BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕೆಎನ್‌ಆರ್ ಅವರ ಅಮೃತ ಮಹೋತ್ಸವ ಯಶಸ್ವಿಗೊಳಿಸಿ: ದೊರೈರಾಜು ಅಭಿಪ್ರಾಯ
  • ವಿವಿ ಕ್ಯಾಂಪಸ್‌ನಲ್ಲಿ ೭೫ ಗಿಡ ನೆಟ್ಟು ಕೆ.ಎನ್.ಆರ್‌ಗೆ ಗೌರವ
  • ಮುಂದಿನ ದಿನಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಥಾ ನಡೆಸಲಾಗುವುದು
  • ಜೆಡಿಎಸ್ ಪಕ್ಷವನ್ನು ಮುಳುಗಿಸಲು ಯಾರಿಂದಲೂ ಸಾದ್ಯವಿಲ್ಲ
  • ಕೆ.ಎನ್.ರಾಜಣ್ಣ ಸಹಕಾರಿ ಸಚಿವರಾಗಿ ಅಜಾತಶತೃವಾಗಿದ್ದಾರೆ
  • ಮುಂದಿನ ದಿನಗಳಲ್ಲಿ ಯಾವ ಅಧಿಕಾರವೂ ಬೇಡ, ಪ್ರೀತಿ, ವಿಶ್ವಾಸ ಉಳಿಸಿಕೊಂಡು ಹೋದರೆ ಸಾಕು: ಕೆಎನ್‌ಆರ್
  • ಜಾತಿ ನಿಂದನೆ ಕಾಯಿದೆಯನ್ನು ಸ್ವಾರ್ಥಕ್ಕೆ ಬಳಸಿಕೊಳ್ಳಲಾಗುತ್ತಿದೆ
  • ಕಾಂಗ್ರೆಸ್ ಸರ್ಕಾರ ಜನರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕನ್ನಡ ಸಮ್ಮೇಳನಗಳು ಕೇವಲ ಮೆರವಣಿಗೆ ಸೀಮಿತವಾಗದಿರಲಿ
ಇತರೆ ಸುದ್ಧಿಗಳು

