BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕೆಎನ್‌ಆರ್ ಅವರ ಅಮೃತ ಮಹೋತ್ಸವ ಯಶಸ್ವಿಗೊಳಿಸಿ: ದೊರೈರಾಜು ಅಭಿಪ್ರಾಯ
  • ವಿವಿ ಕ್ಯಾಂಪಸ್‌ನಲ್ಲಿ ೭೫ ಗಿಡ ನೆಟ್ಟು ಕೆ.ಎನ್.ಆರ್‌ಗೆ ಗೌರವ
  • ಮುಂದಿನ ದಿನಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಥಾ ನಡೆಸಲಾಗುವುದು
  • ಜೆಡಿಎಸ್ ಪಕ್ಷವನ್ನು ಮುಳುಗಿಸಲು ಯಾರಿಂದಲೂ ಸಾದ್ಯವಿಲ್ಲ
  • ಕೆ.ಎನ್.ರಾಜಣ್ಣ ಸಹಕಾರಿ ಸಚಿವರಾಗಿ ಅಜಾತಶತೃವಾಗಿದ್ದಾರೆ
  • ಮುಂದಿನ ದಿನಗಳಲ್ಲಿ ಯಾವ ಅಧಿಕಾರವೂ ಬೇಡ, ಪ್ರೀತಿ, ವಿಶ್ವಾಸ ಉಳಿಸಿಕೊಂಡು ಹೋದರೆ ಸಾಕು: ಕೆಎನ್‌ಆರ್
  • ಜಾತಿ ನಿಂದನೆ ಕಾಯಿದೆಯನ್ನು ಸ್ವಾರ್ಥಕ್ಕೆ ಬಳಸಿಕೊಳ್ಳಲಾಗುತ್ತಿದೆ
  • ಕಾಂಗ್ರೆಸ್ ಸರ್ಕಾರ ಜನರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರು-ರಾಯದುರ್ಗ ರೈಲ್ವೆ ಯೋಜನೆಗೆ : 50 ಕೋಟಿ ರೂ
Trending

ತುಮಕೂರು-ರಾಯದುರ್ಗ ರೈಲ್ವೆ ಯೋಜನೆಗೆ : 50 ಕೋಟಿ ರೂ

By News Desk BenkiyabaleUpdated:February 05, 2022 6:15 pm

 ತುಮಕೂರು :

      ಜಿಲ್ಲೆಯಲ್ಲಿ ತುಮಕೂರು-ರಾಯದುರ್ಗ ರೈಲ್ವೇ ಯೋಜನೆಗೆ ಸಂಬಂಧಿಸಿದಂತೆ ಹೊಸದಾಗಿ ಹೆಚ್ಚುವರಿಯಾಗಿ ಬೇಡಿಕೆ ಇಟ್ಟಿರುವ 400 ಎಕರೆ ಜಮೀನಿನ ಭೂಸ್ವಾಧೀನಕ್ಕಾಗಿ ಅಗತ್ಯವಿರುವ 50 ಕೋಟಿ ರೂ.ಗಳ ಅನುದಾನವನ್ನು ಇನ್ನೊಂದು ತಿಂಗಳೊಳಗೆ ಒದಗಿಸಲು ಕ್ರಮ ಕೈಗೊಳ್ಳುತ್ತೇನೆ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ, ಚಿತ್ರದುರ್ಗ ಸಂಸದ ಹಾಗೂ ಜಿಲ್ಲಾ ದಿಶಾ ಸಮಿತಿ ಅಧ್ಯಕ್ಷ ಎ. ನಾರಾಯಣಸ್ವಾಮಿ ಭರವಸೆ ನೀಡಿದರು.

