BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ
  • ಉದ್ಯಮ ಸಂಸ್ಥೆ ಜೊತೆ ಎಸ್‌ಎಸ್‌ಐಟಿ ಒಡಂಬಡಿಕೆ
  • ವಿಬಿ ಜಿ ರಾಮ್ ಜಿ ಯೋಜನೆಯಡಿ ಜನರಿಗೆ ಉದ್ಯೋಗ ನೀಡಿ: ಜನರು ಗುಳೆ ಹೋಗುವುದನ್ನು ತಪ್ಪಿಸಿ
  • ಒಂದೇ ನಲ್ಲಿಯಲ್ಲಿ ೧೦೦ ಮನೆಯವರು ನೀರು ಹಿಡಿಯುವ ದುಸ್ಥಿತಿ
  • ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ಸುರೇಶ್ ಗೌಡ ಆಕ್ರೋಶ
  • ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ
  • ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ
  • ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕನ್ನಡ ಸಮ್ಮೇಳನಗಳು ಕೇವಲ ಮೆರವಣಿಗೆ ಸೀಮಿತವಾಗದಿರಲಿ
ಇತರೆ ಸುದ್ಧಿಗಳು

ಕನ್ನಡ ಸಮ್ಮೇಳನಗಳು ಕೇವಲ ಮೆರವಣಿಗೆ ಸೀಮಿತವಾಗದಿರಲಿ

By News Desk BenkiyabaleUpdated:September 30, 2022 6:04 pm

ತುಮಕೂರು


ಕನ್ನಡ ಸಮ್ಮೇಳನಗಳು ಕೇವಲ ಮೆರವಣಿಗೆ, ಉತ್ಸವಗಳಿಗೆ ಸಿಮೀತವಾದರೆ ಸಾಲದು, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕನ್ನಡವನ್ನು ಅನ್ನದ ಭಾಷೆಯಾಗಿ ರೂಪಿಸುವ ನಿಟ್ಟಿನಲ್ಲಿ ಕನ್ನಡಿಗರ ಮುಂದಿರುವ ಸಮಸ್ಯೆಗಳು ಮತ್ತು ಸವಾಲುಗಳ ಕುರಿತು ಚಿಂತನೆ ನಡೆಸುವ ಅಗತ್ಯವಿದೆ ಎಂದು ಕರ್ನಾಟಕ ಗಡಿ ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ್ ತಿಳಿಸಿದ್ದಾರೆ.
