BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸೆ.೨೨ ರಿಂದ ದಸರಾ ಉತ್ಸವ
  • ಶೋಷಿತರು, ಹಿಂದುಳಿದ ವರ್ಗದವರು ಹಾಗೂ ಬಡ ಜನರ ಆಶಾಕಿರಣ ಡಿ. ದೇವರಾಜು ಅರಸು
  • ಸ್ವಾವಲಂಬಿ ರೈತ, ಸಂಪನ್ನ ಗ್ರಾಮ, ಸಮರ್ಥ ಭಾರತ ಇದು ಭಾರತೀಯ ಕಿಸಾನ್ ಸಂಘದ ಮೂಲ ಉದ್ದೇಶ
  • ಖಾಕಿ ಕಣ್ಗಾವಲಿನಲ್ಲಿ ಗೊಬ್ಬರ ವಿತರಣೆ
  • ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣವೇ ಪರಿಹಾರ ನೀಡಿ: ಜಿಲ್ಲಾಧಿಕಾರಿ
  • ತುಮಕೂರು: ಶ್ರೀಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯಲು ಯತ್ನ
  • ಕೆ.ಎನ್.ರಾಜಣ್ಣ ಸಚಿವ ಸಂಪುಟದಿ0ದ ವಜಾ
  • ವಿವಿಧ ಬೇಡಿಕೆಗಳನ್ನು ಈಡೇರುಸುವಂತೆ ಆಗ್ರಹ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಡಿ.ಎಸ್.ಜಯಲಕ್ಷ್ಮಮ್ಮ ಗ್ರಾಮೀಣಾಭಿವೃದ್ದಿ ಸಂಸ್ಥೆಯ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿ, ವಿಧ್ಯಾರ್ಥಿನಿಯರಿಗೆ ಪ್ರತಿಭಾಪುರಸ್ಕಾರ
ಇತರೆ ಸುದ್ಧಿಗಳು

ಡಿ.ಎಸ್.ಜಯಲಕ್ಷ್ಮಮ್ಮ ಗ್ರಾಮೀಣಾಭಿವೃದ್ದಿ ಸಂಸ್ಥೆಯ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿ, ವಿಧ್ಯಾರ್ಥಿನಿಯರಿಗೆ ಪ್ರತಿಭಾಪುರಸ್ಕಾರ

By News Desk BenkiyabaleUpdated:August 25, 2022 6:07 pm

ತುಮಕೂರು:

