BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಎಚ್ಚರಿಕೆ
  • ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ
  • ತುಮಕೂರು: ಜೂನ್ ೧೫ ರಂದು ಕುರುಬರ ಸಂಘದಿAದ ಪ್ರತಿಭಾ ಪುರಸ್ಕಾರ
  • ಎನ್‌ಎಸ್‌ಎಸ್ ಶಿಬಿರದಲ್ಲಿ ೨೫ ಕರುಗಳಿಗೆ ಚಿಕಿತ್ಸೆ
  • ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್
  • ಹೋರಾಟದಲ್ಲಿ ಬಂಧನಕ್ಕೆ ಒಳಗಾಗಿದ್ದ ರೈತರ ಬಿಡುಗಡೆ
  • ತುಮಕೂರು: ಜೂ. ೨೬, ೨೭ರಂದು ರಾಜ್ಯಮಟ್ಟದ ಮಾಧ್ಯಮ ಹಬ್ಬ
  • ತಾಲ್ಲೂಕು ಕಚೇರಿಯ ಮೇಲೆ ಲೋಕಾಯುಕ್ತ ದಾಳಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪತ್ರಕರ್ತರ ಹಿತಕಾಯಲು ಸರ್ಕಾರ ಬದ್ಧ: ಸಿ.ಎಂ. ಬೊಮ್ಮಾಯಿ
ತುಮಕೂರು

