BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬದುಕಿನ ಜಟಕಬಂಡಿಗೆ ಡಿವಿಜಿ ಕಗ್ಗವೇ ದಾರಿದೀಪ
  • ಏ4: ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”
  • ಡಾ. ವಸಂತ ಮುರಳಿ ಅವರಿಗೆೆ ಒಲಿದ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ
  • ಹೆಣ್ಣು ಏನು ಬೇಕಾದರೂ ಸಾಧಿಸಬಲ್ಲಳು
  • ನಿವೃತ್ತ ನೌಕರರ ಸಂಘದಿ0ದ ಪ್ರತಿಭಟನೆ
  • ಮಲ್ಲಿಕಾರ್ಜುನಯ್ಯರವರಿಗೆ ಭಾವಪೂರ್ಣ ಶ್ರದ್ಧಾಂಜಲಿ
  • ಒಳಮೀಸಲಾತಿ ಇಲ್ಲದೆ ೫೬೪೩೨ ಹುದ್ದೆಗಳ ತುಂಬದಿರಲು ಒತ್ತಾಯಿಸಿ ಪ್ರತಿಭಟನೆ
  • ಮರು ಮತ ಎಣಿಗೆ: ನೂತನ ನಿರ್ದೇಶಕರ ಆಯ್ಕೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರು : ಕೋವಿಡ್-19 2ನೇ ಅಲೆ ; ಅದ್ದೂರಿ ಮದುವೆಗೆ ಕಡಿವಾಣ!
Trending

ತುಮಕೂರು : ಕೋವಿಡ್-19 2ನೇ ಅಲೆ ; ಅದ್ದೂರಿ ಮದುವೆಗೆ ಕಡಿವಾಣ!

By News Desk BenkiyabaleUpdated:March 29, 2021 6:44 pm

 ತುಮಕೂರು :

      ಜಿಲ್ಲೆಯಲ್ಲಿ ಕೋವಿಡ್-19 ಎರಡನೇ ಅಲೆ ಹರಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

      ಜಿಲ್ಲಾ ಪಂಚಾಯತ್ ನ ವಿಡಿಯೋ ಕಾನ್ಪರೆನ್ಸ್ ಸಭಾಂಗಣದಲ್ಲಿಂದು ಕೋವಿಡ್- 2ನೇ ಅಲೆ ಹರಡುವಿಕೆ ನಿಯಂತ್ರಿಸುವ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ನಾಳೆಯಿಂದಲೇ ಸಭೆ-ಸಮಾರಂಭ ಜಾತ್ರೆ, ಸಂತೆ ರದ್ದು:

ಕೋವಿಡ್ ಪ್ರಕರಣ ಹೆಚ್ಚಳವಾಗುತ್ತಿದ್ದು, ನಿಯಂತ್ರಣಕ್ಕಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಸಭೆ-ಸಮಾರಂಭ, ಆರ್ಕೆಸ್ಟ್ರಾ ಹಾಗೂ ಜಾತ್ರೆಗಳ ಆಚರಣೆ ಹಾಗೂ ಸಂತೆಗಳನ್ನು ಕಡ್ಡಾಯವಾಗಿ ನಿಷೇಧಿಸಬೇಕು. ಆದೇಶ ಪಾಲಿಸದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ತಹಶೀಲ್ದಾರ್‍ಗಳು ಕಾರ್ಯೊನ್ಮುಖರಾಗಬೇಕು ಎಂದು ನಿರ್ದೇಶಿಸಿದರು.