ಶ್ರೀಮತಿ ಡಿ.ಎಸ್.ಜಯಲಕ್ಷ್ಮಮ್ಮ ಗ್ರಾಮೀಣಾಭಿವೃದ್ದಿ ಸಂಸ್ಥೆ(ರಿ) ತುಮಕೂರು ಜಿಲ್ಲೆಯ ಇವರವತಿಯಿಂದ ಸಂಸ್ಥೆಯ 9ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಕನ್ನಡ ಭವನದಲ್ಲಿ ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಸ್ಪೂರ್ತಿ ಡೆವಲ್ಪರ್ಸ್‍ನ ಮಾಲೀಕರು ಹಾಗೂ ಸಮಾಜ ಸೇವಕರಾದ ಎಸ್.ಪಿ.ಚಿದಾನಂದ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ 2021-22ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ಹಾಗೂ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು.
ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದ ಶಾಸಕ ಜಿ.ಬಿ.ಜೋತಿಗಣೇಶ್,ವಿದ್ಯಾರ್ಥಿಗಳು ಡಾ.ಅಬ್ದುಲ್ ಕಲಾಂ ಅವರು ಹೇಳಿರುವಂತೆ ದೊಡ್ಡ ಕನಸುಗಳನ್ನು ಕಾಣಬೇಕು.ನಮ್ಮ ಮುಂದೆ ಐಎಎಸ್, ಐಪಿಎಸ್‍ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿದ್ದು,ಕೀಳಿರಿಮೆ ಬಿಟ್ಟು, ಅಗತ್ಯವಾದ ಮಾರ್ಗದರ್ಶನ ಮತ್ತು ಸತತ ಪರಿಶ್ರಮದಿಂದ ಜಯಗಳಿಸದರೆ, ಭವಿಷ್ಯವೇ ನಿಮ್ಮದಾಗಲಿದೆ. ಈ ನಿಟ್ಟಿನಲ್ಲಿ ನಿಮ್ಮೇಲ್ಲರೂ ಕಾರ್ಯೋನ್ಮುಖರಾಗಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಪೂರ್ತಿ ಡೆವಲ್ಪರ್ಸ್‍ನ ಎಸ್.ಪಿ.ಚಿದಾನಂದ ಮಾತನಾಡಿ,ಒಂದು ಕಾಲದಲ್ಲಿ ನಾನು ಕೂಡ ಓದು, ಬರಹಕ್ಕೆ ದುಡ್ಡು ಹೊಂದಿಸಲಾಗದ ಸ್ಥಿತಿಯಿಂದ ಕಷ್ಟಪಟ್ಟು ಇಂದಿನ ಸ್ಥಿತಿಗೆ ಬಂದಿದ್ದೇನೆ. ಯಾವುದೇ ಕ್ಷೇತ್ರವಾಗಲಿ, ನಿರಂತರ ಪರಿಶ್ರಮ ಮತ್ತು ಒಳ್ಳೆಯ ದಾರಿಯಲ್ಲಿ ನಡೆದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂಬುದಕ್ಕೆ ನನ್ನ ಜೀವನವೇ ಉದಾಹರಣೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಇಂಗ್ಲಿಷ್ ಭಾಷೆ ಅತಿ ಅಗತ್ಯವಾಗಿದೆ. ಹಾಗಾಗಿ ಕನ್ನಡದ ಜೊತೆಗೆ,ಇಂಗ್ಲಿಷ್ ಭಾಷೆಯ ಕಲಿಕೆಗೆ ಎಲ್ಲರೂ ಒತ್ತು ನೀಡಿ,ಚಿಕ್ಕವರಿರುವಾಗಲೇ ಉತ್ತಮ ಗುರಿಯನ್ನು ತಲುಪುವ ದಾರಿಯನ್ನು ಕಂಡುಕೊಂಡು ಮುನ್ನೆಡೆಯಿರಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಉದ್ಯಮಿ ಆರ್.ಎಲ್.ರಮೇಶ್‍ಬಾಬು ಮಾತನಾಡಿ,ವಿದ್ಯಾರ್ಥಿಗಳ ಜೀವನ ಒಂದು ಒಳ್ಳೆಯ ಹಂತ. ಈ ಸಂದರ್ಭದಲ್ಲಿ ಯಾವುದೇ ವಿಚಾರದಲ್ಲಿ ನಿರ್ಲಕ್ಷ ಸಲ್ಲದು, ಹಿರಿಯರು ಹೇಳಿರುವಂತೆ ಮಕ್ಕಳು ಭತ್ತ ತುಂಬುವ ಚೀಲಗಳಾಗದೆ, ಭತ್ತ ಬೆಳೆಯುವ ಗದ್ದೆಗಳಾಗಬೇಕು.ತಂದೆ, ತಾಯಿಗಳ, ಗುರು ಹಿರಿಯರ ಜೊತೆಗೆ ಒಳ್ಳೆಯ ಬಾಂಧವ್ಯ ಹೊಂದಿ, ನಾಡಿಗೆ ಹೆಸರು ತರಬೇಕೆಂದು ಸಲಹೆ ನೀಡಿದರು.
ಶ್ರೀಮತಿ ಡಿ.ಎಸ್.ಜಯಲಕ್ಷ್ಮಮ್ಮ ಗ್ರಾಮೀಣಾಭಿವೃದ್ದಿ ಸಂಸ್ಥೆಯ ಕಾರ್ಯದರ್ಶಿಗಳಾದ ವೈ.ಎನ್.ಹೊಸಕೋಟೆ ನಟರಾಜು ಮಾತನಾಡಿ,ಸುಶಿಕ್ಷಿತರನ್ನು ಎಲ್ಲರೂ ಗೌರವಿಸುವಂತಹ ಕಾಲ.ಅಂಬೇಡ್ಕರ್ ಅವರಿಗೆ ಇಂದು ಪ್ರಪಂಚದಾದ್ಯಂತ ಗೌರವ, ಆಧರಗಳು ದೊರೆಯುತ್ತಿದ್ದರೆ,ಅದಕ್ಕೆ ಅವರು ಗಳಿಸಿದ ವಿದ್ವತ್ತೇ ಕಾರಣ. ಅವರನ್ನು ನೀವು ಮಾದರಿಯಾಗಿ ತೆಗೆದುಕೊಂಡು, ಉನ್ನತ ವ್ಯಾಸಂಗ ಮಾಡಿ ಯಶಸ್ಸು ಗಳಿಸಬೇಕು ಎಂದರು.
ಶ್ರೇಷಾದ್ರಿಪುರಂ ಕಾಲೇಜು ಪ್ರಾಂಶುಪಾಲರಾದ ಡಾ.ಜಿ.ಟಿ.ಜಗದೀಶ್ ಮಾತನಾಡಿ, ಶಿಕ್ಷಣ ಎಂಬುದು ಇಂದು ಬಡವರು, ಮಧ್ಯಮ ವರ್ಗದವರಿಗೆ ಕೈಗೆಟುಕಲಾರದ ಸ್ಥಿತಿಯಲ್ಲಿದೆ.ಹಾಗಾಗಿ ಗ್ರಾಮೀಣ ಮತ್ತು ಬಡವರ ಮಕ್ಕಳು ಹೆಚ್ಚಿನ ರೀತಿಯಲ್ಲಿ ಸರಕಾರದ ಸೌಲಭ್ಯಗಳ ಜೊತೆಗೆ,ಸಂಘ ಸಂಸ್ಥೆಗಳು ಸಹಕಾರ ನೀಡುತಿದ್ದು, ಇವುಗಳ ಸದುಪಯೋಗ ಪಡೆದುಕೊಂಡು, ತಮ್ಮ ಶೈಕ್ಷಣಿಕ ಪ್ರಗತಿಯನ್ನು ಹೊಂದುವಂತೆ ಕರೆ ನೀಡಿದರು.
ವೇದಿಕೆಯಲ್ಲಿ ಅಮ್ಮನಘಟ್ಟ ಮುಖಂಡರಾದ ಮಹದೇವಯ್ಯ, ಶ್ರೀಮತಿ ಸುಧಾ, ವಕ್ಫ್ ಬೋರ್ಡ್ ಉಪಾಧ್ಯಕ್ಷ ಶಬ್ಬೀರ್, ಶ್ರೀಮತಿ ನಳಿನ, ರಾಮಚಂದ್ರರಾವ್, ದೇವರಾಜು ಮತ್ತಿತರರು ಉಪಸ್ಥಿತರಿದ್ದರು.2021-22ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ 51 ಮಕ್ಕಳಿಗೆ ನೆನಪಿನ ಕಾಣಿಕೆ ಜೊತೆಗೆ, ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು.