ನಗರದ ಶ್ರೀಸಿದ್ದಗಂಗಾ ಮಠದ ಶ್ರೀಚನ್ನಬಸವೇಶ್ವರ್ ವಸ್ತು ಪ್ರದರ್ಶನದ ಆವರಣದಲ್ಲಿ ಹಮ್ಮಿಕೊಂಡಿದ್ದ ತುಮಕೂರು ತಾಲೂಕು ಕಸಾಪ 6ನೇ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು, ಗಡಿನಾಡು ಸೇರಿದಂತೆ ರಾಜ್ಯದ ಹಲವು ಕಡೆ ಕನ್ನಡ ಶಾಲೆಗಳು ಮುಚ್ಚುತ್ತಿವೆ. ಬೆಳಗಾವಿ,ಕಾಸರಗೋಡಿನ ವಿಚಾರವಾಗಿ ರಾಜ್ಯಗಳ ನಡುವೆ ತಿಕ್ಕಾಟವಿದೆ.ಕನ್ನಡ ಶಾಲೆಗಳ ಉಳಿಸುವ ನಿಟ್ಟಿನಲ್ಲಿ ಹಾಗೂ ಕಾಸರಗೋಡು ಮತ್ತು ಬೆಳಗಾವಿಯ ಆಸ್ಮಿತೆಯ ಕುರಿಂತಂತೆಯೂ ನಾವೆಲ್ಲರೂ ದ್ವನಿ ಎತ್ತಬೇಕಾಗಿದೆ ಎಂದರು.
ಕರ್ನಾಟಕ ಸರಕಾರ ಕಾಸರಗೋಡು ಭಾಗದಲ್ಲಿ ಕನ್ನಡವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕೈಯಾರ ಕೀಯಣ್ಣರೈ,ತಾಯಿ ಜಯದೇವಿ ಲಿಂಗಾಡೆ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಿ ನೀಡುತ್ತಾ ಬಂದಿದೆ.ರಾಜ್ಯದ 19 ಜಿಲ್ಲೆಗಳ, 63 ತಾಲೂಕುಗಳ 988 ಹಳ್ಳಿಗಳು ಗಡಿ ಪ್ರದೇಶದಲ್ಲಿ ಭಾಷಾ ವಿಚಾರವಾಗಿ ಸಾಕಷ್ಟು ಸಂಕಷ್ಟ ಎದುರಿಸುತ್ತಿವೆ. ಇವುಗಳ ಪರಿಹಾರಕ್ಕೆ ಹಲವಾರು ಪ್ರಯೋಗಗಳನ್ನು ಈಗಾಗಲೇ ಮಾಡಲಾಗಿದೆ.ಸಮಾಜದ ದ್ವನಿಗಳಾಗಿರುವ ಸಾಹಿತಿಗಳು ಸಮಾಜದ ಕಲ್ಯಾಣದ ಕಡೆಗೆ ತಮ್ಮ ಲೇಖನಿಯನ್ನು ಹರಿಸಬೇಕಾಗಿದೆ.ಜನರ ಜಲ್ವಂತ ಸಮಸ್ಯೆಗಳನ್ನು ಬಿಂಬಿಸುವ ಸಾಹಿತ್ಯ ಸದಾ ಕಾಲ ಜನಮಾನಸದಲ್ಲಿ ಉಳಿಯಲಿದೆ. ಈ ನಿಟ್ಟಿನಲ್ಲಿ ಸಾಹಿತಿಗಳು ಗಮಹರಿಸುವಂತೆ ಡಾ.ಸಿ.ಸೋಮಶೇಖರ್ ತಿಳಿಸಿದರು.
ಸಮ್ಮೇಳನಾಧ್ಯಕ್ಷರ ಭಾಷಣ ಮಾಡಿದ ಕನ್ನಡ ಪಂಡಿತರಾದ ಕೋ.ರಂ.ಬಸವರಾಜು, ಸಾಹಿತ್ಯದ ಬೆಳವಣಿಗೆಯಲ್ಲಿ ಪತ್ರಿಕೆಗಳ ಪಾತ್ರ ಮಹತ್ವದ್ದಾಗಿದೆ.ಮಾಧ್ಯಮಗಳು ಸುದ್ದಿಪ್ರಸಾರಕ್ಕೆ ಸಿಮೀತಗೊಳ್ಳದೆ,ಸಾಹಿತ್ಯ ಪ್ರಸಾರದಲ್ಲಿಯೂ ತಮ್ಮನ್ನು ತಾವು ತೊಡಗಿಸಿ ಕೊಂಡಿವೆ.ಈ ಹಿಂದೆ ಕನ್ನಡ ಪಂಡಿತರಿಗೆ ಹೆಚ್ಚು ಗೌರವಿತ್ತು.