BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಆಗಸ್ಟ್ ೧೬ ರಂದು ಬಳ್ಳಾರಿಯಲ್ಲಿ ಸಮಾವೇಶ
  • ಆ. ೫: ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ: ಡಾ. ಜಿ. ಪರಮೇಶ್ವರ
  • ಸುಪ್ತ ಪ್ರತಿಭೆಗಳನ್ನು ಹೊರ ಹಾಕಲು ಕಲಾ ತರಬೇತಿ ಸಹಕಾರಿ: ಎಡಿಸಿ
  • ಮತ್ತೊಮ್ಮೆ ಸಿಎಂ ಪಟ್ಟಣಕ್ಕೆ: ಶಾಸಕ ಎಚ್.ವಿ. ವೆಂಕಟೇಶ್
  • ನಗರಾಭಿವೃದ್ಧಿಗೆ ಸ್ಲಂ ನಲ್ಲಿರುವ ಬಡವರ ಕೊಡುಗೆ ಅಪಾರ: ಶಾಸಕ ಜ್ಯೋತಿ ಗಣೇಶ್ ಹೇಳಿಕೆ
  • ೫ ಜನರಿಗೆ ದಾಳಿ ನೆಡೆಸಿದ್ದ ಚಿರತೆ ಬುಧವಾರ ರಾತ್ರಿ ಸೆರೆ
  • ತಂತ್ರಜ್ಞಾನವನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ: ಎಸ್‌ಪಿ
  • ಹದಿಹರೆಯದ ವಯಸ್ಸಿನಲ್ಲಿ ತುಂಬಾ ಎಚ್ಚರಿಕೆ ಇರಲಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅಂಬೇಡ್ಕರ್ ತತ್ವಗಳನ್ನು ಪಾಲಿಸಿದ್ದರೆ ಇಂದು ದೇಶದಲ್ಲಿ ಅಸ್ಪ್ರಶ್ಯತೆ ಇರುತ್ತಿರಲಿಲ್ಲ: ಡಾ.ಜಿ.ಪರಮೇಶ್ವರ್
ತುಮಕೂರು

ಅಂಬೇಡ್ಕರ್ ತತ್ವಗಳನ್ನು ಪಾಲಿಸಿದ್ದರೆ ಇಂದು ದೇಶದಲ್ಲಿ ಅಸ್ಪ್ರಶ್ಯತೆ ಇರುತ್ತಿರಲಿಲ್ಲ: ಡಾ.ಜಿ.ಪರಮೇಶ್ವರ್

