BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
  • ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
  • ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
  • ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಕಾಲ ಸೇವೆ : ತುಮಕೂರಿಗೆ 2ನೇ ಸ್ಥಾನ!!
Trending

ಸಕಾಲ ಸೇವೆ : ತುಮಕೂರಿಗೆ 2ನೇ ಸ್ಥಾನ!!

By News Desk BenkiyabaleUpdated:April 04, 2022 6:35 pm

      ಸಾರ್ವಜನಿಕರಿಗೆ ಸರ್ಕಾರಿ ಸೇವೆಗಳನ್ನು ಒದಗಿಸುವ ಸಲುವಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸಕಾಲ ಯೋಜನೆಯಡಿ ಸೇವೆ ನೀಡುವಲ್ಲಿ ತುಮಕೂರು ಜಿಲ್ಲೆ 2ನೇ ಸ್ಥಾನ ಪಡೆದು ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ಜಿಲ್ಲಾಧಿಕಾರಿಗಳಿಂದ ಪ್ರಶಸ್ತಿ ಸ್ವೀಕಾರ:

      ನಾಗರಿಕರ ಸೇವೆಗೆ ಸಾರ್ಥಕತೆ ತಂದ ಸಕಾಲ ಸೇವೆ ಜಾರಿಗೆ ಬಂದು 2022ರ ಏಪ್ರಿಲ್ 2ಕ್ಕೆ 10 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬೆಂಗಳೂರು ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿಂದು ಜರುಗಿದ ದಶಮಾನೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ. ನಾಗೇಶ್ ಅವರು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರಿಗೆ ಪ್ರಶಸ್ತಿ ಹಾಗೂ ಪ್ರಶಂಸನಾ ಪ್ರಮಾಣ ಪತ್ರ ನೀಡಿ ಗೌರವಿಸಿದರು.

     ಜಿಲ್ಲೆಯಲ್ಲಿ ಸಕಾಲ ಸೇವೆ ಅನುಷ್ಠಾನದಲ್ಲಿ 2022ರ ಮಾರ್ಚ್ ಮಾಹೆಯ ಪ್ರಗತಿಯನ್ನಾಧರಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.

1,55,378 ಅರ್ಜಿ ವಿಲೇವಾರಿ
       ನಾಗರಿಕರು ಸರ್ಕಾರಿ ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಹಾಗೂ ಸರ್ಕಾರದ ಸೇವೆಗಳನ್ನು ನಿಗಧಿತ ಕಾಲಮಿತಿಯೊಳಗೆ ನೀಡುವ ಸಲುವಾಗಿ 2012ರ ಏಪ್ರಿಲ್ 2ರಂದು ಸಕಾಲ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಹತ್ತು ವರ್ಷಗಳಲ್ಲಿ ರಾಜ್ಯದ ನಾಗರಿಕರು ಸೇವೆ ಕೋರಿ ಸಲ್ಲಿಸಿರುವ ಅರ್ಜಿಗಳಲ್ಲಿ 95.07ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಜಿಲ್ಲೆಯಲ್ಲಿ ವಿವಿಧ ಇಲಾಖೆಯ ಸೇವೆಗಾಗಿ ಸಕಾಲ ಯೋಜನೆಯಡಿ 2022ರ ಮಾರ್ಚ್ ಮಾಹೆಯಲ್ಲಿ 148639 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, 155378(ಜನವರಿಯಿಂದ ಬಾಕಿಯಿರುವ) ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ.

