BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ
  • ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ
  • ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ
  • ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ
  • ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ
  • ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ
  • ವಿಕಲಚೇತನರು ಸ್ವಾವಲಂಬಿಗಲು ಅವಕಾಶ ಕಲ್ಪಿಸಿ
  • ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕ್ವಿಟ್ ಇಂಡಿಯಾ ಚಳವಳಿಯ ಸಂಸ್ಮರಣೆ!
ಇತರೆ ಸುದ್ಧಿಗಳು

ಕ್ವಿಟ್ ಇಂಡಿಯಾ ಚಳವಳಿಯ ಸಂಸ್ಮರಣೆ!

By News Desk BenkiyabaleUpdated:August 09, 2022 6:07 pm

ತುಮಕೂರು:


ಕ್ವಿಟ್ ಇಂಡಿಯಾ ಚಳವಳಿಯ ಸವಿನೆನಪಿಗಾಗಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಡಿಸಿಸಿ ಉಪಾಧ್ಯಕ್ಷ ಹೆಚ್.ಸಿ.ಹನುಮಂತಯ್ಯ ಅವರ ನೇತೃತ್ವದಲ್ಲಿ ಕ್ವಿಟ್ ಇಂಡಿಯಾ ಚಳವಳಿಯ ಸಂಸ್ಮರಣ ದಿನವನ್ನು ಆಚರಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸ್ವಾತಂತ್ರ ಚಳವಳಿಯ ನೇತಾರ ಮಹಾತ್ಮಗಾಂಧಿ ಅವರ ಭಾವಚಿತ್ರಕ್ಕೆ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಪುಷ್ಪನಮನ ಸಲ್ಲಿಸುವ ಮೂಲಕ 1942ರ ಆಗಸ್ಟ್ 09 ರಂದು ಆರಂಭಗೊಂಡ ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂಬ ಮಾಡು, ಇಲ್ಲವೇ ಮಡಿ ಹೋರಾಟಕ್ಕೆ ಚಾಲನೆಯಾದ ದಿನವನ್ನು ಸ್ಮರಿಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆಂಚಮಾರಯ್ಯ ಮಾತನಾಡಿ, ಭಾರತದ ಸ್ವಾತಂತ್ರ ಇತಿಹಾಸದಲ್ಲಿಯೇ ಕ್ವಿಟ್ ಇಂಡಿಯಾ ಚಳವಳಿ ಒಂದು ಮಹತ್ತರ ಘಟ್ಟ. ಮಹಾತ್ಮಗಾಂಧಿ ನೇತೃತ್ವದ ಹಲವಾರು ಮಾದರಿ ಹೋರಾಟಗಳಿಗೆ ಬ್ರಿಟಿಷರು ಬಗ್ಗದೆ ಇದ್ದ ಸಂದರ್ಭದಲ್ಲಿ ಅಂದಿನ ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ನೆಹರು, ಪಟೇಲ್ ಸೇರಿದಂತೆ ಹಲವರೊಂದಿಗೆ ಸೇರಿ, ಹೇಗಾದರೂ ಮಾಡಿ ಬ್ರಿಟಿಷರನ್ನು ಭಾರತದಿಂದ ಹೋಡಿಸಬೇಕೆಂಬ ಪಣತೊಟ್ಟ ಮುಖಂಡರು, 1942ರ ಆಗಸ್ಟ್ 08 ರಂದು ಕ್ವಿಟ್ ಇಂಡಿಯಾ ಚಳವಳಿಯನ್ನು ಘೋಷಿಸಿದರು. ಈ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷದ ಪಾತ್ರ ಮಹತ್ತರವಾದುದ್ದು ಎಂದರು.
ನಮ್ಮ ನಾಯಕರಾಗಿರುವ ಸಿದ್ದರಾಮಯ್ಯ ಅವರು ಹೇಳಿರುವಂತೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷವಾಗಲಿ ಸ್ವಾತಂತ್ರ ಹೋರಾಟದಲ್ಲಿ ಪಾಲ್ಗೊಂಡಿಲ್ಲ. ಬಿಜೆಪಿ ಮನುಧರ್ಮದ ರಕ್ಷಣೆಗಾಗಿ, ಚಾರ್ತುವರ್ಣ ಪದ್ದತಿಯನ್ನು ಮತ್ತಷ್ಟು ವಿಸ್ತರಿಸುವ ಉದ್ದೇಶದಿಂದ 1925ರಲ್ಲಿ ಜನಸಂಘದ ಹೆಸರಿನಲ್ಲಿ ಹುಟ್ಟಿಕೊಂಡಿದೆ. ಜೆಡಿಎಸ್ ಪಕ್ಷ ಹುಟ್ಟಿರುವುದೇ ಒಂದು ಜಾತಿಯ ಅಭಿವೃದ್ದಿಗಾಗಿ, ದೇಶದ ಸ್ವಾತಂತ್ರಕ್ಕಾಗಿಯೇ ಹುಟ್ಟಿದ ಯಾವುದಾದರೂ ಪಕ್ಷವಿದ್ದರೆ ಅದು ಕಾಂಗ್ರೆಸ್ ಪಕ್ಷ ಮಾತ್ರ. ನೆಹರು ಅವರ ತಂದೆ ಮೋತಿಲಾಲ್ ನೆಹರು, ಇಂದಿನ ತ್ರಿಮೂರ್ತಿ ಭವನ ಸೇರಿದಂತೆ ಸುಮಾರು ಮೂರು ಸಾವಿರ ಕೋಟಿ ರೂಗಳಿಗೆ ಬೆಲೆ ಬಾಳುವ ತಮ್ಮ ಸ್ವಂತ ಆಸ್ತಿಯನ್ನು ದೇಶಕ್ಕೆ ಅರ್ಪಿಸಿದರು.
