BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೧೦೦೦ಕ್ಕೂ ಹೆಚ್ಚು ದರಖಾಸ್ತು ಪೋಡಿ ದುರಸ್ತಿ ಪೂರ್ಣಗೊಳಿಸಿ ಮೈಲುಗಲ್ಲು ತಲುಪಿದ ತುಮಕೂರು ಜಿಲ್ಲೆ: ಜಿಲ್ಲಾಧಿಕಾರಿ
  • ಮೌಲ್ಯಾಧಾರಿತ ಸಂಬ0ಧಗಳನ್ನು ಕಟ್ಟುವ ಶಿಕ್ಷಣವೇ ಶ್ರೇಷ್ಠ
  • ಪ್ರತಿ ಮನೆಮನೆಗೂ ಶುದ್ಧ ಕುಡಿಯುವ ನೀರು
  • ರೈತರ ಹಕ್ಕನ್ನು ಪಡೆಯಲು ಹೋರಾಟ ಒಂದೇ ದಾರಿ
  • ಹಡಪದ ಅಪ್ಪಣ್ಣ ಅವರ ನುಡಿಗಳು ಇಂದಿಗೂ ಪ್ರಸ್ತುತ
  • ನಗರದ ವಿವಿಧಡೆ ಸಾಯಿಬಾಬಾ ದೇಗುಲಗಳಲ್ಲಿ ಗುರುಪೂರ್ಣಿಮೆ
  • ಜಿಲ್ಲೆಯ ಎಲ್ಲಾ ನ್ಯಾಯ ಬೆಲೆ ಅಂಗಡಿಗಳಲ್ಲಿ ಸಹಾಯವಾಣಿ ಸಂಖ್ಯೆ ಕಡ್ಡಾಯ: ಚಂದ್ರಶೇಖರ್ ಗೌಡ ಸೂಚನೆ
  • ರೈತ-ಕಾರ್ಮಿಕ ವಿರೋಧಿಸಿ ಪ್ರತಿಭಟನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅನುದಾನ ಸದ್ಬಳಕೆಯಲ್ಲಿ ತುಮಕೂರು ರಾಜ್ಯದಲ್ಲಿಯೇ ಪ್ರಥಮ- ಸಚಿವ
Trending

ಅನುದಾನ ಸದ್ಬಳಕೆಯಲ್ಲಿ ತುಮಕೂರು ರಾಜ್ಯದಲ್ಲಿಯೇ ಪ್ರಥಮ- ಸಚಿವ

By News Desk BenkiyabaleUpdated:July 06, 2021 6:32 pm

ತುಮಕೂರು :

       ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ ಸದ್ಬಬಳಕೆಯಲ್ಲಿ ರಾಜ್ಯದಲ್ಲಿಯೇ ತುಮಕೂರು ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಾ.ನಾರಾಯಣಗೌಡ ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿಂದು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಅನುದಾನ ಬಳಕೆ ವಿಚಾರದಲ್ಲಿ ತುಮಕೂರು ಜಿಲ್ಲೆ ರಾಜ್ಯಕ್ಕೆ ಪ್ರಥಮ. ಕೋವಿಡ್ ನಿಂದ ಲಾಕ್ ಡೌನ್ ಆಗಿದ್ದರೂ ಕೆಲಸ ವೇಗವಾಗಿ ನಡೆದಿದೆ. ಬಹುತೇಕ ಜಿಲ್ಲೆಗಳಲ್ಲಿ ಅನುದಾನ ಬಳಕೆಯೇ ಆಗಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರುಗಳು ಆಸಕ್ತಿಯಿಂದ ಕೆಲಸ ಮಾಡಿದ್ದಾರೆ ಎಂದು ಪ್ರಶಂಸಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮಹತ್ವ ಏನು ಎನ್ನುವುದನ್ನು ರಾಜ್ಯಕ್ಕೇ ತೋರಿಸಿಕೊಡುತ್ತೇನೆ. ಹಿಂದೆಂದೂ ಆಗಿರದಂತಹ ಅಭಿವೃದ್ಧಿ ಕಾರ್ಯ ಮಾಡುತ್ತೇನೆ. ಪ್ರತಿ ತಾಲೂಕು, ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ ಮಾಡುತ್ತೇನೆ. ಅದಕ್ಕಾಗಿಯೆ ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದೇನೆ. ತುಮಕೂರಿನಲ್ಲಿ ಸ್ಮಾರ್ಟ್‍ಸಿಟಿ ವತಿಯಿಂದ ಭವ್ಯವಾದ ಕ್ರೀಡಾಂಗಣ ನಿರ್ಮಾಣವಾಗುತ್ತಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣ ಹೈಟೆಕ್ ಆಗಲಿದ್ದು, ಅಲ್ಲಿ ಕಾಮಗಾರಿ ಆರಂಭವಾದಾಗ ತುಮಕೂರಿನ ಕ್ರೀಡಾಂಗಣವನ್ನು ರಾಜ್ಯಮಟ್ಟದ ಕ್ರೀಡಾ ಚಟುವಟಿಕೆಗೆ ಬಳಸಬೇಕು. ಕ್ರೀಡಾ ಇಲಾಖೆ ಅಡಿ ಬಾಕಿ ಇರುವ ಕಾಮಗಾರಿಗಳು ಶೀಘ್ರ ಮುಗಿಯಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ಹೊಸ ಬೆಳೆ ಬೆಳೆಯುತ್ತಿರುವ ಮೂಸಂಬಿ, ಡ್ರಾಗನ್ ಫ್ರೂಟ್ ಬಗ್ಗೆ ಮಾಹಿತಿ ಪಡೆದ ಸಚಿವರು, ಬೆಳೆ ವಿಮೆಗೆ ಒತ್ತು ಕೊಡುವಂತೆಯೂ ತಿಳಿಸಿದರು.

