BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ
  • ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ
  • ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್
  • ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ
  • ಕೇಂದ್ರದ ವಿಳಂಬ ನೀತಿಗೆ ಪ್ರತಿಭಟನೆ ಅನಿವಾರ್ಯ
  • ತೆಂಗು ಬೆಳೆ: ಜಾಗೃತಿ ಮೂಡಿಸುವ ಕಾರ್ಯಕ್ರಮದ ವಾಹನಕ್ಕೆ ಶಾಸಕರಿಂದ ಹಸಿರು ನಿಶಾನೆ
  • ಡಾ.ಶಿವಕುಮಾರ ಶ್ರೀಗಳ ಪುಣ್ಯಸಂಸ್ಮರಣೆ: ದಾಸೋಹದಿನ ಆಚರಣೆ
  • ರೇಷ್ಮೆ ಕೃಷಿ ಬೆಳಗಾರರ ಗುಂಪು ಸಭೆ ಕಾರ್ಯಕ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಡಾ.ರಾಜ್ ಚಿತ್ರಗಳ ಸಾಮಾಜಿಕ ಸಂದೇಶ ಯುವಜನತೆಗೆ ದಾರಿದೀಪ
Trending

ಡಾ.ರಾಜ್ ಚಿತ್ರಗಳ ಸಾಮಾಜಿಕ ಸಂದೇಶ ಯುವಜನತೆಗೆ ದಾರಿದೀಪ

By News Desk BenkiyabaleUpdated:April 25, 2022 5:15 pm

ತುಮಕೂರು:
ಕನ್ನಡ ಚಿತ್ರರಂಗದ ಮೇರು ನಟ ಡಾ.ರಾಜ್‍ಕುಮಾರ್ ಅವರು ಅಭಿನಯಿಸಿದ ಚಿತ್ರಗಳಲ್ಲಿ, ಕಲೆಯ ಜೊತೆಗೆ ಕನ್ನಡ ಸಾಹಿತ್ಯ, ಸಂಸ್ಕøತಿಗೆ ಹೆಚ್ಚು ಮೆರಗನ್ನು ನೀಡಿವೆ ಎಂದು ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯಪಟ್ಟಿದ್ದಾರೆ.
ನಗರದ ಕರಿಬಸವೇಶ್ವರ ಮಠದ ಆವರಣದಲ್ಲಿ,ಶ್ರೀಚನ್ನಬಸವರಾಜೇಂದ್ರ ಸ್ವಾಮೀಜಿಗಳ ನೇತೃತ್ವದಲ್ಲಿ ಶತಶೃಂಗ ಡಾ.ರಾಜ್ ಅಭಿಮಾನಿ ಬಳಗದವತಿಯಿಂದ ಆಯೋಜಿಸಿದ್ದ ಡಾ.ರಾಜ್ ಕುಮಾರ್ ಅವರ ಹುಟ್ಟು ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,ಅವರ ಚಿತ್ರಗಳಲ್ಲಿ ಬಳಸಿರುವ ಭಾಷೆ, ಗೀತೆಗಳಲ್ಲಿರುವ ಸಾಹಿತ್ಯ ಎಲ್ಲವನ್ನು ಅವಲೋಕಿಸಿ ದಾಗ, ಕನ್ನಡ ಸಾಹಿತ್ಯ ಲೋಕಕ್ಕೆ ಆಪಾರ ಕೊಡುಗೆಯನ್ನು ಡಾ.ರಾಜ್ ಚಿತ್ರಗಳು ನೀಡಿವೆ. ಅಲ್ಲದೆ ಉತ್ತಮ ಸಾಮಾಜಿಕ ಸಂದೇಶವನ್ನು ನೀಡುವ ಮೂಲಕ ಅಂದಿನ ಯುವಜನತೆ ದಾರಿ ದೀಪವಾಗಿವೆ ಎಂದರು.