ಅಂತಹ ನೆಹರು ಮನೆತನವನ್ನು ಇಂದಿನ ಬಿಜೆಪಿ ಮುಖಂಡರು ಸುಳ್ಳು ಆರೋಪಗಳ ಮೂಲಕ ಕಳ್ಳರು ಎಂಬಂತೆ ಬಿಂಬಿಸಲು ಹೊರಟಿದೆ. ಇದಕ್ಕೆ ತಕ್ಕ ಉತ್ತರವನ್ನು ಕಾಂಗ್ರೆಸ್ ಮುಖಂಡರುಗಳು ನೀಡಲೇಬೇಕಿದೆ ಎಂದು ತಿಳಿಸಿದರು.
2019ರ ಚುನಾವಣೆಯ ವೇಳೆ 2022ರ ವೇಳೆಗೆ ದೇಶದ ಎಲ್ಲಾ ಪ್ರಜೆಗಳಿಗೂ ಸೂರು ನೀಡುವ ವಾಗ್ಧಾನ ಮಾಡಿದ್ದ ನರೇಂದ್ರಮೋದಿ ಅವರು, ಹರ್ ಘರ್ ತಿರಂಗ ಎನ್ನುವ ಘೋಷಣೆ ಮಾಡುವ ಬಾವುಟ ನೀಡಿ, ಜನರಿಗೆ ಕಿವಿಗೆ ಹೂವು ಮುಡಿಸಲು ಹೊರಟಿದೆ. ರೈತರ, ಬಡವರ ಸಾಲ ಮನ್ನ ಮಾಡಲು ಹಿಂದೇಟು ಹಾಕುವ ಸರಕಾರ, ಉದ್ಯಮಿಗಳ 11 ಲಕ್ಷ ಕೋಟಿ ಸಾಲ ಮನ್ನ ಮಾಡಿ, ದೇಶವನ್ನು ಮತ್ತಷ್ಟು ಅದೋಗತಿಗೆ ತರುತ್ತಿದೆ. ಎಲ್ಲಿಯವರೆಗೆ ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಮತದಾರರು, ಅಭ್ಯರ್ಥಿಯ ಜಾತಿ, ಮತ, ಹಣ ನೋಡದೆ, ಪಕ್ಷದ ಸಾಧನೆ ನೋಡಿ ಮತ ನೀಡುತ್ತಾರೋ ಅಂದೇ ಈ ದೇಶ ಉನ್ನತ್ತಿಯತ್ತ ಸಾಗಲಿದೆ ಎಂದು ತಿಳಿಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ತುಮಕೂರುನಗರ ಮತ್ತು ಕೊರಟಗೆರೆ ವಿಧಾನ ಸಭಾ ಕ್ಷೇತ್ರಗಳ ಉಸ್ತುವಾರಿ ಕೇಶವಮೂರ್ತಿ ಮಾತನಾಡಿ, ಕ್ವಿಟ್ ಇಂಡಿಯಾ ಚಳವಳಿಯನ್ನು ಬಹಿಷ್ಕರಿಸಿದ್ದ ಆರ್.ಎಸ್.ಎಸ್ ಮತ್ತು ಹಿಂದೂ ಮಹಾಸಭಾ ಇಂದು ಅಧಿಕಾರದಲ್ಲಿದೆ. ಇದು ಈ ದೇಶದ ದುರಂತ.ಕ್ವಿಟ್ ಇಂಡಿಯಾ ಚಳವಳಿಯ ವೇಳೆ ಕರ್ನಾಟಕದ ಶಿವಮೊಗ್ಗ ಜಿಲ್ಲೆ ಇಸನೂರಿನಲ್ಲಿಯೂ ಒಂದು ಬೃಹತ್ ಹೋರಾಟ ನಡೆಯಿತು.ಅಂದೇ ಭಾರತದ ತ್ರಿವರ್ಣ ದ್ವಜವನ್ನು ಗ್ರಾಮದಲ್ಲಿ ಹಾರಿಸುವ ಮೂಲಕ ದೇಶದ ಮೊದಲು ಬ್ರಿಟಿಷ್ ಮುಕ್ತ ಗ್ರಾಮವನ್ನಾಗಿ ಘೋಷಿಸಲಾಯಿತು. ಇದರ ಇತಿಹಾಸವನ್ನು ಯುವಜನರು ತಿಳಿದು ಮತ ನೀಡಬೇಕಾಗಿದೆ ಎಂದರು.
ಮಾಜಿ ಶಾಸಕ ಡಾ.ಎಸ್.ರಫೀಕ್‍ಅಹಮದ್ ಮಾತನಾಡಿ, ಕಾಂಗ್ರೆಸ್ ಪಕ್ಷದ ಮುಖಂಡರು ಕ್ವಿಟ್ ಇಂಡಿಯಾ ಚಳುವಳಿಯ ಮೂಲಕ ಮಾಡು, ಇಲ್ಲವೇ ಮಡಿ ಎಂಬ ತತ್ವದ ಮೂಲಕ ಸ್ವಾತಂತ್ರ ಹೋರಾಟಕ್ಕೆ ಭದ್ರ ಬುನಾದಿ ಹಾಕಿದರು.
ಆದರೆ ಇಂದು ಯುವಜನರಲ್ಲಿ ಸ್ವಾತಂತ್ರ ಹೋರಾಟ, ಇದುವರೆಗಿನ ದೇಶದ ಅಭಿವೃದ್ದಿ ಮೋದಿ ಅವರ ಕಾಲದಲ್ಲಿ ಎಂಬಂತೆ ಬಿಂಬಿಸುವ ಕೆಲಸವನ್ನು ಮಾಡಲಾಗುತ್ತಿದೆ.ಇದನ್ನು ಹೋಗಲಾಡಿಸಿ, ಜನರಿಗೆ ಸತ್ಯ ತಿಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 75 ಕಿ.ಮಿ.ಗಳ ಪಾದಯಾತ್ರೆ ಹಮ್ಮಿಕೊಂಡಿದೆ. ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿಯೂ ಆಗಸ್ಟ್ 11ರ ಗುರುವಾರ ನಗರದ ಬಿ.ಜಿ.ಪಾಳ್ಯ ಸರ್ಕಲ್‍ನಿಂದ ಕಾಂಗ್ರೆಸ್ ಪಕ್ಷದ ಪ್ರಿಡಂ ಪಾರ್ಕ್ ಜಾಥಾ ಆರಂಭವಾಗಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಹಕರಿಸುವಂತೆ ಮನವಿ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಹೆಚ್.ಸಿ.ಹನುಮಂತಯ್ಯ ವಹಿಸಿದ್ದರು. ಇತರರು ಭಾಗವಹಿಸಿದ್ದರು.

