BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ
  • ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ
  • ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ
  • ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ
  • ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ
  • ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ
  • ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು
  • ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಜನರ ದುಮ್ಮಾನಗಳಿಗೆ ಪರಿಹಾರ ಸಿದ್ದಗಂಗಾ ಮಠ: ಅರಗ ಜ್ಞಾನೇಂದ್ರ
ತುಮಕೂರು

ಜನರ ದುಮ್ಮಾನಗಳಿಗೆ ಪರಿಹಾರ ಸಿದ್ದಗಂಗಾ ಮಠ: ಅರಗ ಜ್ಞಾನೇಂದ್ರ

By News Desk BenkiyabaleUpdated:May 25, 2022 6:27 pm

ತುಮಕೂರು:
ಒಂದು ಮಠ ಧಾರ್ಮಿಕ ಕಾರ್ಯಗಳಿಗಷ್ಟೇ ಸಿಮೀತವಾಗದೆ ತನ್ನ ಸುತ್ತಮುತ್ತಲಿನ ಜನರ ದುಃಖ ದುಮ್ಮಾನಗಳಿಗೆ ಪರಿಹಾರ ಕಂಡು ಹಿಡಿಯಬಹುದು ಎಂಬುದಕ್ಕೆ ಸಿದ್ದಗಂಗಾ ಮಠದ ಸಾಕ್ಷಿಯಾಗಿದೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಹಾಗು ಗೃಹ ಸಚಿವ ಅರಗ ಜ್ಞಾನೇಂದ್ರ ಅಭಿಪ್ರಾಯಪಟ್ಟಿದ್ದಾರೆ.
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹರಳೂರು ಗ್ರಾಮದಲ್ಲಿ ತ್ರಿವಿಧ ದಾಸೋಹಿ ಡಾ.ಶ್ರೀಶಿವಕುಮಾರಸ್ವಾಮೀಜಿಗಳ 115ನೇ ಜನ್ಮ ಜಯಂತಿ ಹಾಗೂ ಶ್ರೀವೀರಭದ್ರಸ್ವಾಮಿ ದೇವಾಲಯದ ನಿತ್ಯ ದಾಸೋಹ ಪ್ರಾರಂಭ ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನಾ ಮತ್ತು ಹರಳೂರು ಶಿವಕುಮಾರ್ ವಿಚರಿತ ಅರಿವಿನ ಕಣ್ಣು ಪುಸ್ತಕ ಬಿಡುಗಡೆ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು, ಡಾ. ಶ್ರೀಶಿವಕುಮಾರಸ್ವಾಮೀಜಿಗಳು ಇರದಿದ್ದರೆ ಲಕ್ಷಾಂತರ ಮಕ್ಕಳು ವಿದ್ಯೆ ವಂಚಿತರಾಗುವುದಲ್ಲದೆ, ಹಸಿವಿನಿಂದ ಸಾವನ್ನಪ್ಪುತಿದ್ದರು. ಹಾಗಾಗಿ ಮಠಗಳ ಕಾರ್ಯವೈಖರಿಗೆ ಶ್ರೀಸಿದ್ದಗಂಗಾ ಮಠ ಮಾದರಿ ಎಂದರು.
