BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬಿಸಿಯೂಟ ನೌಕರರನ್ನು ಸರಕಾರದ ಕಾರ್ಮಿಕರೆಂದು ಪರಿಗಣಿಸಿ
  • ಶಿಕ್ಷಣ ವ್ಯಾಪಾರ ಕ್ಷೇತ್ರವಾಗಿರುವುದು ಅಘಾತಕಾರಿ ಸಂಗತಿ
  • ಜಿಲ್ಲೆಯಲ್ಲಿ 40ಸಾವಿರಕ್ಕೂ ಹೆಚ್ಚು ಆಗ್ನೇಯ ಪದವೀಧರರು ಮತದಾರರ ಪಟ್ಟಿಗೆ ಸೇರ್ಪಡೆ: ಜಿಲ್ಲಾಧಿಕಾರಿ ಹೇಳಿಕೆ
  • ಮೈಸೂರು ವಿಭಾಗ ಅನುಮತಿಸಿದರೆ ಮಂಗಳೂರಿಗೆ ನೇರ ರೈಲು: ಭರವಸೆ
  • ಅರಣ್ಯ ಇಲಾಖೆಯ ಅಧಿಕಾರಿಗಳ ಕ್ರಮ ಖಂಡಿಸಿ ರೈತರು, ಮಹಿಳೆಯರಿಂದ ಪ್ರತಿಭಟನೆ
  • ಡಿ.29, 30ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
  • ಶಾಲಾ ಅವರಣದಲ್ಲಿ ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ನೀಡಿ: ಸಧಿಕಾರಿಗಳಿಗೆ ಡಾ: ತಿಪ್ಪೇಸ್ವಾಮಿ ಕೆ.ಟಿ.
  • ‘ಯುವ ಪೀಳಿಗೆಯ ಕೈಯಲ್ಲಿ ಸಂವಿಧಾನದ ಭವಿಷ್ಯ’
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರಿನ ಹೊನ್ನೇನಹಳ್ಳಿಯಲ್ಲಿ ವಿಜಯನಗರಕ್ಕೆ ಸೇರಿದ ಶಾಸನ ಪತ್ತೆ
Trending

ತುಮಕೂರಿನ ಹೊನ್ನೇನಹಳ್ಳಿಯಲ್ಲಿ ವಿಜಯನಗರಕ್ಕೆ ಸೇರಿದ ಶಾಸನ ಪತ್ತೆ

By News Desk BenkiyabaleUpdated:February 26, 2021 7:35 pm

ತುಮಕೂರು:

     ತುಮಕೂರು ನಗರಕ್ಕೆ ಸಮೀಪದ ಹೊನ್ನೇನಹಳ್ಳಿಯಲ್ಲಿ ವಿಜಯನಗರ ಸಾಮ್ರಾಜ್ಯವನ್ನು ಆಳಿದ ಕೃಷ್ಣದೇವರಾಯ ಕಾಲಮಾನವಾದ ನಿಖರವಾದ ದಿನಾಂಕವನ್ನು ಸ್ಪಷ್ಟಪಡಿಸುವ ಶಾಸನವೊಂದು ಪತ್ತೆಯಾಗಿದೆ.

