BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಮತ್ತೊಮ್ಮೆ ಸಿಎಂ ಪಟ್ಟಣಕ್ಕೆ: ಶಾಸಕ ಎಚ್.ವಿ. ವೆಂಕಟೇಶ್
  • ನಗರಾಭಿವೃದ್ಧಿಗೆ ಸ್ಲಂ ನಲ್ಲಿರುವ ಬಡವರ ಕೊಡುಗೆ ಅಪಾರ: ಶಾಸಕ ಜ್ಯೋತಿ ಗಣೇಶ್ ಹೇಳಿಕೆ
  • ೫ ಜನರಿಗೆ ದಾಳಿ ನೆಡೆಸಿದ್ದ ಚಿರತೆ ಬುಧವಾರ ರಾತ್ರಿ ಸೆರೆ
  • ತಂತ್ರಜ್ಞಾನವನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ: ಎಸ್‌ಪಿ
  • ಹದಿಹರೆಯದ ವಯಸ್ಸಿನಲ್ಲಿ ತುಂಬಾ ಎಚ್ಚರಿಕೆ ಇರಲಿ
  • ಹದಿಹರೆಯದ ವಯಸ್ಸಿನಲ್ಲಿ ತುಂಬಾ ಎಚ್ಚರಿಕೆ ಇರಲಿ
  • ೨೦೨೭ಕ್ಕೆ ಎತ್ತಿನಹೊಳೆ ಕಾಮಗಾರಿ ಪೂರ್ಣ: ಪರಂ
  • ಐದು ಜನರ ಮೇಲೆ ಚಿರತೆ ದಾಳಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಹಿಂದುಳಿದ ವರ್ಗಕ್ಕೆ ಪ್ರಬಲ ಜಾತಿಗಳ ಸೇರ್ಪಡೆಯಿಂದ ಅನ್ಯಾಯ
ತುಮಕೂರು