By News Desk BenkiyabaleUpdated:May 11, 2022 6:56 pm

ತುಮಕೂರು:
ನಾವುಗಳು ಮೇಲ್ನೋಟಕ್ಕೆ ಅಂಬೇಡ್ಕರ್ ಅನುಯಾಯಿಗಳಾಗುವುದರಿಂದ ಸಮಾಜಕ್ಕೆ ಯಾವುದೇ ಪ್ರಯೋಜನವಿಲ್ಲ. ಅವರ ತತ್ವಗಳನ್ನು ಪಾಲಿಸಿದ್ದರೆ ಇಂದು ದೇಶದಲ್ಲಿ ಅಸ್ಪøಷ್ಯತೆ ಎಂಬುದೇ ಇರುತ್ತಿರಲಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಜಿ.ಪರಮೇಶ್ವರ್ ಅಭಿಪ್ರಾಯಪಟ್ಟಿದ್ದಾರೆ.
ನಗರದ ಬಾಲಭವನದಲ್ಲಿ ತುಮಕೂರು ಜಿಲ್ಲಾ ಛಲವಾದಿ ಸಂಘಟನೆಗಳ ಒಕ್ಕೂಟದವತಿಯಿಂದ ಆಯೋಜಿಸಿದ್ದ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 131ನೇ ಜನ್ಮಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತಿದ್ದ ಅವರು,ಅಂಬೇಡ್ಕರ್ ಅವರ ಸಿದ್ದಾಂತಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಂಡರೆ ಮಾತ್ರ ದೇಶದಲ್ಲಿ ಬದಲಾವಣೆ ಕಾಣಲು ಸಾಧ್ಯ ಎಂದರು.
ನಾನು ತಿಳಿದಂತೆ ಪ್ರಪಂಚದ ಯಾವುದೇ ದೇಶದಲ್ಲಿ ಈ ರೀತಿಯ ಶ್ರೇಣಿಕೃತ ಜಾತಿ ವ್ಯವಸ್ಥೆ ಇಲ್ಲ.ಮೊದಲು ಕುಲಕಸುಬನ ಗಳಾಗಿದ್ದ ಸಮಾಜಗಳು ನಂತರ ಜಾತಿಗಳಾಗಿ ಪರಿವರ್ತನೆಯಾಗಿದ್ದು ವಿಪರ್ಯಾಸ.ಅದರಿಂದಾಗುವ ತೊಂದರೆಗಳು ಅಪಾರ. ಇಡೀ ವಿಶ್ವವೇ ಅಂಬೇಡ್ಕರ್ ಅವರ ವಿದ್ವತ್‍ಗೆ ಮಾರು ಹೋಗಿ,ವಿಶ್ವನಾಯಕ ಎಂದು ಕೋಡಾಡಿದರೂ ಸಹ ಭಾರತದಲ್ಲಿ ಮಾತ್ರ ಅಂಬೇಡ್ಕರ್ ಅವರನ್ನು ಇಂದಿಗೂ ಜಾತಿಯ ಹೆಸರಿನಲ್ಲಿಯೇ ಗುರುತಿಸಲಾಗುತ್ತಿದೆ.ಇದಕ್ಕಿಂತ ದೊಡ್ಡ ದುರಂತ ಮತ್ತೊಂದು ಇದೆಯೇ ಎಂದು ಡಾ.ಜಿ.ಪರಮೇಶ್ವರ್ ಪ್ರಶ್ನಿಸಿದರು.
ಅಂಬೇಡ್ಕರ್ ಅವರು ಭಾರತದ ದಲಿತರಿಗಾಗಿ ಸಂವಿಧಾನ ಬರೆಯಲಿಲ್ಲ.ಇಡೀ ದೇಶದ ಎಲ್ಲಾ ವರ್ಗಗಳು ಅವರ ಸಂವಿಧಾನದ ಫಲವನ್ನು ಅನುಭವಿಸುತ್ತಿವೆ. ಭಕ್ರಾನಾಂಗಲ್ ಅಣೆಕಟ್ಟು,ಆರ್.ಬಿ.ಐ ಸೇರಿದಂತೆ ಹಲವಾರು ಮಹತ್ವದ ಯೋಜನೆಗಳಿಗೆ ಅಡಿಪಾಯ ಹಾಕಿದವರು ಬಾಬಾ ಸಾಹೇಬ್ ಅಂಬೇಡ್ಕರ್,ಹಾಗಾಗಿ ಅವರನ್ನು ಎಲ್ಲಾ ವರ್ಗದ ಜನರು ಸ್ಮರಿಸುವಂತಹ ವಾತಾವರಣ ನಿರ್ಮಾಣವಾಗಬೇಕೆಂದು ಡಾ.ಜಿ.ಪರಮೇಶ್ವರ್ ತಿಳಿಸಿದರು.
ಪ್ರಮುಖ ಭಾಷಣಕಾರರಾಗಿ ಆಗಮಿಸಿದ್ದ ಸಂಶೋಧಕ ವಿಠಲ್ ವಗ್ಗಲ್ ಮಾತನಾಡಿ, ಅಂಬೇಡ್ಕರ್ ಅವರ ಬರಹ ಮತ್ತು ಭಾಷಣಗಳ ಸಂಪುಟ ತಯಾರಿಸುವ ವೇಳೆ ಹಲವಾರು ತಪ್ಪುಗಳನ್ನು ಮಾಡಲಾಗಿದೆ. ಇವುಗಳನ್ನು ಸರಿಪಡಿಸಲು ಸರಕಾರಕ್ಕೆ ಮನವಿ ಮಾಡಬೇಕು.ಮಹಾನಾಯಕರ ಜಾತಿಯನ್ನೇ ಹೈಜಾಕ್ ಮಾಡಲಾಗಿದೆ.ಇದು ಸಮಾಜಕ್ಕೆ ತಪ್ಪು ಸಂದೇಶ ನೀಡಿದಂತಾಗುತ್ತದೆ ಎಂದರು.
