BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸಾಹೇ ವಿವಿ ಅಂತರ್‌ಕಾಲೇಜು ವಾಲಿಬಾಲ್ ಪಂದ್ಯವಳಿ: ಎಸ್‌ಎಸ್‌ಐಟಿ ತಂಡಕ್ಕೆ ಟ್ರೋಫಿ
  • ಭಕ್ತರು ಕಾಲಬೈರೆವೇಶ್ವರ ಸ್ವಾಮಿಯನ್ನು ಶ್ರದ್ದಾಭಕ್ತಯಿಂದ ಪೂಜಿಸಿದರೆ ಇಷ್ಠಾರ್ಥ ನೆರವೇರುವುದು: ಮಹಾಸ್ವಾಮೀಜಿ
  • ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ
  • ಹುಳಿಯಾರು ಪಪಂಗೆ ಅಧ್ಯಕ್ಷರ ಅವಿರೋಧ ಆಯ್ಕೆ
  • ಸೋಲಿನ ನಿರಾಶೆಗಿಂತ, ಮಾನವೀಯ ಮೌಲ್ಯ ತುಂಬುವುದು ಮುಖ್ಯ
  • ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾ. ಶಾಖೆ ಆರಂಭ
  • ದಾಖಲೆ ಸಮೇತ ಗ್ರಾಮಸ್ಥರ ಆರೋಪ
  • ಬೆಳಗಾವಿಯಲ್ಲಿ ತುಮಕೂರು ಗ್ರಾಮಾಂತರ ಅಭಿವೃದ್ಧಿಯ ಕುರಿತು ಸಿಎಂ ಗಮನ ಸೆಳೆದ ಶಾಸಕ ಸುರೇಶ್ ಗೌಡ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ದಲಿತ ಯುವಕರ ಸಾವಿಗೆ ಸ್ಪಂದನೆಯೇ ಇಲ್ಲದಂತಾಗಿದೆ: ಆರ್.ರಾಜೇಂದ್ರ
ತುಮಕೂರು