       ಕ್ರಿಸ್ತಶಕ 1336ರಲ್ಲಿ ಹಕ್ಕ,ಬುಕ್ಕರಿಂದ ಆರಂಭವಾದ ವಿಜಯನಗರ ಸಾಮ್ರಾಜ್ಯದ ಶ್ರೀಕೃಷ್ಣ ದೇವರಾಯನ ಸಾವಿನ ಕುರಿತಾದ ನಿಖರತೆ ಇದುವರೆಗೂ ಇತಿಹಾಸಕಾರರಿಗೆ ಲಭ್ಯವಾಗಿರಲಿಲ್ಲ.ಹೊನ್ನೇನಹಳ್ಳಿಯಲ್ಲಿ ದೊರೆತ್ತಿರುವ ಈ ಶಾಸನದಲ್ಲಿ ಶಾಲಿವಾಹನ ಶಕ ವಿರೋಧಿ ನಾಮ ಸಂವತ್ಸರ 1452ರ ಕಾರ್ತಿಕ ಶುದ್ದ15 ಎಂದರೆ ಕ್ರಿಸ್ತಶಕ 1529ರ ಅಕ್ಟೋಬರ್ 17 ರಂದು ಶ್ರೀಕೃಷದೇವರಾಯರು ಆಸ್ತಮರಾಗಿರುತ್ತಾರೆ ಎಂದು ನಮೂದಿಸಿದ್ದು,ಈ ಸಂಬಂಧ ತುಮಕೂರು ಸೀಮೆಯ ತಿಮ್ಮಣ್ಣ ನಾಯಕರಿಗೆ ತುಮಕೂರು ವೀರಪ್ರಸನ್ನ ಹನುಮಂತ ದೇವರ ಪೂಜೆಗಾಗಿ ಧಾರೆ ಎರೆದು ಕೊಟ್ಟಿರುವುದಾಗಿದೆ.

       15 ಸಾಲುಗಳನ್ನು ಒಳಗೊಂಡಿರುವ ಶಾಸನದಲ್ಲಿ ಪ್ರಮುಖವಾಗಿ ಚರ್ಚಿಸಲಾಗಿರುವ ಅಂಶವೆನೆಂದರೆ, ಶುಭಮಸ್ತು, ಸ್ವಸ್ತಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕವರುಷ 1452ನೇ ವಿರೋಧಿ ಸಂವತ್ಸರದ ಕಾರ್ತೀಕ ಶು 15ಲೂ ಶ್ರೀ ಶ್ರೀ ಶ್ರೀಮಂನ್ಮಹಾರಾಜಾಧಿರಾಜ, ರಾಜಪರಮೇಶ್ವರ ಶ್ರೀವೀರಪ್ರತಾಪ ಶ್ರೀ ವೀರಕೃಷ್ಣ ಮಹಾರಾಯರು ಯೀ ತಥಾ ತಿಥಿಯಲು ಅಸ್ತಮಯರಾಗಿ(ರ)ಲಾಗಿ, ಪೆನುಗುಂಡೆ ರಾಜ್ಯದ ಆನೆಬಿದ್ದಸರಿಯಸ್ತಳದ ಮರುಗಲು ನಾಡೊಳಗಣ ತುಮಕೂರು ಸೀಮೆಯಳಗಣ ಹೊಂನೇನಹಳ್ಳಿ ಗ್ರಾಮವನ್ನು ತುಮಕೂರು ಸೀಮೆ ಗೌಡ ಪ್ರಜೆಗಳು(ತಿಮ್ಮಣ್ಣ) ನಾಯಕರೂ, ಅವರ ಕಾರ್ಯಕೆ ಕರ್ತರಾದ ತುಮಕೂರು ವೀರ ಪ್ರಸಂನ ಹನುಮಂತವರ ಪೂಜೆಗೆ ಧಾರೆ ಎರೆದು ಎಂಬುದಾಗಿದೆ.15 ಸಾಲುಗಳಲ್ಲಿ 12 ಸಾಲುಗಳು ಮಾತ್ರ ಸ್ಪಷ್ಟವಾಗಿ ಗೋಚರವಾಗುತ್ತಿದ್ದು, ಉಳಿದ ಮೂರು ಸಾಲುಗಳು ಭೂಮಿಯಲ್ಲಿ ಹೂತು ಹೋಗಿದ್ದು, ಹೊರೆ ತೆಗೆದು ಓದಬೇಕಾಗಿದೆ.