ಹಿಂದುಳಿದ ವರ್ಗಕ್ಕೆ ಪ್ರಬಲ ಜಾತಿಗಳ ಸೇರ್ಪಡೆಯಿಂದ ಅನ್ಯಾಯ

By News Desk BenkiyabaleUpdated:May 02, 2022 7:44 pm

ತುಮಕೂರು:
ಪ್ರಬಲ ಜಾತಿಗಳನ್ನು ಪ್ರವರ್ಗ-2ಕ್ಕೆ ಸೇರಿಸುವುದರಿಂದ ಹಿಂದುಳಿದ ವರ್ಗಗಳಿಗೆ ಸೇರಿದ 105 ಜಾತಿಗಳಿಗೆ ತೀವ್ರ ಅನ್ಯಾಯವಾಗಲಿದೆ. ಇದರ ವಿರುದ್ದ ಜನಜಾಗೃತಿ ಮೂಡಿಸುವ ಕೆಲಸವನ್ನು ಹಿಂದುಳಿದ ವರ್ಗಗಳ ಮುಖಂಡರು ಮಾಡಬೇಕಾಗಿದೆ ಎಂದು ಚಿಕ್ಕನಾಯಕನಹಳ್ಳಿ ತಾಲೂಕು ಹಿಂದುಳಿದ ವರ್ಗಗಳ ಹಿತರಕ್ಷಣಾ ಸಮಿತಿ ಸಂಚಾಲಕ ಕ್ಯಾಪ್ಟನ್ ಸೋಮಶೇಖರ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಎದುರು ಚಿಕ್ಕನಾಯಕನಹಳ್ಳಿ ತಾಲೂಕು ಹಿಂದುಳಿದ ವರ್ಗಗಗಳ ಹಿತರಕ್ಷಣಾ ಸಮಿತಿವತಿಯಿಂದ ಆಯೋಜಿಸಿದ್ದ ಪ್ರತಿಭಟನಾ ಧರಣಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಬಲ ಜಾತಿಗಳನ್ನು ಪ್ರವರ್ಗ-2ಎಗೆ ಸೇರಿಸುವುದರಿಂದ ಹಿಂದುಳಿದ ಜಾತಿಗಳಿಗೆ ಸರಕಾರಿ ನೌಕರಿ,ರಾಜಕೀಯ ಅಧಿಕಾರ ಮರೀಚಿಕೆಯಾಗಲಿದೆ.ಸಾಮಾಜಿಕವಾಗಿ, ಶೈಕ್ಷಣಿಕವಾಗಿ,ಅರ್ಥಿಕವಾಗಿ ಕುಸಿಯುವುದಲ್ಲದೆ,ಮುಂದಿನ ಯುವಜನತೆ ಸಾಕಷ್ಟು ಪಶ್ಚಾತಾಪ ಪಡಲಿದ್ದಾರೆ.ಹಾಗಾಗಿ ಸರಕಾರ ಪ್ರಬಲ ಜಾತಿಗಳನ್ನು ಹಿಂದುವರ್ಗ ಎಗೆ ಸೇರಿಸುವ ಪ್ರಸ್ತಾಪವನ್ನು ಕೈಬಿಡಬೇಕೆಂಬುದು ನಮ್ಮ ಆಗ್ರಹವಾಗಿದೆ.ಅಲ್ಲದೆ ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ವಿಚಾರಸಂಕಿರಣದಂತಹ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಜಿಲ್ಲಾ ಸಮಿತಿಯ ಮುಖಂಡರುಗಳಿಗೆ ಮನವಿ ಮಾಡಿದರು.
ಸಮಿತಿಯ ಮತ್ತೊಬ್ಬ ಸಂಚಾಲಕ ಸಿ.ಡಿ.ಚಂದ್ರಶೇಖರ್ ಮಾತನಾಡಿ,ಪಂಚಮಶಾಲಿ ಲಿಂಗಾಯಿತರನ್ನು ಪ್ರವರ್ಗ 2 ಎ ಗೆ ಸೇರಿಸಲು ಸರಕಾರ ಮುಂದಾಗಿದೆ.ಇದು ಸಂವಿಧಾನಕ್ಕೆ ಮಾಡಿದ ಅಪಚಾರ.ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯವೆಂಬುದು ಈಗಾಗಲೇ ಮರೀಚಿಕೆಯಾಗಿದೆ.ಹಿಂದುಳಿದ ಸಮುದಾಯದಲ್ಲಿರುವ ಜಾತಿಗಳು,ಶೈಕ್ಷಣಿಕ, ಅರ್ಥಿಕ,ರಾಜಕೀಯ ಸೌಲಬ್ಯಗಳು ಸಿಗದೆ ತತ್ತರಿಸಿ ಹೋಗಿರುವಂತಹ ಹೊತ್ತಿನಲ್ಲಿ, ಪ್ರಬಲ ಜಾತಿಗಳನ್ನು ಪ್ರವರ್ಗ 2ಕ್ಕೆ ಸೇರಿಸುವುದರಿಂದ ಆ ಸಮುದಾಯಗಳಿಗೆ ಮತ್ತಷ್ಟು ಅನ್ಯಾಯಮಾಡಿದಂತಾಗುತ್ತದೆ. ಹಾಗಾಗಿ ಸರಕಾರ ಕೂಡಲೇ ಈ ನಿರ್ಧಾರದಿಂದ ಹಿಂದೆ ಸರಿಯಬೇಕೆಂಬುದು ಹಿಂದುಳಿದ ವರ್ಗಗಳ ಆಗ್ರಹವಾಗಿದೆ. ಒಂದು ವೇಳೆ ಸರಕಾರ ಸರಿಯಾದ ತೀರ್ಮಾನ ತೆಗೆದುಕೊಂಡು ಓಬಿಸಿಗಳ ಹಿತರಕ್ಷಿಸಿದಿದ್ದರೆ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹೋರಾಟ ರೂಪಿಸಿ, ಬೆಂಗಳೂರಿನ ಪ್ರೀಡಂ ಪಾರ್ಕಿನಲ್ಲಿ ನಮ್ಮ ಬೇಡಿಕೆ ಈಡೇರುವವರೆಗೂ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗುವುದು. ಇದಕ್ಕೆ ಎಲ್ಲಾ ಹಿಂದುಳಿದ ವರ್ಗಗಳ ಸಮುದಾಯದವರು ಯಾವ ತ್ಯಾಗಕ್ಕಾದರೂ ಸಿದ್ದರಾಗುವಂತೆ ಮನವಿ ಮಾಡಿದರು.
