BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ
  • ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ
  • ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ
  • ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್
  • ಗಿರಿನಗರ ಶಾಲೆ ಅಭಿವೃದ್ಧಿಗೆ ೧ ಲಕ್ಷ ರೂ ನೆರವು
  • ತುಮಕೂರಿನಲ್ಲಿ ಅದ್ಧೂರಿಯಾಗಿ ನೆರವೇರಿದ ಬೃಹತ್ ತಿರಂಗಾ ಯಾತ್ರೆ
  • ಜಿಲ್ಲಾಡಳಿತದಿಂದ ಸ್ವಾತಂತ್ರ ದಿನಾಚರಣೆ
  • ಡಿಸಿಎಂಯಿ0ದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಅರಸು ಆಶಯ
ಇತರೆ ಸುದ್ಧಿಗಳು

ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಅರಸು ಆಶಯ

By News Desk BenkiyabaleUpdated:August 20, 2022 6:06 pm

ತುಮಕೂರು:


ತತ್ವ ಸಿದ್ದಾಂತಗಳಿಗೆ ಬದ್ದವಾಗಿ ಬದುಕಿದಾಗ ಮಾತ್ರ ಗಟ್ಟಿ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯ. ಅಂತಹ ಘನ ವ್ಯಕ್ತಿತ್ವ ಡಿ. ದೇವರಾಜ ಅರಸು ಅವರದು ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ತಿಳಿಸಿದರು.
ನಗರದ ಬಾಲಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಸಂಯುಕ್ತಾಶ್ರಯದಲ್ಲಿ ನಡೆದ ಡಿ. ದೇವರಾಜ ಅರಸು ಅವರ 107ನೇ ಜನ್ಮದಿನಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಡಿ. ದೇವರಾಜ ಅರಸು ಅವರು ಮುಖ್ಯಮಂತ್ರಿ ಆಗಿದ್ದಾಗ ಕೈಗೊಂಡಂತಹ ಮಹತ್ತರವಾದ ನಿರ್ಧಾರಗಳಲ್ಲಿ ಭೂ ಸುಧಾರಣೆ ಕಾಯ್ದೆ ಪ್ರಮುಖವಾಗಿದ್ದು, ಉಳುವವನೇ ಭೂಮಿಯ ಒಡೆಯ ಯೋಜನೆಯನ್ನು ಜಾರಿಗೆ ತರುವುದರ ಮೂಲಕ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂಬಂತೆ ಭೂಮಿಯ ಹಕ್ಕನ್ನು ನೀಡಿದವರು ಎಂದರು.
ಜನ ಸಮುದಾಯಕ್ಕೆ ಅನುಕೂಲವಾಗುವಂತೆ ನೀತಿಗಳಿಗೆ ಬದಲಾವಣೆ ಮಾಡಿ ಭೂ ಸುಧಾರಣೆ ಕಾಯ್ದೆ ಜಾರಿಗೆ ತಂದರು. ವ್ಯಕ್ತಿ-ಶಕ್ತಿಯಾಗಿ ರೂಪುಗೊಂಡಿದ್ದ ಅರಸು ಅವರು ತತ್ವಸಿದ್ಧಾಂತಕ್ಕೆ ಬದ್ದರಾಗಿದ್ದರು. ಸಾಮಾನ್ಯರ ಕಷ್ಟಗಳನ್ನು ಹತ್ತಿರದಿಂದ ಬಲ್ಲವರಾಗಿದ್ದರೆಂದರು.
