BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ
  • ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ
  • ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್
  • ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ
  • ಕೇಂದ್ರದ ವಿಳಂಬ ನೀತಿಗೆ ಪ್ರತಿಭಟನೆ ಅನಿವಾರ್ಯ
  • ತೆಂಗು ಬೆಳೆ: ಜಾಗೃತಿ ಮೂಡಿಸುವ ಕಾರ್ಯಕ್ರಮದ ವಾಹನಕ್ಕೆ ಶಾಸಕರಿಂದ ಹಸಿರು ನಿಶಾನೆ
  • ಡಾ.ಶಿವಕುಮಾರ ಶ್ರೀಗಳ ಪುಣ್ಯಸಂಸ್ಮರಣೆ: ದಾಸೋಹದಿನ ಆಚರಣೆ
  • ರೇಷ್ಮೆ ಕೃಷಿ ಬೆಳಗಾರರ ಗುಂಪು ಸಭೆ ಕಾರ್ಯಕ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನ್ಯಾ.ಕೆಂಪಣ್ಣ ವರದಿ ಹೊರಬಂದರೆ ಸಿದ್ದರಾಮಯ್ಯ ಜೈಲಿಗೆ ಹೋಗಬೇಕಾಗುತ್ತದೆ: ನಳೀನ್ ಕುಮಾರ್ ಕಟೀಲ್
ತುಮಕೂರು