ನಾನು ಜಗತ್ತಿನಲ್ಲಿಯೇ ಭಕ್ತಿ ಮತ್ತು ಪ್ರೀತಿಯಿಂದ ಕಾಣುವ ಯಾವುದಾದರೂ ಸ್ವಾಮೀಜಿ ಇದ್ದರೆ ಅದು ಲಿಂಗೈಕ್ಯ ಡಾ.ಶ್ರೀಶಿವಕುಮಾರ ಸ್ವಾಮೀಜಿಗಳು, ಅವರು ನಮಗೆ ನಾವು ಭೂಮಿಯ ಮೇಲೆ ಹೇಗೆ ಮನುಷ್ಯರಾಗಿ ಬದುಕುಬೇಕು ಎಂಬ ಮಾರ್ಗದರ್ಶನವನ್ನು ಮಾಡಿ ಹೋಗಿದ್ದಾರೆ. ಲಕ್ಷಾಂತರ ಮಕ್ಕಳಿಗೆ ಅನ್ನ, ಅಕ್ಷರ, ಆಶ್ರಯ ನೀಡಿ, ಅವರು ಬದುಕು ಕಟ್ಟಿಕೊಳ್ಳುವಂತೆ ಮಾಡಿದ್ದಾರೆ. ಹಾಗಾಗಿ ಅವರು ಸಾಧು, ಸನ್ಯಾಸಿಗಳಲ್ಲಿಯೇ ಅನುಕರಣೀಯರಾಗಿದ್ದಾರೆ ಎಂದು ಸಚಿವ ಅರಗ ಜ್ಞಾನೇಂದ್ರ ನುಡಿದರು.
ನಡೆದಾಡುವ ದೇವರು ಎಂದು ಭಕ್ತರಿಂದ ಕರೆಯಿಸಿಕೊಂಡ ಡಾ.ಶ್ರೀಶಿವಕುಮಾರ ಸ್ವಾಮೀಜಿಗಳು ಎಂದು ಪ್ರಶಸ್ತಿಗಳ ಹಿಂದೆ ಬಿದ್ದವರಲ್ಲ. ಆದರೂ ಅನೇಕ ಪ್ರಶಸ್ತಿಗಳು ಅವರನ್ನು ಅರಸಿಕೊಂಡು ಬಂದಿವೆ. ಅವರ ಹೆಸರನ್ನು ನೆನಸಿದರೆ ಸಾಲದು, ಅವರ ನಡೆದ ದಾರಿಯಲ್ಲಿ ಕಿಂಚಿತ್ತಾದರೂ ನಾವು ಸಾಗುವ ಮೂಲಕ, ಅನ್ನರ ಬದುಕಿಗೆ ನೆರವಾದರೆ ಅದು ನಾವು ಡಾ.ಶ್ರೀಶಿವಕುಮಾರಸ್ವಾಮೀಜಿಗಳಿಗೆ ಸಲ್ಲಿಸುವ ಗೌರವ. ಆಗ ಮಾತ್ರ ಸ್ವಾಮೀಜಿಗಳ ಆತ್ಮ ಸಂತೋಷ ಪಡುತ್ತದೆ ಎಂದರು.
ಹರಳೂರಿನ ವೀರಭದ್ರಸ್ವಾಮಿ ದೇವಾಲಯ ಸಮತಿಯಿಂದ ನಿತ್ಯ ದಾಸೋಹಕ್ಕೆ ಇಂತು ಚಾಲನೆಯನ್ನು ಶ್ರೀಸಿದ್ದಲಿಂಗ ಸ್ವಾಮೀಜಿಗಳು ನೀಡಿದ್ದಾರೆ. ಇದು ಮತ್ತಷ್ಟು ಹೆಮ್ಮರವಾಗಿ ಬೆಳೆದು ಭಕ್ತ ಹಸಿವು ತಣಿಸುವ ಕಾರ್ಯ ಮಾಡಲಿ ಎಂದು ಆಶಿಸುತ್ತೇನೆ. ಜಿಲ್ಲಾ ಉಸ್ತುವಾರಿ ಸಚಿವನಾಗಿ, ಗೃಹ ಸಚಿವನಾಗಿ ರಾಜ್ಯದ ಶಾಂತಿ ಸುವ್ಯವಸ್ಥೆ ಕಾಪಾಡುವ ಗುರುತರ ಜವಾಬ್ದಾರಿ ನನ್ನ ಮೇಲಿದೆ. ಅದು ನಿರಂತರವಾಗಿ ಸಾಗಿದೆ.ಜಿಲ್ಲೆಯ ಇಬ್ಬರು ಸಚಿವರು ಅಭಿವೃದ್ದಿಗೆಯಲ್ಲಿ ನನಗೆ ಪೂರಕವಾಗಿ ಕಾರ್ಯನಿರ್ವಹಿಸುವುದಲ್ಲದೆ, ಅವರ ಖಾತೆಗಳ ನಿರ್ವಹಣೆಯಲ್ಲಿಯೂ ಉತ್ತಮ ಹೆಸರು ಪಡೆದಿದ್ದಾರೆ. ಜಿಲ್ಲೆಯ ಅಧಿಕಾರಿಗಳು ಸಹ ಜನತೆಗೆ ಸ್ಪಂದಿಸಿ ಕಾರ್ಯನಿರ್ವಹಿಸುತ್ತಿದ್ದಾರೆ. ಜೂನ್01ರಂದು ಪ್ರಗತಿ ಪರಿಶೀಲನಾ ಸಭೆಯಿಂದ ಮತ್ತಷ್ಟು ಮಾಹಿತಿ ಪಡೆಯಲು ಅನುಕೂಲವಾಗುತ್ತದೆ ಎಂದು ಸಚಿವ ಅರಗಜ್ಞಾನೇಂದ್ರ ನುಡಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಸಿದ್ದಗಂಗಾ ಮಠಾಧ್ಯಕ್ಷ ಶ್ರೀಸಿದ್ದಲಿಂಗ ಮಹಾಸ್ವಾಮೀಜಿಗಳು, ಹರಳೂರು ಮತ್ತು ಸಿದ್ದಗಂಗಾ ಮಠಕ್ಕೆ ಅವಿನಾಭಾವ ಸಂಬಂಧವಿದೆ. ಶ್ರೀಉದ್ಯಾನ ಶಿವಯೋಗಿಗಳು ಇಲ್ಲಿ ಕೆರೆ ಕಟ್ಟಿಸುವುದರ ಜೊತೆಗೆ,ಶಾಲೆ ಪ್ರಾರಂಭಿಸಬೇಕೆಂಬ ಕನಸು ಕಂಡಿದ್ದರು. ಅದನ್ನು ಶ್ರೀಶಿವಕುಮಾರಸ್ವಾಮೀಜಿಗಳು ಶಾಲೆ ತೆರೆಯುವ ಮೂಲಕ ನನಸು ಮಾಡಿದರು.ಇಡೀ ರಾಜ್ಯದಲ್ಲಿಯೇ ಮೊದಲಿಗೆ ಸ್ವಾಮೀಜಿಯವರ ಪುತ್ಥಳಿ ಆನಾವರಣ ಮಾಡಿದ ಗ್ರಾಮವೆಂದರೆ ಹರಳೂರು, ಲಿಂಗೈಕ್ಯ ಶ್ರೀಶಿವಕುಮಾರಸ್ವಾಮೀಜಿಗಳನ್ನು ಈ ಗ್ರಾಮದ ಜನತೆ ತನ್ನ ಹೃದಯಲ್ಲಿ ಇಟ್ಟುಕೊಂಡಿದ್ದಾರೆ ಎಂದು ಪ್ರಶಂಸಿಸಿದರು.