ಅದ್ದೂರಿ ಮದುವೆಗೆ ಕಡಿವಾಣ:

       ಅದ್ದೂರಿ ಮದುವೆಗಳನ್ನು ಮಾಡಬಾರದು. ಈಗಾಗಲೇ ಕಲ್ಯಾಣ ಮಂಟಪಗಳಲ್ಲಿ ನಿಗದಿಯಾಗಿರುವ ಮದುವೆಗಳಲ್ಲಿ 200 ಕ್ಕಿಂತ ಹೆಚ್ಚು ಜನ ಸೇರಬಾರದು. ಬಂಧು-ಬಳಗದ ಮಂದಿಯಷ್ಟೆ ಮದುವೆ ಮಾಡಿಕೊಳ್ಳಬೇಕು. ನಿಯಮ ಮೀರಿ ಅದ್ದೂರಿ ಮದುವೆ ಮಾಡುವ 200ಕ್ಕಿಂತ ಹೆಚ್ಚು ಮಂದಿ ಸೇರುವ ಮದುವೆಯಲ್ಲಿ ಸಂಬಂಧಿಸಿದವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

45 ವರ್ಷ ಮೇಲ್ಪಟ್ಟವರಿಗೆ ಕಡ್ಡಾಯ ಲಸಿಕೆ:

      ಕೋವಿಡ್ ನಿಯಂತ್ರಣದ ಸಲುವಾಗಿ, ಕೇಂದ್ರ ಸರ್ಕಾರದ ಮಾರ್ಗ ಸೂಚಿ ಅನ್ವಯ ಏಪ್ರಿಲ್ 1ರಿಂದ ಜಿಲ್ಲೆಯಲ್ಲಿ ಕಡ್ಡಾಯವಾಗಿ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಬೇಕು. ಸಾರ್ವಜನಿಕರೂ ಇದಕ್ಕೆ ಸಹಕಾರ ನೀಡಿ ತಮ್ಮ ವ್ಯಾಪ್ತಿಯ ಆಸ್ಪತ್ರೆಗಳಿಗೆ ತೆರಳಿ ಲಸಿಕೆ ಪಡೆಯಬೇಕು ಎಂದು ಮನವಿ ಮಾಡಿದರು.

ಮನೆ ಮನೆ ಸರ್ವೆ ಆಗಬೇಕು:

      ಆಶಾ ಕಾರ್ಯಕರ್ತೆ ಮತ್ತು ಅಂಗನವಾಡಿ ಕಾರ್ಯಕರ್ತೆರಿಂದ ಮನೆ ಮನೆ ಸರ್ವೇ ಮಾಡಿಸಬೇಕು. ಕೊರೋನಾ ಲಕ್ಷಣಗಳು ಕಂಡುಬಂದಲ್ಲಿ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಕಡ್ಡಾಯವಾಗಿ ಕೊರೊನಾ ಪರೀಕ್ಷೆ ಮಾಡಿಸಬೇಕು. 45 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಸೂಚಿಸಿದರು.

ಅಧಿಕಾರಿಗಳು ಸಿದ್ಧರಾಗಿರಿ:

      ತಾಲೂಕು ದಂಡಾಧಿಕಾರಿ, ವೈದ್ಯರು ಹಾಗೂ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಕೋವಿಡ್ ನಿಯಂತ್ರಣಕ್ಕೆ ಸದಾ ಸಿದ್ದರಿರಬೇಕು. ತಹಸೀಲ್ದಾರ್ ಗಳು ಸ್ಥಳೀಯ ಶಾಸಕರ ನೇತೃತ್ವ ಸಭೆ ನಡೆಸಿ ಕೋವಿಡ್ ನಿಯಂತ್ರಣದ ಕುರಿತು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.

ಪಡಿತರ ನೀಡಲು ಪ್ರತ್ಯೇಕ ವ್ಯವಸ್ಥೆ ಮಾಡಿ:

        ಕೊರೊನಾ 2ನೇ ಅಲೆ ಹಿನ್ನೆಲೆಯಲ್ಲಿ ಪಡಿತರ ವಿತರಿಸುವಾಗ ಕೋವಿಡ್-19 ಮಾರ್ಗಸೂಚಿಯನ್ನು ಪಾಲಿಸಬೇಕು. ಒಂದೆಡೆ ವಿತರಿಸದೆ ಎರಡು ಮೂರು ಕಡೆ ಪಡಿತರ ನೀಡಲು ವ್ಯವಸ್ಥೆ ಮಾಡಬೇಕು. ಪಿಡಿಒಗಳು ಗ್ರಾಮೀಣ ಪ್ರದೇಶದಲ್ಲಿ ಸರಿಯಾಗಿ ಕೆಲಸ ನಿರ್ವಹಿಸಬೇಕು. ಆ ನಿಟ್ಟಿನಲ್ಲಿ ಸೂಚನೆ ನೀಡುವಂತೆ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗಂಗಾಧರಸ್ವಾಮಿ ಅವರಿಗೆ ನಿರ್ದೇಶಿಸಿದರು.