ಅಡಕೆ ಬೆಳೆಯ ಹನಿ ನೀರಾವರಿಗೆ ಸಬ್ಸಿಡಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಮನವಿ ಮಾಡಿದಾಗ, ಈ ಬಗ್ಗೆ ಗಮನ ಹರಿಸಲಾಗುವುದು ಎಂದು ಭರವಸೆ ನೀಡಿದರು.

ತುಮಕೂರು ಜಿಲ್ಲೆ ಒಂದು ಕಾಲದಲ್ಲಿ ಕಬ್ಬಡಿ, ಕೊಕ್ಕೋ ಕ್ರೀಡೆಗೆ ಬಹಳ ಹೆಸರುವಾಸಿಯಾಗಿತ್ತು. ಅದರೆ ಜಿಲ್ಲೆಯಲ್ಲಿ ಕ್ರೀಡಾ ಚಟುವಟಿಕೆಯೇ ಇಲ್ಲದಂತಾಗಿದೆ. ಹಾಗಾಗಿ ಕ್ರೀಡಾ ಚಟುವಟಿಕೆಗೆ ಒತ್ತು ಕೊಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಅಧಿಕಾರಿಗಳಿಗೆ ನಿರ್ದೇಶಿಸಿದರು. ಅಲ್ಲದೆ ರೈತರು ಮತ್ತು ವರ್ತಕರ ನಡುವೆ ನೇರ ಮಾರುಕಟ್ಟೆ ಒದಗಿಸಿ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಆನ್ ಲೈನ್ ಆ್ಯಪ್ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಇದರಿಂದ ರೈತರಿಗೆ ಬಹಳ ಅನುಕೂಲವಾಗಲಿದೆ ಎಂದು ತಿಳಿಸಿದರು.
ಸಭೆಯಲ್ಲಿ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ವೀರಭದ್ರಯ್ಯ, ಚಿದಾನಂದ ಗೌಡ, ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ. ವಿದ್ಯಾಕುಮಾರಿ, ಅಪರ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ ಸೇರಿದಂತೆ ಇತರರಿದ್ದರು.