ಸ್ವಾತಂತ್ರಪೂರ್ವದಲ್ಲಿ ತಮ್ಮ ಕುಲಕಸುಬುಗಳನ್ನೇ ನಂಬಿ ಬದುಕುತಿದ್ದ ಹಿಂದುಳಿದ ವರ್ಗಗಳು,ಇಂದು ಓಬಿಸಿ ಹೆಸರಿನಲ್ಲಿ ಒಂದಷ್ಟು ಸರಕಾರಿ ಉದ್ಯೋಗ,ಸವಲತ್ತು ಪಡೆದಿದ್ದರೆ ಇದಕ್ಕೆ ಕಾರಣ ಅಂಬೇಡ್ಕರ್ ಅವರು ಬರೆದ ಸಂವಿಧಾನವೇ ಕಾರಣ. ಆದರೆ ಓಬಿಸಿಯವರು ಅಂಬೇಡ್ಕರ್ ಅವರನ್ನು ಮೆರೆತು ಬೇರೆ ಜನರನ್ನು ಮೆರೆಸಲು ಮುಂದಾಗಿರುವುದು ವಿಪರ್ಯಾಸವೇ ಸರಿ ಎಂದು ವಿಠಲ್ ವಗ್ಗಲ್ ನುಡಿದರು.
ಅಂಬೇಡ್ಕರ್ ಜಯಂತಿ ಮಾಡುವ ಉದ್ದೇಶ, ನಾಲಾಯಕ್ ಜನರನ್ನು ಲಾಯಕ್ ಆಗಿ ಮಾಡುವುದಾಗಿದೆ. ಉಪಯೋಗಕ್ಕೆ ಬಾರದ ಜನರಲ್ಲಿ ಜಾಗೃತಿ ಮೂಡಿಸಿ, ಅವರನ್ನು ಸಮಾಜ ಕಟ್ಟುವ ಕಡೆಗೆ ಬಳಸಿಕೊಳ್ಳಲು ಇಂತಹ ಜಯಂತಿಗಳು ಅವಶ್ಯಕ.ಈ ನಿಟ್ಟಿನಲ್ಲಿ ಛಲವಾದಿ ಸಮುದಾಯ ಒಳ್ಳೆಯ ಕೆಲಸ ಮಾಡಿದೆ ಎಂದ ಅವರು,ಶಿಕ್ಷಣದ ಜೊತೆಗೆ ಜಾಗೃತಿ,ಜಾಗೃತಿಯಿಂದ ನಾಯಕತ್ವ ಬೆಳೆಯುತ್ತದೆ.ಆದರೆ ನಮ್ಮ ಲೀಡರ್‍ಗಳು, ಡೀಲರ್‍ಗಳಾಗಿರುವುದು ಇಂದಿನ ದುರಂತಕ್ಕೆ ಕಾರಣ.ಹುಟ್ಟಿದ ಮೇಲೆ ಮನುಷ್ಯ ಸಾಯುವುದು ಖಚಿತ.ಏನನ್ನಾದರೂ ಸಾಧನೆ ಮಾಡಿ ಎಂಬುದು ಅಂಬೇಡ್ಕರ್ ಅವರ ಸಂದೇಶವಾಗಿದೆ ಎಂದು ವಿಠಲ್ ವಗ್ಗಲ್ ತಿಳಿಸಿದರು.
ಮತ್ತೊಬ್ಬ ಭಾಷಣಕಾರ ಡಾ.ಗೋವಿಂದರಾಯ ಮಾತನಾಡಿ,ನಮ್ಮನ್ನು ಉದ್ದಾರ ಮಾಡಲು ಯಾರಿಂದಲೂ ಸಾಧ್ಯವಿಲ್ಲ.ಹಾಗಾಗಿ ನಮ್ಮ ಉದ್ದಾರ ನಮ್ಮಿಂದಲೇ ಎಂಬ ಸ್ವಯಂ ಧೈರ್ಯವನ್ನು ನಾವೆಲ್ಲರೂ ಬೆಳೆಸಿಕೊಳ್ಳಬೇಕಿದೆ. ಇದು ಅಂಬೇಡ್ಕರ್ ನಮಗಾಗಿ ನೀಡಿದ ತತ್ವವಾಗಿದೆ ಎಂದರು.
ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ಚಿತ್ರದುರ್ಗದ ಛಲವಾದಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀಬಸವನಾಗೀದೇವ ಶರಣರು ವಹಿಸಿದ್ದರು.ಪಾಲಿಕೆ ಸದಸ್ಯರಾದ ಶ್ರೀಮತಿ ಪ್ರಭಾವತಿ ಸುಧೀಶ್ವರ್,ಮಾಜಿ ಶಾಸಕ ಡಾ.ರಫೀಕ್ ಅಹಮದ್,ಹರಿಕಥಾ ವಿದ್ವಾನ್ ಡಾ.ಲಕ್ಷ್ಮಣದಾಸ್, ಚಿತ್ರದುರ್ಗದ ಛಲವಾದಿ ಗುರುಪೀಠದ ಅಧ್ಯಕ್ಷರು ಹಾಗೂ ಭೂ ಸೇನಾ ನಿಗಮದ ಮಾಜಿ ಅಧ್ಯಕ್ಷ ಲಕ್ಷ್ಮಿನರಸಿಂಹಯ್ಯ, ಸರಕಾರಿ ಅಭಿಯೋಜಕರಾದ ಎಸ್.ರಾಜಣ್ನ, ವಕೀಲರು ಹಾಗೂ ಜಿಲ್ಲಾ ಕಾಂಗ್ರೆಸ್ ಎಸ್ಸಿ ಸೇಲ್ ಅಧ್ಯಕ್ಷರಾದ ಬಿ.ಜಿ.ಲಿಂಗರಾಜು, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಅಧ್ಯಕ್ಷ ಹೆಚ್.ಅತೀಕ್ ಅಹಮದ್ ಸೇರಿದಂತೆ, ಒಕ್ಕೂಟದ ಪದಾಧಿಕಾರಿಗಳು ವೇದಿಕೆಯಲ್ಲಿದ್ದರು.

