BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ
  • ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ
  • ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ
  • ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ
  • ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ
  • ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ
  • ವಿಕಲಚೇತನರು ಸ್ವಾವಲಂಬಿಗಲು ಅವಕಾಶ ಕಲ್ಪಿಸಿ
  • ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರು-ಬೆಂಗಳೂರು: ಮೆಮು ರೈಲು ಸಂಚಾರಕ್ಕೆ ಚಾಲನೆ
Trending

ತುಮಕೂರು-ಬೆಂಗಳೂರು: ಮೆಮು ರೈಲು ಸಂಚಾರಕ್ಕೆ ಚಾಲನೆ

By News Desk BenkiyabaleUpdated:April 08, 2022 6:23 pm

ತುಮಕೂರು:
ತುಮಕೂರು ನಗರದ ರೈಲು ನಿಲ್ದಾಣದಿಂದ ಪ್ರತಿನಿತ್ಯ ತುಮಕೂರು-ಬೆಂಗಳೂರು ನಡುವೆ ಸಂಚರಿಸುವ ಮೆಮು ವಿಶೇಷ ರೈಲು ಸಂಚಾರಕ್ಕೆ ಸಂಸದರಾದ ಶ್ರೀ ಜಿ.ಎಸ್. ಬಸವರಾಜು ಅವರಿಂದು ಹಸಿರು ನಿಶಾನೆ ತೋರಿಸುವ ಮೂಲಕ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ರೈಲು ಪ್ರಯಾಣಿಕರ ಬಹುದಿನಗಳ ಬೇಡಿಕೆ ಈ ದಿನ ಈಡೇರಿದಂತಾಗಿದೆ. ತುಮಕೂರು ಮತ್ತು ಬೆಂಗಳೂರಿನ ಕೆಎಸ್‍ಆರ್ ರೈಲು ನಿಲ್ದಾಣದ ನಡುವೆ ಸಂಚರಿಸುವ ಈ ವಿದ್ಯುತ್‍ಚಾಲಿತ ರೈಲು ಸೇವೆ(ಮೆಮು)ಯಿಂದ ಮುಖ್ಯವಾಗಿ ಕಾರ್ಮಿಕರು, ರೈತಾಪಿ ವರ್ಗದವರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಬೆಂಗಳೂರು-ತುಮಕೂರು 8 ಭೋಗಿಗಳುಳ್ಳ ಡೆಮು ರೈಲನ್ನು ಪ್ರಯಾಣಿಕರ ಅನುಕೂಲಕ್ಕಾಗಿ 16 ಭೋಗಿಗಳುಳ್ಳ ಮೆಮು ರೈಲನ್ನಾಗಿ ಪರಿವರ್ತಿಸಲಾಗಿದೆ. ಸುಮಾರು 20 ವರ್ಷಗಳಿಂದ ಹೋರಾಟದ ಶ್ರಮದಿಂದ ಎರಡು ಪ್ರಮುಖ ನಗರಗಳ ನಡುವೆ ಸಂಚರಿಸುವ ಈ ಮೆಮು ರೈಲು ಸೇವೆ ಸಾಕಾರವಾಗಿದೆ ಎಂದರಲ್ಲದೆ, 2024ರೊಳಗಾಗಿ ರಾಷ್ಟ್ರದ ಎಲ್ಲಾ ರೈಲು ಮಾರ್ಗಗಳು ಡೀಸೆಲ್ ಮುಕ್ತ ವಿದ್ಯುತ್ ಚಾಲಿತ ರೈಲು ಮಾರ್ಗಗಳಾಗಬೇಕೆಂದು ಪ್ರಧಾನಿ ಮೋದಿಯವರ ದೊಡ್ಡ ಕನಸಾಗಿದೆ. ಇದನ್ನು ನನಸಾಗಿಸಲು ಪ್ರಯಾಣಿಕರು ಇಲಾಖೆಯೊಂದಿಗೆ ಸಹಕರಿಸಬೇಕೆಂದರು.