ನ್ಯಾ.ಕೆಂಪಣ್ಣ ವರದಿ ಹೊರಬಂದರೆ ಸಿದ್ದರಾಮಯ್ಯ ಜೈಲಿಗೆ ಹೋಗಬೇಕಾಗುತ್ತದೆ: ನಳೀನ್ ಕುಮಾರ್ ಕಟೀಲ್

By News Desk BenkiyabaleUpdated:May 07, 2022 7:22 pm

ತುಮಕೂರು:
ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಪಕ್ಷದ ಆಡಳಿತ, ಸ್ವಾಮಿ ವಿವೇಕಾನಂದರು ವಿಶ್ವಕುಟುಂಬ ಹಾಗೂ ಗಾಂಧೀಜಿಯವರ ರಾಮರಾಜ್ಯದ ಪರಿಕಲ್ಪನೆಯಲ್ಲಿ ಕೆಲಸ ಮಾಡುತಿದ್ದು, ದೀನದಯಾಳ್ ಉಪಾಧ್ಯಾಯ ಅವರ ಅಂತ್ಯೋದಯದ ಕನಸನ್ನು ಸಕಾರಗೊಳಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳೀನಕುಮಾರ್ ಕಟೀಲ್ ಅಭಿಪ್ರಾಯಪಟ್ಟಿದ್ದಾರೆ.
ನಗರದ ಗಾಜಿನಮನೆಯಲ್ಲಿ ಬಿಜೆಪಿ ವತಿಯಿಂದ ಆಯೋಜಿಸಿದ್ದ ಮಧುಗಿರಿ ಮತ್ತು ತುಮಕೂರು ಸಂಘಟನಾತ್ಮಕ ಜಿಲ್ಲೆಗಳ ವಿವಿಧ ಪ್ರಕೋಷ್ಠಗಳ ಮುಖಂಡರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು,ಕಾಂಗ್ರೆಸ್ ಪಕ್ಷದ ಒಲೈಕೆ ರಾಜಕಾರಣದಿಂದ ಇಂದು ದೇಶದ ಪ್ರತಿ ಮನೆ ಮನೆಯಲ್ಲಿಯೂ ರಾವಣರಿದ್ದು,ಅವರನ್ನು ಸರಿದಾರಿಗೆ ತರಲು ಗಾಂಧಿಜೀಯ ರಾಮರಾಜ್ಯದ ಕನಸನ್ನು ಸಾಕಾರಗೊಳಿಸುತ್ತಿದೆ ಎಂದರು.
ಬಿಜೆಪಿ ಅಡಳಿತವನ್ನು ಸರ್ವವ್ಯಾಪ್ತಿ ಮತ್ತು ಸರ್ವಸ್ಪಷಿಯಾಗಿ ಮಾಡಲು ಬಿಜೆಪಿ ಪಕ್ಷದ ಹುಟ್ಟು ಹಾಕಿರುವ 24 ವಿವಿಧ ಪ್ರಕೋಷ್ಠಗಳ 32 ಸಾವಿರಕ್ಕು ಹೆಚ್ಚು ಕಾರ್ಯಕರ್ತರು ಇಂದಿನಿಂದ ಜಿಲ್ಲೆಯಿಂದ ತಾಲೂಕು, ತಾಲೂಕಿನಿಂದ ಹೋಬಳಿ, ಹೋಬಳಿಯಿಂದ ಗ್ರಾಮ, ಗ್ರಾಮದಿಂದ ಬೂತ್, ಬೂತ್‍ನಿಂದ ಮತದಾರ. ಹೀಗೆ ಎಲ್ಲಾ ಹಂತದಲ್ಲಿ ಪಕ್ಷದ ಸಾಧನೆಗಳು, ಜಾರಿಗೆ ತಂದ ಯೋಜನೆಗಳನ್ನು ಮತದಾರನಿಗೆ ಮುಟ್ಟಿಸುವ ಕೆಲಸವನ್ನು ಮಾಡಲಿದೆ. ಇದಕ್ಕಾಗಿ ನಮ್ಮ ಪ್ರಕೋಷ್ಠಗಳ ಕಾರ್ಯಕರ್ತರು ಸರ್ವ ಸನ್ನದ್ದರಾಗಿದ್ದಾರೆ ಎಂದು ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ತಿಳಿಸಿದರು.
ಈ ದೇಶದಲ್ಲಿ ಭ್ಟ್ರಷ್ಟಾಚಾರ, ಸ್ವಜನ ಪಕ್ಷಪಾತ, ಕುಟುಂಬ ರಾಜಕಾರಣಕ್ಕೆ ಕಾಂಗ್ರೆಸ್ ಒತ್ತು ನೀಡಿದ್ದರ ಫಲವಾಗಿ ಇಂದು ವಿನಾಶದ ಅಂಚಿಗೆ ತಲುಪಿದೆ. ವಿರೋಧಪಕ್ಷದ ಸ್ಥಾನವನ್ನು ಪಡೆಯಲು ಸಹ ವಿಫಲವಾಗಿದೆ. ಲೋಕಸಭೆಯಲ್ಲಿ ಕೇವಲ ಎರಡು ಸ್ಥಾನ ಪಡೆದಿದ್ದ ಬಿಜೆಪಿ ಇಂದು 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದಿದೆ.ಪಕ್ಷದ ಹಿರಿಯರು ಹಾಕಿಕೊಟ್ಟ ದೇಶಪ್ರೇಮ, ಭ್ರಷ್ಟಾಚಾರ ರಹಿತ ಆಡಳಿತ ಮತ್ತು ಅಂತ್ಯೋದಯ ಎಂಬ ಸಾಮಾಜಿಕ ಚಿಂತನೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಣಾಮ ಪಂಚಾಯಿತಿಯಿಂದ ಪಾರ್ಲಿಮೆಂಟ್ ವರೆಗೆ ದೇಶದ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದರು.