(Visited 40 times, 1 visits today)
tumkur
Previous Articleರೋಗವಾಹಕ ಆಶ್ರಿತ ರೋಗಗಳ ಬಗ್ಗೆ ಎಚ್ಚರಿಕೆ ಅಗತ್ಯ
Next Article ಸಾಂಸ್ಕೃತಿಕ ಪ್ರಜ್ಞೆ ಮಕ್ಕಳಲ್ಲಿ ಮೂಡಿದರೆ ಸತ್ಪ್ರಜೆಗಳಾಗುತ್ತಾರೆ
News Desk Benkiyabale

Related Posts

ಆಗಸ್ಟ್ ೧೬ ರಂದು ಬಳ್ಳಾರಿಯಲ್ಲಿ ಸಮಾವೇಶ

August 02, 2025 3:21 pm ತುಮಕೂರು

ಆ. ೫: ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ: ಡಾ. ಜಿ. ಪರಮೇಶ್ವರ

August 02, 2025 3:18 pm ತುಮಕೂರು

ಸುಪ್ತ ಪ್ರತಿಭೆಗಳನ್ನು ಹೊರ ಹಾಕಲು ಕಲಾ ತರಬೇತಿ ಸಹಕಾರಿ: ಎಡಿಸಿ

August 02, 2025 3:17 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ಆಗಸ್ಟ್ ೧೬ ರಂದು ಬಳ್ಳಾರಿಯಲ್ಲಿ ಸಮಾವೇಶ