      ಜಿಲ್ಲಾ ಪಂಚಾಯತಿಯಲ್ಲಿಂದು ಜರುಗಿದ ದಿಶಾ ಸಮಿತಿ ಸಭೆ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತುಮಕೂರು-ರಾಯದುರ್ಗ ಮಾರ್ಗದಲ್ಲಿ ಕೈಗೊಂಡಿರುವ ರೈಲ್ವೆ ಯೋಜನೆ ಸಾಕಾರಕ್ಕಾಗಿ ಶೇ.100ರಷ್ಟು ಭೂಸ್ವಾಧೀನ ಪ್ರಕ್ರಿಯೆ ಈಗಾಗಲೇ ಪೂರ್ಣಗೊಂಡಿದ್ದು, ಈ ಯೋಜನೆಗೆ ಸಂಬಂಧಿಸಿದಂತೆ ರೈಲ್ವೆ ಇಲಾಖೆಯು ಹೊಸದಾಗಿ ಹೆಚ್ಚುವರಿಯಾಗಿ ಬೇಡಿಕೆ ಇಟ್ಟಿರುವ ಜಮೀನನ್ನು ಭೂಸ್ವಾಧೀನಪಡಿಸಿಕೊಳ್ಳಲು ಅಗತ್ಯವಿರುವ 50 ಕೋಟಿ ರೂ.ಗಳ ಅನುದಾನವನ್ನು ಒದಗಿಸಲು ಯಾವುದೇ ಹಣದ ಕೊರತೆಯಿಲ್ಲ ಎಂದು ಸ್ಪಷ್ಟ ಪಡಿಸಿದರು.
ಅದೇ ರೀತಿ ಬಹಳ ದಿನಗಳ ಕನಸಾದ ತುಮಕೂರು-ದಾವಣಗೆರೆ ರೈಲ್ವೆ ಯೋಜನೆ ಕಾಮಗಾರಿ ಪ್ರಗತಿಯಲ್ಲಿದ್ದು, ಈ ಯೋಜನೆಯಡಿ ತುಮಕೂರು-ಹಿರಿಯೂರು-ಚಿತ್ರದುರ್ಗ-ದಾವಣಗೆರೆ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಒಟ್ಟಾರೆ 200 ಕೋಟಿ ರೂ.ಗಳ ಅಗತ್ಯವಿದೆ ಎಂದು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈಗಾಗಲೇ ಯೋಜನೆ ಅನುಷ್ಠಾನಕ್ಕಾಗಿ ಬಿಡುಗಡೆಯಾಗಿ ಖರ್ಚಾಗದೆ ಉಳಿದಿರುವ ಹಣವನ್ನು ಪೂರ್ಣ ಪ್ರಮಾಣದಲ್ಲಿ ವೆಚ್ಚ ಮಾಡಿದ ನಂತರ ಮುಂದಿನ ಹಂತದ ಅನುದಾನವನ್ನು ಬಿಡುಗಡೆ ಮಾಡಲಾಗುವುದೆಂದು ಮುಖ್ಯಮಂತ್ರಿಗಳು ಪತ್ರದ ಮೂಲಕ ತಿಳಿಸಿದ್ದಾರೆ.

       ಇದೇ ರೈಲ್ವೆ ಯೋಜನೆಗೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ಭೂಸ್ವಾಧೀನಕ್ಕಾಗಿ ಬಿಡುಗಡೆಯಾಗಿದ್ದ 50 ಕೋಟಿ ರೂ. ಹಣ ವೆಚ್ಚವಾದ ನಂತರ ಪ್ರಸ್ತಾವನೆಯಲ್ಲಿ ಕೋರಿರುವ 200 ಕೋಟಿ ರೂ. ಹಣವನ್ನು ಒದಗಿಸಲಾಗುವುದೆಂದು ಮುಖ್ಯಮಂತ್ರಿಗಳು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ. ಪ್ರಸ್ತಾವನೆಯಲ್ಲಿ ಕೋರಿರುವ 200 ಕೋಟಿ ರೂ.ಗಳ ಪೈಕಿ ಜಿಲ್ಲೆಗೆ ಅಗತ್ಯವಿರುವ 50 ಕೋಟಿ ರೂ.ಗಳನ್ನು ಇನ್ನೊಂದು ವಾರದೊಳಗೆ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರಲ್ಲದೆ, ಕೇಂದ್ರದಿಂದ ಈಗಾಗಲೇ ರೈಲ್ವೆ ಯೋಜನೆಗಳಿಗಾಗಿ 901 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದರು.