ಪದ್ಮಭೂಷಣ ಡಾ.ರಾಜಕುಮಾರ್ ಅವರು ನಟಿಸಿದ ಬಂಗಾರದ ಮನುಷ್ಯ, ಬಂಗಾರದ ಪಂಜರ,ಬಲೆ ಬಸವ, ಜೀವನ ಜೈತ್ರ ಸೇರಿದಂತೆ ಹಲವಾರು ಸಿನಿಮಾಗಳನ್ನು ನೋಡಿ,ಲಕ್ಷಾಂತರ ತಮ್ಮ ಮನಃ ಪರಿವರ್ತನೆ ಮಾಡಿಕೊಂಡಿದ್ದನ್ನು ನಾವು ಹಿರಿಯರಿಂದ ಕೇಳಿ ತಿಳಿದಿದ್ದೇವೆ.ಆದರೆ ಇಂದು ಹೊಡಿ,ಬಡಿಯಂತಹ ಚಿತ್ರಗಳು ಹೆಚ್ಚಾಗಿ, ಸಾಮಾಜಿಕ ಸಂದೇಶಗಳಿರುವ ಚಿತ್ರಗಳು ಮರೆಯಾಗುತ್ತಿರುವುದು ವಿಷಾದನೀಯ ಎಂದು ಜಿ.ಬಿ.ಜೋತಿಗಣೇಶ್ ತಿಳಿಸಿದರು.
ಹಲವಾರು ವರ್ಷಗಳಿಂದ ಡಾ.ರಾಜ್ ಹುಟ್ಟು ಹಬ್ಬವನ್ನು ತಮ್ಮ ಮನೆಯ ಹಬ್ಬವೆಂಬಂತೆ ಆಚರಿಸುತ್ತಾ ಬಂದಿರುವ ಹರಳೂರು ಟಿ.ಜಿ.ಶಿವಕುಮಾರ್,ಕಳೆದ ಎರಡು ವರ್ಷಗಳಿಂದ ಕೋರೋನ ಇದ್ದ ಕಾರಣ,ಅದ್ದೂರಿಯಾಗಿ ಆಚರಿಸಲು ಸಾಧ್ಯವಾಗಿರಲಿಲ್ಲ.ಈ ಬಾರಿ ಡಾ.ರಾಜ್ ಅವರ ಬೆಳ್ಳಿ ಪುತ್ಥಳಿ ಅನಾವರಣ ಮಾಡುವುದರ ಜೊತೆಗೆ, ಕರಿಬಸವೇಶ್ವರ ವೃತ್ತದಿಂದ ಚರ್ಚ್ ಸರ್ಕಲ್ ವರೆಗಿನ ಹೊರಪೇಟೆ ಮುಖ್ಯರಸ್ತೆಗೆ ಈ ಭಾಗದ ನಾಗರಿಕರೆಲ್ಲರ ಸಹಕಾರದೊಂದಿಗೆ ಡಾ.ರಾಜಕುಮಾರ್ ರಸ್ತೆ ಎಂದು ನಾಮಕರಣ ಸಹ ಮಾಡಿ,ಅವರ ಹೆಸರನ್ನು ಚಿರಸ್ಥಾಯಿಯಾಗಿಸುವ ಕಾರ್ಯವನ್ನು ಹರಳೂರು ಶಿವಕುಮಾರ್ ಮಾಡಿದ್ದಾರೆ.ಇದರ ಜೊತೆಗೆ ಡಾ.ರಾಜ್‍ಕುಮಾರ್ ಅವರ ಬೆಳ್ಳಿ ಪುತ್ಥಳಿ ಮತ್ತು ಅವರ ಪುತ್ರ ಪುನಿತ್ ರಾಜಕುಮಾರ್ ಅವರ ಭಾವಚಿತ್ರದ ಅದ್ದೂರಿ ಮೆರವಣಿಗೆಯನ್ನು ವಿವಿಧ ಕಲಾತಂಡಗಳೊಂದಿಗೆ ಸಹ ಏಪ್ರಿಲ್ 25 ರಂದು ಹಮ್ಮಿಕೊಂಡಿದ್ದಾರೆ. ಈ ಎಲ್ಲಾ ಕಾರ್ಯಗಳಿಗೆ ನಮ್ಮ ಸಹಕಾರವಿದೆ ಎಂದರು.
ಕಾರ್ಯಕ್ರಮದ ರೂವಾರಿ ಹರಳೂರು ಟಿ.ಜಿ.ಶಿವಕುಮಾರ್ ಮಾತನಾಡಿ,ಸಮಾಜದಲ್ಲಿ ಏನಾದರೂ ಒಳ್ಳೆಯ ಕೆಲಸ ಮಾಡಬೇಕೆಂಬುದಕ್ಕೆ ಪ್ರೇರಣೆಯೇ ಡಾ.