ತುಮಕೂರು ರೈಲು ನಿಲ್ದಾಣದ ಮೂಲಕ ಪ್ರತಿದಿನ ಸುಮಾರು 30 ರೈಲುಗಳು ಸಂಚರಿಸುತ್ತಿದ್ದರೂ, ಪ್ರಯಾಣಿಕರಿಂದ ಹೆಚ್ಚುವರಿ ರೈಲು ಸಂಚಾರ ಸೌಲಭ್ಯಕ್ಕಾಗಿ ಮನವಿಗಳು ಬರುತ್ತಲೇ ಇರುವುದರಿಂದ ತುಮಕೂರು-ಬೆಂಗಳೂರು ನಡುವೆ ಪ್ರತಿ 1 ಗಂಟೆಗೊಮ್ಮೆ ಪ್ರತ್ಯೇಕ ರೈಲು ಸಂಚಾರಕ್ಕೆ ಕೇಂದ್ರದ ರೈಲ್ವೆ ಸಚಿವರಲ್ಲಿ ಮನವಿ ಮಾಡಿದಾಗ ಅವರು ಶಾಶ್ವತ ರೈಲು ಸಂಚಾರಕ್ಕೆ ಸಮ್ಮತಿ ಸೂಚಿಸಿದ್ದು, ಶೀಘ್ರದಲ್ಲಿ ಕಾರ್ಯಗತವಾಗಲಿದೆ ಎಂದು ತಿಳಿಸಿದರು.
ನಗರದ ರೈಲು ನಿಲ್ದಾಣದ ದಕ್ಷಿಣ ಭಾಗದಲ್ಲಿ ಗೇಟ್ ತೆರೆಯಬೇಕೆಂದು ಸಾರ್ವಜನಿಕರಿಂದ ಮನವಿಗಳು ಬರುತ್ತಿದೆ. ಒಂದಕ್ಕಿಂತ ಹೆಚ್ಚು ಗೇಟ್‍ಗಳನ್ನು ತೆರೆದಲ್ಲಿ ಪ್ರಯಾಣಿಕರು ಟಿಕೇಟ್ ರಹಿತ ಪ್ರಯಾಣ ಮಾಡುವ ಸಾಧ್ಯತೆ ಇರುವುದರಿಂದ ರೈಲ್ವೆ ನಿಯಮಾವಳಿ ಪ್ರಕಾರ ಪ್ರಯಾಣಿಕರು ಹೋಗಿ ಬರಲು ಒಂದೇ ಕಡೆ ಗೇಟ್ ವ್ಯವಸ್ಥೆ ಮಾಡಲಾಗಿದೆ ಎಂದರು.
ನಗರದ ಹೊರವಲಯ ವಸಂತ ನರಸಾಪುರದ ಸುಮಾರು 13000 ಎಕರೆ ಕೈಗಾರಿಕಾ ಪ್ರದೇಶದ ಉದ್ಯಮಿಗಳು ಹಾಗೂ ಕಾರ್ಮಿಕರ ಅನುಕೂಲಕ್ಕಾಗಿ ಮೆಟ್ರೋ ರೈಲು ಸಂಚಾರಕ್ಕೆ ಸರ್ಕಾರ ಮುಂದಾಗಿದೆ ಎಂದರಲ್ಲದೆ, ತುಮಕೂರು ನಗರ ರೈಲು ನಿಲ್ದಾಣವನ್ನು ಮೈಸೂರು, ಬೆಂಗಳೂರು ಮಾದರಿ ಮೇಲ್ದರ್ಜೆಗೇರಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.
ನಗರ ರೈಲು ನಿಲ್ದಾಣದಲ್ಲಿ ಸ್ವಚ್ಛತೆ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳ ನಿರ್ವಹಣೆ ಸಮರ್ಪಕವಾಗಿ ಮಾಡುತ್ತಿಲ್ಲ. ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕೆಂದು ಎಚ್ಚರಿಕೆ ನೀಡಿದರು.