ಕನ್ನಡ ಸಮ್ಮೇಳನಗಳು ಕೇವಲ ಮೆರವಣಿಗೆ ಸೀಮಿತವಾಗದಿರಲಿ

By News Desk BenkiyabaleUpdated:September 30, 2022 6:04 pm

ತುಮಕೂರು


ಕನ್ನಡ ಸಮ್ಮೇಳನಗಳು ಕೇವಲ ಮೆರವಣಿಗೆ, ಉತ್ಸವಗಳಿಗೆ ಸಿಮೀತವಾದರೆ ಸಾಲದು, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕನ್ನಡವನ್ನು ಅನ್ನದ ಭಾಷೆಯಾಗಿ ರೂಪಿಸುವ ನಿಟ್ಟಿನಲ್ಲಿ ಕನ್ನಡಿಗರ ಮುಂದಿರುವ ಸಮಸ್ಯೆಗಳು ಮತ್ತು ಸವಾಲುಗಳ ಕುರಿತು ಚಿಂತನೆ ನಡೆಸುವ ಅಗತ್ಯವಿದೆ ಎಂದು ಕರ್ನಾಟಕ ಗಡಿ ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ್ ತಿಳಿಸಿದ್ದಾರೆ.
ನಗರದ ಶ್ರೀಸಿದ್ದಗಂಗಾ ಮಠದ ಶ್ರೀಚನ್ನಬಸವೇಶ್ವರ್ ವಸ್ತು ಪ್ರದರ್ಶನದ ಆವರಣದಲ್ಲಿ ಹಮ್ಮಿಕೊಂಡಿದ್ದ ತುಮಕೂರು ತಾಲೂಕು ಕಸಾಪ 6ನೇ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು, ಗಡಿನಾಡು ಸೇರಿದಂತೆ ರಾಜ್ಯದ ಹಲವು ಕಡೆ ಕನ್ನಡ ಶಾಲೆಗಳು ಮುಚ್ಚುತ್ತಿವೆ. ಬೆಳಗಾವಿ,ಕಾಸರಗೋಡಿನ ವಿಚಾರವಾಗಿ ರಾಜ್ಯಗಳ ನಡುವೆ ತಿಕ್ಕಾಟವಿದೆ.ಕನ್ನಡ ಶಾಲೆಗಳ ಉಳಿಸುವ ನಿಟ್ಟಿನಲ್ಲಿ ಹಾಗೂ ಕಾಸರಗೋಡು ಮತ್ತು ಬೆಳಗಾವಿಯ ಆಸ್ಮಿತೆಯ ಕುರಿಂತಂತೆಯೂ ನಾವೆಲ್ಲರೂ ದ್ವನಿ ಎತ್ತಬೇಕಾಗಿದೆ ಎಂದರು.
ಕರ್ನಾಟಕ ಸರಕಾರ ಕಾಸರಗೋಡು ಭಾಗದಲ್ಲಿ ಕನ್ನಡವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕೈಯಾರ ಕೀಯಣ್ಣರೈ,ತಾಯಿ ಜಯದೇವಿ ಲಿಂಗಾಡೆ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಿ ನೀಡುತ್ತಾ ಬಂದಿದೆ.ರಾಜ್ಯದ 19 ಜಿಲ್ಲೆಗಳ, 63 ತಾಲೂಕುಗಳ 988 ಹಳ್ಳಿಗಳು ಗಡಿ ಪ್ರದೇಶದಲ್ಲಿ ಭಾಷಾ ವಿಚಾರವಾಗಿ ಸಾಕಷ್ಟು ಸಂಕಷ್ಟ ಎದುರಿಸುತ್ತಿವೆ. ಇವುಗಳ ಪರಿಹಾರಕ್ಕೆ ಹಲವಾರು ಪ್ರಯೋಗಗಳನ್ನು ಈಗಾಗಲೇ ಮಾಡಲಾಗಿದೆ.ಸಮಾಜದ ದ್ವನಿಗಳಾಗಿರುವ ಸಾಹಿತಿಗಳು ಸಮಾಜದ ಕಲ್ಯಾಣದ ಕಡೆಗೆ ತಮ್ಮ ಲೇಖನಿಯನ್ನು ಹರಿಸಬೇಕಾಗಿದೆ.ಜನರ ಜಲ್ವಂತ ಸಮಸ್ಯೆಗಳನ್ನು ಬಿಂಬಿಸುವ ಸಾಹಿತ್ಯ ಸದಾ ಕಾಲ ಜನಮಾನಸದಲ್ಲಿ ಉಳಿಯಲಿದೆ. ಈ ನಿಟ್ಟಿನಲ್ಲಿ ಸಾಹಿತಿಗಳು ಗಮಹರಿಸುವಂತೆ ಡಾ.ಸಿ.ಸೋಮಶೇಖರ್ ತಿಳಿಸಿದರು.
ಸಮ್ಮೇಳನಾಧ್ಯಕ್ಷರ ಭಾಷಣ ಮಾಡಿದ ಕನ್ನಡ ಪಂಡಿತರಾದ ಕೋ.ರಂ.ಬಸವರಾಜು, ಸಾಹಿತ್ಯದ ಬೆಳವಣಿಗೆಯಲ್ಲಿ ಪತ್ರಿಕೆಗಳ ಪಾತ್ರ ಮಹತ್ವದ್ದಾಗಿದೆ.ಮಾಧ್ಯಮಗಳು ಸುದ್ದಿಪ್ರಸಾರಕ್ಕೆ ಸಿಮೀತಗೊಳ್ಳದೆ,ಸಾಹಿತ್ಯ ಪ್ರಸಾರದಲ್ಲಿಯೂ ತಮ್ಮನ್ನು ತಾವು ತೊಡಗಿಸಿ ಕೊಂಡಿವೆ.ಈ ಹಿಂದೆ ಕನ್ನಡ ಪಂಡಿತರಿಗೆ ಹೆಚ್ಚು ಗೌರವಿತ್ತು.ಆದರೆ ಇಂದು ಹಳೆಗನ್ನಡ ಸೇರಿದಂತೆ ಕನ್ನಡದ ಮಹಾನ್ ಗ್ರಂಥಗಳನ್ನು ಓದಿ,ಅರ್ಥೈಸಬಲ್ಲವರ ಸಂಖ್ಯೆ ಕಡಿಮೆಯಾಗಿದೆಕನ್ನಡವನ್ನೇ ಬೋಧಿಸುವ,ಕನ್ನಡದಿಂದಲೇ ಜೀವಿಸುವ ಭೋದಕರ ನಿರಾಶಕ್ತಿಯೂ ಇದಕ್ಕೆ ಕಾರಣವಾಗಿದೆ.ಈ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ .ಸಿದ್ದಗಂಗಾ ಮಠದಲ್ಲಿರುವ ದೇಶದ ಏಕೈಕ ಕನ್ನಡ ಪಂಡಿತ ಕಾಲೇಜು ಈ ಕೆಲಸವನ್ನು ಮಾಡುತ್ತಿದೆ ಎಂದರು.
ಸಮ್ಮೇಳನದ ದಿವ್ಯಸಾನಿಧ್ಯ ವಹಿಸಿದ್ದ ಸಿದ್ದಗಂಗಾ ಮಠಾಧ್ಯಕ್ಷ ಶ್ರೀಸಿದ್ದಲಿಂಗಮಹಾಸ್ವಾಮೀಜಿ ಆಶೀರ್ವಚನ ನೀಡಿ,ಕನ್ನಡಿಗರಲ್ಲಿ ಇಂದು ಕನ್ನಡ ಉಳಿಸಿ, ಬೆಳೆಸುವ ಮನೋಧರ್ಮ ಕಡಿಮೆಯಾಗಿದೆ.ಕನ್ನಡ ಉಳಿಸುವ ನಿಟ್ಟಿನಲ್ಲಿ ಕನ್ನಡ ಮಾಧ್ಯಮಗಳಲ್ಲಿ ಓದಿದವರಿಗೆ ಉದ್ಯೋಗ ಮತ್ತಿತರ ಕಡೆಗಳಲ್ಲಿ ಹೆಚ್ಚಿನ ಅವಕಾಶ ಕಲ್ಪಿಸುವ ಕೆಲಸವನ್ನು ಸರಕಾರಗಳು ಮಾಡಬೇಕಿದೆ.ಕನ್ನಡ ತನ, ಮನ ಹಾಗು ಅಭಿಮಾನ ಮೂಡುವಂತೆ ಮಕ್ಕಳನ್ನು ಓದಿನ ಕಡೆಗೆ ಪ್ರೇರೆಪಿಸಬೇಕಿದೆ.ವಿದೇಶಗಳಲ್ಲಿರುವ ಭಾರತೀಯರು ತಮ್ಮ ಮಕ್ಕಳಿಗೆ ಕನ್ನಡ ಕಲಿಸಲು ಪ್ರಯತ್ನಿಸುತ್ತಿರುವಾಗ,ಕರ್ನಾಟಕದಲ್ಲಿಯೇ ಇರುವ ನಮ್ಮಗಳ ಈ ನಿರ್ಲಕ್ಷ ಸಲ್ಲದು ಎಂದರು.
ತಾಲೂಕು 5ನೇ ಕಸಾಪ ಸಮ್ಮೇಳನದ ಅಧ್ಯಕ್ಷ ಜಯದೇವಯ್ಯ(ಬಾಪುಜ) 6ನೇ ಸಮ್ಮೇಳನದ ಅಧ್ಯಕ್ಷ ಕೋ.ರಂ.ಬಸವರಾಜು ಅವರಿಗೆ ಕನ್ನಡದ ದ್ವಜ ಹಸ್ತಾಂತರಿಸಿದರು.ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ,ತಾಲೂಕು ಅಧ್ಯಕ್ಷ ಚಿಕ್ಕಬೆಳ್ಳಾವಿ ಶಿವಕುಮಾರ್, ಡಾ.ಸೌಮ್ಯ, ಡಾ.ಡಿ.ಎನ್.ಯೋಗೀಶ್ವರಪ್ಪ, ಜಿ.ಹೆಚ್.ಮಹದೇವಪ್ಪ, ಡಾ.ಸಣ್ಣಹೊನ್ನಯ್ಯ ಕಂಟಲಗೆರೆ, ಎಸ್.ಯೋಗಾನಂದ್, ಕೆಂ.ಬ.ರೇಣುಕಯ್ಯ, ಶ್ರೀಮತಿಮಾಲಾ ಮಂಜುನಾಥ್, ಮರಿಬಸಪ್ಪ,ಕೆ.ಎಸ್.ಉಮಾಮಹೇಶ್, ಕೆ.ಎಸ್.ಉಮಾ ಮಹೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

