BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ
  • ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ
  • ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ
  • ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು
  • ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ
  • ಸಾರ್ವಜನಿಕ ಹಬ್ಬಗಳಲ್ಲಿ ಡಿಜೆ ಸಂಪೂರ್ಣ ನಿಷೇಧ: ಸಿಐ ಸುರೇಶ್ ಸೂಚನೆ
  • ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ
  • ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರಿನ ಹೊನ್ನೇನಹಳ್ಳಿಯಲ್ಲಿ ವಿಜಯನಗರಕ್ಕೆ ಸೇರಿದ ಶಾಸನ ಪತ್ತೆ
Trending

ತುಮಕೂರಿನ ಹೊನ್ನೇನಹಳ್ಳಿಯಲ್ಲಿ ವಿಜಯನಗರಕ್ಕೆ ಸೇರಿದ ಶಾಸನ ಪತ್ತೆ

By News Desk BenkiyabaleUpdated:February 26, 2021 7:35 pm

ತುಮಕೂರು:

     ತುಮಕೂರು ನಗರಕ್ಕೆ ಸಮೀಪದ ಹೊನ್ನೇನಹಳ್ಳಿಯಲ್ಲಿ ವಿಜಯನಗರ ಸಾಮ್ರಾಜ್ಯವನ್ನು ಆಳಿದ ಕೃಷ್ಣದೇವರಾಯ ಕಾಲಮಾನವಾದ ನಿಖರವಾದ ದಿನಾಂಕವನ್ನು ಸ್ಪಷ್ಟಪಡಿಸುವ ಶಾಸನವೊಂದು ಪತ್ತೆಯಾಗಿದೆ.

       ಕ್ರಿಸ್ತಶಕ 1336ರಲ್ಲಿ ಹಕ್ಕ,ಬುಕ್ಕರಿಂದ ಆರಂಭವಾದ ವಿಜಯನಗರ ಸಾಮ್ರಾಜ್ಯದ ಶ್ರೀಕೃಷ್ಣ ದೇವರಾಯನ ಸಾವಿನ ಕುರಿತಾದ ನಿಖರತೆ ಇದುವರೆಗೂ ಇತಿಹಾಸಕಾರರಿಗೆ ಲಭ್ಯವಾಗಿರಲಿಲ್ಲ.ಹೊನ್ನೇನಹಳ್ಳಿಯಲ್ಲಿ ದೊರೆತ್ತಿರುವ ಈ ಶಾಸನದಲ್ಲಿ ಶಾಲಿವಾಹನ ಶಕ ವಿರೋಧಿ ನಾಮ ಸಂವತ್ಸರ 1452ರ ಕಾರ್ತಿಕ ಶುದ್ದ15 ಎಂದರೆ ಕ್ರಿಸ್ತಶಕ 1529ರ ಅಕ್ಟೋಬರ್ 17 ರಂದು ಶ್ರೀಕೃಷದೇವರಾಯರು ಆಸ್ತಮರಾಗಿರುತ್ತಾರೆ ಎಂದು ನಮೂದಿಸಿದ್ದು,ಈ ಸಂಬಂಧ ತುಮಕೂರು ಸೀಮೆಯ ತಿಮ್ಮಣ್ಣ ನಾಯಕರಿಗೆ ತುಮಕೂರು ವೀರಪ್ರಸನ್ನ ಹನುಮಂತ ದೇವರ ಪೂಜೆಗಾಗಿ ಧಾರೆ ಎರೆದು ಕೊಟ್ಟಿರುವುದಾಗಿದೆ.

