BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ
  • ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್
  • ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಕೊರಿಯಾ ನಿಯೋಗದ ಭೇಟಿ ವೀಕ್ಷಣೆ
  • ಅರ್ಹ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ 
  • ಹುಳಿಯಾರು ಹೆದ್ದಾರಿಯಲ್ಲಿ ಧೂಳಿನ ಕಣ್ಣಾಮುಚ್ಚಾಲೆ
  • ನಿದ್ದೆಗೆ ಜಾರಿದ ಕಂದಾಯ ಇಲಾಖೆ
  • ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು
  • ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಮಾಜದಲ್ಲಿ ಆದರ್ಶಗಳ ಕೊರತೆ ಕಾಡುತ್ತಿದೆ: ಸ್ವಾಮೀಜಿ
ಇತರೆ ಸುದ್ಧಿಗಳು

ಸಮಾಜದಲ್ಲಿ ಆದರ್ಶಗಳ ಕೊರತೆ ಕಾಡುತ್ತಿದೆ: ಸ್ವಾಮೀಜಿ

By News Desk BenkiyabaleUpdated:August 02, 2022 6:29 pm

ತುಮಕೂರು:


ಪ್ರಸ್ತುತ ಸಮಾಜದಲ್ಲಿ ಆದರ್ಶಗಳ ಕೊರತೆ ಕಾಡುತ್ತಿರುವ ನಡುವೆ ದೊಡ್ಡಲಿಂಗಪ್ಪನವರ ಸೇವೆ, ಆದರ್ಶ ಅನುಕರಣೀಯವಾದದ್ದು. ಸಾಧಕರ ಜೀವನ ಚರಿತ್ರೆ ಓದುವ ಮೂಲಕ ಮುಂದಿನ ಪೀಳಿಗೆಗೆ ದಿಶೆ ದೊರಕುತ್ತದೆ. ಸರಳತೆ ಹಾಗೂ ಸ್ನೇಹ ಜೀವ ತುಂಬ ಮುಖ್ಯವಾಗುತ್ತದೆ. ಒಳಿತು ಕೆಡಕು ಮಾಡಿಸುವುದು ಮನಸ್ಸು. ಆತ್ಮದ ಸ್ಥಿತಿಯಲ್ಲಿ ಎಲ್ಲರೂ ಒಂದೇ ಆದರೂ ವ್ಯಕ್ತಿತ್ವದಲ್ಲಿ ಭಿನ್ನತೆಯಿರುತ್ತದೆ. ಅದಕ್ಕೆ ಕಾರಣ ಮನಸ್ಸು. ವ್ಯಕ್ತಿ ಮನಸ್ಸು ಸರಿಯಾದ ರೀತಿಯಲ್ಲಿ ಕೆಲಸ ಮಾಡಿದರೆ ಉತ್ತಮ ಕಾರ್ಯಗಳು ಆಗುತ್ತವೆ. ಜ್ಞಾನೇಂದ್ರಿಯಗಳು, ಕಣೇರ್ಂದ್ರಗಳು ಕೆಲಸ ಮಾಡಬೇಕಾದರೆ ಅದಕ್ಕೆ ಮನಸ್ಸು ಎದ್ದಿರಬೇಕು. ಆಗ ಮಾತ್ರ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಾಲಾನಂದ ಸ್ವಾಮೀಜಿ ತಿಳಿಸಿದರು.