ಕಾಂಗ್ರೆಸ್ ಪಕ್ಷ ವಿನಾಕಾರಣ ಬಿಜೆಪಿ ಪಕ್ಷದ ಮುಖ್ಯಮಂತ್ರಿ ಮತ್ತು ಮಂತ್ರಿಗಳ ಮೇಲೆ ಪಿ.ಎಸ್.ಐ ಪರೀಕ್ಷೆ ಹಗರಣ ಸೇರಿದಂತೆ ಹಲವಾರು ಭ್ರಷ್ಟಾಚಾರದ ಆರೋಪಗಳನ್ನು ಮಾಡಿದೆ.ನಾವು ಹೆದರಿ ಓಡಿ ಹೋಗುವುದಿಲ್ಲ.ಸರಿಯಾದ ರೀತಿ ತನಿಖೆ ನಡೆಸುತಿದ್ದೇವೆ. ಎಷ್ಟೇ ಪ್ರಭಾವಿಇದ್ದರೂ ಅವರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಲು ಗೃಹ ಸಚಿವರು ಸಮರ್ಥವಾಗಿ ಕೆಲಸ ಮಾಡುತ್ತಿದ್ದಾರೆ.ಆದರೆ ಕಾಂಗ್ರೆಸ್ ಆಡಳಿತದಲ್ಲಿ ನಡೆದ ಹಲವಾರು ಹಗರಣಗಳನ್ನು ತನಿಖೆ ನಡೆಸದೇ ಮುಚ್ಚಿ ಹಾಕಲಾಗಿದೆ. ಅಕ್ರಾವರ್ತಿ ಹಗರಣದ ಕುರಿತು ನ್ಯಾ.ಕೆಂಪಣ್ಣ ವರದಿ ಹೊರಬಂದರೆ ಸಿದ್ದರಾಮಯ್ಯ ಜೈಲಿನಲ್ಲಿ ಇರಬೇಕಾಗುತ್ತದೆ.ಪಿ.ಎಸ್.ಐ ಹಗರಣದಲ್ಲಿಯೂ ಶೇ80 ರಷ್ಟು ಆರೋಪಿಗಳು ಕಾಂಗ್ರೆಸ್ ಪಕ್ಷದವರೆ ಆಗಿದ್ದಾರೆ.ಅವರೆಲ್ಲರೂ ಜೈಲಿಗೆ ಹೋಗುವ ಕಾಲ ದೂರವಿಲ್ಲ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಸೇರಿದಂತೆ ಬಹುತೇಕರು ಬೇಲ್‍ಮೇಲೆ ಹೊರಗಿದ್ದಾರೆ. ಬಿಜೆಪಿಯನ್ನು ಪ್ರಶ್ನಿಸುವ ನೈತಿಕತೆ ಅವರಿಗೆ ಇಲ್ಲ ಎಂದು ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ತಿಳಿಸಿದರು.
ಜಿಲ್ಲಾ ಉಸ್ತುವಾರಿ ಹಾಗೂ ಗೃಹ ಸಚಿವ ಅರಗ ಜ್ಞಾನೇಂದ್ರ ಮಾತನಾಡಿ, ಬಿಜೆಪಿ ಎಂಬ ಬೃಹತ್ ನದಿಗೆ ಪ್ರಕೋಷ್ಠಗಳೇ ಶಕ್ತಿ. ಸಂಘಟನೆ ಮತ್ತು ತತ್ವದ ಅಡಿಯಲ್ಲಿ ಭಾರತ ವಿಶ್ವಕ್ಕೆ ತಾಯಿಯಾಗುವ ನಿಟ್ಟಿನಲ್ಲಿ ಪಕ್ಷವನ್ನು ಕಟ್ಟಿದ್ದೇವೆ.ಒಲೈಕೆಯ ರಾಜಕಾರಣದ ಕಾಂಗ್ರೆಸ್ ಪಕ್ಷವನ್ನು ಟಾರ್ಚ್ ಹಾಕಿ ಹುಡುಕಬೇಕಾಗಿದೆ. ಅಧಿಕಾರ ಇದೆ ಎಂದು ಕಾರ್ಯಕರ್ತರು ದರ್ಪದಿಂದ ಮೆರೆದರೆ ಏನಾಗುತ್ತದೆ ಎಂಬುದಕ್ಕೆ ಕಾಂಗ್ರೆಸ್ ಪಕ್ಷದ ಇಂದಿನ ದನನೀಯ ಸ್ಥಿತಿಯೇ ಉದಾಹರಣೆ. ಬಿಜೆಪಿ ಕಾರ್ಯಕರ್ತರಿಗೆ ಇದೊಂದು ಎಚ್ಚರಿಕೆಯ ಗಂಟೆ ಎಂದರು.
ಗೃಹಸಚಿವರ ಕೆಲಸ ನಿಜಕ್ಕು ಸವಾಲಿನದ್ದಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಕೋಮುಗಲಭೆಗಳಿಗೆ ಕಾಂಗ್ರೆಸ್ ಪಕ್ಷವೇ ನೇರ ಹೊಣೆ. ತಮ್ಮ ಅಧಿಕಾರದ ಅವಧಿಯಲ್ಲಿ ಎಸ್.ಎಫ್.ಐ ಮತ್ತು ಪಿ.ಎಫ್.ಐ ಗೂಂಡಾಗಳ ಮೇಲಿದ್ದ ಸುಮಾರು 2000 ಕೇಸುಗಳನ್ನು ಹಿಂಪಡೆದು, ಅವರು ಮಾಡುವ ದೃಷ್ಕøತ್ಯಗಳಿಗೆ ಕುಮ್ಮಕ್ಕ ನೀಡಿದ್ದರ ಫಲವಾಗಿ ಇಂದು ಹುಬ್ಬಳಿ ಗಲಭೆ, ಡಿಜೆಹಳ್ಳಿ, ಕೆಜೆ ಹಳ್ಳಿ ಗಲಭೆ ಸೇರಿದಂತೆ ಹಲವಾರು ಕೋಮು ಗಲಭೆಗಳು ಸಂಭವಿಸಿವೆ. ಪ್ರಿಯಾಂಕ ಖರ್ಗೆ ಎಂಬ ಪ್ರಚಾರ ಪ್ರಿಯ ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡುತ್ತಿದ್ದಾರೆ.ಪಿ.ಎಸ್.ಐ ಪರೀಕ್ಷೆ ಹಗರಣದ ಕಿಂಗ್‍ಪಿನ್ ಖರ್ಗೆ ಅವರ ಅನುಯಾಯಿಗಳು. ಯಾರನ್ನು ಬಿಡುವ ಪ್ರಶ್ನೆಯೇ ಇಲ್ಲವೆಂದು ಅರಗಜ್ಞಾನೇಂದ್ರ ತಿಳಿಸಿದರು.