ಸಭೆಗೂ ಮುನ್ನ ದಾನಿಗಳಾದ ಎನ್.ಎಸ್. ಜಯಕುಮಾರ್, ವಿನಯ್, ರಾಜೇಂದ್ರ ಅವರು ನೀಡಿದ್ದ ಒಲಂಪಿಕ್ಸ್ ಸ್ಪರ್ಧೆಯಲ್ಲಿ ಬಳಸುವ ಏರ್ ರೈಫಲ್ ಅನ್ನು ಸಚಿವರಾದ ಡಾ. ನಾರಾಯಣಗೌಡ ಅವರು ರಾಷ್ಟ್ರ ಮಟ್ಟದ ರೈಫಲ್ ಶೂಟಿಂಗ್‍ಗೆ ಆಯ್ಕೆಯಾಗಿರುವ ಕ್ರೀಡಾಪಟುಗಳಿಗೆ ವಿತರಿಸಿದರು. ಚೆನ್ನೈನಲ್ಲಿ ನಡೆದ ದಕ್ಷಿಣ ಭಾರತದ ಚಾಂಪಿಯನ್ ಶಿಪ್ ರೈಫಲ್ ಶೂಟಿಂಗ್‍ನಲ್ಲಿ ವಿವೇಕಾನಂದ ರೈಫಲ್ ಅಕಾಡೆಮಿಯ ಕ್ರೀಡಾಪಟುಗಳಾದ ಕಿರಣ್, ಪ್ರಿಯಾ ಡ್ಯಾನಿಯಲ್ ಕಂಚಿನ ಪದಕ ಹಾಗೂ ಶ್ರೀತೇಜ್, ಮನೋಜ್ ಗೌಡ, ರೋಹನಗೌಡ ಅವರು ಅರ್ಹತಾ ಅಂಕಗಳಲ್ಲಿ ಆಯ್ಕೆಯಾಗಿ ಭೂಪಾಲ್ ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ರೈಫಲ್ ಶೂಟಿಂಗ್‍ಗೆ ಆಯ್ಕೆಯಾಗಿದ್ದಾರೆ.
ಸಭೆ ಬಳಿಕ ಸ್ಮಾರ್ಟ್ ಸಿಟಿಯಿಂದ ಅಭಿವೃದ್ಧಿಯಾಗುತ್ತಿರುವ ಕ್ರೀಡಾಂಗಣಕ್ಕೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.

(Visited 10 times, 1 visits today)
Previous Articleಗ್ರಂಥಾಲಯಗಳನ್ನು ಸುಸಜ್ಜಿತವಾಗಿ ನಿರ್ವಹಿಸುವಂತೆ ಸೂಚನೆ
Next Article ಅನಧಿಕೃತ ಪ್ರಾಣಿ ಹತ್ಯೆ, ಸಾಗಾಣಿಕೆ ತಡೆಗಟ್ಟುವಂತೆ ಡಿಸಿ ಸೂಚನೆ
News Desk Benkiyabale

Related Posts

೧೦೦೦ಕ್ಕೂ ಹೆಚ್ಚು ದರಖಾಸ್ತು ಪೋಡಿ ದುರಸ್ತಿ ಪೂರ್ಣಗೊಳಿಸಿ ಮೈಲುಗಲ್ಲು ತಲುಪಿದ ತುಮಕೂರು ಜಿಲ್ಲೆ: ಜಿಲ್ಲಾಧಿಕಾರಿ

July 11, 2025 3:40 pm ತುಮಕೂರು

ಮೌಲ್ಯಾಧಾರಿತ ಸಂಬ0ಧಗಳನ್ನು ಕಟ್ಟುವ ಶಿಕ್ಷಣವೇ ಶ್ರೇಷ್ಠ

July 11, 2025 3:38 pm ತುಮಕೂರು

ಪ್ರತಿ ಮನೆಮನೆಗೂ ಶುದ್ಧ ಕುಡಿಯುವ ನೀರು

July 11, 2025 3:36 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

೧೦೦೦ಕ್ಕೂ ಹೆಚ್ಚು ದರಖಾಸ್ತು ಪೋಡಿ ದುರಸ್ತಿ ಪೂರ್ಣಗೊಳಿಸಿ ಮೈಲುಗಲ್ಲು ತಲುಪಿದ ತುಮಕೂರು ಜಿಲ್ಲೆ: ಜಿಲ್ಲಾಧಿಕಾರಿ