ರಾಜಕುಮಾರ್,ನಾವು ರಾಜಕುಮಾರ್ ಹೆಸರನ್ನು ಹೊರಪೇಟೆ ಮುಖ್ಯರಸ್ತೆಗೆ ಇಡಬೇಕೆಂದು ಈ ಭಾಗದ ಕಾರ್ಪೋರೇಟರ್ ಶ್ರೀಮತಿ ರೂಪಶ್ರೀ ಶೆಟ್ಟಾಳಯ್ಯ ಅವರನ್ನು ಕೇಳಿದ ಅವರು ಎಲ್ಲಾ ಸದಸ್ಯರನ್ನು ಒಪ್ಪಿಸಿ ಪಾಲಿಕೆಯ ಅನುಮತಿ ಕೊಡಿಸುವ ಮೂಲಕ ಅನುಕೂಲ ಮಾಡಿಕೊಟ್ಟಿದ್ದಾರೆ. ಇದೇ ರೀತಿ ಶಾಸಕರು, ಕರಿಬಸವೇಶ್ವರ ಮಠದ ಶ್ರೀಚನ್ನಬಸವರಾಜೇಂದ್ರ ಶ್ರೀಗಳು ಸಹ ಬೆನ್ನುತಟ್ಟಿ ಸಹಕಾರ ನೀಡಿದ್ದಾರೆ. ಅವರೆಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ.ಅವರ ಬಂಗಾರದ ಮನುಷ್ಯ ಚಿತ್ರದಿಂದ ಪ್ರೇರೆಪಿರಾಗಿ ಹೊಟೇಲ್ ಉದ್ಯಮ ಆರಂಭಿಸಿದ ನಮಗೆ ಇಂದಿಗು ಅವರೇ ಸ್ಪೂರ್ತಿ, ನಮ್ಮ ಹೊಟೇಲ್‍ಗೆ ಬಂದು ತಿಂಡಿ ತಿಂದ ದಿನವನ್ನು ನಾವು ಮರೆಯಲು ಸಾಧ್ಯವೇ ಇಲ್ಲ.ಅವರ 200 ಚಿತ್ರಗಳನ್ನು ಕನಿಷ್ಠವೆಂದರೂ 4-5 ನೋಡಿದ್ದೇನೆ.ಪ್ರತಿವರ್ಷ ಅವರ ಹುಟ್ಟು ಹಬ್ಬವನ್ನು ಆಚರಿಸಿಕೊಂಡು ಬರುತ್ತಿದ್ದೇವೆ. ಏಪ್ರಿಲ್ 25ರ ಸೋಮವಾರ ಡಾ.ರಾಜಕುಮಾರ್ ಅವರ ಬೆಳ್ಳಿ ಪುತ್ಥಳಿ ಮತ್ತು ಪುನಿತ್ ರಾಜಕುಮಾರ್ ಅವರ ಭಾವಚಿತ್ರದ ಅದ್ದೂರಿ ಮೆರವಣಿಗೆ ನಡೆಯಲಿದೆ. ನಾಗರಿಕರು ಭಾಗವಹಿಸಬೇಕೆಂದು ಮನವಿ ಮಾಡಿದರು. ವೇದಿಕೆಯ ದಿವ್ಯ ಸಾನಿಧ್ಯವನ್ನು ಶ್ರೀಶ್ರೀ ಜಗದ್ಗುರು ಚನ್ನಬಸವರಾಜೇಂದ್ರ ಮಹಾಸ್ವಾಮೀಜಿಗಳು ವಹಿಸಿದ್ದರು. ನಗರಪಾಲಿಕೆ ಸದಸ್ಯರಾದ ಟಿ.ಎಂ.ಮಹೇಶ್,ಶ್ರೀಮತಿ ರೂಪಶ್ರೀ ಶೆಟ್ಟಾಳಯ್ಯ,ಇನಾಯತ್‍ವುಲ್ಲಾ ಖಾನ್,ಕೊಪ್ಪಳ ನಾಗರಾಜು,ಶತಶೃಂಗ ಡಾ.ರಾಜಕುಮಾರ್ ಕನ್ನಡ ಅಭಿಮಾನಿಗಳ ಸಂಘದ ಅಧ್ಯಕ್ಷ ಟಿ.ಜಿ.ಶಿವಕುಮಾರ್ ಹರಳೂರು,ಟಿ.ಜಿ.ಬಸವರಾಜು,ಮನು ಹರಳೂರು,ಟಿ.ಸಿ.ದಯಾನಂದ್,ಬಂಬೂ ಮೋಹನ್, ಟಿ.ಹೆಚ್.ವಾಸುದೇವರಾವ್,ಟಿ.ಆರ್.ತೋಂಟದಾರಾಧ್ಯ, ಚಂದ್ರಮೌಳಿ, ರಾಜಣ್ಣ, ಟಿ.ಎಸ್.ಗಟ್ಟಿ, ನಿಶ್ಚಯ್, ಎನ್.ರಾಜ್, ಜೀವನ್ ವಿ, ಮತ್ತಿತರರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರಿಗೆ ಮತ್ತು ಸಾರ್ವಜನಿಕರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