ಸಂಸದ ಜಿ.ಎಸ್.ಬಸವರಾಜು ಮಾತನಾಡಿ, ಉಪ್ಪು ತಿಂದವ ನೀರು ಕುಡಿಯಲೇಬೇಕು. ಕಾಂಗ್ರೆಸ್ ಪಕ್ಷದ ಮುಖಂಡರು ಇನ್ನಿಲ್ಲದ ಅಪಪ್ರಚಾರ ನಡೆಸಿ, ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುತಿದ್ದಾರೆ.ಇವುಗಳ ವಿರುದ್ದ ಪ್ರಕೋಷ್ಠಗಳ ಮುಖಂಡರು ಗಟ್ಟಿಯಾಗಿ ನಿಲ್ಲಬೇಕೆಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಿಜೆಪಿಯ ಮಧುಗಿರಿ ಜಿಲ್ಲೆಯ ಅಧ್ಯಕ್ಷ ಬಿ.ಕೆ.ಮಂಜುನಾಥ್ ಮಾತನಾಡಿ, ಬಿಜೆಪಿ ಕಾರ್ಯಕರ್ತರ ಪಾರ್ಟಿ,ಇಂದು ಹೆಮ್ಮೆರವಾಗಿ ಬೆಳೆದಿದೆ.2023 ರ ವಿಧಾನಸಭೆ ಮತ್ತು 2024ರ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಮಧುಗಿರಿ ಮತ್ತು ತುಮಕೂರು ಸಂಘಟನಾತ್ಮಕ ಜಿಲ್ಲೆಗಳಿಂದ ಗೆಲ್ಲಿಸಿ ಕಳುಹಿಸಲಿದ್ದೇವೆ.ಮುಂಬುರವ ಚುನಾವಣೆಗಳಲ್ಲಿ ಪಕ್ಷದವತಿಯಿಂದ ಹಿಂದುಳಿದ ವರ್ಗದ ವ್ಯಕ್ತಿಗೆ ಟಿಕೇಟ್ ನೀಡುವಂತೆ ಪಕ್ಷದ ರಾಜ್ಯಾಧ್ಯಕ್ಷರಲ್ಲಿ ಮನವಿ ಮಾಡಿದರು.
ಬಿಜೆಪಿ ರಾಜ್ಯ ವಿವಿಧ ಪ್ರಕೋಷ್ಠಗಳ ರಾಜ್ಯ ಸÀಂಚಾಲಕ ಬ್ಯಾಟರಂಗೇಗೌಡ ಪ್ರಾಸ್ತಾವಿಕವಾಗಿ ಮಾತನಾಡಿ, ಕಳೆದ ಎರಡು ವರ್ಷಗಳಿಂದ ಪ್ರಕೋಷ್ಠಗಳ ರಾಜ್ಯ ಸಂಚಾಲಕರಾದ ಭಾನುಪ್ರಕಾಶ್ ಮತ್ತು ಸಹ ಸಂಚಾಲಕರಾದ ಡಾ.ಶಿವಯೋಗಿಸ್ವಾಮಿ ಅವರ ನೇತೃತ್ವದಲ್ಲಿ ಪ್ರವಾಸ ಮಾಡಿ, ಎಲ್ಲಾ ಪ್ರಕೋಷ್ಠಗಳನ್ನು ಸಂಘಟಿಸಲಾಗಿದೆ. ಜಿಲ್ಲಾ ಮಟ್ಟದಿಂದ ಮಂಡಲದವರೆಗೆ ಪ್ರಕೋಷ್ಠಗಳ ಮುಖಂಡರು ಸಕ್ರಿಯರಾಗಿದ್ದಾರೆ.ಜಿಲ್ಲೆಯ 13 ಮಂಡಳಗಳ ಮುಖಂಡರು ಸ್ವಯಂ ಪ್ರೇರಿತರಾಗಿ ಈ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಮುಂದಿನ ಒಂದು ವರ್ಷಗಳ ಪ್ರತಿ ಮನೆ ಮನೆಗೆ ಪಕ್ಷದ ಸಾಧನೆಯನ್ನು ತಿಳಿಸಲಿದ್ದಾರೆ ಎಂದರು.
ವೇದಿಕೆಯಲ್ಲಿ ಪ್ರಕೋಷ್ಠಗಳ ರಾಜ್ಯ ಸಂಚಾಲಕ ಭಾನುಪ್ರಕಾಶ್, ಸಹ ಸಂಚಾಲಕ ಡಾ.ಶಿವಯೋಗಿಸ್ವಾಮಿ, ರಾಜ್ಯ ಸಂಯೋಜಕ ಬ್ಯಾಟರಂಗೇಗೌಡ, ಮುಖಂಡರಾದ ಎಂ.ಬಿ.ನಂದೀಶ್, ಶಾಸಕರಾದ ಜೋತಿಗಣೇಶ್, ಡಾ.ರಾಜೇಶಗೌಡ, ಮಸಾಲೆ ಜಯರಾಮ್, ಚಿದಾನಂದ ಎಂ ಗೌಡ, ಮೇಯರ್ ಬಿ.ಜಿ.ಕೃಷ್ಣಪ್ಪ, ವಿನಯ್ ಬಿದರೆ, ಜಯತೀರ್ಥ ಸೇರಿದಂತೆ ಹಲವರು ಉಪಸ್ಥಿತರಿದ್ದರು.