August 02, 2025 3:21 pm
ತುಮಕೂರು

ಆ. ೫: ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ: ಡಾ. ಜಿ. ಪರಮೇಶ್ವರ

August 02, 2025 3:18 pm
ತುಮಕೂರು

ಸುಪ್ತ ಪ್ರತಿಭೆಗಳನ್ನು ಹೊರ ಹಾಕಲು ಕಲಾ ತರಬೇತಿ ಸಹಕಾರಿ: ಎಡಿಸಿ

August 02, 2025 3:17 pm
ಇತರೆ ಸುದ್ಧಿಗಳು

ಮತ್ತೊಮ್ಮೆ ಸಿಎಂ ಪಟ್ಟಣಕ್ಕೆ: ಶಾಸಕ ಎಚ್.ವಿ. ವೆಂಕಟೇಶ್

August 01, 2025 1:37 pm
ಇತರೆ ಸುದ್ಧಿಗಳು

ನಗರಾಭಿವೃದ್ಧಿಗೆ ಸ್ಲಂ ನಲ್ಲಿರುವ ಬಡವರ ಕೊಡುಗೆ ಅಪಾರ: ಶಾಸಕ ಜ್ಯೋತಿ ಗಣೇಶ್ ಹೇಳಿಕೆ

August 01, 2025 1:36 pm
ಇತರೆ ಸುದ್ಧಿಗಳು

೫ ಜನರಿಗೆ ದಾಳಿ ನೆಡೆಸಿದ್ದ ಚಿರತೆ ಬುಧವಾರ ರಾತ್ರಿ ಸೆರೆ

August 01, 2025 1:35 pm
Our Youtube Channel
Our Picks

ಮತ್ತೊಮ್ಮೆ ಸಿಎಂ ಪಟ್ಟಣಕ್ಕೆ: ಶಾಸಕ ಎಚ್.ವಿ. ವೆಂಕಟೇಶ್

August 01, 2025 1:37 pm

ನಗರಾಭಿವೃದ್ಧಿಗೆ ಸ್ಲಂ ನಲ್ಲಿರುವ ಬಡವರ ಕೊಡುಗೆ ಅಪಾರ: ಶಾಸಕ ಜ್ಯೋತಿ ಗಣೇಶ್ ಹೇಳಿಕೆ

August 01, 2025 1:36 pm

೫ ಜನರಿಗೆ ದಾಳಿ ನೆಡೆಸಿದ್ದ ಚಿರತೆ ಬುಧವಾರ ರಾತ್ರಿ ಸೆರೆ

August 01, 2025 1:35 pm

ತಂತ್ರಜ್ಞಾನವನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ: ಎಸ್‌ಪಿ

August 01, 2025 1:33 pm

ಮಕ್ಕಳಲ್ಲಿ ದಂತಗಳ ಸಂರಕ್ಷಣೆ ಬಗ್ಗೆ ಜಾಗೃತಿ ಅತ್ಯಗತ್ಯ

July 31, 2025 2:00 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ಆಗಸ್ಟ್ ೧೬ ರಂದು ಬಳ್ಳಾರಿಯಲ್ಲಿ ಸಮಾವೇಶ

By News Desk BenkiyabaleAugust 02, 2025 3:21 pm

ತುಮಕೂರು: ಗಣಿಭಾದಿತ ಪ್ರದೇಶಗಳ ಅಭಿವೃದ್ದಿಗೆಂದು ಮೀಸಲಿಟ್ಟಿರುವ ಹಣವನ್ನು ಬಾಧಿತ ಪ್ರದೇಶಗಳ ಶಿಕ್ಷಣ, ಆರೋಗ್ಯ ಮತ್ತು ಅರ್ಥಿಕ ಅಭಿವೃದ್ದಿಗೆ ಬಳಸುವಂತೆ ಸರಕಾರದ…

ಆ. ೫: ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ: ಡಾ. ಜಿ. ಪರಮೇಶ್ವರ

August 02, 2025 3:18 pm

ಸುಪ್ತ ಪ್ರತಿಭೆಗಳನ್ನು ಹೊರ ಹಾಕಲು ಕಲಾ ತರಬೇತಿ ಸಹಕಾರಿ: ಎಡಿಸಿ

August 02, 2025 3:17 pm

ಮತ್ತೊಮ್ಮೆ ಸಿಎಂ ಪಟ್ಟಣಕ್ಕೆ: ಶಾಸಕ ಎಚ್.ವಿ. ವೆಂಕಟೇಶ್

August 01, 2025 1:37 pm
News by Date
August 2025
M T W T F S S
 123
45678910
11121314151617
18192021222324
25262728293031
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.