(Visited 1 times, 1 visits today)
tumkur
Previous Articleಶ್ರೀ ಕೃಷ್ಣ ದೀಕ್ಷಿತರ ಸಮ್ಮುಖದಲ್ಲಿ ಶ್ರೀ ಗುರು ದತ್ತಾತ್ರೇಯ ಸ್ವಾಮಿ ಹಾಗೂ ಪಂಚಮುಖಿ ಆಂಜನೇಯ ಮತ್ತು ಶ್ರೀ ಕಾರ್ತ ವೀರಾರ್ಜುನ ದೇವರುಗಳ ಸ್ಥಿರಬಿಂಬ ಪ್ರತಿಷ್ಠಾಪನೆ.
Next Article ಆಟೋ ಮೇಲೆ ಮರ ಬಿದ್ದು ಗಾಯಗೊಂಡ ಚಾಲಕನ ಮನೆಗೆ ಮಾಜಿ ಸಚಿವ ಸೊಗಡು ಶಿವಣ್ಣ ಭೇಟಿ.
News Desk Benkiyabale

Related Posts

ಸೆ.೨೨ ರಿಂದ ದಸರಾ ಉತ್ಸವ

August 20, 2025 3:26 pm ಇತರೆ ಸುದ್ಧಿಗಳು

ಶೋಷಿತರು, ಹಿಂದುಳಿದ ವರ್ಗದವರು ಹಾಗೂ ಬಡ ಜನರ ಆಶಾಕಿರಣ ಡಿ. ದೇವರಾಜು ಅರಸು

August 20, 2025 3:03 pm ಇತರೆ ಸುದ್ಧಿಗಳು

ಸ್ವಾವಲಂಬಿ ರೈತ, ಸಂಪನ್ನ ಗ್ರಾಮ, ಸಮರ್ಥ ಭಾರತ ಇದು ಭಾರತೀಯ ಕಿಸಾನ್ ಸಂಘದ ಮೂಲ ಉದ್ದೇಶ

August 19, 2025 3:46 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಸೆ.೨೨ ರಿಂದ ದಸರಾ ಉತ್ಸವ