ಮಾತ್ರೆಗಳನ್ನು ನೀಡದಂತೆ ಸೂಚನೆ:

      ವೈದ್ಯರ ಚೀಟಿಯಿಲ್ಲದೇ ಮೆಡಿಕಲ್ ಗಳಲ್ಲಿ ಜ್ವರ, ಕೆಮ್ಮು, ನೆಗಡಿಗೆ ಮಾತ್ರೆ ಮತ್ತು ಔಷಧ ನೀಡದಂತೆ ಸೂಚನೆ ನೀಡಬೇಕು. ಕೋವಿಡ್ ತಪಾಸಣೆ ಹೆಚ್ಚಿಸಬೇಕು. ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯ ಮಾಡಬೇಕು ಎಂದು ಹೇಳಿದರು.

144ಜಾರಿಗೆ ಸೂಚನೆ:

      ಜಿಲ್ಲೆಯಲ್ಲಿ ಕಲಂ 144 ಜಾರಿ ಮಾಡಿದ್ದು, ಸಭೆ, ಸಮಾರಂಭ, ಜಾತ್ರೆ, ಆರ್ಕೆಸ್ಟ್ರಾ, ಮದುವೆ, ನಾಟಕಗಳಲ್ಲಿ ಹೆಚ್ಚಿನ ಜನ ಸೇರಬಾರದೆಂಬ ಕಾರಣಕ್ಕೆ ಜಾರಿ ಮಾಡಲಾಗಿದೆ. ಇದರಲ್ಲಿ ಕ್ರಿಮಿನಲ್ ಪ್ರಕರಣ ಒಳಪಡುವುದಿಲ್ಲ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಶಾಸಕರಾದ ಎಸ್.ಆರ್.ಶ್ರೀನಿವಾಸ್, ಜಿ.ಬಿ.ಜ್ಯೋತಿಗಣೇಶ್, ಡಿ.ಸಿ.ಗೌರಿಶಂಕರ್, ವೆಂಕಟರಮಣಪ್ಪ, ಎಂ.ವಿ.ವೀರಭದ್ರಯ್ಯ, ರಾಜೇಶ್‍ಗೌಡ, ಚಿದಾನಂದ್ ಎಂ.ಗೌಡ, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಸಿಇಓ ಗಂಗಾಧರಸ್ವಾಮಿ, ಎಸ್ಪಿ ಡಾ|| ಕೋನವಂಶಿಕೃಷ್ಣ, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಡಿಹೆಚ್‍ಒ ಡಾ|| ನಾಗೇಂದ್ರಪ್ಪ, ಜಿಲ್ಲಾ ಸರ್ಜನ್ ಡಾ|| ಸುರೇಶ್‍ಬಾಬು, ಎಲ್ಲಾ ತಾಲೂಕಿನ ತಹಶೀಲ್ದಾರ್, ಉಪವಿಭಾಗಾಧಿಕಾರಿಗಳು, ಆರೋಗ್ಯ ಇಲಾಕೆಯ ವೈದ್ಯರು, ಸೇರಿದಂತೆ ಮತ್ತಿತರು ಹಾಜರಿದ್ದರು.