July 11, 2025 3:40 pm
ತುಮಕೂರು

ಮೌಲ್ಯಾಧಾರಿತ ಸಂಬ0ಧಗಳನ್ನು ಕಟ್ಟುವ ಶಿಕ್ಷಣವೇ ಶ್ರೇಷ್ಠ

July 11, 2025 3:38 pm
ತುಮಕೂರು

ಪ್ರತಿ ಮನೆಮನೆಗೂ ಶುದ್ಧ ಕುಡಿಯುವ ನೀರು

July 11, 2025 3:36 pm
ತುಮಕೂರು

ರೈತರ ಹಕ್ಕನ್ನು ಪಡೆಯಲು ಹೋರಾಟ ಒಂದೇ ದಾರಿ

July 10, 2025 3:51 pm
ತುಮಕೂರು

ಹಡಪದ ಅಪ್ಪಣ್ಣ ಅವರ ನುಡಿಗಳು ಇಂದಿಗೂ ಪ್ರಸ್ತುತ

July 10, 2025 3:50 pm
ತುಮಕೂರು

ನಗರದ ವಿವಿಧಡೆ ಸಾಯಿಬಾಬಾ ದೇಗುಲಗಳಲ್ಲಿ ಗುರುಪೂರ್ಣಿಮೆ

July 10, 2025 3:49 pm
Our Youtube Channel
Our Picks

ಡಾ. ಶ್ರೀ ಶ್ರೀ ಶ್ರೀಶಿವಕುಮಾರ ಶ್ರೀಗಳ ಗ್ರಂಥ ಲೋಕಾರ್ಪಣೆ

June 28, 2025 3:37 pm

ಪತ್ರಿಕೋದ್ಯಮ ವಿದ್ಯರ‍್ಥಿಗಳು ಪತ್ರಿಕೋದ್ಯಮದ ಆಸ್ತಿಗಳಾಗಲಿ

July 01, 2025 3:52 pm

೧೭ ಮಹಿಳೆಯರು ಸೇರಿ ೩೨ ಮಂದಿಗೆ ಗಾಯ

June 30, 2025 3:48 pm

ಒಕ್ಕಲಿಗರ ಸಂಘಟನೆಗೆ ಹೊಸ ಚೇತನ ಕೆಂಪೇಗೌಡರು

June 28, 2025 3:39 pm

ಹೆಣ್ಣು ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯಲಿ

June 28, 2025 3:38 pm

ಡಾ. ಶ್ರೀ ಶ್ರೀ ಶ್ರೀಶಿವಕುಮಾರ ಶ್ರೀಗಳ ಗ್ರಂಥ ಲೋಕಾರ್ಪಣೆ

June 28, 2025 3:37 pm

ಪತ್ರಿಕೋದ್ಯಮ ವಿದ್ಯರ‍್ಥಿಗಳು ಪತ್ರಿಕೋದ್ಯಮದ ಆಸ್ತಿಗಳಾಗಲಿ

July 01, 2025 3:52 pm

೧೭ ಮಹಿಳೆಯರು ಸೇರಿ ೩೨ ಮಂದಿಗೆ ಗಾಯ

June 30, 2025 3:48 pm

ಒಕ್ಕಲಿಗರ ಸಂಘಟನೆಗೆ ಹೊಸ ಚೇತನ ಕೆಂಪೇಗೌಡರು

June 28, 2025 3:39 pm

ಹೆಣ್ಣು ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯಲಿ

June 28, 2025 3:38 pm

ಡಾ. ಶ್ರೀ ಶ್ರೀ ಶ್ರೀಶಿವಕುಮಾರ ಶ್ರೀಗಳ ಗ್ರಂಥ ಲೋಕಾರ್ಪಣೆ

June 28, 2025 3:37 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

೧೦೦೦ಕ್ಕೂ ಹೆಚ್ಚು ದರಖಾಸ್ತು ಪೋಡಿ ದುರಸ್ತಿ ಪೂರ್ಣಗೊಳಿಸಿ ಮೈಲುಗಲ್ಲು ತಲುಪಿದ ತುಮಕೂರು ಜಿಲ್ಲೆ: ಜಿಲ್ಲಾಧಿಕಾರಿ

By News Desk BenkiyabaleJuly 11, 2025 3:40 pm

ತುಮಕೂರು: ಜಿಲ್ಲೆಯಲ್ಲಿ ಸರ್ಕಾರದಿಂದ ಭೂಮಂಜೂರಾತಿಯಾದ ಜಮೀನುಗಳನ್ನು ಸಾಗುವಳಿ ಮಾಡುವ ರೈತರಿಗೆ ಎರಡು ಮೂರು ತಲೆ ಮಾರುಗಳಿಂದ ಪೋಡಿ ದುರಸ್ಥಿಯಾಗದೇ ಕ್ರಯ,…

ಮೌಲ್ಯಾಧಾರಿತ ಸಂಬ0ಧಗಳನ್ನು ಕಟ್ಟುವ ಶಿಕ್ಷಣವೇ ಶ್ರೇಷ್ಠ

July 11, 2025 3:38 pm

ಪ್ರತಿ ಮನೆಮನೆಗೂ ಶುದ್ಧ ಕುಡಿಯುವ ನೀರು

July 11, 2025 3:36 pm

ರೈತರ ಹಕ್ಕನ್ನು ಪಡೆಯಲು ಹೋರಾಟ ಒಂದೇ ದಾರಿ

July 10, 2025 3:51 pm
News by Date
July 2025
M T W T F S S
 123456
78910111213
14151617181920
21222324252627
28293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.