      ಶಾಸನದ ಮೇಲ್ಬಾಗದಲ್ಲಿ ಶಂಖ, ಚಕ್ರಗಳ ನಡುವೆ ಆಂಜನೇಯನ ಉಬ್ಬು ಚಿತ್ರವಿದ್ದು,ಸೂರ್ಯ ಚಂದ್ರರ ಗುರುತುಗಳು ಇವೆ.ಶಿಲೆಯ ಹಿಂಭಾಗದಲ್ಲಿ ಮಾರುತಿಯ ಚಿತ್ರವಿದ್ದು, ಬಾಲದಲ್ಲಿ ಗಂಟೆಯಿದೆ. ಇದುವರೆಗಿನ ವಿಜಯನಗರ ಇತಿಹಾಸವನ್ನು ಕೆದಕಿದಾಗ ಶ್ರೀಕೃಷ್ಣದೇವರಾಯ ಮರಣ ಕಾಲವನ್ನು 1529ರ ಅಕ್ಟೋಬರ್ ಅಥವಾ ನವೆಂಬರ್ ಎಂದು ಅಂದಾಜಿಸಲಾಗಿತ್ತು.ತುಮಕೂರು ನಗರ ಸಮೀಪದ ಹೊನ್ನೇನಹಳ್ಳಿಯ ಶಾಸಕ ಶ್ರೀಕೃಷ್ಣದೇವರಾಯ ಕಾಲವಾದ ದಿನವನ್ನು 1529 ಅಕ್ಟೋಬರ್ 17 ರಂದು ಸ್ಪಷ್ಟಪಡಿಸಿದಂತಾಗುತ್ತದೆ.  

      ಈ ಕುರಿತು ಮಾತನಾಡಿದ ಹಿರಿಯ ಇತಿಹಾಸ ವಿದ್ವಾಂಸ ಡಾ.ಕೆ.ಆರ್.ನರಸಿಂಹನ್,ಬಿ.ಎಂ.ಟಿ.ಸಿಯಲ್ಲಿ ವೃತ್ತಿಯಲ್ಲಿ ಚಾಲಕರಾಗಿರುವ ಕೆ.ಧನಪಾಲ್ ಎಂಬುವವರಿಂದ ನನಗೆ ಈ ಶಾಸನ ಇರುವ ಬಗ್ಗೆ ಮಾಹಿತಿ ದೊರೆತ್ತಿದ್ದು, ಕಳೆದ ಒಂದು ವಾರದಿಂದ ಅದನ್ನು ಅಧ್ಯಯನ ಮಾಡಿದಾಗ ಮೇಲಿನ ಅಂಶ ಕಂಡುಬಂದಿದೆ.ಶಾಸನ ಸುಸ್ಥಿತಿಯಲ್ಲಿದೆ.ಹನುಮಂತ ದೇವರ ಚಿತ್ರವಿರುವ ಕಾರಣ, ಬಯಲು ಹನುಮಂತರಾಯ ಎಂಬ ಹೆಸರಿನಲ್ಲಿ ಈ ಶಾಸನಕ್ಕೆ ಪೂಜೆ ಸಲ್ಲಿಸಲಾಗುತ್ತಿದೆ. ಇದು ಕ್ರಿಸ್ತಶಕ 1450ರ ಅಸುಪಾಸಿನಲ್ಲಿ ನಿರ್ಮಾಣಗೊಂಡಿರುವ ಗೋಪಾಲ ಕೃಷ್ಣ,ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿದೆ.ಇದರ ಮೇಲೆ ಹೆಚ್ಚಿನ ಅಧ್ಯಯನಗಳು ನಡೆದರೆ,ವಿಜಯನಗರದ ಅರಸರ ಕುರಿತ ಇನಷ್ಟು ನಿಖರ ಮಾಹಿತಿ ದೊರೆಯಬಹುದಾಗಿದೆ ಎಂದರು.