(Visited 2 times, 1 visits today)
tumkur
Previous Articleಆತ್ಮವಿಶ್ವಾಸದಿಂದ ಪಿಎಸ್ಐ ಮರು ಪರೀಕ್ಷೆ ಬರೆಯಿರಿ: ಅರಗ ಜ್ಞಾನೇಂದ್ರ
Next Article ತಾಂತ್ರಿಕತೆಯಲ್ಲಿ ಕ್ರಾಂತಿ ಮಾಡಲು ಯುವ ಪೀಳಿಗೆ ಸಿದ್ದರಾಗಿ
News Desk Benkiyabale

Related Posts

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

January 27, 2026 4:05 pm
ಇತರೆ ಸುದ್ಧಿಗಳು

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm
ಇತರೆ ಸುದ್ಧಿಗಳು

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm
ಇತರೆ ಸುದ್ಧಿಗಳು

ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

January 27, 2026 3:57 pm
ಇತರೆ ಸುದ್ಧಿಗಳು

ಕೇಂದ್ರದ ವಿಳಂಬ ನೀತಿಗೆ ಪ್ರತಿಭಟನೆ ಅನಿವಾರ್ಯ

January 27, 2026 3:55 pm
ಇತರೆ ಸುದ್ಧಿಗಳು

ತೆಂಗು ಬೆಳೆ: ಜಾಗೃತಿ ಮೂಡಿಸುವ ಕಾರ್ಯಕ್ರಮದ ವಾಹನಕ್ಕೆ ಶಾಸಕರಿಂದ ಹಸಿರು ನಿಶಾನೆ

January 22, 2026 4:20 pm
Our Youtube Channel
Our Picks

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

January 27, 2026 4:05 pm

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm

ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

January 27, 2026 3:57 pm

ಕೇಂದ್ರದ ವಿಳಂಬ ನೀತಿಗೆ ಪ್ರತಿಭಟನೆ ಅನಿವಾರ್ಯ

January 27, 2026 3:55 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

By News Desk BenkiyabaleJanuary 27, 2026 4:05 pm

ತುಮಕೂರು: ಜಿಲ್ಲೆಯಾದ್ಯಂತ ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆ ಸಂದರ್ಭದಲ್ಲಿ ಗ್ರಾಮೀಣಭಾಗದ ಕಾರ್ಯ ನಿರತ ಪತ್ರಕರ್ತರನ್ನು ಪರಿಗಣಿಸುವಂತೆ ಜಿಲ್ಲಾಧಿಕಾರಿಗೆ ಜಿಲ್ಲಾ ಉಸ್ತುವಾರಿ…

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm

ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

January 27, 2026 3:57 pm
News by Date
February 2026
M T W T F S S
 1
2345678
9101112131415
16171819202122
232425262728  
« Jan    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.