ವಿವಿಧ ಇಲಾಖೆಗಳ 1115 ಸೇವೆ:

      ಸಕಾಲ ಯೋಜನೆಯಡಿ ಕಂದಾಯ ಇಲಾಖೆಯ 53 ಸೇವೆ ಸೇರಿದಂತೆ 1115 ಸೇವೆಗಳನ್ನು ಒದಗಿಸಲಾಗುತ್ತಿದೆ. ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಸತಿ ದೃಢೀಕರಣ ಪತ್ರ, ಜನನ ಮತ್ತು ಮರಣ ಪ್ರಮಾಣಪತ್ರ, ವಾಸಸ್ಥಳ ಪ್ರಮಾಣಪತ್ರ, ಜೀವಂತ ಪ್ರಮಾಣ ಪತ್ರ, ಕೃಷಿ ಕುಟುಂಬ ಸದಸ್ಯ ಪ್ರಮಾಣ ಪತ್ರ, ನಿರುದ್ಯೋಗ ಪ್ರಮಾಣ ಪತ್ರ, ಕೃಷಿ ಕಾರ್ಮಿಕ ಪ್ರಮಾಣ ಪತ್ರ, ಭೂರಹಿತ ಪ್ರಮಾಣ ಪತ್ರ, ನಿರ್ಗತಿಕ ವಿಧವಾ ವೇತನ, ಅಂಗವಿಕಲ ವೇತನ, ಸಂಧ್ಯಾ ಸುರಕ್ಷಾ ವೇತನ, ಭೂ ಹಿಡುವಳಿ ಪ್ರಮಾಣ ಪತ್ರ, ವಂಶವೃಕ್ಷ ಪ್ರಮಾಣ ಪತ್ರ, ಮೈತ್ರಿ, ಮನಸ್ವಿನಿ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಯೋಜನೆ ಜಾರಿಗೆ ಬಂದ ಆರಂಭದಲ್ಲಿ ವಿವಿಧ ಇಲಾಖೆಗಳಡಿ ಬರುವ 281 ಸೇವೆಗಳನ್ನು ಒದಗಿಸಲಾಗುತ್ತಿತ್ತು.

ಇತರೆ ರಾಜ್ಯಗಳಿಗೂ ಪ್ರೇರಣೆ:

      ರಾಜ್ಯದ ಈ ಸಕಾಲ ಯೋಜನೆಯ ಯಶಸ್ಸಿನಿಂದ ಪ್ರೇರಣೆಗೊಂಡು ದೇಶದ ಇತರೆ ರಾಜ್ಯ ಸರ್ಕಾರಗಳು ಸಕಾಲ ಯೋಜನೆಯನ್ನು ಅಳವಡಿಸಿಕೊಂಡಿರುವುದು ಯೋಜನೆಯ ಹೆಗ್ಗಳಿಕೆಯಾಗಿದೆ.

ಸೇವಾ ವಿಳಂಬ-ಪರಿಹಾರ ವೆಚ್ಚ:

       ನಾಗರಿಕರು ಸಕಾಲ ಯೋಜನೆಯಡಿ ಅರ್ಜಿ ಸಲ್ಲಿಸಿದ ಕೂಡಲೇ 15 ಜಿಎಸ್‍ಸಿ ಸಂಖ್ಯೆಯು ಅರ್ಜಿದಾರರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳಿಸಲಾಗುವುದು. ಈ ಜಿಎಸ್‍ಸಿ ಸಂಖ್ಯೆಯನ್ನು ಬಳಸಿ ತಮ್ಮ ಅರ್ಜಿಗಳ ಹಂತವನ್ನು ತಿಳಿಯಬಹುದಾಗಿದೆ. ನಿಗಧಿತ ಕಾಲ ಮಿತಿಯಲ್ಲಿ ಸೇವೆ ಲಭ್ಯವಾಗದಿದ್ದಲ್ಲಿ ವಿಳಂಬವಾಗುವ ಪ್ರತಿದಿನಕ್ಕೆ 20 ರೂ.ನಂತೆ ಗರಿಷ್ಠ 500 ರೂ.ವರೆಗೆ ನಾಗರಿಕರಿಗೆ ಪರಿಹಾರ ವೆಚ್ಚ ನೀಡಲಾಗುವುದು.