ತುಮಕೂರು ನಗರದ ಶಾಸಕರಾದ ಜಿ.ಬಿ.ಜೋತಿಗಣೇಶ್ ಮಾತನಾಡಿ, ಹಲವು ವರ್ಷಗಳಿಂದ ಮಾಜಿ ಶಾಸಕರಾದ ಸುರೇಶಗೌಡ ಅವರು ಈ ಭಾಗದಲ್ಲಿ ಉತ್ತಮ ಅಭಿವೃದ್ದಿ ಕಾರ್ಯಗಳನ್ನು ಮಾಡಿದ್ದಾರೆ. ಧಾರ್ಮಿಕವಾಗಿ, ಮೂಲಭೂತ ಸೌಕರ್ಯ ಒದಗಿಸುವಲ್ಲಿ ಸಾಕಷ್ಟು ಶ್ರಮಿಸಿದ್ದಾರೆ. ಅವರ ಮೇಲೆ ನಿಮ್ಮ ಆಶೀರ್ವಾದ ಇರಲಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಜಿ ಶಾಸಕ ಬಿ.ಸುರೇಶಗೌಡ ಮಾತನಾಡಿ, ರಾಜ್ಯದಲ್ಲಿ ಬಿ.ಎಸ್.ವೈ ಮುಖ್ಯಮಂತ್ರಿಯಾಗಿರುವ ಸಂದರ್ಭದಲ್ಲಿ ರಾಜ್ಯದ ಕಲ್ಯಾಣ ಕುರಿತು ಪ್ರತಿ ಹಂತದಲ್ಲಿಯೂ ಮಾರ್ಗದರ್ಶನ ಮಾಡಿದವರು ಡಾ.ಶ್ರೀಶಿವಕುಮಾರಸ್ವಾಮೀಜಿಗಳು, ಅವರ ಮಾರ್ಗದರ್ಶನದಲ್ಲಿ ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ರಾಜ್ಯವನ್ನು ಅಭಿವೃದ್ದಿ ಪಥದತ್ತ ತೆಗೆದುಕೊಂಡು ಹೋದರು. ಹಾಗಾಗಿ ಶ್ರೀಗಳು ನಮಗೆಲ್ಲರಿಗೂ ಪ್ರಾಥಃಸ್ಮರಣಿಯರು, ನುಡಿದಂತೆ ನಡೆದು ತೋರಿಸಿದರು. ಹಾಗಾಗಿ ಅವರನ್ನು ಇಡೀ ವಿಶ್ವವೇ ಸ್ಮರಿಸುತ್ತಿದೆ. ನನ್ನ ಕ್ಷೇತ್ರದಲ್ಲಿ ಇಷೊಂದು ಶಾಲೆಗಳ ಅಭಿವೃದ್ದಿಗೆ ಸ್ಪೂರ್ತಿ ನೀಡಿದವರೇ ಸಿದ್ದಗಂಗಾ ಶ್ರೀಗಳು, ಹಿಮಾಲಯದ ಗಂಗೆಯಷ್ಟೇ ಪವಿತ್ರವಾದವರು. ಹಾಗಾಗಿ ಪ್ರತಿ ಭಕ್ತರ ಹೃದಯದಲ್ಲಿ ನೆಲೆಸಿದ್ದಾರೆ. ನನಗೆ ಸಿದ್ದಗಂಗಾ ಶ್ರೀಗಳು ರಾಜಗುರುಗಳಾದರೆ, ಬಿ.ಎಸ್.ಯಡಿಯೂರಪ್ಪ ರಾಜಕೀಯ ಗುರುಗಳು, ಅವರ ಮಾರ್ಗದರ್ಶನದಂತೆ ಕ್ಷೇತ್ರದ ಅಭಿವೃದ್ದಿಗೆ ಸಾವಿರಾರು ಕೋಟಿ ರೂಗಳನ್ನು ತಂದಿದ್ದೇನೆ. ಹಾಗೆಯೇ ಶ್ರೀಉದ್ಯಾನ ಶಿವಯೋಗಿಗಳಿಂದ ನಿರ್ಮಾಣವಾಗಿರುವ ಕೆರೆಯನ್ನು ತುಂಬಿಸುವ ಕೆಲಸವನ್ನು ಮುಂದಿನ ದಿನಗಳಲ್ಲಿ ಮಾಡುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಹರಳೂರು ಜಂಗಮ ಮಠ ಶ್ರೀಚನ್ನಬಸವಸ್ವಾಮೀಜಿ, ಕಂಬಾಳು ಶ್ರೀವೀರ ಸಂಸ್ಥಾನ ಮಠದ ಶ್ರೀಚನ್ನವೀರ ಶಿವಾಚಾರ್ಯ ಸ್ವಾಮೀಜಿ, ಮಾಜಿ ಸಚಿವ ಸೊಗಡು ಶಿವಣ್ಣ, ಡಾ.ಲಕ್ಷ್ಮಣದಾಸ್, ವೈ.ಹೆಚ್.ಹುಚ್ಚಯ್ಯ ಗ್ರಾಮಸ್ಥರು ಮತ್ತಿತರರು ಉಪಸ್ಥಿತರಿದ್ದರು.