ದಲಿತ ಯುವಕರ ಸಾವಿಗೆ ಸ್ಪಂದನೆಯೇ ಇಲ್ಲದಂತಾಗಿದೆ: ಆರ್.ರಾಜೇಂದ್ರ

By News Desk BenkiyabaleUpdated:April 29, 2022 7:16 pm

ತುಮಕೂರು:
ರಾಜ್ಯದಲ್ಲಿರುವ ಎಲ್ಲಾ ವರ್ಗದ ಜನರನ್ನು ರಕ್ಷಿಸುವುದಾಗಿ ಪ್ರಮಾಣ ವಚನ ಸ್ವೀಕರಿಸುವ ಶಾಸಕರು, ಸಚಿವರುಗಳು, ಇಬ್ಬರು ದಲಿತ ಯುವಕರ ಕೊಲೆಯಾಗಿ 8 ದಿನಗಳು ಕಳೆಯುತ್ತಾ ಬಂದರೂ ಇದುವರೆಗೂ ಸೌಜನ್ಯಕ್ಕಾದರೂ ಒಬ್ಬರು ಭೇಟಿ ನೀಡದಿರುವುದು ದಲಿತರ ಬಗ್ಗೆ ಸರಕಾರಕ್ಕೆ ಇರುವ ಕಾಳಜಿಯನ್ನು ತೋರಿಸುತ್ತದೆ ಎಂದು ವಿಧಾನಪರಿಷತ್ ಸದಸ್ಯ ಆರ್.ರಾಜೇಂದ್ರ ಸರಕಾರದ ವಿರುದ್ದ ಕಿಡಿ ಕಾರಿದ್ದಾರೆ.
ಇಂದು ಏಪ್ರಿಲ್ 22 ರಂದು ಭರ್ಬರವಾಗಿ ತನ್ನ ಗ್ರಾಮದವರಿಂದಲೇ ಕೊಲೆಯಾದ ಪೆದ್ದನಹಳ್ಳಿಯ ಗಿರೀಶ್ ಮತ್ತು ಮಂಚಲದೊರೆಯ ಗಿರೀಶ್ ಮನೆಗೆ ಭೇಟಿ ನೀಡಿ,ಅವರು ಕುಟುಂಬಗಳಿಗೆ ಸಾಂತ್ವಾನ ಹೇಳಿ, ತಮ್ಮ ಕೈಲಾದ ಅರ್ಥಿಕ ನೆರವು ನೀಡಿ,ನಿಮ್ಮ ಕುಟುಂಬದೊಂದಿಗೆ ನಾವಿದ್ದೇವೆ ಎಂದು ಧೈರ್ಯ ತುಂಬಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಲ್ವರ್ಗದ ಜನರು ಕೊಲೆಯಾದಾಗÀ, ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ, ಪ್ರತಿಭಟನೆ ನಡೆಸಿ, ಶವದ ಮೆರವಣಿಗೆ ನಡೆಸಿ,ಪರಿಹಾರ ವಿತರಿಸುವ ಸರಕಾರದ ಸಚಿವರುಗಳು, ತುಮಕೂರು ಜಿಲ್ಲೆಯಲ್ಲಿ ದಲಿತ ಯುವಕರ ಸಾವಿಗೆ ಸ್ಪಂದನೆಯೇ ಇಲ್ಲದಂತಾಗಿದೆ. ಇಂತಹ ತಾರತಮ್ಯ ಅಗತ್ಯವೇ ಎಂದು ಪ್ರಶ್ನಿಸಿದರು.
ತುಮಕೂರು ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಸ್ವತಹಃ ಗೃಹ ಸಚಿವರಿದ್ದಾರೆ.ಹಾಗೆಯೇ ಜೆ.ಸಿ.ಮಾಧುಸ್ವಾಮಿ ಮತ್ತು ಬಿ.ಸಿ.ನಾಗೇಶ್ ಅವರುಗಳು ಸಚಿವರಾಗಿದ್ದಾರೆ. ಹಾಗೆಯೇ ಕ್ಷೇತ್ರದ ಶಾಸಕರು ಸಹ ಬಿಜೆಪಿ ಪಕ್ಷಕ್ಕೆ ಸೇರಿದವರಾಗಿದ್ದಾರೆ. ಹೀಗಿದ್ದೂ ಒಬ್ಬರು ಸಂತ್ರಸ್ತ ಕುಟುಂಬವನ್ನು ಇದುವರೆಗೂ ಭೇಟಿ ಮಾಡದಿರುವುದು ದುರಾದೃಷ್ಟ. ಸರಕಾರಕ್ಕೆ ದಲಿತರ ಬಗ್ಗೆ ಇರುವ ಕಾಳಜಿಯನ್ನು ಇದು ತೋರಿಸುತ್ತದೆ ಎಂದರು.
ಕಳ್ಳತನ ಮಾಡುತ್ತಿದ್ದರು ಎಂಬುದು ಕೊಲೆ ಮಾಡಲು ಇರುವ ರಹದಾರಿಯಲ್ಲ.ಎಲ್ಲಾ ಸಮುದಾಯದಲ್ಲಿಯೂ ಈ ರೀತಿಯ ಸಣ್ಣಪುಟ್ಟ ತಪ್ಪು ಮಾಡುವವರು ಇದ್ದೇ ಇರುತ್ತಾರೆ. ಕಳ್ಳರನ್ನು ಶಿಕ್ಷಿಸಲು ನಮ್ಮಲ್ಲಿ ಪೊಲೀಸ್ ವ್ಯವಸ್ಥೆ ಇದೆ. ಅದನ್ನು ಬಿಟ್ಟು, ಸಾರ್ವಜನಿಕರೇ ಕಾನೂನು ಕೈಗೆ ತೆಗೆದುಕೊಳ್ಳುವುದು ಎಷ್ಟು ಸರಿ ಎಂದು ಪ್ರಶ್ನಿಸಿದ ಅವರು, ಸರಕಾರ ಬಂಧನಕ್ಕೆ ಒಳಗಾಗಿರುವ ಎಲ್ಲಾ ಆರೋಪಿಗಳನ್ನು ಕೂಲಂಕಷ ತನಿಖೆಗೆ ಒಳಪಡಿಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. ಹಾಗೆಯೇ ರಾಜ್ಯದಲ್ಲಿ ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕೆಂದು ಆರ್.ರಾಜೇಂದ್ರ ಆಗ್ರಹಿಸಿದರು. ದಲಿತ ಯುವಕರು ಕೊಲೆಯಾಗಿರುವ ರೀತಿ ನೋಡಿದರೆ ನಿಜಕ್ಕೂ ಭಯವೆನಿಸುತ್ತದೆ. ನಿಜಕ್ಕು ಇದು ಖಂಡನೀಯ. ಅಲ್ಲದೆ ಇಡೀ ಗ್ರಾಮವೇ ಕೊಲೆಯಾದ ಗಿರೀಶ್ ಕುಟುಂಬದ ಜೊತೆಗೆ ಮಾತನಾಡುತ್ತಿಲ್ಲ. ಸಂತ್ರಸ್ತರಿಗೆ ಧೈರ್ಯ ತುಂಬಬೇಕಾದ ದಲಿತ ಸಮುದಾಯದ ಜನರೇ ಅವವರೊಂದಿಗೆ ಮಾತುಕತೆ ನಿಲ್ಲಿಸಿರುವುದು ದುರಂತ.ಇಡೀ ಕುಟುಂಬ ಭಯದ ವಾತಾವರಣದಲ್ಲಿದೆ.ಹಾಗಾಗಿ ಕುಟುಂಬಕ್ಕೆ ಸೂಕ್ತ ರಕ್ಷಣೆ ಒದಗಿಸಬೇಕು. ಕನಿಷ್ಠ 15 ಲಕ್ಷ ರೂಗಳ ಪರಿಹಾರವನ್ನು ಒದಗಿಸಬೇಕು ಎಂದು ಆರ್.ರಾಜೇಂದ್ರ ಸರಕಾರವನ್ನು ಒತ್ತಾಯಿಸಿದರು. ಈ ವೇಳೆ ಮುಖಂಡರಾದ ಗಂಗಣ್ಣ, ಸಿಂಗದಹಳ್ಳಿ ರಾಜಕುಮಾರ್, ಜಿ.ಪಂ.ಸದಸ್ಯ ಪ್ರಭಾಕರ್ ದಲಿತ ಮುಖಂಡರಾದ ಕೊಟ್ಟಶಂಕರ್, ವಿರೂಪಾಕ್ಷ ಡ್ಯಾಗೇರಹಳ್ಳಿ,ಮಂಜೇಶ್ ಗುಬ್ಬಿ, ಮಾದಿಗ ದಂಡೋರ ರಾಜ್ಯ ವಕ್ತಾರ ಎಂ.ವಿ.ರಾಘವೇಂದ್ರಸ್ವಾಮಿ, ಮರಳೂರು ರಾಮಣ್ಣ, ಕುರಿ ಮೂರ್ತಿ, ಮುರಳಿ ಕುಂದೂರು, ಚೇಳೂರು ಶಿವನಂಜಪ್ಪ ಉಪಸ್ಥಿತರಿದ್ದರು.