ತುಮಕೂರು ಜಿಲ್ಲಾ ಹಿಂದುಳಿದ ಸಮುದಾಯಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಧನಿಯಕುಮಾರ್ ಮಾತನಾಡಿ,ಪ್ರಬಲ ಜಾತಿಗಳನ್ನು ಹಿಂದುಳಿದ ವರ್ಗ ಬ ಗೆ ಸೇರಿಸಲು ಮುಂದಾಗಿರುವುದು ಖಂಡನೀಯ.ಒಂದು ವೇಳೆ ಸರಕಾರ ಈ ವಿಚಾರದಲ್ಲಿ ಹಿಂದುಳಿದ ಸಮುದಾಯಗಳ ವಿರುದ್ದವಾಗಿ ಕೆಲಸ ಮಾಡಿದರೆ, ಮುಂದಿನ ಚುನಾವಣೆಯಲ್ಲಿ ಸಂಪೂರ್ಣವಾಗಿ ಹಿಂದುಳಿದ ಜಾತಿಗಳು ಬಿಜೆಪಿಗೆ ವಿರುದ್ದವಾಗಿ ನಿಲ್ಲುತ್ತವೆ ಎಂಬ ಎಚ್ಚರಿಕೆ ನೀಡಿದರು.
ಹಿಂದುಳಿದ ವರ್ಗಗಳ ಯುವಜನರಿಗೆ ಸರಕಾರಿ ಕೆಲಸವೆಂಬುದು ಮರೀಚಿಕೆಯಾಗಿದೆ.ಶಿಕ್ಷಣ ಮತ್ತು ರಾಜಕೀಯದಲ್ಲಿಯೂ ಮೀಸಲಾತಿ ಬಹಳ ದೂರದ ಮಾತಾಗಿದೆ. ಇಂತಹ ವೇಳೆಯಲ್ಲಿ ಪ್ರಬಲ ಜಾತಿಗಳನ್ನು ಸೇರ್ಪಡೆ ಮಾಡುವುದು, ನಮ್ಮ ತಟ್ಟೆಯಲ್ಲಿರುವ ಅನ್ನವನ್ನು ಕಸಿದು, ಬಲಾಢ್ಯರಿಗೆ ನೀಡಿದಂತಾಗುತ್ತದೆ.ಇದು ಎಸ್ಸಿ, ಎಸ್ಟಿ, ಓಬಿಸಿ ಸಮುದಾಯಗಳು ಮೀಸಲಾತಿ ಮೂಲಕ ಪಡೆಯುತ್ತಿರುವ ಸೌಲಭ್ಯಗಳಿಗೆ ಹಳ್ಳ ತೋಡಿದಂತಾಗುತ್ತದೆ.ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಶೀಘ್ರವೇ ವಿಚಾರಸಂಕಿರಣವೊಂದನ್ನು ಏರ್ಪಡಿಸಲಾಗುವುದು ಎಂದು ಧನಿಯಕುಮಾರ್ ತಿಳಿಸಿದರು.
ಹಿಂದುಳಿದ ಸಮುದಾಯಗಳ ಒಕ್ಕೂಟದ ಸಂಚಾಲಕ ಕೆಂಪರಾಜು ಮಾತನಾಡಿ,ಒಬಿಸಿಗಳ ಹಿತರಕ್ಷಣೆಗೆ ಧರಣಿ ಕೈಗೊಂಡಿರುವುದನ್ನು ಬೆಂಬಲಿಸಿ, ಇಂದು ನಾವೂ ಕೂಡ ಹೋರಾಟದಲ್ಲಿ ಪಾಲ್ಗೊಂಡಿದ್ದೇವೆ.ಹಿಂದುಳಿದ ಸಮುದಾಯಗಳಿಗೆ ನೀಡುತ್ತಿರುವ ಅಲ್ಪಪ್ರಮಾಣದ ಸವಲತ್ತುಗಳು ಇನ್ನೂ ಕೆಲ ಸಣ್ಣ, ಅತಿ ಸಣ್ಣ ಜಾತಿಗಳಿಗೆ ತಲುಪಿಲ್ಲ.ಅಭಿವೃದ್ದಿ ನಿಗಮಗಳಲ್ಲಿ ನಿಗಧಿ ಪಡಿಸಿರುವ ಗುರಿಗಳಿಗೂ ಜನಸಂಖ್ಯೆಗೂ ಅಜಗಜಾಂತರ ವೆತ್ಯಾಸವಿದೆ.ಹೀಗಿರುವಾಗ ಪ್ರಬಲ ಜಾತಿಗಳನ್ನು ಸೇರಿಸುವುದರಿಂ ಹೆಚ್ಚಿನ ತೊಂದರೆಯಾಗಲಿದೆ. ಈ ಬಗ್ಗೆ ಹಿಂದುಳಿದ ಸಮುದಾಯಗಳಲ್ಲಿ ಜಾಗೃತಿ ಮೂಡಿಸಲು ತಾಲೂಕು, ಹೋಬಳಿ ಮಟ್ಟದಲ್ಲಿ ಜನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಬೃಹತ್ ಹೋರಾಟ ರೂಪಿಸಿ, ಪ್ರಬಲ ಜಾತಿಗಳನ್ನು ಪ್ರವರ್ಗ-2ಎಗೆ ಸೇರಿದಂತೆ ಒತ್ತಡ ತರಲಾಗುವುದು ಎಂದರು.
ಧರಣಿ ಸತ್ಯಾಗ್ರಹದಲ್ಲಿ ಮುಖಂಡರಾದ ಜಾಕೀರ್ ಹುಸೇನ್,ಶಿವಣ್ಣ, ರವಿಕುಮಾರ್,ಚಂದ್ರಶೇಖರ್ ಹುಳಿಯಾರು, ನಟರಾಜು,ಸಿ.ಆರ್, ಗುರುಪ್ರಸಾದ್, ರಾಜು ಹೊನ್ನೇಬಾಗಿ ಮುಂತಾದವರು ಭಾಗವಹಿಸಿದ್ದರು.