ಅವರು ಒಕ್ಕಲಿಗರ ವಿಕಾಸ ವೇದಿಕೆ ತುಮಕೂರು, ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ ಮತ್ತು ಶಿಂಷಾ ಲಿಟರರಿ ಅಕಾಡೆಮಿ ಸಹಯೋಗದಲ್ಲಿ ಸಮುದಾಯ ಸೇವೆಯಲ್ಲಿ ಆರ್, ದೊಡ್ಡಲಿಂಗಪ್ಪನವರ ಬದುಕಿನ ಚಿತ್ರಣ “ನೋವುಂಡು ಬೆಳಕು ಬೀರುವ ದೀಪ’’ ಕೃತಿ ಲೋಕಾರ್ಪಣೆಗೊಳಿಸಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡುತ್ತಿದ್ದರು.
ಧನಾತ್ಮಕ ಚಿಂತನೆಯಿಂದ ಮಾತ್ರ ಮನುಳ್ಯ ಉತ್ತಮ ಹಂತಕ್ಕೆ ತಲುಪಲು ಸಾಧ್ಯವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಧನಾತ್ಮಕ ಗುಣಗಳನ್ನು ಬೆಳೆಸಿಕೊಳ್ಳುವುದು ಅವಶ್ಯಕವಾಗಿದೆ. ಅಂತಹ ಗುಣವನ್ನು ದೊಡ್ಡಲಿಂಗಪ್ಪನವರು ಬೆಳೆಸಿಕೊಂಡಿದ್ದು ಇತರರಿಗೆ ಮಾದರಿಯಾಗಿದ್ದಾರೆ. ಸಮಾಜಸೇವೆ ಮಾಡಲು ಮನಸ್ಸು ಇರಬೇಕು, ಒಳ್ಳೆಯ ಮನಸ್ಸಿ£ಂದ ಮಾಡಿದ ಸಮಾಜ ಸೇವೆ ಆತ್ಮತೃಪ್ತಿ ನೀಡುತ್ತದೆ.
ದೊಡ್ಡಲಿಂಗಪ್ಪನವರು ಇಂತಹ ಕಾರ್ಯಗಳನ್ನು ಮಾಡುತ್ತಿದ್ದು ಇವರ ಸರಳತೆ, ಆದರ್ಶಗಳು ಮುಂದಿನ ಪೀಳಿಗೆಗೆ ಪ್ರೇರಣೆಯಾಗಲಿ ಎಂದರು. ಯಾವ ವ್ಯಕ್ತಿ ಸಮಾಜಕ್ಕೋಸ್ಕರ ಬದುಕಿರುತ್ತಾನೋ ಅವನು ಸತ್ತ ಮೇಲೂ ಬದುಕಿರುತ್ತಾನೆ. ಯಾವ ವ್ಯಕ್ತಿ ತನಗಾಗಿ ಬದುಕಿರುತ್ತಾನೋ ಆತ ಬದುಕಿರುವಾಗಲೇ ಸತ್ತ ಸ್ಥಿತಿಯಲ್ಲಿರುತ್ತಾನೆ. ಕಳೆ ತರುವ ಕೊಳೆ ತೊಳೆಯುವ ಪುಸ್ತಕಗಳನ್ನು ಓದುವುದರಿಂದ ಬದುಕಿನಲ್ಲಿ ಸಾರ್ಥಕತೆ ತರುತ್ತದೆ ಎಂದು ತಿಳಿಸಿದರು.
ವಿಜ್ಞಾನ ಕೇಂದ್ರದ ಅಧ್ಯಕ್ಷ ಮರುಳಯ್ಯ ಪ್ರಾಸ್ತವಿಕವಾಗಿ ಮಾತನಾಡಿ ಪ್ರಚಾರದ ಸಮಾಜ ಸೇವೆ ಆಗಬಾರದು ಯಾರಿಗೂ ತಿಳಿಯದಂತೆ, ಪರೋಕ್ಷವಾಗಿ ಮಾಡುವುದು ಸೇವೆಯಾಗುತ್ತದೆ. ವಸ್ತು, ಹಣದ ರೂಪದಲ್ಲಿ ದಾನ ಮಾಡುವವರು ಸಮಾಜದಲ್ಲಿ ಸಿಗುತ್ತಾರೆ. ಅಂತಹ ಸೇವೆ ನಮಗೆ ಅವಶ್ಯಕತೆಯಿಲ್ಲ.