(Visited 205 times, 1 visits today)
R. Rajendra tumkur
Previous Article200 ಕೋಟಿ ವೆಚ್ಚದಲ್ಲಿ 100 ಪೊಲೀಸ್ ಠಾಣೆ ನಿರ್ಮಾಣ: ಅರಗ ಜ್ಞಾನೇಂದ್ರ
Next Article ಇದು ನನ್ನ ಕೊನೆಯ ಚುನಾವಣೆ ಒಗ್ಗಟ್ಟಿನಿಂದ ಗೆಲ್ಲಿಸಿ: ಕೆ.ಎನ್ ರಾಜಣ್ಣ
News Desk Benkiyabale

Related Posts

ಡಿ. 12 ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ

December 12, 2025 3:48 pm ತುಮಕೂರು

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ: ಶೇ. ೬೦.೭೧ರಷ್ಟು ಪ್ರಗತಿ

December 12, 2025 3:25 pm ತುಮಕೂರು

ಸರ್ಕಾರಿ ಯೋಜನೆಗಳ ಸಮಗ್ರ ಅನುಷ್ಠಾನಕ್ಕೆ ಡಿಸಿ ಸೂಚನೆ

December 08, 2025 4:21 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಸಾಹೇ ವಿವಿ ಅಂತರ್‌ಕಾಲೇಜು ವಾಲಿಬಾಲ್ ಪಂದ್ಯವಳಿ: ಎಸ್‌ಎಸ್‌ಐಟಿ ತಂಡಕ್ಕೆ ಟ್ರೋಫಿ