 

(Visited 1 times, 1 visits today)
Obc tumkur
Previous Articleಇದು ನನ್ನ ಕೊನೆಯ ಚುನಾವಣೆ ಒಗ್ಗಟ್ಟಿನಿಂದ ಗೆಲ್ಲಿಸಿ: ಕೆ.ಎನ್ ರಾಜಣ್ಣ
Next Article ಕಷ್ಟಕ್ಕೆ ದೇವರು ಪರಿಹಾರವಲ್ಲ ದುಡಿಮೆಯೇ ಪರಿಹಾರ!
News Desk Benkiyabale

Related Posts

ಹದಿಹರೆಯದ ವಯಸ್ಸಿನಲ್ಲಿ ತುಂಬಾ ಎಚ್ಚರಿಕೆ ಇರಲಿ

July 31, 2025 2:59 pm ತುಮಕೂರು

ಹದಿಹರೆಯದ ವಯಸ್ಸಿನಲ್ಲಿ ತುಂಬಾ ಎಚ್ಚರಿಕೆ ಇರಲಿ

July 31, 2025 2:57 pm ತುಮಕೂರು

೨೦೨೭ಕ್ಕೆ ಎತ್ತಿನಹೊಳೆ ಕಾಮಗಾರಿ ಪೂರ್ಣ: ಪರಂ

July 31, 2025 2:33 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಮತ್ತೊಮ್ಮೆ ಸಿಎಂ ಪಟ್ಟಣಕ್ಕೆ: ಶಾಸಕ ಎಚ್.ವಿ. ವೆಂಕಟೇಶ್