August 20, 2025 3:26 pm
ಇತರೆ ಸುದ್ಧಿಗಳು

ಶೋಷಿತರು, ಹಿಂದುಳಿದ ವರ್ಗದವರು ಹಾಗೂ ಬಡ ಜನರ ಆಶಾಕಿರಣ ಡಿ. ದೇವರಾಜು ಅರಸು

August 20, 2025 3:03 pm
ಇತರೆ ಸುದ್ಧಿಗಳು

ಸ್ವಾವಲಂಬಿ ರೈತ, ಸಂಪನ್ನ ಗ್ರಾಮ, ಸಮರ್ಥ ಭಾರತ ಇದು ಭಾರತೀಯ ಕಿಸಾನ್ ಸಂಘದ ಮೂಲ ಉದ್ದೇಶ

August 19, 2025 3:46 pm
ತುಮಕೂರು

ಖಾಕಿ ಕಣ್ಗಾವಲಿನಲ್ಲಿ ಗೊಬ್ಬರ ವಿತರಣೆ

August 19, 2025 3:38 pm
ತುಮಕೂರು

ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣವೇ ಪರಿಹಾರ ನೀಡಿ: ಜಿಲ್ಲಾಧಿಕಾರಿ

August 19, 2025 3:23 pm
ಇತರೆ ಸುದ್ಧಿಗಳು

ತುಮಕೂರು: ಶ್ರೀಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯಲು ಯತ್ನ

August 13, 2025 3:02 pm
Our Youtube Channel
Our Picks

ಸೆ.೨೨ ರಿಂದ ದಸರಾ ಉತ್ಸವ

August 20, 2025 3:26 pm

ಶೋಷಿತರು, ಹಿಂದುಳಿದ ವರ್ಗದವರು ಹಾಗೂ ಬಡ ಜನರ ಆಶಾಕಿರಣ ಡಿ. ದೇವರಾಜು ಅರಸು

August 20, 2025 3:03 pm

ಸ್ವಾವಲಂಬಿ ರೈತ, ಸಂಪನ್ನ ಗ್ರಾಮ, ಸಮರ್ಥ ಭಾರತ ಇದು ಭಾರತೀಯ ಕಿಸಾನ್ ಸಂಘದ ಮೂಲ ಉದ್ದೇಶ

August 19, 2025 3:46 pm

ತುಮಕೂರು: ಶ್ರೀಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯಲು ಯತ್ನ

August 13, 2025 3:02 pm

ಕೆ.ಎನ್.ರಾಜಣ್ಣ ಸಚಿವ ಸಂಪುಟದಿ0ದ ವಜಾ

August 13, 2025 2:48 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಸೆ.೨೨ ರಿಂದ ದಸರಾ ಉತ್ಸವ

By News Desk BenkiyabaleAugust 20, 2025 3:26 pm

ತುಮಕೂರು: ಜಿಲ್ಲಾಡಳಿತದಿಂದ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಸೆಪ್ಟೆಂಬರ್ ೨೨ ರಿಂದ ಅಕ್ಟೋಬರ್ ೨ರವರೆಗೆ ೧೧…

ಶೋಷಿತರು, ಹಿಂದುಳಿದ ವರ್ಗದವರು ಹಾಗೂ ಬಡ ಜನರ ಆಶಾಕಿರಣ ಡಿ. ದೇವರಾಜು ಅರಸು

August 20, 2025 3:03 pm

ಸ್ವಾವಲಂಬಿ ರೈತ, ಸಂಪನ್ನ ಗ್ರಾಮ, ಸಮರ್ಥ ಭಾರತ ಇದು ಭಾರತೀಯ ಕಿಸಾನ್ ಸಂಘದ ಮೂಲ ಉದ್ದೇಶ

August 19, 2025 3:46 pm

ಖಾಕಿ ಕಣ್ಗಾವಲಿನಲ್ಲಿ ಗೊಬ್ಬರ ವಿತರಣೆ

August 19, 2025 3:38 pm
News by Date
August 2025
M T W T F S S
 123
45678910
11121314151617
18192021222324
25262728293031
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.