(Visited 4 times, 1 visits today)
Congress tumkur
Previous Article‘ಹರ್ ಘರ್ ತಿರಂಗಾ’ ಅಭಿಯಾನ ಯಶಸ್ವಿಗೊಳಿಸಲು ಸಜ್ಜು
Next Article ಸಂತ್ರಸ್ತರಿಗೆ ನೆರವಿನ ಹಸ್ತ: ಜಪಾನಂದ ಸ್ವಾಮಿ
News Desk Benkiyabale

Related Posts

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm ಇತರೆ ಸುದ್ಧಿಗಳು

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm ಇತರೆ ಸುದ್ಧಿಗಳು

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm
ಇತರೆ ಸುದ್ಧಿಗಳು

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm
ಇತರೆ ಸುದ್ಧಿಗಳು

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm
ಇತರೆ ಸುದ್ಧಿಗಳು

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
ಇತರೆ ಸುದ್ಧಿಗಳು

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
ಇತರೆ ಸುದ್ಧಿಗಳು

ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ

March 03, 2026 2:50 pm
Our Youtube Channel
Our Picks

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

By News Desk BenkiyabaleMarch 03, 2026 2:58 pm

ತುರುವೇಕೆರೆ: ಪಟ್ಟಣದ ಇತಿಹಾಸ ಪ್ರಸಿದ್ದ ಬೇಟರಾಯ ಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿ0ದ ಸೋಮವಾರ…

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.