August 01, 2025 1:37 pm
ಇತರೆ ಸುದ್ಧಿಗಳು

ನಗರಾಭಿವೃದ್ಧಿಗೆ ಸ್ಲಂ ನಲ್ಲಿರುವ ಬಡವರ ಕೊಡುಗೆ ಅಪಾರ: ಶಾಸಕ ಜ್ಯೋತಿ ಗಣೇಶ್ ಹೇಳಿಕೆ

August 01, 2025 1:36 pm
ಇತರೆ ಸುದ್ಧಿಗಳು

೫ ಜನರಿಗೆ ದಾಳಿ ನೆಡೆಸಿದ್ದ ಚಿರತೆ ಬುಧವಾರ ರಾತ್ರಿ ಸೆರೆ

August 01, 2025 1:35 pm
ಇತರೆ ಸುದ್ಧಿಗಳು

ತಂತ್ರಜ್ಞಾನವನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ: ಎಸ್‌ಪಿ

August 01, 2025 1:33 pm
ತುಮಕೂರು

ಹದಿಹರೆಯದ ವಯಸ್ಸಿನಲ್ಲಿ ತುಂಬಾ ಎಚ್ಚರಿಕೆ ಇರಲಿ

July 31, 2025 2:59 pm

ಹದಿಹರೆಯದ ವಯಸ್ಸಿನಲ್ಲಿ ತುಂಬಾ ಎಚ್ಚರಿಕೆ ಇರಲಿ

July 31, 2025 2:57 pm
Our Youtube Channel
Our Picks

ಮತ್ತೊಮ್ಮೆ ಸಿಎಂ ಪಟ್ಟಣಕ್ಕೆ: ಶಾಸಕ ಎಚ್.ವಿ. ವೆಂಕಟೇಶ್

August 01, 2025 1:37 pm

ನಗರಾಭಿವೃದ್ಧಿಗೆ ಸ್ಲಂ ನಲ್ಲಿರುವ ಬಡವರ ಕೊಡುಗೆ ಅಪಾರ: ಶಾಸಕ ಜ್ಯೋತಿ ಗಣೇಶ್ ಹೇಳಿಕೆ

August 01, 2025 1:36 pm

೫ ಜನರಿಗೆ ದಾಳಿ ನೆಡೆಸಿದ್ದ ಚಿರತೆ ಬುಧವಾರ ರಾತ್ರಿ ಸೆರೆ

August 01, 2025 1:35 pm

ತಂತ್ರಜ್ಞಾನವನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ: ಎಸ್‌ಪಿ

August 01, 2025 1:33 pm

ಮಕ್ಕಳಲ್ಲಿ ದಂತಗಳ ಸಂರಕ್ಷಣೆ ಬಗ್ಗೆ ಜಾಗೃತಿ ಅತ್ಯಗತ್ಯ

July 31, 2025 2:00 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಮತ್ತೊಮ್ಮೆ ಸಿಎಂ ಪಟ್ಟಣಕ್ಕೆ: ಶಾಸಕ ಎಚ್.ವಿ. ವೆಂಕಟೇಶ್

By News Desk BenkiyabaleAugust 01, 2025 1:37 pm

ಪಾವಗಡ: ಚುನಾವಣಾ ಸಮಯದಲ್ಲಿ ಭರವಸೇ ನೀಡಿದ್ದು ಅದರಂತೆ ಪಾವಗಡ ಪಟ್ಟಣವನ್ನು ೨೦ ಕೋಟಿ ವೆಚ್ಚದಲ್ಲಿ ೨೩ ವಾರ್ಡ ಗಳ ಮೂಲ…

ನಗರಾಭಿವೃದ್ಧಿಗೆ ಸ್ಲಂ ನಲ್ಲಿರುವ ಬಡವರ ಕೊಡುಗೆ ಅಪಾರ: ಶಾಸಕ ಜ್ಯೋತಿ ಗಣೇಶ್ ಹೇಳಿಕೆ

August 01, 2025 1:36 pm

೫ ಜನರಿಗೆ ದಾಳಿ ನೆಡೆಸಿದ್ದ ಚಿರತೆ ಬುಧವಾರ ರಾತ್ರಿ ಸೆರೆ

August 01, 2025 1:35 pm

ತಂತ್ರಜ್ಞಾನವನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ: ಎಸ್‌ಪಿ

August 01, 2025 1:33 pm
News by Date
August 2025
M T W T F S S
 123
45678910
11121314151617
18192021222324
25262728293031
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.