ್ಯ ಕ್ರಮ

June 18, 2025 4:26 pm
ತುಮಕೂರು

೫.೬೧ ಕೋಟಿ ಮೊತ್ತದ ವಸ್ತು ಜಪ್ತಿ

June 18, 2025 4:25 pm
ತುಮಕೂರು

ತುಮಕೂರು ಜಿಲ್ಲೆಗೆ ಭವ್ಯವಾದ ಸಾಹಿತ್ಯದ ಇತಿಹಾಸವಿದೆ

June 16, 2025 3:18 pm
ತುಮಕೂರು

ತುರುವೇಕೆರೆ: ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ

June 16, 2025 3:00 pm
Our Youtube Channel
Our Picks

ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ

June 16, 2025 2:21 pm

ಶೋಷಿತರಲ್ಲಿ ಹೋರಾಟದ ಕಿಚ್ಚು ಹತ್ತಿಸಿದವರು ಪ್ರೊ.ಬಿ.ಕೃಷ್ಣಪ್ಪ

June 16, 2025 1:56 pm

ಸಾರ್ವಜನಿಕರು ಸರ್ಕಾರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ

June 05, 2025 2:29 pm

ನಗರದಲ್ಲಿ ಪ್ರಾದೇಶಿಕ ತೆಂಗು ಅಭಿವೃದ್ಧಿ ಮಂಡಳಿ ಕಚೇರಿ ತೆರೆಯಿರಿ

May 31, 2025 3:29 pm

ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ

May 29, 2025 4:18 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ಜಾತಿ ನಿಂದನೆ ಕಾಯಿದೆಯನ್ನು ಸ್ವಾರ್ಥಕ್ಕೆ ಬಳಸಿಕೊಳ್ಳಲಾಗುತ್ತಿದೆ

By News Desk BenkiyabaleJune 18, 2025 4:30 pm

ತುರುವೇಕೆರೆ: ಜಾತಿ ನಿಂದನೆ ಕಾಯಿದೆಯನ್ನು ತಾಲೂಕಿನ. ಕೆಲವು ದಲಿತ ಮುಖಂಡರು ತಮ್ಮ ಸ್ವಾರ್ಥಕ್ಕೆ ಬಳಸಿಕೊಳ್ಳುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಹಾಳು…

ಕಾಂಗ್ರೆಸ್ ಸರ್ಕಾರ ಜನರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲ

June 18, 2025 4:28 pm

ಕೈಗಾರಿಕಾ ಪ್ರದೇಶಗಳ ಸುರಕ್ಷತೆಗಾಗಿ ಅಗತ್ಯ ಕ್ರಮ

June 18, 2025 4:26 pm

೫.೬೧ ಕೋಟಿ ಮೊತ್ತದ ವಸ್ತು ಜಪ್ತಿ

June 18, 2025 4:25 pm
News by Date
June 2025
M T W T F S S
 1
2345678
9101112131415
16171819202122
23242526272829
30  
« May    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.