       15 ಸಾಲುಗಳನ್ನು ಒಳಗೊಂಡಿರುವ ಶಾಸನದಲ್ಲಿ ಪ್ರಮುಖವಾಗಿ ಚರ್ಚಿಸಲಾಗಿರುವ ಅಂಶವೆನೆಂದರೆ, ಶುಭಮಸ್ತು, ಸ್ವಸ್ತಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕವರುಷ 1452ನೇ ವಿರೋಧಿ ಸಂವತ್ಸರದ ಕಾರ್ತೀಕ ಶು 15ಲೂ ಶ್ರೀ ಶ್ರೀ ಶ್ರೀಮಂನ್ಮಹಾರಾಜಾಧಿರಾಜ, ರಾಜಪರಮೇಶ್ವರ ಶ್ರೀವೀರಪ್ರತಾಪ ಶ್ರೀ ವೀರಕೃಷ್ಣ ಮಹಾರಾಯರು ಯೀ ತಥಾ ತಿಥಿಯಲು ಅಸ್ತಮಯರಾಗಿ(ರ)ಲಾಗಿ, ಪೆನುಗುಂಡೆ ರಾಜ್ಯದ ಆನೆಬಿದ್ದಸರಿಯಸ್ತಳದ ಮರುಗಲು ನಾಡೊಳಗಣ ತುಮಕೂರು ಸೀಮೆಯಳಗಣ ಹೊಂನೇನಹಳ್ಳಿ ಗ್ರಾಮವನ್ನು ತುಮಕೂರು ಸೀಮೆ ಗೌಡ ಪ್ರಜೆಗಳು(ತಿಮ್ಮಣ್ಣ) ನಾಯಕರೂ, ಅವರ ಕಾರ್ಯಕೆ ಕರ್ತರಾದ ತುಮಕೂರು ವೀರ ಪ್ರಸಂನ ಹನುಮಂತವರ ಪೂಜೆಗೆ ಧಾರೆ ಎರೆದು ಎಂಬುದಾಗಿದೆ.15 ಸಾಲುಗಳಲ್ಲಿ 12 ಸಾಲುಗಳು ಮಾತ್ರ ಸ್ಪಷ್ಟವಾಗಿ ಗೋಚರವಾಗುತ್ತಿದ್ದು, ಉಳಿದ ಮೂರು ಸಾಲುಗಳು ಭೂಮಿಯಲ್ಲಿ ಹೂತು ಹೋಗಿದ್ದು, ಹೊರೆ ತೆಗೆದು ಓದಬೇಕಾಗಿದೆ.

      ಶಾಸನದ ಮೇಲ್ಬಾಗದಲ್ಲಿ ಶಂಖ, ಚಕ್ರಗಳ ನಡುವೆ ಆಂಜನೇಯನ ಉಬ್ಬು ಚಿತ್ರವಿದ್ದು,ಸೂರ್ಯ ಚಂದ್ರರ ಗುರುತುಗಳು ಇವೆ.ಶಿಲೆಯ ಹಿಂಭಾಗದಲ್ಲಿ ಮಾರುತಿಯ ಚಿತ್ರವಿದ್ದು, ಬಾಲದಲ್ಲಿ ಗಂಟೆಯಿದೆ. ಇದುವರೆಗಿನ ವಿಜಯನಗರ ಇತಿಹಾಸವನ್ನು ಕೆದಕಿದಾಗ ಶ್ರೀಕೃಷ್ಣದೇವರಾಯ ಮರಣ ಕಾಲವನ್ನು 1529ರ ಅಕ್ಟೋಬರ್ ಅಥವಾ ನವೆಂಬರ್ ಎಂದು ಅಂದಾಜಿಸಲಾಗಿತ್ತು.ತುಮಕೂರು ನಗರ ಸಮೀಪದ ಹೊನ್ನೇನಹಳ್ಳಿಯ ಶಾಸಕ ಶ್ರೀಕೃಷ್ಣದೇವರಾಯ ಕಾಲವಾದ ದಿನವನ್ನು 1529 ಅಕ್ಟೋಬರ್ 17 ರಂದು ಸ್ಪಷ್ಟಪಡಿಸಿದಂತಾಗುತ್ತದೆ.  

      ಈ ಕುರಿತು ಮಾತನಾಡಿದ ಹಿರಿಯ ಇತಿಹಾಸ ವಿದ್ವಾಂಸ ಡಾ.ಕೆ.ಆರ್.ನರಸಿಂಹನ್,ಬಿ.ಎಂ.ಟಿ.ಸಿಯಲ್ಲಿ ವೃತ್ತಿಯಲ್ಲಿ ಚಾಲಕರಾಗಿರುವ ಕೆ.ಧನಪಾಲ್ ಎಂಬುವವರಿಂದ ನನಗೆ ಈ ಶಾಸನ ಇರುವ ಬಗ್ಗೆ ಮಾಹಿತಿ ದೊರೆತ್ತಿದ್ದು, ಕಳೆದ ಒಂದು ವಾರದಿಂದ ಅದನ್ನು ಅಧ್ಯಯನ ಮಾಡಿದಾಗ ಮೇಲಿನ ಅಂಶ ಕಂಡುಬಂದಿದೆ.ಶಾಸನ ಸುಸ್ಥಿತಿಯಲ್ಲಿದೆ.ಹನುಮಂತ ದೇವರ ಚಿತ್ರವಿರುವ ಕಾರಣ, ಬಯಲು ಹನುಮಂತರಾಯ ಎಂಬ ಹೆಸರಿನಲ್ಲಿ ಈ ಶಾಸನಕ್ಕೆ ಪೂಜೆ ಸಲ್ಲಿಸಲಾಗುತ್ತಿದೆ. ಇದು ಕ್ರಿಸ್ತಶಕ 1450ರ ಅಸುಪಾಸಿನಲ್ಲಿ ನಿರ್ಮಾಣಗೊಂಡಿರುವ ಗೋಪಾಲ ಕೃಷ್ಣ,ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿದೆ.ಇದರ ಮೇಲೆ ಹೆಚ್ಚಿನ ಅಧ್ಯಯನಗಳು ನಡೆದರೆ,ವಿಜಯನಗರದ ಅರಸರ ಕುರಿತ ಇನಷ್ಟು ನಿಖರ ಮಾಹಿತಿ ದೊರೆಯಬಹುದಾಗಿದೆ ಎಂದರು.