      ಬಿ.ಎಂ.ಟಿ.ಸಿ ಚಾಲಕರಾದ ಕೆ.ಧನಪಾಲ್ ಮಾತನಾಡಿ, ನನಗೆ ಶಾಸನಗಳು,ಗಣ್ಯರ ಸಮಾಧಿಗಳನ್ನು ವೀಕ್ಷಿಸುವುದು ಹವ್ಯಾಸ. ಕಳೆದ ಒಂದು ವರ್ಷದ ಹಿಂದೆ ತುಮಕೂರಿನ ಹೊನ್ನೇನಹಳ್ಳಿಯಲ್ಲಿ ಹಿರಿಯ ನಟಿ ದಿವಂಗತ ಮಂಜುಳ ಅವರ ಸಮಾಧಿ ವೀಕ್ಷಿಸಲು ಬಂದಾಗ ಗ್ರಾಮದ ಹಿರಿಯರಾದ ಪರಮೇಶ್ ಎಂಬುವವರು ಈ ಶಾಸನದ ಬಗ್ಗೆ ತಿಳಿಸಿದ್ದರು. ಆದರೆ ಕೋರೋನದಿಂದ ಹೆಚ್ಚಿನ ಗಮನಹರಿಸಲು ಸಾಧ್ಯವಾಗಿರಲಿಲ್ಲ. ಈಗ ಡಾ.ಆರ್.ಕೆ.ನರಸಿಂಹನ್ ಅವರನ್ನು ಕರೆತಂದು ಅದನ್ನು ಓದಿ, ಜನತೆ ತಿಳಿಸಲು ಶ್ರಮವಹಿಸಿದ್ದೇನೆ ಎಂದರು.

(Visited 13 times, 1 visits today)
Previous Articleಆರ್.ಟಿ.ಇ. ಕಾಯ್ದೆಯಡಿ ದಾಖಲಾದ ಮಕ್ಕಳನ್ನು ಬೇಧ-ಭಾವದಿಂದ ಕಾಣುತ್ತಿರುವುದು ಆತಂಕಕಾರಿ
Next Article ಎಲ್ಲಾ ಶಾಲೆ-ಅಂಗನವಾಡಿ ಕೇಂದ್ರಗಳಿಗೆ ಕಡ್ಡಾಯ ಕುಡಿಯುವ ನೀರಿನ ವ್ಯವಸ್ಥೆಗೆ ಸೂಚನೆ
News Desk Benkiyabale

Related Posts

ನಗರದ ವಿವಿಧೆಡೆ ಉಪಲೋಕಾಯುಕ್ತರಿಂದ ಬಿರುಸಿನ ಕಾರ್ಯಾಚರಣೆ

November 15, 2025 4:32 pm ತುಮಕೂರು

ಸಮಾಜದಲ್ಲಿ ತಾಂಡವಾಡುತ್ತಿರುವ ಅಜ್ಞಾನ ಹೋಗಿ ಸುಜ್ಞಾನ ಬರಲಿ: ಸ್ವಾಮೀಜಿ

November 10, 2025 2:20 pm ತುಮಕೂರು

ಅನ್ಯಾಯದ ವಿರುದ್ಧ ಧ್ವನಿ ಎತ್ತುವುದೇ ವಿದ್ಯಾರ್ಥಿಗಳ ಲಕ್ಷಣ

November 10, 2025 2:15 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಬಿಸಿಯೂಟ ನೌಕರರನ್ನು ಸರಕಾರದ ಕಾರ್ಮಿಕರೆಂದು ಪರಿಗಣಿಸಿ

November 28, 2025 3:51 pm
ಇತರೆ ಸುದ್ಧಿಗಳು

ಶಿಕ್ಷಣ ವ್ಯಾಪಾರ ಕ್ಷೇತ್ರವಾಗಿರುವುದು ಅಘಾತಕಾರಿ ಸಂಗತಿ

November 28, 2025 3:49 pm
ಇತರೆ ಸುದ್ಧಿಗಳು

ಜಿಲ್ಲೆಯಲ್ಲಿ 40ಸಾವಿರಕ್ಕೂ ಹೆಚ್ಚು ಆಗ್ನೇಯ ಪದವೀಧರರು ಮತದಾರರ ಪಟ್ಟಿಗೆ ಸೇರ್ಪಡೆ: ಜಿಲ್ಲಾಧಿಕಾರಿ ಹೇಳಿಕೆ