ಅರಸು ಅವರು ಕೇವಲ ಒಂದು ವರ್ಗಕ್ಕೆ ಸಿಮೀತರಾದವರಲ್ಲ. ಅವರು ಸಮಷ್ಟಿ ಅಂದರೇ ಎಲ್ಲ ವರ್ಗಕ್ಕೂ ನಾಯಕರಾದವರು. ಅರಸು ಅವರು ಗಟ್ಟಿ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಮಷ್ಟಿಯ ಕುರಿತು ಚಿಂತನೆಯಿತ್ತು. ಸಮುದಾಯದ ತುಡಿತದ ಅವರಲ್ಲಿತ್ತೆಂದರು.
ಅಧಿಕಾರಿಗಳು ಪ್ರಮಾಣಿಕರಾಗಿರಬೇಕು.ಅಧಿಕಾರದ ಅಮಲು ಇರಬಾರದು. ಇದ್ದಲ್ಲಿ ಜನಸಾಮಾನ್ಯರ ನೋವು/ ಕಷ್ಟಗಳು ಅರ್ಥವಾಗುವುದಿಲ್ಲ. ಬದಲಿಗೆ ಹುದ್ದೆಯನ್ನು ತಲೆಯಿಂದ ತೆಗೆದು ಜನರ ದುಃಖ ದುಮ್ಮಾನಗಳಿಗೆ ಸ್ಪಂದಿಸಬೇಕು ಎಂದರು. ಸರ್ಕಾರ ಯೋಜನೆಗಳನ್ನು ರೂಪಿಸುವುದು ಅರ್ಹ ಫಲಾನುಭವಿಗಳಿಗೆ. ಅಧಿಕಾರಿಗಳು ನಿಜವಾದ ಫಲಾನುಭವಿಗಳನ್ನು ಗುರುತಿಸಿ ಆಯ್ಕೆ ಮಾಡುವಲ್ಲಿ ಪ್ರಾಮಾಣಿಕರಿರಬೇಕು ಎಂದು ತಿಳಿಸಿದರು.
ಡಿ.ದೇವರಾಜ ಅರಸು ಅವರ ವಿಚಾರಧಾರೆಗಳ ಕುರಿತು ವಿಶೇಷ ಉಪನ್ಯಾಸ ನೀಡಿದ ತುಮಕೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಅಧ್ಯಕ್ಷರು ಹಾಗೂ ಪ್ರಾಧ್ಯಾಪಕರಾದ ಡಾ.ಕೆ.ಜಿ ಪರಶುರಾಮ ಮಾತನಾಡಿ ಅರಸು ಅವರು ಪರಿವರ್ತನೆಯ ಹರಿಕಾರ ಎನಿಸಿಕೊಳ್ಳಲು ಅವರ ಜೀವನಾನುಭವದಲ್ಲಿ ದಮನಿತ, ದನಿಸತ್ತ, ಅನಾಥ ಸಮುದಾಯಗಳನ್ನು ಹತ್ತಿರದಿಂದ ಕಂಡಿದ್ದರು.ಅವರ ರಾಜಕೀಯ ಇಚ್ಛಾಶಕ್ತಿಯ ಪ್ರತಿಫಲವನ್ನು ನಾವಿಂದು ಅನುಭವಿಸುತ್ತಿದ್ದೆವೆ ಎಂದರು.
ಗುರಿ ಮತ್ತು ಉದ್ದೇಶಗಳನ್ನು ಸರಿಯಾದ ರೀತಿಯಲ್ಲಿ ಗುರುತಿಸಿಕೊಳ್ಳುವಲ್ಲಿ ಹಿಂದುಳಿದ ವರ್ಗಗಳು ಹಿಂದುಳಿದಿವೆ ಎಂದು ವಿವರಿಸಿದ ಅವರು, ವಾರ್ಷಿಕ 10 ಸಾವಿರ ವಿದ್ಯಾರ್ಥಿಗಳು ಪದವಿಯನ್ನು ಮುಗಿಸುತ್ತಾರೆ.ಅವರಲ್ಲಿ ಕೇವಲ 2500 ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುತ್ತಾರೆ.ಇನ್ನುಳಿದವರು ನಾನಾ ಕಾರಣಗಳಿಂದ ಹೊರಗುಳಿಯುತ್ತಿದ್ದಾರೆ ಎಂದ ಅವರು ಸರ್ಕಾರವು ಹಿಂದುಳಿದ ವರ್ಗಗಳ ಶಿಕ್ಷಣ ಮತ್ತು ಹಾಸ್ಟೆಲ್ ಗಾಗಿ ಸಾಕಷ್ಟು ಹಣವನ್ನು ವ್ಯಯಿಸುತ್ತಿದೆ. ಅದು ವ್ಯರ್ಥವಾಗಬಾರದು. ಶಿಕ್ಷಣವನ್ನು ಪೂರೈಸಿ ಉದ್ಯೋಗವನ್ನು ಪಡೆಯಬೇಕು ಎಂದು ತಿಳಿಸಿದರು. ಔದ್ಯೋಗಿಕರಣವೇ ಅಭ್ಯುದಯದ ಮೂಲ.