      ಬಿ.ಎಂ.ಟಿ.ಸಿ ಚಾಲಕರಾದ ಕೆ.ಧನಪಾಲ್ ಮಾತನಾಡಿ, ನನಗೆ ಶಾಸನಗಳು,ಗಣ್ಯರ ಸಮಾಧಿಗಳನ್ನು ವೀಕ್ಷಿಸುವುದು ಹವ್ಯಾಸ. ಕಳೆದ ಒಂದು ವರ್ಷದ ಹಿಂದೆ ತುಮಕೂರಿನ ಹೊನ್ನೇನಹಳ್ಳಿಯಲ್ಲಿ ಹಿರಿಯ ನಟಿ ದಿವಂಗತ ಮಂಜುಳ ಅವರ ಸಮಾಧಿ ವೀಕ್ಷಿಸಲು ಬಂದಾಗ ಗ್ರಾಮದ ಹಿರಿಯರಾದ ಪರಮೇಶ್ ಎಂಬುವವರು ಈ ಶಾಸನದ ಬಗ್ಗೆ ತಿಳಿಸಿದ್ದರು. ಆದರೆ ಕೋರೋನದಿಂದ ಹೆಚ್ಚಿನ ಗಮನಹರಿಸಲು ಸಾಧ್ಯವಾಗಿರಲಿಲ್ಲ. ಈಗ ಡಾ.ಆರ್.ಕೆ.ನರಸಿಂಹನ್ ಅವರನ್ನು ಕರೆತಂದು ಅದನ್ನು ಓದಿ, ಜನತೆ ತಿಳಿಸಲು ಶ್ರಮವಹಿಸಿದ್ದೇನೆ ಎಂದರು.

(Visited 13 times, 1 visits today)
Previous Articleಆರ್.ಟಿ.ಇ. ಕಾಯ್ದೆಯಡಿ ದಾಖಲಾದ ಮಕ್ಕಳನ್ನು ಬೇಧ-ಭಾವದಿಂದ ಕಾಣುತ್ತಿರುವುದು ಆತಂಕಕಾರಿ
Next Article ಎಲ್ಲಾ ಶಾಲೆ-ಅಂಗನವಾಡಿ ಕೇಂದ್ರಗಳಿಗೆ ಕಡ್ಡಾಯ ಕುಡಿಯುವ ನೀರಿನ ವ್ಯವಸ್ಥೆಗೆ ಸೂಚನೆ
News Desk Benkiyabale

Related Posts

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm news

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm news

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm news
ತಾಜಾ ಸುದ್ಧಿಗಳು
news

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm
news

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm
news

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm
news

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm
news

ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ

September 09, 2026 5:34 pm
news

ಸಾರ್ವಜನಿಕ ಹಬ್ಬಗಳಲ್ಲಿ ಡಿಜೆ ಸಂಪೂರ್ಣ ನಿಷೇಧ: ಸಿಐ ಸುರೇಶ್ ಸೂಚನೆ

September 08, 2026 5:26 pm
Our Youtube Channel
Our Picks

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm

ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ

September 09, 2026 5:34 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

By News Desk BenkiyabaleSeptember 09, 2026 5:41 pm

ಪಾವಗಡ: ಮಹರ್ಷಿ ವಾಲ್ಮೀಕಿ ಆಶ್ರಮ, ವಾಲ್ಮೀಕಿ ಜಾಗೃತಿ ವೇದಿಕೆ, ನಿಡಗಲ್ಲು ಗ್ರಾಮಸ್ಥರು ಮತ್ತು ದುರ್ಗದ ಅಭಿಮಾನಿಗಳ ವತಿಯಿಂದ ೧೦ನೇ ವರ್ಷದ…

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.