ಜಿಎಸ್‍ಸಿ ಸಂಖ್ಯೆಯಿಂದ ಅರ್ಜಿ ಸ್ಥಿತಿ:


      ಸಕಾಲದಡಿ ಸೇವೆಗೆ ಅರ್ಜಿ ಸಲ್ಲಿಸುವಾಗ ನಾಗರಿಕರು ತಾವು ಬಳಸುವ ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಸೇವೆ ಪಡೆಯಲು ಅಗತ್ಯವಿರುವ ಎಲ್ಲ ದಾಖಲೆಗಳನ್ನು ಒದಗಿಸಬೇಕು. ಅರ್ಜಿ ಸಲ್ಲಿಸಿದ ನಂತರ ಜಿಎಸ್‍ಸಿ ಸಂಖ್ಯೆ ಸೃಜನೆಯಾಗಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು. ಜಿಎಸ್‍ಸಿ ಸಂಖ್ಯೆಯಿಂದ ಅರ್ಜಿ ಸ್ಥಿತಿಯನ್ನು ಜಾಲತಾಣ ತಿತಿತಿ.sಚಿಞಚಿಟಚಿ.ಞಚಿಡಿ.ಟಿiಛಿ.iಟಿ ಅಥವಾ ಸಹಾಯವಾಣಿ ಸಂಖ್ಯೆ 080-44554455ನ್ನು ಮೂಲಕ ತಿಳಿಯಬಹುದು. ಸಕಾಲ ಯೋಜನೆಗೆ ಸಂಬಂಧಿಸಿದ ಯಾವುದೇ ಪ್ರಶ್ನೆಗಳಿದ್ದಲ್ಲಿ ಸಕಾಲ ಕರೆ ಕೇಂದ್ರ(ಅಚಿಟಟ ಅeಟಿಣಡಿe)ವನ್ನು ಸಂಪರ್ಕಿಸಬೇಕು.

       ಸಾರ್ವಜನಿಕರು ಸಕಾಲ ಸೇವೆಗಾಗಿ ಸಂಬಂಧಿಸಿದ ಕಚೇರಿಗೆ ಭೇಟಿ ನೀಡುವ/ಆನ್‍ಲೈನ್/ಸಾಮಾನ್ಯ ಸೇವಾ ಕೇಂದ್ರ/ತುಮಕೂರು ಒನ್/ಕರ್ನಾಟಕ ಒನ್/ ಗ್ರಾಮ ಒನ್/ಜನಸೇವಕ/ ಸಹಾಯವಾಣಿಯನ್ನು ಸಂಪರ್ಕಿಸಬಹುದಾಗಿದೆ.

ಮೇಲ್ಮನವಿಗೆ ಅವಕಾಶ:

      ನಿಗಧಿತ ಕಾಲಮಿತಿಯಲ್ಲಿ ಸೇವೆ ಸ್ವೀಕೃತವಾಗದಿದ್ದಲ್ಲಿ ಹಾಗೂ ಸಮಂಜಸವಲ್ಲದ ಕಾರಣಗಳನ್ನು ನೀಡಿ ಅರ್ಜಿಯನ್ನು ತಿರಸ್ಕರಿಸಿದ್ದಲ್ಲಿ ಅಂತಹ ಅರ್ಜಿಗಳಿಗೆ ನಾಗರಿಕರು ಸಂಬಂಧಪಟ್ಟ ಸಕ್ಷಮ ಅಧಿಕಾರಿಗಳಿಗೆ ಮೇಲ್ಮನವಿ ಸಲ್ಲಿಸಬಹುದು. ಸಕ್ಷಮ ಅಧಿಕಾರಿಯು ತಪ್ಪಿತಸ್ಥ ಎಂದು ಹೆಸರಿಸಲಾದ ಅಧಿಕಾರಿಗಳನ್ನು ವಿಚಾರಣೆ ನಡೆಸಿ ಸೂಕ್ತ ಆದೇಶ ನೀಡುವರು. ಇಂತಹ ಆದೇಶವು ಸಮಾಧಾನಕರವಾಗಿರದಿದ್ದಲ್ಲಿ ಈ ಬಗ್ಗೆ ಸಂಬಂಧಿಸಿದ ಮೇಲ್ಮನವಿ ಪ್ರಾಧಿಕಾರಕ್ಕೆ 2ನೇ ಮೇಲ್ಮನವಿ ಸಲ್ಲಿಸಬಹುದು.