ಸರ್ಕಾರವು ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳ ಮೇಲೆ ಬಂಡವಾಳವನ್ನು ಹೂಡುತ್ತದೆ.ಅದರ ಸದುಪಯೋಗಪಡಿಸಿಕೊಂಡು ಶಿಕ್ಷಣವನ್ನು ಪೂರ್ಣಗೊಳಿಸಿ ಉದ್ಯೋಗವನ್ನು ಪಡೆಯಬೇಕು. ಆ ಮೂಲಕ ಆರ್ಥಿಕ ಸಬಲೀಕರಣ, ಸಾಮಾಜಿಕ ಸಬಲೀಕರಣ ಮತ್ತು ರಾಜಕೀಯ ಸಬಲೀಕರಣವನ್ನು ಸಾಧಿಸಬೇಕೆಂದರು.ಒಮ್ಮೆ ಬಡತನದ ಸರಪಳಿಯನ್ನು ತುಂಡರಿಸಿದರೇ ಮುಂದಿನ ತಲೆಮಾರು ಮತ್ತೆಂದು ಬಡತನವನ್ನು ಅನುಭವಿಸುವುದಿಲ್ಲ ಎಂದು ವಿವರಿಸಿದರು. ಆರ್ಥಿಕ ಸಬಲೀಕರಣಕ್ಕಾಗಿ ಉದ್ಯೋಗದ ಜೊತೆಗೆ ಅನಗತ್ಯ ವೆಚ್ಚಗಳಿಗೂ ಕಡಿವಾಣ ಹಾಕಬೇಕಲ್ಲದೇ ದುಬಾರಿ ವೆಚ್ಚ ಮಾಡುವುದರಿಂದ ಆರ್ಥಿಕ ನಷ್ಟ ಅನುಭವಿಸುವಂತಾಗಬಾರದು. ಮೂಢನಂಬಿಕೆಗಳಿಗೆ ಬಲಿಯಾಗಿ ಹಣ ಕಳೆದುಕೊಳ್ಳದೇ ಮನೆಯ ಎಲ್ಲ ಸದಸ್ಯರು ದುಡಿಯುವಂತಾಗಿ ತಲಾದಯಕ್ಕೆ ಕೊಡುಗೆ ನೀಡಬೇಕು ಎಂದರು.
ಅರಸು ಅವರ 8 ವರ್ಷಗಳ ಆಡಳಿತ ನೀತಿ, ತೆಗೆದುಕೊಂಡ ಕ್ರಾಂತಿಕಾರಕ ನಿರ್ಧಾರಗಳಿಂದಾಗಿ ಇಂದಿಗೂ ಅವರನ್ನು ಕಾರ್ಯಗಳನ್ನು ನೆನಪಿಸಿಕೊಳ್ಳುತ್ತಿದ್ದೆವೆ.ಅವರ ದೂರದೃಷ್ಟಿ ಚಿಂತನೆಗಳನ್ನು ಸಾಧಿಸಬೇಕು.ಡಾ.ಅಂಬೇಡ್ಕರ್ ಅವರ ಆಶಯಗಳನ್ನು ಜಾರಿಗೆ ತರುವಲ್ಲಿ ಅರಸು ಪ್ರಮುಖರಾಗಿದ್ದು, ಶಿಕ್ಷಣ, ಸಂಘಟನೆ, ಹೋರಾಟ ರೂಪಿಸುವುದರ ಮೂಲಕ ರಾಜಕೀಯ ಸಬಲೀಕರಣ ಸಾಧ್ಯವಾಗಬೇಕು ಎಂದರು. ಶಾಸಕ ಜಿ.ಬಿ ಜ್ಯೋತಿಗಣೇಶ್ ಮಾತನಾಡಿ ಡಿ ದೇವರಾಜ ಅರಸು ಅವರ ವರ್ಚಸ್ಸು, ಅವರ ಕೊಡುಗೆಗಳು, ಜಾರಿಗೆ ತಂದ ಕಾಯ್ದೆಗಳು ಸಾರ್ವಕಾಲಿಕ. ತುಳಿತಕ್ಕೊಳಗಾದವರ ವರ್ಗಗಳಿಗೆ ಸ್ಥಾನಮಾನ ಕಲ್ಪಿಸಿಕೊಟ್ಟ ಧೀಮಂತ ವ್ಯಕ್ತಿತ್ವ ಅವರದು ಎಂದರು.
ಅರಸು ಅವರ ಕುರಿತಾಗಿ ಸಚ್ಚಿದಾನಂದ ಸ್ವಾಮಿಯವರು ಸಾಕಷ್ಟು ಲೇಖನಗಳನ್ನು ಬರೆದಿದ್ದು, ಅವರ ರಾಜಕೀಯ, ವೈಯಕ್ತಿಕ ಜೀವನ ಹಿಂದುಳಿದ ವರ್ಗಗಳನ್ನು ಸಮಾಜದ ಮುಖ್ಯ ವಾಹಿನಿಗೆ ತರುವಲ್ಲಿ ಅವರ ಶ್ರಮ ಸಾರ್ಥಕವಾದದು ಎಂದರಲ್ಲದೇ ಅರಸು ಅವರ ದೂರದೃಷ್ಟಿ ಅಗಾಧವಾದುದೆಂದರು. ಜಿಲ್ಲಾ ಮಡಿವಾಳ ಸಂಘಕ್ಕೆ ಡಿ ದೇವರಾಜ ಅರಸು ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