December 16, 2025 4:12 pm
ಇತರೆ ಸುದ್ಧಿಗಳು

ಭಕ್ತರು ಕಾಲಬೈರೆವೇಶ್ವರ ಸ್ವಾಮಿಯನ್ನು ಶ್ರದ್ದಾಭಕ್ತಯಿಂದ ಪೂಜಿಸಿದರೆ ಇಷ್ಠಾರ್ಥ ನೆರವೇರುವುದು: ಮಹಾಸ್ವಾಮೀಜಿ

December 16, 2025 4:11 pm
ಇತರೆ ಸುದ್ಧಿಗಳು

ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

December 16, 2025 4:10 pm
ಇತರೆ ಸುದ್ಧಿಗಳು

ಹುಳಿಯಾರು ಪಪಂಗೆ ಅಧ್ಯಕ್ಷರ ಅವಿರೋಧ ಆಯ್ಕೆ

December 16, 2025 4:09 pm
ಇತರೆ ಸುದ್ಧಿಗಳು

ಸೋಲಿನ ನಿರಾಶೆಗಿಂತ, ಮಾನವೀಯ ಮೌಲ್ಯ ತುಂಬುವುದು ಮುಖ್ಯ

December 16, 2025 4:08 pm
ಇತರೆ ಸುದ್ಧಿಗಳು

ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾ. ಶಾಖೆ ಆರಂಭ

December 16, 2025 4:06 pm
Our Youtube Channel
Our Picks

ಸಾಹೇ ವಿವಿ ಅಂತರ್‌ಕಾಲೇಜು ವಾಲಿಬಾಲ್ ಪಂದ್ಯವಳಿ: ಎಸ್‌ಎಸ್‌ಐಟಿ ತಂಡಕ್ಕೆ ಟ್ರೋಫಿ

December 16, 2025 4:12 pm

ಭಕ್ತರು ಕಾಲಬೈರೆವೇಶ್ವರ ಸ್ವಾಮಿಯನ್ನು ಶ್ರದ್ದಾಭಕ್ತಯಿಂದ ಪೂಜಿಸಿದರೆ ಇಷ್ಠಾರ್ಥ ನೆರವೇರುವುದು: ಮಹಾಸ್ವಾಮೀಜಿ

December 16, 2025 4:11 pm

ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

December 16, 2025 4:10 pm

ಹುಳಿಯಾರು ಪಪಂಗೆ ಅಧ್ಯಕ್ಷರ ಅವಿರೋಧ ಆಯ್ಕೆ

December 16, 2025 4:09 pm

ಸೋಲಿನ ನಿರಾಶೆಗಿಂತ, ಮಾನವೀಯ ಮೌಲ್ಯ ತುಂಬುವುದು ಮುಖ್ಯ

December 16, 2025 4:08 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಸಾಹೇ ವಿವಿ ಅಂತರ್‌ಕಾಲೇಜು ವಾಲಿಬಾಲ್ ಪಂದ್ಯವಳಿ: ಎಸ್‌ಎಸ್‌ಐಟಿ ತಂಡಕ್ಕೆ ಟ್ರೋಫಿ

By News Desk BenkiyabaleDecember 16, 2025 4:12 pm

ತುಮಕೂರು: ಕ್ರೀಡಾಕೂಟಗಳು ವಿದ್ಯಾರ್ಥಿಗಳ ಮನಸ್ಸಿಗೆ ಮತ್ತು ದೇಹಕ್ಕೆ ಹೊಸ ಚೈತನ್ಯವನ್ನು ನೀಡುತ್ತದೆ ಪ್ರತಿನಿತ್ಯ ದೇಹವನ್ನು ದಂಡಿಸಿ ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ…

ಭಕ್ತರು ಕಾಲಬೈರೆವೇಶ್ವರ ಸ್ವಾಮಿಯನ್ನು ಶ್ರದ್ದಾಭಕ್ತಯಿಂದ ಪೂಜಿಸಿದರೆ ಇಷ್ಠಾರ್ಥ ನೆರವೇರುವುದು: ಮಹಾಸ್ವಾಮೀಜಿ

December 16, 2025 4:11 pm

ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

December 16, 2025 4:10 pm

ಹುಳಿಯಾರು ಪಪಂಗೆ ಅಧ್ಯಕ್ಷರ ಅವಿರೋಧ ಆಯ್ಕೆ

December 16, 2025 4:09 pm
News by Date
December 2025
M T W T F S S
1234567
891011121314
15161718192021
22232425262728
293031  
« Nov    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.