ಜಿಲ್ಲೆಯಲ್ಲಿ ತುಮಕೂರು-ದಾವಣಗೆರೆ, ತುಮಕೂರು-ರಾಯದುರ್ಗ ರೈಲ್ವೆ ಯೋಜನೆಗಳು ಪ್ರಗತಿಯಲ್ಲಿದ್ದು, ತುಮಕೂರು-ಮಳವಳ್ಳಿ ರೈಲು ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ರೈಲ್ವೆ ಯೋಜನೆಗಳು ಪೂರ್ಣಗೊಂಡ ನಂತರ ತುಮಕೂರು ರೈಲು ನಿಲ್ದಾಣ ಜಂಕ್ಷನ್ ಆಗಿ ಪರಿವರ್ತನೆಯಾಗಲಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕ ಜ್ಯೋತಿಗಣೇಶ್, ರೈಲ್ವೆ ಪ್ರಯಾಣಿಕರ ವೇದಿಕೆ ಅಧ್ಯಕ್ಷ ಬಾ.ಹ.ರಮಾಕುಮಾರಿ ಹಾಗೂ ಕಾರ್ಯದರ್ಶಿ ಕರ್ಣಂ ರಮೇಶ್, ರೈಲ್ವೆ ಅಧಿಕಾರಿಗಳು, ಮತ್ತಿತರರು ಹಾಜರಿದ್ದರು.
ತುಮಕೂರು-ರಾಯದುರ್ಗ, ತುಮಕೂರು-ದಾವಣಗೆರೆ ರೈಲ್ವೆ ಯೋಜನೆಗೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆ ಇನ್ನೂ ಪ್ರಗತಿಯಲ್ಲಿರುವುದರಿಂದ ಯೋಜನೆ ಪೂರ್ಣಗೊಳ್ಳಲು ವಿಳಂಬವಾಗುತ್ತಿದೆ ಎಂದು ತಿಳಿಸಿದರಲ್ಲದೆ, ತುಮಕೂರು-ದಾವಣಗೆರೆ ರೈಲ್ವೆ ಯೋಜನೆಗಾಗಿ ಪ್ರಸಕ್ತ ವರ್ಷದ ಆಯವ್ಯಯದಲ್ಲಿ 50 ಕೋಟಿ ರೂ.ಗಳನ್ನು ಮಂಡನೆ ಮಾಡಲಾಗಿದೆ ಎಂದು ತಿಳಿಸಿದರು.
ನೈರುತ್ಯ ರೈಲ್ವೆ ಬೆಂಗಳೂರು ವಿಭಾಗ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ(ನಿರ್ವಹಣೆ) ಅಮನ್‍ದೀಪ್ ಕಪೂರ್ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ಮೆಮು ರೈಲು ಸಂಚಾರವು ಪರಿಸರ ಸ್ನೇಹಿಯಾಗಿದ್ದು, ತುಮಕೂರಿನಿಂದ ಪ್ರತಿದಿನ ಬೆಳಿಗ್ಗೆ 11.15 ಗಂಟೆಗೆ ಹೊರಟು 13.25 ಗಂಟೆಗೆ ಬೆಂಗಳೂರು ತಲುಪಲಿದ್ದು, ಬೆಂಗಳೂರಿನಿಂದ ಮಧ್ಯಾಹ್ನ 13.50ಕ್ಕೆ ಹೊರಟು 15.40 ಗಂಟೆಗೆ ತುಮಕೂರು ತಲುಪಲಿದೆ. ತುಮಕೂರಿನಿಂದ ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ಈ ರೈಲು ಕ್ಯಾತ್ಸಂದ್ರ, ಹಿರೇಹಳ್ಳಿ, ಡಾಬಸ್‍ಪೇಟೆ, ನಿಡವಂದ, ಮುದ್ದಲಿಂಗನಹಳ್ಳಿ, ದೊಡ್ಡಬೆಲೆ, ಬೈರನಾಯಕನಹಳ್ಳಿ, ಗೊಲ್ಲಹಳ್ಳಿ, ಸೋಲದೇವನಹಳ್ಳಿ, ಚಿಕ್ಕಬಾಣವರ, ಯಶವಂತಪುರ, ಮಲ್ಲೇಶ್ವರಂ ನಿಲ್ದಾಣಗಳಲ್ಲಿ ನಿಲುಗಡೆ ಮಾಡಲಿದೆ. ಜಿಲ್ಲೆಯ ಪ್ರಯಾಣಿಕರ ಅನುಕೂಲಕ್ಕಾಗಿ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಇಲಾಖೆ ಬದ್ಧವಾಗಿದ್ದು, ಪ್ರಯಾಣಿಕರು ಸಲಹೆಗಳನ್ನು ನೀಡಿದಲ್ಲಿ ಕಾರ್ಯ ರೂಪಕ್ಕೆ ತರಲಾಗುವುದು ಎಂದು ತಿಳಿಸಿದರು.
