BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬರ ಪರಿಸ್ಥಿತಿ, ಮುಂಗಾರು ಹಂಗಾಮು, ಕುಡಿಯುವ ನೀರಿನ ನಿರ್ವಹಣೆ ಸಮರ್ಪಕವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ
  • ಗಡಿನಾಡು ಪಾವಗಡದಲ್ಲಿ ನಟಿ ರಾಗಿಣಿ ಸಂಭ್ರಮ
  • ಸಮಯ ಸದುಪಯೋಗ ಪಡಿಸಿಕೊಂಡಾಗ ಮಾತ್ರ ಯಶಸ್ವಿ ಜೀವನ ಸಾಧ್ಯ
  • ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ
  • ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮ ಆರೋಪ: ಸಿಬಿಐ ತನಿಖೆಗೆ ಒತ್ತಾಯ
  • ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ
  • ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ
  • ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬಗರ್ ಹುಕಂ ಸಾಗುವಳಿದಾರರು ಹಕ್ಕುಪತ್ರಕ್ಕೆ ಆಗ್ರಹಿಸಿ ಪ್ರತಿಭಟನೆ
ಇತರೆ ಸುದ್ಧಿಗಳು

ಬಗರ್ ಹುಕಂ ಸಾಗುವಳಿದಾರರು ಹಕ್ಕುಪತ್ರಕ್ಕೆ ಆಗ್ರಹಿಸಿ ಪ್ರತಿಭಟನೆ

By News Desk BenkiyabaleUpdated:June 14, 2022 5:24 pm

ತುಮಕೂರು:


ದೌರ್ಜನ್ಯ, ದಬ್ಬಾಳಿಕೆ ಬಳಸಿ ಅರಣ್ಯ ಇಲಾಖೆ ಮೂಲಕ ಕಿತ್ತುಕೊಂಡಿರುವ ಬಗರ್ ಹುಕಂ ಸಾಗುವಳಿ ಭೂಮಿ ಮರಳಿಸಲು ಹಾಗೂ ಎಲ್ಲಾ ಬಗರ್ ಹುಕಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಪ್ರಾಂತ ರೈತ ಸಂಘ ನಗರದ ಜಿಲ್ಲಾಧಿಕಾರಿ ಅನಿರ್ಧಿಷ್ಠಾವಧಿ ಧರಣಿ ಆರಂಭಿಸಿದೆ.
ಸಾಗುವಳಿ ಮಂಜೂರಾತಿ ಆದೇಶ ಪಡೆದಿರುವ ಎಲ್ಲಾ ಬಗರ್ ಹುಕಂ ರೈತರಿಗೆ ದುರಸ್ತು ಮಾಡಿ ಪಹಣಿ ವಿತರಿಸಬೇಕು. ಬಗರ್ ಹುಕಂ ಸಕ್ರಮ ಕೋರಿ ಅರ್ಜಿ ಸಲ್ಲಿಸಲು ಅವಕಾಶವನ್ನು ವಿಳಂಬ ಮಾಡದೇ ಕಲ್ಪಿಸಬೇಕು. ವಸತಿ ರಹಿತರಿಗೆ ಮನೆ-ನಿವೇಶನಕ್ಕಾಗಿ ಸರ್ಕಾರಿ ಭೂಮಿ ಲಭ್ಯ ಇಲ್ಲದ ಕಡೆ ಭೂ ಸ್ವಾಧೀನದ ಮೂಲಕ ಮನೆ-ನಿವೇಶನ ಒದಗಿಸಬೇಕು. ವಿವಿಧ ಯೋಜನೆಗಳಿಗೆ ಭೂ ಸ್ವಾಧೀನಕ್ಕೆ ಒಳಗಾದ ಬಗರ್ ಹುಕುಂ ಸಾಗುವಳಿದಾರರು ಸೇರಿದಂತೆ ಎಲ್ಲಾ ರೈತರಿಗೆ ಪರಿಹಾರದ ಹಣ ನೀಡುವಂತೆ ಒತ್ತಾಯಿಸಿ ಅನಿರ್ಧಿಷ್ಟ ಧರಣಿ ನಡೆಸಲಾಗುತ್ತಿದೆ.
ಪ್ರತಿಭಟನಾ ಧರಣಿಗೆ ಚಾಲನೆ ನೀಡಿ ಮಾತಾನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ. ಬಯ್ಯಾರೆಡ್ಡಿ ಮಾತನಾಡಿ, ಕೋವಿಡ್ ಸಂದರ್ಭವನ್ನು ದುರುಪಯೋಗಪಡಿಸಿಕೊಂಡು ಅರಣ್ಯ ಇಲಾಖೆಯವರು ಗುಬ್ಬಿ ತಾಲ್ಲೂಕು ಚೇಳೂರು ಹೋಬಳಿ ಗಂಗಯ್ಯನ ಪಾಳ್ಯ, ಅಮ್ಮನಘಟ್ಟ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲೂ ಹಲವಾರು ಕಡೆ ರೈತರನ್ನು ಬಲಾತ್ಕಾರವಾಗಿ ಒಕ್ಕಲೆಬ್ಬಿಸಿದ್ದಾರೆ. ಹತ್ತಾರು ವರ್ಷಗಳಿಂದ ಕಷ್ಟಪಟ್ಟು ಬೆಳೆಸಿದ ನೂರಾರು ತೆಂಗು, ಮಾವು ಮುಂತಾದ ಲಕ್ಷಾಂತರ ರೂ. ಬೆಲೆ ಬಾಳುವ ಮರಗಳು ಹಾಗೂ ಬೆಳೆಗಳನ್ನು ನಾಶಪಡಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇಶದ ಬೆನ್ನೆಲಬು ರೈತ ಎಂದು ಭಾಷಣಗಳಲ್ಲಿ ಹೇಳುವ ಸರ್ಕಾರದ ಮಂತ್ರಿಗಳು, ಶಾಸಕರು ಭೂಮಿ ಕಿತ್ತುಕೊಳ್ಳುವ ಅರಣ್ಯ ಇಲಾಖೆಯನ್ನು ಹದ್ದುಬಸ್ತಿನಲ್ಲಿಡುತ್ತಿಲ್ಲ. ಈ ಕೂಡಲೇ ಜಿಲ್ಲಾಡಳಿತ ಹಾಗೂ ಸರ್ಕಾರದ ಮೇಲೆ ಒತ್ತಡ ತಂದು ಬಗರ್ ಹುಕಂ ಸಾಗುವಳಿದಾರರ ಸಮಸ್ಯೆಗಳನ್ನು ಬಗೆಹರಿಸಬೇಕು. ಜಿಲ್ಲಾಧಿಕಾರಿ ರೈತರ ಸಮಸ್ಯೆಗಳ ಪರಿಹಾರಕ್ಕಾಗಿ ಕ್ರಮ ವಹಿಸದೇ ಇದ್ದರೆ ಧರಣಿಯನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ರೈತ ಮುಖಂಡ ಟಿ. ಯಶವಂತ ಮಾತನಾಡಿ, ಜೆಸಿಬಿ ಬಳಸಿ ರೈತರ ಬೆಳೆ ನಾಶ ಸಂದರ್ಭದಲ್ಲಿ ರೈತ ಕುಟುಂಬದ ಆಕ್ರಂದನ, ನೋವುಗಳು ಮಾಧ್ಯಮದಲ್ಲಿ ಬಂದಾಗ ಮೊಸಳೆ ಕಣ್ಣೀರು ಸುರಿಸುವ ಸರ್ಕಾರಗಳು ಸ್ವಲ್ಪ ದಿನದ ನಂತರ ಮತ್ತೊಬ್ಬ ರೈತರನ್ನು ಒಕ್ಕಲೆಬ್ಬಿಸಲು ಮುಂದಾಗುತ್ತಿವೆ. ಇದಕ್ಕೆ ಕೊನೆ ಯಾವಾಗ ಎಂದು ಪ್ರಶ್ನಿಸಿದರು. ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಗೋವಿಂದರಾಜು ಮಾತನಾಡಿ, ಜಿಲ್ಲೆಯ ಸಾವಿರಾರು ರೈತರು, ಕೃಷಿ ಕೂಲಿಕಾರರು, ದಲಿತರು 40-50 ವರ್ಷಗಳಿಂದ ಬಗರ್ ಹುಕಂ ಸಾಗುವಳಿ ಮಾಡುತ್ತಾ ಜೀವನ ನಡೆಸುತ್ತಿದ್ದಾರೆ. ಸಾಗುವಳಿ ಸಕ್ರಮ ಚೀಟಿಗಳು ಇರುವ ರೈತರನ್ನು ಸಹ ಒಕ್ಕಲೆಬ್ಬಿಸುವ ಆಕ್ರಮಣಗಳಿಗೆ ಗುರಿ ಮಾಡಲಾಗಿದೆ. ಫಾ 50, 53, 57 ರಲ್ಲಿ ಸಕ್ರಮ ಕೋರಿ ಅರ್ಜಿ ಸಲ್ಲಿಸಿರುವ ರೈತರನ್ನು ಕಾನೂನು ಬಾಹಿರವಾಗಿ ಒಕ್ಕಲೆಬ್ಬಿಸಲಾಗಿದೆ. ತಮ್ಮ ಹತ್ತಿರ ಇರುವ ಕಂದಾಯ ದಾಖಲಾತಿಗಳನ್ನು ತೋರಿಸಿದರೂ ಅರಣ್ಯ ಇಲಾಖೆಯ ದೌರ್ಜನ್ಯದ ಅಹಂಕಾರ ತಣಿಯುತ್ತಿಲ್ಲ ಎಂದು ದೂರಿದರು.
ಎಲ್ಲಾ ಬಗರ್ ಹುಕಂ ಭೂಮಿಗಳ ಸಕ್ರಮದ ಪ್ರಕ್ರಿಯೆಯನ್ನು ವೇಗಗೊಳಿಸಬೇಕೆಂದು ತೀರ್ಮಾನ ಮಾಡಿ ಸರ್ವೆ ವರದಿಗಳು ಬಂದ ನಂತರ ಮತ್ತೊಂದು ಸಭೆ ಮಾಡಲು ನಿರ್ಧರಿಸಲಾಗಿತ್ತು. ಆದರೆ ಇಲ್ಲಿಯವರೆಗೂ ಸರ್ವೆ ನಡೆಸಲಿಲ್ಲ. ಈಗಲೂ ಅರಣ್ಯ ಇಲಾಖೆಯ ತಕರಾರುಗಳಿಂದ ಬಗರ್ ಹುಕಂ ಸಾಗುವಳಿ ಸಕ್ರಮವಾಗುತ್ತಿಲ್ಲ ಎಂದು ಪ್ರತಿಭಟನಾಕಾರರು ಟೀಕಿಸಿದರು. ಪ್ರತಿಭಟನಾ ಧರಣಿಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾಧ್ಯಕ್ಷ ಸಿ. ಅಜ್ಜಪ್ಪ, ಮುಖಂಡರಾದ ದೊಡ್ಡನಂಜಯ್ಯ, ನರಸಿಂಹಮೂರ್ತಿ, ಕರಿಬಸವಯ್ಯ, ಚನ್ನಬಸವಣ್ಣ, ಮಂಜುನಾಥ್, ಶಿವಣ್ಣ, ಲೋಕೇಶ್, ವಿಶ್ವನಾಥ್, ಯಾದವಮೂರ್ತಿ, ರಾಚಪ್ಪ, ಮೂಡ್ಲಪ್ಪ, ಮಾರುತಿ, ಯೋಗೇಶ್, ಗೌರಮ್ಮ, ನಾಗರಾಜು ಮತ್ತಿತರರು ಪಾಲ್ಗೊಂಡಿದ್ದಾರೆ.