ಪತ್ರಕರ್ತರ ಹಿತಕಾಯಲು ಸರ್ಕಾರ ಬದ್ಧ: ಸಿ.ಎಂ. ಬೊಮ್ಮಾಯಿ

By News Desk BenkiyabaleUpdated:May 16, 2022 7:16 pm

ತುಮಕೂರು:
ಪತ್ರಕರ್ತರ ಹಿತಕಾಯಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಗರದ ಬಾಳನಕಟ್ಟೆಯ ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಪಕ್ಕದಲ್ಲಿರುವ ಪತ್ರಿಕಾ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಜಿಲ್ಲಾ ಸಂಘದಿಂದ ಸೋಮವಾರ ಹಮ್ಮಿಕೊಂಡಿದ್ದ ಪತ್ರಿಕಾ ಭವನ ನವೀಕರಣ ಕಾಮಗಾರಿಗೆ ಚಾಲನೆ ನೀಡಿ, ಪತ್ರಕರ್ತರ ನಾಮಫಲಕ ಅನಾವರಣಗೊಳಿಸಿ ಮಾತನಾಡಿದ ಅವರು, ರಾಜ್ಯದ ಗ್ರಾಮೀಣ ಪ್ರದೇಶದ ಪತ್ರಕರ್ತರ ಸಮಸ್ಯೆಗಳನ್ನು ಬಗೆ ಹರಿಸುವುದರ ಜೊತೆಗೆ ನಗರ ಪ್ರದೇಶದ ಪತ್ರಕರ್ತರ ಸಮಸ್ಯೆಗಳನ್ನೂ ಬಗೆ ಹರಿಸಲು ಮುಂದಾಗಿರುವುದಾಗಿ ತಿಳಿಸಿದರು.
ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ತುಮಕೂರು ಜಿಲ್ಲಾ ಪತ್ರಿಕಾ ಭವನ ನಿರ್ಮಾಣಕ್ಕೆ 25 ಲಕ್ಷ ರೂ. ಅನುದಾನ ನೀಡಿದ್ದರ ಹಿನ್ನಲೆಯಲ್ಲಿ ಪತ್ರಿಕಾ ಭವನ ನಿರ್ಮಾಣವಾಗಿತ್ತು. ತಂತ್ರಜ್ಞಾನ ಬೆಳೆದಂತೆಲ್ಲಾ ಸಮಾಜದ ಓರೆ ಕೋರೆಗಳನ್ನು ತಿದ್ದುವ ಪತ್ರಕರ್ತರ ಸಂಖ್ಯೆಯೂ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿರುವ ಪತ್ರಿಕಾ ಭವನ ಇನ್ನೂ ಉತ್ತಮ ರೀತಿಯಲ್ಲಿ ನಿರ್ಮಾಣವಾಗಬೇಕೆಂಬ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಜಿಲ್ಲಾ ಸಂಘದ ಮನವಿ ಮೇರೆಗೆ ಇದರ ನವೀಕರಣಕ್ಕೆ 18 ಲಕ್ಷ ರೂ. ಅನುದಾನವನ್ನು ನೀಡಿರುವುದಾಗಿ ತಿಳಿಸಿದರು.
ನಗರ ಮತ್ತು ಗ್ರಾಮೀಣ ಪ್ರದೇಶದ ಪತ್ರಕರ್ತರಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ನಮ್ಮ ಸರ್ಕಾರ ಬದ್ಧವಾಗಿದ್ದು, ಅವರ ಹಿತ ಕಾಯಲು ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಚಿ.ನಿ.ಪುರುಷೋತ್ತಮ್ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಪತ್ರಿಕಾ ಏಜೆಂಟರೇ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇಂದು ಪತ್ರಿಕೆಗಳನ್ನು ವಿತರಿಸಿ ಜೀವನ ಮಾಡುವುದು ಬಹಳ ಕಷ್ಟದ ಕೆಲಸವಾಗಿದೆ. ಅನೇಕ ಪತ್ರಕರ್ತರು ಇದನ್ನೇ ನಂಬಿಕೊಂಡು ಹತ್ತಾರು ವರ್ಷಗಳಿಂದ ಬದುಕು ಕಟ್ಟಿಕೊಂಡಿದ್ದಾರೆ. ನಗರ ಹಾಗೂ ಗ್ರಾಮೀಣ ಪತ್ರಕರ್ತರು ಆರ್ಥಿಕ ಸಂಕಷ್ಟದಲ್ಲಿದ್ದಾರೆ ಎಂದು ವಿವರಿಸಿದರು.
ಪತ್ರಕರ್ತರಿಗೆ ಕಾರ್ಮಿಕ ಕಾಯ್ದೆ ಅಡಿಯಲ್ಲಿ ಸಿಗುವ ಸೌಲಭ್ಯಗಳನ್ನು ದೊರಕಿಸಿಕೊಡಬೇಕು. ಹಾಗೂ ಆರೋಗ್ಯ ವಿಮೆ, ಉಚಿತ ಹೆಲ್ತ್ ಕಾರ್ಡ್, ಉಚಿತ ಬಸ್ ಪಾಸ್ ಸೌಲಭ್ಯ, ತಾಲ್ಲೂಕು ಮಟ್ಟದಲ್ಲಿ ಪತ್ರಿಕಾ ಭವನ ನಿರ್ಮಾಣ, ಜಿಲ್ಲಾ ಮಟ್ಟದಲ್ಲಿ ಪತ್ರಕರ್ತರಿಗೆ ವಿಶೇಷ ತರಬೇತಿಗೆ ಆದ್ಯತೆ ನೀಡುವುದು, ಪತ್ರಕರ್ತರಿಗೆ ಉಚಿತ ನಿವೇಶನ ನೀಡುವುದು, ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಜಾಹೀರಾತು ನೀತಿಯನ್ನು ಸರಳೀಕರಣಗೊಳಿಸುವುದು ಹಾಗೂ ಪತ್ರಕರ್ತರ ವಾಹನಗಳಿಗೆ ಉಚಿತ ಟೋಲ್ ಫೀ ಮಾಡುವುದು ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ದೊರಕಿಸಿಕೊಡಬೇಕೆಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ 25 ವರ್ಷಗಳನ್ನು ಪೂರೈಸಿರುವ ಹಿರಿಯ ಪತ್ರಿಕಾ ಸಂಪಾದಕರಾದ ಜೀಲ್ ಪತ್ರಿಕೆ ಸಂಪಾದಕರಾದ ರುದ್ರಯ್ಯ, ಅಮೃತವಾಣಿ ಪತ್ರಿಕೆ ಸಂಪಾದಕರಾದ ಗಂಗಹನುಮಯ್ಯ, ಕಮಲಾ ಗಂಗಹನುಮಯ್ಯ, ಸೊಗಡು ಪತ್ರಿಕೆಯ ಎಸ್.ಶಿವಣ್ಣ, ಪ್ರಜಾಪ್ರಗತಿ ಪತ್ರಿಕೆಯ ಪರವಾಗಿ ಮಧುಕರ್, ಏಕೇಶ್ ಪತ್ರಿಕೆಯ ಪರವಾಗಿ ಟಿ.ಇ.ರಘುರಾಂ ಹಾಗೂ ಪುರುಷೋತ್ತಮ್ ಮೊದಲಿಯಾರ್ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಮಾಜಿ ಸಚಿವರು ಹಾಗೂ ಸೊಗಡು ಪತ್ರಿಕೆ ಸಂಪಾದಕ ಎಸ್.ಶಿವಣ್ಣ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದೆ. ಮುಂದೆಯೂ ಇದೇ ರೀತಿ ಉತ್ತಮವಾಗಿ ಕೆಲಸ ನಿರ್ವಹಿಸಿ ಎಂದು ಶುಭ ಹಾರೈಸಿದರು.
ಅಮೃತವಾಣಿ ಪತ್ರಿಕೆ ಸಂಪಾದಕರು ಹಾಗೂ ಮಾಜಿ ಶಾಸಕರಾದ ಗಂಗಹನುಮಯ್ಯ ಮಾತನಾಡಿ, ನಮ್ಮ ಕಾಲದಲ್ಲಿ ಮೊಳೆ ಜೋಡಿಸಿ ಪತ್ರಿಕೆ ಪ್ರಿಂಟ್ ಮಾಡಲಾಗುತ್ತಿತ್ತು. ಇಂದಿನ ಕಾಲಘಟ್ಟದಲ್ಲಿ ತಂತ್ರಜ್ಞಾನವೂ ಬದಲಾಗಿ ಅತ್ಯಂತ ವೇಗವಾಗಿ ಓದುಗರಿಗೆ ಪತ್ರಿಕೆ ತಲುಪುತ್ತಿರುವುದು ಅತ್ಯಂತ ಸಂತೋಷದಾಯಕ ಎಂದರು.
ಪ್ರಜಾಪ್ರಗತಿ ಪತ್ರಿಕೆಯ ಮಧುಕರ್ ಮಾತನಾಡಿ, ನಾವೆಲ್ಲಾ ಒಂದಾಗಿ ಪತ್ರಕರ್ತರ ಹಿತ ಕಾಪಾಡಲು ಮುಂದಾಗಬೇಕು, ಒಗ್ಗಟ್ಟಿನಲ್ಲಿ ಬಲವಿದೆ ಎಂಬುದು ಈ ಕಾರ್ಯಕ್ರಮದಿಂದ ಸಾಬೀತಾಗಿದೆ. ನವೀಕರಣ ಕಾಮಗಾರಿ ಆದಷ್ಟು ಬೇಗ ಮುಗಿದು ಪತ್ರಕರ್ತರಿಗೆ ಅನುಕೂಲವಾಗಲಿ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಚಿವರಾದ ಅರಗ ಜ್ಞಾನೇಂದ್ರ, ಬಿ.ಸಿ.ನಾಗೇಶ್, ಸಂಸದ ಜಿ.ಎಸ್. ಬಸವರಾಜು, ಸರ್ಕಾರದ ಮುಖ್ಯ ಸಚೇತಕ ವೈ.ಎ.ನಾರಾಯಣಸ್ವಾಮಿ, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಡಾ.ಸಿ.ಎಂ.ರಾಜೇಶ್‍ಗೌಡ, ಚಿದಾನಂದ ಎಂ.ಗೌಡ, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಇ.ರಘುರಾಂ, ಉಪಾಧ್ಯಕ್ಷರಾದ ತಿಪಟೂರು ಕೃಷ್ಣ, ಎಲ್. ಚಿಕ್ಕೀರಪ್ಪ, ಶ್ಯಾ.ನ.ಪ್ರಸನ್ನಮೂರ್ತಿ, ಕಾರ್ಯದರ್ಶಿಗಳಾದ ಹಾರೋಗೆರೆ ಸತೀಶ್, ದಶರಥ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ಧಲಿಂಗಸ್ವಾಮಿ, ಖಜಾಂಚಿ ದೇವಪ್ರಕಾಶ್ ಸೇರಿದಂತೆ ಸಂಘದ ಎಲ್ಲಾ ಸದಸ್ಯರು, ಪತ್ರಕರ್ತರು, ಅಧಿಕಾರಿಗಳು ಹಾಜರಿದ್ದರು.