(Visited 7 times, 1 visits today)
Dr.rajkumar tumkur
Previous Articleಮಲೇರಿಯಾ ಜಾಗೃತಿ ಜಾಥಾಕ್ಕೆ ಶಾಸಕ ಜ್ಯೋತಿಗಣೇಶ್ ಚಾಲನೆ
Next Article ಭಾರತ-ಚೀನಾ ಆರ್ಥಿಕ ಮಾರುಕಟ್ಟೆಗೆ ಲಗ್ಗೆ ಹಾಕುವ ಶಪಥವಾಗಲಿ!
News Desk Benkiyabale

Related Posts

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

January 27, 2026 4:05 pm
ಇತರೆ ಸುದ್ಧಿಗಳು

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm
ಇತರೆ ಸುದ್ಧಿಗಳು

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm
ಇತರೆ ಸುದ್ಧಿಗಳು

ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

January 27, 2026 3:57 pm
ಇತರೆ ಸುದ್ಧಿಗಳು

ಕೇಂದ್ರದ ವಿಳಂಬ ನೀತಿಗೆ ಪ್ರತಿಭಟನೆ ಅನಿವಾರ್ಯ

January 27, 2026 3:55 pm
ಇತರೆ ಸುದ್ಧಿಗಳು

ತೆಂಗು ಬೆಳೆ: ಜಾಗೃತಿ ಮೂಡಿಸುವ ಕಾರ್ಯಕ್ರಮದ ವಾಹನಕ್ಕೆ ಶಾಸಕರಿಂದ ಹಸಿರು ನಿಶಾನೆ

January 22, 2026 4:20 pm
Our Youtube Channel
Our Picks

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

January 27, 2026 4:05 pm

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm

ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

January 27, 2026 3:57 pm

ಕೇಂದ್ರದ ವಿಳಂಬ ನೀತಿಗೆ ಪ್ರತಿಭಟನೆ ಅನಿವಾರ್ಯ

January 27, 2026 3:55 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

By News Desk BenkiyabaleJanuary 27, 2026 4:05 pm

ತುಮಕೂರು: ಜಿಲ್ಲೆಯಾದ್ಯಂತ ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆ ಸಂದರ್ಭದಲ್ಲಿ ಗ್ರಾಮೀಣಭಾಗದ ಕಾರ್ಯ ನಿರತ ಪತ್ರಕರ್ತರನ್ನು ಪರಿಗಣಿಸುವಂತೆ ಜಿಲ್ಲಾಧಿಕಾರಿಗೆ ಜಿಲ್ಲಾ ಉಸ್ತುವಾರಿ…

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm

ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

January 27, 2026 3:57 pm
News by Date
February 2026
M T W T F S S
 1
2345678
9101112131415
16171819202122
232425262728  
« Jan    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.