ಯಾವುದೇ ಫಲಾಫಲಗಳನ್ನು ಅಪೇಕ್ಷಿಸಿದೆ ಮಾಡುವುದೇ £ಜವಾದ ಸೇವೆಯಾಗುತ್ತದೆ. ಅಂತಹ ಸೇವೆಯನ್ನು ದೊಡ್ಡಲಿಂಗಪ್ಪನವರು ಮಾಡುತ್ತಿದ್ದಾರೆ. ಕುಂಚಿಟಿಗರ ಸಮುದಾಯ ಭವನ, ವಿದ್ಯಾರ್ಥಿ£ಲಯ £ರ್ಮಾಣದಂತಹ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು ಮಾತ್ರವಲ್ಲದೆ ಧಾರ್ಮಿಕ ಕ್ಷೇತ್ರದಲ್ಲಿ ಯೂ ಸಹ ಉತ್ತಮ ಕಾರ್ಯ ಮಾಡಿದ್ದಾರೆ. ಇವರ ಬದುಕು ಇಂದಿನ ಪೀಳಿಗೆಗೆ ಸ್ಪೂರ್ತಿದಾಯಕವಾಗಿದೆ ಎಂದರು.
ಹಿರಿಯ ಲೇಖಕರಾದ ಪೆÇ್ರ. ಎಂ.ಜಿ.ಚಂದ್ರಶೇಖರಯ್ಯ ಮಾತನಾಡಿ, ಈ ಕೃತಿ ರಚನೆ £ಜಕ್ಕೂ ಸಾರ್ಥಕವೆ£ಸುತ್ತದೆ. ಸಾರ್ವಜ£ಕ ಕೆಲಸವನ್ನು ತಮ್ಮ ಮನೆಯ ಕೆಲಸವೆಂದು ಭಾವಿಸುವ ದೊಡ್ಡ ಗುಣ ದೊಡ್ಡಲಿಂಗಪ್ಪನವರದ್ದು. ಅಂತಕರಣದಿಂದ ಸಮಾಜದ ಸಮಸ್ಯೆಗಳಿಗೆ ಮಿಡಿಯುವ ಹೃದಯ ದೊಡ್ಡಲಿಂಗಪ್ಪನವರದ್ದು ಇಂತವರ ಸಮಾಜಮುಖಿ ಚಿಂತಕರ ಸಂಖ್ಯೆ ಸಮಾಜದಲ್ಲಿ ಜಾಸ್ತಿಯಾಗಬೇಕು ಎಂದು ತಿಳಿಸಿದರು.
ಆರ್. ದೊಡ್ಡ ಲಿಂಗಪ್ಪನವರು ಮಾತನಾಡಿ, ಸ್ನೇಹ, ಪ್ರೀತಿ, ನಂಬಿಕೆಯಿಂದ ಯಾವುದೇ ಕಾರ್ಯವನ್ನು ಸಾಧಿಸಬಹುದು. ನಂಬಿಕೆ ಮೂರು ಅಕ್ಷರವೇ ಇರಬಹುದು ಆದರೆ ಅದನ್ನು ಸಂಪಾದಿಸುವುದು ತುಂಬ ಕಷÀ್ಟ. ಶಿಕ್ಷಣ ಎಡವಲು ಬಿಡುವುದಿಲ್ಲ ಸಂಸ್ಕಾರ ಕೆಡಲು ಬಿಡುವುದಿಲ್ಲ ಆದ್ದರಿಂದ ಪ್ರತಿಯೊಬ್ಬರೂ ಶಿಕ್ಷಣವಂತರಾಗಿ ಉತ್ತಮ ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು ಎಂದರು.
ಕೃತಿ ಸಂಪಾದಕರಾದ ಎಂ.ಎಚ್.ನಾಗರಾಜು ಮಾತನಾಡಿ, ದೊಡ್ಡಲಿಂಗಪ್ಪನವರ ಸಮಾಜ ಸೇವೆ, ಅವರ ಬದುಕನ್ನು ಹತ್ತಿರದಿಂದ ನೋಡಿದವನು ನಾನು ಅವರ ಜೀವನ ಸಾಧನೆಗೆ ನಾನು £ೀಡಿದ ಶೀರ್ಷಿಕೆಯೇ ನೋವುಂಡು ಬೆಳಕು ಬೀರುವ ದೀಪ ಇದು ನನಗೆ ಸಾರ್ಥಕತೆ ತರುತ್ತದೆ ಎಂದು ತಮ್ಮ ಅನಿಸಿಕೆ ಹಂಚಿಕೊಂಡರು.
ವಿದ್ಯಾವಾಚಸ್ಪತಿ ಕವಿತಾಕೃಷÀ್ಣ, ಕಸಾಪ ಜಿಲ್ಲಾ ಅಧ್ಯಕ್ಷ ಸಿದ್ದಲಿಂಗಪ್ಪ ಮಾತನಾಡಿದರು.
ಕವಿವಿ ಸಂಘದ ಕಾ.ಅಧ್ಯಕ್ಷ ಕಾಮರಾಜ್, ಕೇಂದ್ರ ಒಕ್ಕಲಿಗರ ಸಂಘದ ನಿರ್ದೇಶಕ ಹನುಮಂತರಾಯಪ್ಪ, ಡಾ.ಹಾಲಪ್ಪ ಪ್ರತಿಷ್ಟಾನದ ಅಧ್ಯಕ್ಷ ಡಾ. ಮುರಳೀಧರ ಹಾಲಪ್ಪ, ಕೆಂಪೇಗೌಡ ಬ್ಯಾಂಕ್ ಉಪಾಧ್ಯಕ್ಷ ಎಲ್. ಲಿಂಗಣ್ಣ ಸೇರಿದಂತೆ ಮತ್ತಿತರರಿದ್ದರು.