(Visited 91 times, 1 visits today)
Bommai tumkur
Previous Articleಸಮವಸ್ರ್ತಧಾರಿ ಸಿಬ್ಬಂದಿಗೆ ವರ್ತನೆ ಬಹುಮುಖ್ಯ: ಟಿ.ಜೆ ಉದೇಶ್
Next Article ಆಲದಮರ ಪಾರ್ಕ್ ನಿರ್ವಹಣೆ ಜವಾಬ್ದಾರಿ: ಪ್ರೆಸ್ ಕ್ಲಬ್ ಗೆ ಸಿಎಂ ಹಸ್ತಾಂತರ
News Desk Benkiyabale

Related Posts

ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಎಚ್ಚರಿಕೆ

June 12, 2025 4:04 pm ತುಮಕೂರು

ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ

June 12, 2025 3:33 pm ತುಮಕೂರು

ತುಮಕೂರು: ಜೂನ್ ೧೫ ರಂದು ಕುರುಬರ ಸಂಘದಿAದ ಪ್ರತಿಭಾ ಪುರಸ್ಕಾರ

June 12, 2025 3:26 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಎಚ್ಚರಿಕೆ

June 12, 2025 4:04 pm
ತುಮಕೂರು

ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ

June 12, 2025 3:33 pm

ತುಮಕೂರು: ಜೂನ್ ೧೫ ರಂದು ಕುರುಬರ ಸಂಘದಿAದ ಪ್ರತಿಭಾ ಪುರಸ್ಕಾರ

June 12, 2025 3:26 pm
ತುಮಕೂರು

ಎನ್‌ಎಸ್‌ಎಸ್ ಶಿಬಿರದಲ್ಲಿ ೨೫ ಕರುಗಳಿಗೆ ಚಿಕಿತ್ಸೆ

June 12, 2025 3:25 pm
ತುಮಕೂರು

ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್

June 12, 2025 3:24 pm
ತುಮಕೂರು

ಹೋರಾಟದಲ್ಲಿ ಬಂಧನಕ್ಕೆ ಒಳಗಾಗಿದ್ದ ರೈತರ ಬಿಡುಗಡೆ

June 12, 2025 3:23 pm
Our Youtube Channel
Our Picks

ಸಾರ್ವಜನಿಕರು ಸರ್ಕಾರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ

June 05, 2025 2:29 pm

ನಗರದಲ್ಲಿ ಪ್ರಾದೇಶಿಕ ತೆಂಗು ಅಭಿವೃದ್ಧಿ ಮಂಡಳಿ ಕಚೇರಿ ತೆರೆಯಿರಿ

May 31, 2025 3:29 pm

ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ

May 29, 2025 4:18 pm

ಭಾರತ ವಿಶ್ವದಲ್ಲಿಯೇ ಹೃದಯ ಶ್ರೀಮಂತಿಕೆ ಹೊಂದಿರುವ ರಾಷ್ಟç

May 23, 2025 2:55 pm

ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ

May 23, 2025 2:51 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಎಚ್ಚರಿಕೆ

By News Desk BenkiyabaleJune 12, 2025 4:04 pm

ಹುಳಿಯಾರು: ಚಿಕ್ಕನಾಯಕನಹಳ್ಳಿ ತಾಲೂಕು ತೋಟಗಾರಿಗೆ ಇಲಾಖೆ ಸರ್ಕಾರದ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ರೈತರಿಗೆ ತಲುಪಿಸದಿದ್ದರೆ ರೈತ ಸಂಘದಿAದ ತೋಟಗಾರಿಗೆ ಇಲಾಖೆ…

ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ

June 12, 2025 3:33 pm

ತುಮಕೂರು: ಜೂನ್ ೧೫ ರಂದು ಕುರುಬರ ಸಂಘದಿAದ ಪ್ರತಿಭಾ ಪುರಸ್ಕಾರ

June 12, 2025 3:26 pm

ಎನ್‌ಎಸ್‌ಎಸ್ ಶಿಬಿರದಲ್ಲಿ ೨೫ ಕರುಗಳಿಗೆ ಚಿಕಿತ್ಸೆ

June 12, 2025 3:25 pm
News by Date
June 2025
M T W T F S S
 1
2345678
9101112131415
16171819202122
23242526272829
30  
« May    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.