(Visited 37 times, 1 visits today)
Previous Articleಎತ್ತಿನಹೊಳೆ, ಹೇಮಾವತಿ, ಭದ್ರ ಮೇಲ್ಡಂಡೆ ಯೋಜನೆಗಳಿಂದ ತುಮಕೂರು ಜಿಲ್ಲೆಗೆ ಸಮಗ್ರ ನೀರು
Next Article ಮನರಂಜನಾ ಕಾರ್ಯಕ್ರಮಗಳಿಗೆ ವಿನಾಯಿತಿ ನೀಡಲು ಜೆಸಿಎಂ ಹಾಗೂ ಡಿಸಿಗೆ ಮನವಿ
News Desk Benkiyabale

Related Posts

ಬದುಕಿನ ಜಟಕಬಂಡಿಗೆ ಡಿವಿಜಿ ಕಗ್ಗವೇ ದಾರಿದೀಪ

March 25, 2026 4:58 pm ತುಮಕೂರು ಜಿಲ್ಲಾ ಸುದ್ಧಿಗಳು

ಏ4: ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”

March 25, 2026 4:55 pm ತುಮಕೂರು ಜಿಲ್ಲಾ ಸುದ್ಧಿಗಳು

ಡಾ. ವಸಂತ ಮುರಳಿ ಅವರಿಗೆೆ ಒಲಿದ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ

March 25, 2026 3:58 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು
ತುಮಕೂರು ಜಿಲ್ಲಾ ಸುದ್ಧಿಗಳು

ಬದುಕಿನ ಜಟಕಬಂಡಿಗೆ ಡಿವಿಜಿ ಕಗ್ಗವೇ ದಾರಿದೀಪ

March 25, 2026 4:58 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ4: ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”

March 25, 2026 4:55 pm
ತುಮಕೂರು ಜಿಲ್ಲಾ ಸುದ್ಧಿಗಳು

ಡಾ. ವಸಂತ ಮುರಳಿ ಅವರಿಗೆೆ ಒಲಿದ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ

March 25, 2026 3:58 pm
ತುಮಕೂರು ಜಿಲ್ಲಾ ಸುದ್ಧಿಗಳು

ಹೆಣ್ಣು ಏನು ಬೇಕಾದರೂ ಸಾಧಿಸಬಲ್ಲಳು

March 25, 2026 3:53 pm
ತುಮಕೂರು ಜಿಲ್ಲಾ ಸುದ್ಧಿಗಳು

ನಿವೃತ್ತ ನೌಕರರ ಸಂಘದಿ0ದ ಪ್ರತಿಭಟನೆ

March 25, 2026 3:34 pm
ತುಮಕೂರು ಜಿಲ್ಲಾ ಸುದ್ಧಿಗಳು

ಮಲ್ಲಿಕಾರ್ಜುನಯ್ಯರವರಿಗೆ ಭಾವಪೂರ್ಣ ಶ್ರದ್ಧಾಂಜಲಿ

March 25, 2026 3:28 pm
Our Youtube Channel
Our Picks

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು ಜಿಲ್ಲಾ ಸುದ್ಧಿಗಳು

ಬದುಕಿನ ಜಟಕಬಂಡಿಗೆ ಡಿವಿಜಿ ಕಗ್ಗವೇ ದಾರಿದೀಪ

By News Desk BenkiyabaleMarch 25, 2026 4:58 pm

ತುಮಕೂರು: ಆಧುನಿಕ ಜಗತ್ತಿನ ಒತ್ತಡದ ಬದುಕಿಗೆ ಡಿ.ವಿ. ಗುಂಡಪ್ಪನವರ ‘ಮಂಕುತಿಮ್ಮನ ಕಗ್ಗ’ ಒಂದು ಅತ್ಯುತ್ತಮ ದಿವ್ಯೌಷಧಿಯಾಗಿದೆ ಎಂದು ವೈದ್ಯರು, ಲೇಖಕರು…

ಏ4: ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”

March 25, 2026 4:55 pm

ಡಾ. ವಸಂತ ಮುರಳಿ ಅವರಿಗೆೆ ಒಲಿದ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ

March 25, 2026 3:58 pm

ಹೆಣ್ಣು ಏನು ಬೇಕಾದರೂ ಸಾಧಿಸಬಲ್ಲಳು

March 25, 2026 3:53 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.