      ಜಿಲ್ಲೆಯಲ್ಲಿ ಹೊಸದಾಗಿ ಕಂದಾಯ ಗ್ರಾಮಗಳನ್ನಾಗಿ ಪರಿವರ್ತನೆ ಮಾಡಲು ಗುರುತಿಸಿರುವ 400 ಗ್ರಾಮಗಳ ಪೈಕಿ 112 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಅಂತಿಮ ಅಧಿಸೂಚಿತ ಕಂದಾಯ ಗ್ರಾಮಗಳಲ್ಲಿ ಅಗತ್ಯ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.
ಸಿಎಸ್‍ಆರ್ ನಿಧಿಯ ಸದ್ವಿನಿಯೋಗಕ್ಕೆ ಸಂಬಂಧಿಸಿದಂತೆ ಉತ್ತರ ಭಾರತಕ್ಕೆ ಮಾತ್ರ ಆದ್ಯತೆ ನೀಡಲಾಗುತ್ತಿದೆ ಎಂದು ಹಲವಾರು ಕಂಪನಿಗಳಿಗೆ ಪತ್ರ ಬರೆದಿದ್ದೇನೆ. ಕರ್ನಾಟಕ ರಾಜ್ಯದ ಬರಪೀಡಿತ ಪ್ರದೇಶಗಳಾದ ತುಮಕೂರು, ಚಿತ್ರದುರ್ಗ ಜಿಲ್ಲೆ ಶಾಲೆಗಳ ಅಭಿವೃದ್ಧಿಗೆ ಹಣ ಒದಗಿಸಬೇಕು ಎಂದು ಈ ಪತ್ರದಲ್ಲಿ ಕೋರಲಾಗಿತ್ತು. ಅದರಂತೆ ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಾಗಿ 300 ಕೋಟಿ ರೂ. ಸಿಎಸ್‍ಆರ್ ನಿಧಿಯನ್ನು ವೆಚ್ಚ ಮಾಡಲಾಗಿದೆ ಎಂದು ಅವರು ಪ್ರತಿಕ್ರಿಯಿಸಿದ್ದು, ಇದರನ್ವಯ ಜಿಲ್ಲೆಯಲ್ಲಿ ಸಿಎಸ್‍ಆರ್ ನಿಧಿಯನ್ನು ಪ್ರಾಮಾಣಿಕವಾಗಿ ವೆಚ್ಚ ಮಾಡಿರುವ ಬಗ್ಗೆ ಕೂಲಂಕುಷವಾಗಿ ಮಾಹಿತಿ ಪಡೆದು ಪರಿಶೀಲಿಸುತ್ತೇನೆ ಎಂದು ತಿಳಿಸಿದರು.