(Visited 4 times, 1 visits today)
tumkur
Previous Articleಸಿದ್ದು ಕಾರಿಗೆ ಮೊಟ್ಟೆ ಎಸೆತ: ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
Next Article ವಿದ್ಯಾರ್ಥಿಗಳು ಸಂಶೋಧನಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು: ಟಿ ಎಂ ಸತೀಶ್
News Desk Benkiyabale

Related Posts

೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ

August 14, 2026 5:46 pm news

ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ

August 14, 2026 5:45 pm news

ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ

August 14, 2026 5:42 pm news
ತಾಜಾ ಸುದ್ಧಿಗಳು
news

೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ

August 14, 2026 5:46 pm
news

ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ

August 14, 2026 5:45 pm
news

ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ

August 14, 2026 5:42 pm
news

ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್

August 14, 2026 5:41 pm
news

ಗಿರಿನಗರ ಶಾಲೆ ಅಭಿವೃದ್ಧಿಗೆ ೧ ಲಕ್ಷ ರೂ ನೆರವು

August 14, 2026 5:40 pm
news

ತುಮಕೂರಿನಲ್ಲಿ ಅದ್ಧೂರಿಯಾಗಿ ನೆರವೇರಿದ ಬೃಹತ್ ತಿರಂಗಾ ಯಾತ್ರೆ

August 14, 2026 5:39 pm
Our Youtube Channel
Our Picks

೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ

August 14, 2026 5:46 pm

ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ

August 14, 2026 5:45 pm

ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ

August 14, 2026 5:42 pm

ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್

August 14, 2026 5:41 pm

ಗಿರಿನಗರ ಶಾಲೆ ಅಭಿವೃದ್ಧಿಗೆ ೧ ಲಕ್ಷ ರೂ ನೆರವು

August 14, 2026 5:40 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ

By News Desk BenkiyabaleAugust 14, 2026 5:46 pm

ತುಮಕೂರು: ಭಾರತದ ೮೦ನೇ ಸ್ವಾತಂತ್ರ ದಿನದ ಅಂಗವಾಗಿ ಭಾರತ್ ಸಂಚಾರ್ ನಿಗಮ ನಿಯಮಿತ ಗ್ರಾಹಕರಿಗೆ ಹೊಸ ಪ್ಯೂಚರ್ ಒಳಗೊಂಡಿರುವ ಡಿಜಿಟಲ್…

ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ

August 14, 2026 5:45 pm

ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ

August 14, 2026 5:42 pm

ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್

August 14, 2026 5:41 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.