      ಸಕಾಲದಡಿ ಅರ್ಜಿ ಸಲ್ಲಿಸಿದ ನಾಗರಿಕರ ಅರ್ಜಿಗಳ ವಿಲೇವಾರಿ ವಿಳಂಬ ಅಥವಾ ತಿರಸ್ಕøತವಾದಲ್ಲಿ ಮೇಲ್ಮನವಿ ಅವಕಾಶ ಲಭ್ಯವಿರುವ ಬಗ್ಗೆ ನಾಗರಿಕರಿಗೆ ಎಸ್‍ಎಂಎಸ್ ಸಂದೇಶ ಕಳುಹಿಸಲಾಗುವುದು. ರಾಜ್ಯದಲ್ಲಿ ಕಳೆದ 2022ರ ಜನವರಿ ಮಾಹೆಯಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಶೇ. 97.58 ನಾಗರಿಕರು ಸಕಾಲ ಕುರಿತು ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿರುತ್ತಾರೆ.

ಇದೀಗ ಸಕಾಲ 2.0 :

      ಇಂದು.. ನಾಳೆ… ಇನ್ನಿಲ್ಲ. ಹೇಳಿದ ಸಮಯ ತಪ್ಪೊಲ್ಲ.. ಎನ್ನುವ ಧ್ಯೇಯದೊಂದಿಗೆ ಇದೀಗ ಸಕಾಲ 2.0 ಅಡಿ ಹೊಸದಾಗಿ ಮೊಬೈಲ್ ಸಂದೇಶ, ಡಿಬಿಟಿ(ಆiಡಿeಛಿಣ ಃeಟಿeಜಿiಣ ಖಿಡಿಚಿಟಿsಜಿeಣ), ಸಕಾಲ ಮಿತ್ರ, ಸಕಾಲ ಸಿಟಿಜನ್ ಹ್ಯಾಪಿನೆಸ್ ಇಂಡೆಕ್ಸ್, ಸಕಾಲ ಇಂಟರ್ನ್‍ಶಿಪ್, ಹೆಸರು ಹೊಂದಾಣಿಕೆ ತಂತ್ರಜ್ಞಾನ ಕಾರ್ಯಕ್ರಮಗಳನ್ನು ಪರಿಚಯಿಸಲಾಗಿದೆ.

      ಸಕಾಲದಡಿ ನಿಗಧಿತ ಕಾಲಮಿತಿಯಲ್ಲಿ ಸೇವೆ ವಿಲೇವಾರಿಯನ್ನು ಖಚಿತಪಡಿಸಿಕೊಳ್ಳುವ ಸಲುವಾಗಿ ಜಿಲ್ಲೆಯಲ್ಲಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿಯನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದ್ದಾರೆ.

(Visited 17 times, 1 visits today)
Previous Articleಏ. 8 ರಿಂದ ತುಮಕೂರು – ಬೆಂಗಳೂರು ನಡುವೆ ಮೆಮು ರೈಲು ಸಂಚಾರ
Next Article ತುಮಕೂರು : ಟ್ಯಾಂಕರ್ ಲಾರಿ – ಖಾಸಗಿ ಬಸ್ ಅಪಘಾತ !!
News Desk Benkiyabale

Related Posts

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ

April 03, 2026 4:37 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

By News Desk BenkiyabaleApril 13, 2026 3:10 pm

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಆಹಿತಕರ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ. ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಉದ್ದೇಶ…

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
News by Date
May 2026
M T W T F S S
 123
45678910
11121314151617
18192021222324
25262728293031
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.