      ವಿದ್ಯಾರ್ಥಿನಿಲಯಗಳಲ್ಲಿ ಕಳಪೆ ಆಹಾರ ಪೂರೈಕೆ ಬಗ್ಗೆ ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೇಂದ್ರ ಸಚಿವರು ರಾಜ್ಯದ ಸಮಾಜ ಕಲ್ಯಾಣ ಸಚಿವರು ಈ ಬಗ್ಗೆ ಕ್ರಮವಹಿಸಲಿದ್ದಾರೆ ಎಂದು ತಿಳಿಸಿದರಲ್ಲದೆ, ದೇಶದಾದ್ಯಂತ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣಕ್ಕೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ನಡೆಸಲು ಉದ್ದೇಶಿಸಲಾಗಿದ್ದು, ಸಭೆಯಲ್ಲಿ ಉನ್ನತ ಅಧಿಕಾರಿಗಳೊಂದಿಗೆ ದಲಿತರ ಸಮಸ್ಯೆ, ಪರಿಶಿಷ್ಟ ಜಾತಿ/ಪಂಗಡ ಸೇರಿದಂತೆ ಹಿಂದುಳಿದ ಸಮುದಾಯದ ಅಭಿವೃದ್ಧಿಗಾಗಿ ಯೋಜನೆಗಳನ್ನು ರೂಪಿಸುವ ಬಗ್ಗೆ ಚರ್ಚಿಸಲಾಗುವುದೆಂದರು.
ಉಡುಪಿ ಜಿಲ್ಲೆಯಲ್ಲಿ ಗಂಭೀರ ಸ್ವರೂಪ ಪಡೆದುಕೊಂಡಿರುವ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿರುವುದರಿಂದ ವಿಚಾರಣೆ ಇತ್ಯರ್ಥವಾದ ನಂತರ ಸರ್ಕಾರ ಮುಂದಿನ ನಿರ್ಣಯಗಳನ್ನು ಕೈಗೊಳ್ಳಲಿದೆ. ಶಾಲೆಯಲ್ಲಿ ವಿದ್ಯಾರ್ಥಿಗಳ ನಡುವೆ ಇಂತಹ ಧಾರ್ಮಿಕ ವಿಷಯಗಳ ಚರ್ಚೆಗೆ ಅವಕಾಶ ನೀಡಬಾರದಾಗಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ನಿರುದ್ಯೋಗಿಗಳಿಗೆ ಅನುವಾಗುವಂತೆ ಸುಮಾರು 16 ಇಲಾಖೆಗಳಡಿ ಕೌಶಲ್ಯ ತರಬೇತಿ ನೀಡಲು ಸರ್ಕಾರ ಮುಂದಾಗಿದೆ. ಈ ತರಬೇತಿ ಬಗ್ಗೆ ಸಾರ್ವಜನಿಕರಿಗೆ ನಿರ್ದಿಷ್ಟ ಮಾಹಿತಿ ಇಲ್ಲದಿರುವುದರಿಂದ ನಿರುದ್ಯೋಗಿಗಳು ಸ್ವಯಂ ಉದ್ಯೋಗ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಕೌಶಲ್ಯ ತರಬೇತಿಗಳ ಬಗ್ಗೆ ಸಾರ್ವಜನಿಕರಿಗೆ ಸಮರ್ಪಕ ಮಾಹಿತಿ ಒದಗಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ತಿಳಿಸಿದರು.
ಪ್ರಧಾನಿ ಮೋದಿ ಅವರು ನಿರುದ್ಯೋಗಿಗಳು ಸ್ವಾವಲಂಬಿ ಕೈಗಾರಿಕೋದ್ಯಮಿಗಳಾಗಬೇಕೆಂಬ ನಿಟ್ಟಿನಲ್ಲಿ ಮುದ್ರಾ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಈ ಯೋಜನೆಯಡಿ ಜಿಲ್ಲೆಯಲ್ಲಿ 62000 ಕ್ಕೂ ಹೆಚ್ಚು ಮಂದಿಗೆ 376 ಕೋಟಿ ರೂ.ಗಳ ಸಾಲ ಸೌಲಭ್ಯ ಒದಗಿಸಲಾಗಿದೆ. ಅಲ್ಲದೆ ವಿವಿಧ ಇಲಾಖೆ, ನಿಗಮ, ಮಂಡಳಿಗಳಡಿ ಜಿಲ್ಲೆಯ ನಿರುದ್ಯೋಗಿಗಳಿಗೆ ಸಾಲ ನೀಡಿರುವ ಅಂಕಿ ಅಂಶಗಳನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರಲ್ಲದೆ, ಸಾಲ ಸೌಲಭ್ಯ ನೀಡಲು ಬ್ಯಾಂಕಿನ ಅಧಿಕಾರಿಗಳು ಅಸಹಕಾರ ನೀಡುತ್ತಿದ್ದಾರೆಂಬ ದೂರುಗಳು ಸಹ ಕೇಳಿ ಬರುತ್ತಿದ್ದು, ಈ ಕುರಿತು ಮುಂದಿನ ಸಭೆಯಲ್ಲಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು.
ಕೇಂದ್ರ ಸರ್ಕಾರದ ವಸತಿ ಯೋಜನೆಗಳಡಿ 2014-15ನೇ ಸಾಲಿನಲ್ಲಿ ಆಯ್ಕೆಯಾದ ಗ್ರಾಮೀಣ ಪ್ರದೇಶದ ವಸತಿಹೀನ ಫಲಾನುಭವಿಗೆ ಆದ್ಯತೆ ನೀಡಲಾಗುತ್ತಿದೆ. ಪ್ರಸ್ತುತ 2020-21ನೇ ಸಾಲಿನ ವಸತಿಹೀನರಿಗೂ ಆದ್ಯತೆ ನೀಡಬೇಕೆಂದು ಎಲ್ಲಾ ಶಾಸಕರಿಗೆ ಮನವಿ ಮಾಡಿದ್ದೇನೆ. ಎಲ್ಲಾ ಶಾಸಕರು ಆಶ್ರಯ ಸಮಿತಿ ಸಭೆ ಕರೆದು ಬಡವರಿಗೆ ವಸತಿ ಸೌಲಭ್ಯ ಕಲ್ಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ವಸತಿಹೀನರಿಗೆ ನಿವೇಶನ ಒದಗಿಸಲು ಜಿಲ್ಲಾಡಳಿತದಿಂದ ಜಾಗವನ್ನು ಮೀಸಲಿಟ್ಟು ಕಾನೂನಾತ್ಮಕವಾಗಿ ಜಿಲ್ಲಾ ಪಂಚಾಯತಿಗೆ ವರ್ಗಾವಣೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಗ್ರಾಮೀಣ ಭಾಗದವರಿಗೆ ಸ್ವಚ್ಛ ನೀರು ಒದಗಿಸುವ ನಿಟ್ಟಿನಲ್ಲಿ ಜಾರಿಗೆ ತಂದಿರುವ ಕೇಂದ್ರದ ಜಲ್ ಜೀವನ್ ಮಿಷನ್ ಯೋಜನೆಯಡಿ ಗ್ರಾಮೀಣ ಪ್ರದೇಶದ ಪ್ರತೀ ಮನೆ-ಮನೆಗೂ ನೀರೊದಗಿಸುವ ಕಾಮಗಾರಿ ಪ್ರಗತಿಯಲ್ಲಿದೆ ಎಂದರಲ್ಲದೆ, ಪಾವಗಡ ತಾಲ್ಲೂಕಿನಲ್ಲಿ ನೀರಿನ ಸಮಸ್ಯೆ ನೀಗಿಸಲು ತುಂಗಾ ಹಿನ್ನೀರಿನಿಂದ ಎಲ್ಲಾ ಹಳ್ಳಿಗಳಿಗೆ ನೀರೊದಗಿಸುವ ಯೋಜನೆಯನ್ನು ಈಗಾಗಲೇ ಕೈಗೊಂಡಿದ್ದು ಜುಲೈ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