ರೈಲ್ವೆ ಬಳಕೆದಾರರ ಸಮಾಲೋಚಕರ ಸಮಿತಿ ಸದಸ್ಯ ಡಿ.ಆರ್. ರಘೋತ್ತಮ್ ರಾವ್ ಮಾತನಾಡಿ, ಮೆಮು ರೈಲು ಓಡಾಟದಿಂದ ವಿಶೇಷವಾಗಿ ಕೈಗಾರಿಕೆಗಳಲ್ಲಿ ದುಡಿಯುವ ಕಾರ್ಮಿಕರು, ಬೆಳೆದ ಬೆಳೆಯನ್ನು ಮಾರಾಟ ಮಾಡುವ ರೈತರಿಗೆ ಪ್ರಯೋಜನವಾಗಲಿದೆ ಎಂದರಲ್ಲದೆ, ರೈಲ್ವೆ ಇಲಾಖೆ ಹಾಗೂ ಕೆಎಸ್‍ಆರ್‍ಟಿಸಿ ಜಂಟಿ ಒಪ್ಪಂದದ ಮೇರೆಗೆ ನಗರ ರೈಲು ನಿಲ್ದಾಣದಿಂದ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸುವುದರಿಂದ ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲವಾಗಲಿದೆ ಎಂದು ಸಂಸದರಲ್ಲಿ ಮನವಿ ಮಾಡಿದರು.

(Visited 12 times, 1 visits today)
gs basavaraju Memu trin tumkur
Previous Articleಏ.21: ಸರ್ಕಾರಿ ನೌಕರರ ದಿನಾಚರಣೆ
Next Article ಅಮಾನಿಕೆರೆಯಲ್ಲಿ ಚೆಕ್ ಡ್ಯಾಂ ನಿರ್ಮಾಣಕ್ಕೆ ಭೂಮಿ ಪೂಜೆ
News Desk Benkiyabale

Related Posts

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm
ಇತರೆ ಸುದ್ಧಿಗಳು

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm
ಇತರೆ ಸುದ್ಧಿಗಳು

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm
ಇತರೆ ಸುದ್ಧಿಗಳು

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
ಇತರೆ ಸುದ್ಧಿಗಳು

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
ಇತರೆ ಸುದ್ಧಿಗಳು

ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ

March 03, 2026 2:50 pm
Our Youtube Channel
Our Picks

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

By News Desk BenkiyabaleMarch 03, 2026 2:58 pm

ತುರುವೇಕೆರೆ: ಪಟ್ಟಣದ ಇತಿಹಾಸ ಪ್ರಸಿದ್ದ ಬೇಟರಾಯ ಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿ0ದ ಸೋಮವಾರ…

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.