(Visited 1 times, 1 visits today)
tumkur
Previous Articleಮಾಜಿ ಸಿಎಂ ಹೆಚ್‍ಡಿಕೆ ಬೆಂಗಾವಲು ವಾಹನ ಅಪಘಾತ: ಮೂವರಿಗೆ ಗಂಭೀರ ಗಾಯ
Next Article ಅಪಾಯದ ಅಂಚಿನಲ್ಲಿ ಜಯಮಂಗಲಿ ನದಿ: ಜಿಲ್ಲಾಧಿಕಾರಿ ಭೇಟಿ
News Desk Benkiyabale

Related Posts

ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ

June 19, 2026 4:59 pm news

ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್

June 19, 2026 4:51 pm news

ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಕೊರಿಯಾ ನಿಯೋಗದ ಭೇಟಿ ವೀಕ್ಷಣೆ

June 19, 2026 4:47 pm news
ತಾಜಾ ಸುದ್ಧಿಗಳು

ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ

June 19, 2026 4:59 pm

ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್

June 19, 2026 4:51 pm

ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಕೊರಿಯಾ ನಿಯೋಗದ ಭೇಟಿ ವೀಕ್ಷಣೆ

June 19, 2026 4:47 pm

ಅರ್ಹ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ 

June 19, 2026 4:45 pm

ಹುಳಿಯಾರು ಹೆದ್ದಾರಿಯಲ್ಲಿ ಧೂಳಿನ ಕಣ್ಣಾಮುಚ್ಚಾಲೆ

June 19, 2026 4:44 pm

ನಿದ್ದೆಗೆ ಜಾರಿದ ಕಂದಾಯ ಇಲಾಖೆ

June 18, 2026 4:44 pm
Our Youtube Channel
Our Picks

ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ

June 19, 2026 4:59 pm

ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್

June 19, 2026 4:51 pm

ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಕೊರಿಯಾ ನಿಯೋಗದ ಭೇಟಿ ವೀಕ್ಷಣೆ

June 19, 2026 4:47 pm

ಅರ್ಹ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ 

June 19, 2026 4:45 pm

ಹುಳಿಯಾರು ಹೆದ್ದಾರಿಯಲ್ಲಿ ಧೂಳಿನ ಕಣ್ಣಾಮುಚ್ಚಾಲೆ

June 19, 2026 4:44 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ

By News Desk BenkiyabaleJune 19, 2026 4:59 pm

ತುಮಕೂರು: ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಮತ್ತು ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ವತಿಯಿಂದ ಇಂದು…

ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್

June 19, 2026 4:51 pm

ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಕೊರಿಯಾ ನಿಯೋಗದ ಭೇಟಿ ವೀಕ್ಷಣೆ

June 19, 2026 4:47 pm

ಅರ್ಹ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ 

June 19, 2026 4:45 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.