ಆದರೆ ಇಂದು ಹಳೆಗನ್ನಡ ಸೇರಿದಂತೆ ಕನ್ನಡದ ಮಹಾನ್ ಗ್ರಂಥಗಳನ್ನು ಓದಿ,ಅರ್ಥೈಸಬಲ್ಲವರ ಸಂಖ್ಯೆ ಕಡಿಮೆಯಾಗಿದೆಕನ್ನಡವನ್ನೇ ಬೋಧಿಸುವ,ಕನ್ನಡದಿಂದಲೇ ಜೀವಿಸುವ ಭೋದಕರ ನಿರಾಶಕ್ತಿಯೂ ಇದಕ್ಕೆ ಕಾರಣವಾಗಿದೆ.ಈ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ .ಸಿದ್ದಗಂಗಾ ಮಠದಲ್ಲಿರುವ ದೇಶದ ಏಕೈಕ ಕನ್ನಡ ಪಂಡಿತ ಕಾಲೇಜು ಈ ಕೆಲಸವನ್ನು ಮಾಡುತ್ತಿದೆ ಎಂದರು.
ಸಮ್ಮೇಳನದ ದಿವ್ಯಸಾನಿಧ್ಯ ವಹಿಸಿದ್ದ ಸಿದ್ದಗಂಗಾ ಮಠಾಧ್ಯಕ್ಷ ಶ್ರೀಸಿದ್ದಲಿಂಗಮಹಾಸ್ವಾಮೀಜಿ ಆಶೀರ್ವಚನ ನೀಡಿ,ಕನ್ನಡಿಗರಲ್ಲಿ ಇಂದು ಕನ್ನಡ ಉಳಿಸಿ, ಬೆಳೆಸುವ ಮನೋಧರ್ಮ ಕಡಿಮೆಯಾಗಿದೆ.ಕನ್ನಡ ಉಳಿಸುವ ನಿಟ್ಟಿನಲ್ಲಿ ಕನ್ನಡ ಮಾಧ್ಯಮಗಳಲ್ಲಿ ಓದಿದವರಿಗೆ ಉದ್ಯೋಗ ಮತ್ತಿತರ ಕಡೆಗಳಲ್ಲಿ ಹೆಚ್ಚಿನ ಅವಕಾಶ ಕಲ್ಪಿಸುವ ಕೆಲಸವನ್ನು ಸರಕಾರಗಳು ಮಾಡಬೇಕಿದೆ.ಕನ್ನಡ ತನ, ಮನ ಹಾಗು ಅಭಿಮಾನ ಮೂಡುವಂತೆ ಮಕ್ಕಳನ್ನು ಓದಿನ ಕಡೆಗೆ ಪ್ರೇರೆಪಿಸಬೇಕಿದೆ.ವಿದೇಶಗಳಲ್ಲಿರುವ ಭಾರತೀಯರು ತಮ್ಮ ಮಕ್ಕಳಿಗೆ ಕನ್ನಡ ಕಲಿಸಲು ಪ್ರಯತ್ನಿಸುತ್ತಿರುವಾಗ,ಕರ್ನಾಟಕದಲ್ಲಿಯೇ ಇರುವ ನಮ್ಮಗಳ ಈ ನಿರ್ಲಕ್ಷ ಸಲ್ಲದು ಎಂದರು.
ತಾಲೂಕು 5ನೇ ಕಸಾಪ ಸಮ್ಮೇಳನದ ಅಧ್ಯಕ್ಷ ಜಯದೇವಯ್ಯ(ಬಾಪುಜ) 6ನೇ ಸಮ್ಮೇಳನದ ಅಧ್ಯಕ್ಷ ಕೋ.ರಂ.ಬಸವರಾಜು ಅವರಿಗೆ ಕನ್ನಡದ ದ್ವಜ ಹಸ್ತಾಂತರಿಸಿದರು.ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ,ತಾಲೂಕು ಅಧ್ಯಕ್ಷ ಚಿಕ್ಕಬೆಳ್ಳಾವಿ ಶಿವಕುಮಾರ್, ಡಾ.ಸೌಮ್ಯ, ಡಾ.ಡಿ.ಎನ್.ಯೋಗೀಶ್ವರಪ್ಪ, ಜಿ.ಹೆಚ್.ಮಹದೇವಪ್ಪ, ಡಾ.ಸಣ್ಣಹೊನ್ನಯ್ಯ ಕಂಟಲಗೆರೆ, ಎಸ್.ಯೋಗಾನಂದ್, ಕೆಂ.ಬ.ರೇಣುಕಯ್ಯ, ಶ್ರೀಮತಿಮಾಲಾ ಮಂಜುನಾಥ್, ಮರಿಬಸಪ್ಪ,ಕೆ.ಎಸ್.ಉಮಾಮಹೇಶ್, ಕೆ.ಎಸ್.ಉಮಾ ಮಹೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