(Visited 11 times, 1 visits today)
Previous Articleತುಮಕೂರು : ಫೆ.25 ರಿಂದ ಮೇಯರ್ಸ್ ಕಪ್ ಪಂದ್ಯಾವಳಿ
Next Article ಹೆಣ್ಣು ಮಕ್ಕಳು ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಬೇಕು
News Desk Benkiyabale

Related Posts

ಕೆಎನ್‌ಆರ್ ಅವರ ಅಮೃತ ಮಹೋತ್ಸವ ಯಶಸ್ವಿಗೊಳಿಸಿ: ದೊರೈರಾಜು ಅಭಿಪ್ರಾಯ

June 20, 2025 3:41 pm ತುಮಕೂರು

ವಿವಿ ಕ್ಯಾಂಪಸ್‌ನಲ್ಲಿ ೭೫ ಗಿಡ ನೆಟ್ಟು ಕೆ.ಎನ್.ಆರ್‌ಗೆ ಗೌರವ

June 20, 2025 3:40 pm ತುಮಕೂರು

ಮುಂದಿನ ದಿನಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಥಾ ನಡೆಸಲಾಗುವುದು

June 20, 2025 3:38 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ಕೆಎನ್‌ಆರ್ ಅವರ ಅಮೃತ ಮಹೋತ್ಸವ ಯಶಸ್ವಿಗೊಳಿಸಿ: ದೊರೈರಾಜು ಅಭಿಪ್ರಾಯ