(Visited 1 times, 1 visits today)
Protest tumkur
Previous Articleಡ್ರಾಪ್ ಕೊಡುವ ನೆಪದಲ್ಲಿ ಬಾಲಕಿಯ ಕೊಲೆ: ಬೆಳಗಾವಿ ಮೂಲದ ಆರೋಪಿಯ ಬಂಧನ
Next Article ನಾಳೆ ನಗರಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ
News Desk Benkiyabale

Related Posts

ಬರ ಪರಿಸ್ಥಿತಿ, ಮುಂಗಾರು ಹಂಗಾಮು, ಕುಡಿಯುವ ನೀರಿನ ನಿರ್ವಹಣೆ ಸಮರ್ಪಕವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

August 05, 2026 5:04 pm news

ಗಡಿನಾಡು ಪಾವಗಡದಲ್ಲಿ ನಟಿ ರಾಗಿಣಿ ಸಂಭ್ರಮ

August 05, 2026 4:59 pm news

ಸಮಯ ಸದುಪಯೋಗ ಪಡಿಸಿಕೊಂಡಾಗ ಮಾತ್ರ ಯಶಸ್ವಿ ಜೀವನ ಸಾಧ್ಯ

August 05, 2026 4:56 pm news
ತಾಜಾ ಸುದ್ಧಿಗಳು
news

ಬರ ಪರಿಸ್ಥಿತಿ, ಮುಂಗಾರು ಹಂಗಾಮು, ಕುಡಿಯುವ ನೀರಿನ ನಿರ್ವಹಣೆ ಸಮರ್ಪಕವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

August 05, 2026 5:04 pm
news

ಗಡಿನಾಡು ಪಾವಗಡದಲ್ಲಿ ನಟಿ ರಾಗಿಣಿ ಸಂಭ್ರಮ

August 05, 2026 4:59 pm
news

ಸಮಯ ಸದುಪಯೋಗ ಪಡಿಸಿಕೊಂಡಾಗ ಮಾತ್ರ ಯಶಸ್ವಿ ಜೀವನ ಸಾಧ್ಯ

August 05, 2026 4:56 pm
news

ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ

August 05, 2026 4:54 pm
news

ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮ ಆರೋಪ: ಸಿಬಿಐ ತನಿಖೆಗೆ ಒತ್ತಾಯ

August 05, 2026 4:52 pm
news

ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ

August 04, 2026 9:55 pm
Our Youtube Channel
Our Picks

ಬರ ಪರಿಸ್ಥಿತಿ, ಮುಂಗಾರು ಹಂಗಾಮು, ಕುಡಿಯುವ ನೀರಿನ ನಿರ್ವಹಣೆ ಸಮರ್ಪಕವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

August 05, 2026 5:04 pm

ಗಡಿನಾಡು ಪಾವಗಡದಲ್ಲಿ ನಟಿ ರಾಗಿಣಿ ಸಂಭ್ರಮ

August 05, 2026 4:59 pm

ಸಮಯ ಸದುಪಯೋಗ ಪಡಿಸಿಕೊಂಡಾಗ ಮಾತ್ರ ಯಶಸ್ವಿ ಜೀವನ ಸಾಧ್ಯ

August 05, 2026 4:56 pm

ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ

August 05, 2026 4:54 pm

ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮ ಆರೋಪ: ಸಿಬಿಐ ತನಿಖೆಗೆ ಒತ್ತಾಯ

August 05, 2026 4:52 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಬರ ಪರಿಸ್ಥಿತಿ, ಮುಂಗಾರು ಹಂಗಾಮು, ಕುಡಿಯುವ ನೀರಿನ ನಿರ್ವಹಣೆ ಸಮರ್ಪಕವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

By News Desk BenkiyabaleAugust 05, 2026 5:04 pm

ತುಮಕೂರು: ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾದ ಶ್ರೀಮತಿ ಶುಭ ಕಲ್ಯಾಣ್ ಅವರು ಜಿಲ್ಲಾಧಿಕಾರಿಗಳ ಕಚೇರಿಯ ಕೆಎಸ್‌ಡಬ್ಲೂ÷್ಯಎಎನ್ ವಿಡಿಯೋ…

ಗಡಿನಾಡು ಪಾವಗಡದಲ್ಲಿ ನಟಿ ರಾಗಿಣಿ ಸಂಭ್ರಮ

August 05, 2026 4:59 pm

ಸಮಯ ಸದುಪಯೋಗ ಪಡಿಸಿಕೊಂಡಾಗ ಮಾತ್ರ ಯಶಸ್ವಿ ಜೀವನ ಸಾಧ್ಯ

August 05, 2026 4:56 pm

ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ

August 05, 2026 4:54 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.