(Visited 1 times, 1 visits today)
tumkur
Previous Articleಪಿಡಿಓಗಳ ದರ್ಪ ತರಾಟೆಗೆ ತೆಗೆದುಕೊಂಡ ಗೃಹ ಸಚಿವರು
Next Article ಗ್ಯಾರಘಟ್ಟ ಗ್ರಾಮದ ಪುರಾತನ ಮೆಟ್ಟಿಲು ಬಾವಿಗೆ ಗತವೈಭವದ ಸ್ಪರ್ಶ
News Desk Benkiyabale

Related Posts

ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ

August 12, 2026 5:37 pm news

ಉದ್ಯಮ ಸಂಸ್ಥೆ ಜೊತೆ ಎಸ್‌ಎಸ್‌ಐಟಿ ಒಡಂಬಡಿಕೆ

August 12, 2026 5:35 pm news

ವಿಬಿ ಜಿ ರಾಮ್ ಜಿ ಯೋಜನೆಯಡಿ ಜನರಿಗೆ ಉದ್ಯೋಗ ನೀಡಿ: ಜನರು ಗುಳೆ ಹೋಗುವುದನ್ನು ತಪ್ಪಿಸಿ

August 12, 2026 5:33 pm news
ತಾಜಾ ಸುದ್ಧಿಗಳು
news

ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ

August 12, 2026 5:37 pm
news

ಉದ್ಯಮ ಸಂಸ್ಥೆ ಜೊತೆ ಎಸ್‌ಎಸ್‌ಐಟಿ ಒಡಂಬಡಿಕೆ

August 12, 2026 5:35 pm
news

ವಿಬಿ ಜಿ ರಾಮ್ ಜಿ ಯೋಜನೆಯಡಿ ಜನರಿಗೆ ಉದ್ಯೋಗ ನೀಡಿ: ಜನರು ಗುಳೆ ಹೋಗುವುದನ್ನು ತಪ್ಪಿಸಿ

August 12, 2026 5:33 pm
news

ಒಂದೇ ನಲ್ಲಿಯಲ್ಲಿ ೧೦೦ ಮನೆಯವರು ನೀರು ಹಿಡಿಯುವ ದುಸ್ಥಿತಿ

August 12, 2026 5:30 pm
news

ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ಸುರೇಶ್ ಗೌಡ ಆಕ್ರೋಶ

August 12, 2026 5:28 pm
news

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

August 11, 2026 4:53 pm
Our Youtube Channel
Our Picks

ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ

August 12, 2026 5:37 pm

ಉದ್ಯಮ ಸಂಸ್ಥೆ ಜೊತೆ ಎಸ್‌ಎಸ್‌ಐಟಿ ಒಡಂಬಡಿಕೆ

August 12, 2026 5:35 pm

ವಿಬಿ ಜಿ ರಾಮ್ ಜಿ ಯೋಜನೆಯಡಿ ಜನರಿಗೆ ಉದ್ಯೋಗ ನೀಡಿ: ಜನರು ಗುಳೆ ಹೋಗುವುದನ್ನು ತಪ್ಪಿಸಿ

August 12, 2026 5:33 pm

ಒಂದೇ ನಲ್ಲಿಯಲ್ಲಿ ೧೦೦ ಮನೆಯವರು ನೀರು ಹಿಡಿಯುವ ದುಸ್ಥಿತಿ

August 12, 2026 5:30 pm

ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ಸುರೇಶ್ ಗೌಡ ಆಕ್ರೋಶ

August 12, 2026 5:28 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ

By News Desk BenkiyabaleAugust 12, 2026 5:37 pm

ತುಮಕೂರು: ವಾಲ್ಮೀಕಿ ಸಮಾಜದ ನಾಯಕರು, ಸಮುದಾಯದ ಧ್ವನಿಯಾಗಿ ಗುರುತಿಸಿಕೊಂಡಿರುವ ಸಚಿವ ಬಿ. ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲು ಬಿಜೆಪಿ…

ಉದ್ಯಮ ಸಂಸ್ಥೆ ಜೊತೆ ಎಸ್‌ಎಸ್‌ಐಟಿ ಒಡಂಬಡಿಕೆ

August 12, 2026 5:35 pm

ವಿಬಿ ಜಿ ರಾಮ್ ಜಿ ಯೋಜನೆಯಡಿ ಜನರಿಗೆ ಉದ್ಯೋಗ ನೀಡಿ: ಜನರು ಗುಳೆ ಹೋಗುವುದನ್ನು ತಪ್ಪಿಸಿ

August 12, 2026 5:33 pm

ಒಂದೇ ನಲ್ಲಿಯಲ್ಲಿ ೧೦೦ ಮನೆಯವರು ನೀರು ಹಿಡಿಯುವ ದುಸ್ಥಿತಿ

August 12, 2026 5:30 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.