June 20, 2025 3:41 pm
ತುಮಕೂರು

ವಿವಿ ಕ್ಯಾಂಪಸ್‌ನಲ್ಲಿ ೭೫ ಗಿಡ ನೆಟ್ಟು ಕೆ.ಎನ್.ಆರ್‌ಗೆ ಗೌರವ

June 20, 2025 3:40 pm
ತುಮಕೂರು

ಮುಂದಿನ ದಿನಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಥಾ ನಡೆಸಲಾಗುವುದು

June 20, 2025 3:38 pm
ತುಮಕೂರು

ಜೆಡಿಎಸ್ ಪಕ್ಷವನ್ನು ಮುಳುಗಿಸಲು ಯಾರಿಂದಲೂ ಸಾದ್ಯವಿಲ್ಲ

June 20, 2025 3:37 pm
ತುಮಕೂರು

ಕೆ.ಎನ್.ರಾಜಣ್ಣ ಸಹಕಾರಿ ಸಚಿವರಾಗಿ ಅಜಾತಶತೃವಾಗಿದ್ದಾರೆ

June 20, 2025 3:36 pm
ತುಮಕೂರು

ಮುಂದಿನ ದಿನಗಳಲ್ಲಿ ಯಾವ ಅಧಿಕಾರವೂ ಬೇಡ, ಪ್ರೀತಿ, ವಿಶ್ವಾಸ ಉಳಿಸಿಕೊಂಡು ಹೋದರೆ ಸಾಕು: ಕೆಎನ್‌ಆರ್

June 20, 2025 3:35 pm
Our Youtube Channel
Our Picks

ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ

June 16, 2025 2:21 pm

ಶೋಷಿತರಲ್ಲಿ ಹೋರಾಟದ ಕಿಚ್ಚು ಹತ್ತಿಸಿದವರು ಪ್ರೊ.ಬಿ.ಕೃಷ್ಣಪ್ಪ

June 16, 2025 1:56 pm

ಸಾರ್ವಜನಿಕರು ಸರ್ಕಾರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ

June 05, 2025 2:29 pm

ನಗರದಲ್ಲಿ ಪ್ರಾದೇಶಿಕ ತೆಂಗು ಅಭಿವೃದ್ಧಿ ಮಂಡಳಿ ಕಚೇರಿ ತೆರೆಯಿರಿ

May 31, 2025 3:29 pm

ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ

May 29, 2025 4:18 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ಕೆಎನ್‌ಆರ್ ಅವರ ಅಮೃತ ಮಹೋತ್ಸವ ಯಶಸ್ವಿಗೊಳಿಸಿ: ದೊರೈರಾಜು ಅಭಿಪ್ರಾಯ

By News Desk BenkiyabaleJune 20, 2025 3:41 pm

ತುಮಕೂರು: ಶೋಷಿತರ ಧ್ವನಿಯಾಗಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಿಗೆ ನೈತಿಕ ಶಕ್ತಿಯನ್ನು ತುಂಬುವ ನಿಟ್ಟಿನಲ್ಲಿ ಅಮೃತ ಮಹೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು…

ವಿವಿ ಕ್ಯಾಂಪಸ್‌ನಲ್ಲಿ ೭೫ ಗಿಡ ನೆಟ್ಟು ಕೆ.ಎನ್.ಆರ್‌ಗೆ ಗೌರವ

June 20, 2025 3:40 pm

ಮುಂದಿನ ದಿನಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಥಾ ನಡೆಸಲಾಗುವುದು

June 20, 2025 3:38 pm

ಜೆಡಿಎಸ್ ಪಕ್ಷವನ್ನು ಮುಳುಗಿಸಲು ಯಾರಿಂದಲೂ ಸಾದ್ಯವಿಲ್ಲ

June 20, 2025 3:37 pm
News by Date
June 2025
M T W T F S S
 1
2345678
9101112131415
16171819202122
23242526272829
30  
« May    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.