(Visited 16 times, 1 visits today)
Araga jnanendra tumkur
Previous Articleಕನ್ನಡವನ್ನು ಎಲ್ಲೆಡೆ ಕಾಣಿಸುವ ಕೇಳಿಸುವ ಕೆಲಸವಾಗಲಿ
Next Article ಗ್ರಾಮೀಣ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಬೀಜಧನ
News Desk Benkiyabale

Related Posts

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm news

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm news

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm news
ತಾಜಾ ಸುದ್ಧಿಗಳು
news

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm
news

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm
news

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm
news

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm
news

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm
news

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

August 01, 2026 2:41 pm
Our Youtube Channel
Our Picks

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

By News Desk BenkiyabaleAugust 03, 2026 4:58 pm

ತುಮಕೂರು: ಬಲಿಜ ಸಮುದಾಯಕ್ಕೆ ಶೈಕ್ಷಣಿಕವಾಗಿ ೨ಎ ಮೀಸಲಾತಿ ದೊರೆಯುತ್ತಿದ್ದು, ಉದ್ಯೋಗ ಮತ್ತು ರಾಜಕೀಯ ಕ್ಷೇತ್ರದಲ್ಲಿಯೂ ೨ಎ ಮೀಸಲಾತಿ ದೊರೆಯು ಬೇಕೆಂಬುದು…

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.