November 28, 2025 3:47 pm
ಇತರೆ ಸುದ್ಧಿಗಳು

ಮೈಸೂರು ವಿಭಾಗ ಅನುಮತಿಸಿದರೆ ಮಂಗಳೂರಿಗೆ ನೇರ ರೈಲು: ಭರವಸೆ

November 28, 2025 3:45 pm
ಇತರೆ ಸುದ್ಧಿಗಳು

ಅರಣ್ಯ ಇಲಾಖೆಯ ಅಧಿಕಾರಿಗಳ ಕ್ರಮ ಖಂಡಿಸಿ ರೈತರು, ಮಹಿಳೆಯರಿಂದ ಪ್ರತಿಭಟನೆ

November 28, 2025 3:43 pm
ಇತರೆ ಸುದ್ಧಿಗಳು

ಡಿ.29, 30ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

November 28, 2025 3:42 pm
Our Youtube Channel
Our Picks

ಬಿಸಿಯೂಟ ನೌಕರರನ್ನು ಸರಕಾರದ ಕಾರ್ಮಿಕರೆಂದು ಪರಿಗಣಿಸಿ

November 28, 2025 3:51 pm

ಶಿಕ್ಷಣ ವ್ಯಾಪಾರ ಕ್ಷೇತ್ರವಾಗಿರುವುದು ಅಘಾತಕಾರಿ ಸಂಗತಿ

November 28, 2025 3:49 pm

ಜಿಲ್ಲೆಯಲ್ಲಿ 40ಸಾವಿರಕ್ಕೂ ಹೆಚ್ಚು ಆಗ್ನೇಯ ಪದವೀಧರರು ಮತದಾರರ ಪಟ್ಟಿಗೆ ಸೇರ್ಪಡೆ: ಜಿಲ್ಲಾಧಿಕಾರಿ ಹೇಳಿಕೆ

November 28, 2025 3:47 pm

ಮೈಸೂರು ವಿಭಾಗ ಅನುಮತಿಸಿದರೆ ಮಂಗಳೂರಿಗೆ ನೇರ ರೈಲು: ಭರವಸೆ

November 28, 2025 3:45 pm

ಅರಣ್ಯ ಇಲಾಖೆಯ ಅಧಿಕಾರಿಗಳ ಕ್ರಮ ಖಂಡಿಸಿ ರೈತರು, ಮಹಿಳೆಯರಿಂದ ಪ್ರತಿಭಟನೆ

November 28, 2025 3:43 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಬಿಸಿಯೂಟ ನೌಕರರನ್ನು ಸರಕಾರದ ಕಾರ್ಮಿಕರೆಂದು ಪರಿಗಣಿಸಿ

By News Desk BenkiyabaleNovember 28, 2025 3:51 pm

ತುಮಕೂರು: ರಾಜ್ಯದ ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಬಿಸಿಯೂಟ ಅಕ್ಷರದಾಸೋಹ ನೌಕರರನ್ನು ಸ್ಕಿಂ ನೌಕರರೆಂದು ಪರಿಗಣಿಸದೆ ಸರಕಾರದ…

ಶಿಕ್ಷಣ ವ್ಯಾಪಾರ ಕ್ಷೇತ್ರವಾಗಿರುವುದು ಅಘಾತಕಾರಿ ಸಂಗತಿ

November 28, 2025 3:49 pm

ಜಿಲ್ಲೆಯಲ್ಲಿ 40ಸಾವಿರಕ್ಕೂ ಹೆಚ್ಚು ಆಗ್ನೇಯ ಪದವೀಧರರು ಮತದಾರರ ಪಟ್ಟಿಗೆ ಸೇರ್ಪಡೆ: ಜಿಲ್ಲಾಧಿಕಾರಿ ಹೇಳಿಕೆ

November 28, 2025 3:47 pm

ಮೈಸೂರು ವಿಭಾಗ ಅನುಮತಿಸಿದರೆ ಮಂಗಳೂರಿಗೆ ನೇರ ರೈಲು: ಭರವಸೆ

November 28, 2025 3:45 pm
News by Date
November 2025
M T W T F S S
 12
3456789
10111213141516
17181920212223
24252627282930
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.