(Visited 1 times, 1 visits today)
tumkur
Previous Articleಪಿಡಿಓಗಳ ದರ್ಪ ತರಾಟೆಗೆ ತೆಗೆದುಕೊಂಡ ಗೃಹ ಸಚಿವರು
Next Article ಗ್ಯಾರಘಟ್ಟ ಗ್ರಾಮದ ಪುರಾತನ ಮೆಟ್ಟಿಲು ಬಾವಿಗೆ ಗತವೈಭವದ ಸ್ಪರ್ಶ
News Desk Benkiyabale

Related Posts

ಕೆಎನ್‌ಆರ್ ಅವರ ಅಮೃತ ಮಹೋತ್ಸವ ಯಶಸ್ವಿಗೊಳಿಸಿ: ದೊರೈರಾಜು ಅಭಿಪ್ರಾಯ

June 20, 2025 3:41 pm ತುಮಕೂರು

ವಿವಿ ಕ್ಯಾಂಪಸ್‌ನಲ್ಲಿ ೭೫ ಗಿಡ ನೆಟ್ಟು ಕೆ.ಎನ್.ಆರ್‌ಗೆ ಗೌರವ

June 20, 2025 3:40 pm ತುಮಕೂರು

ಮುಂದಿನ ದಿನಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಥಾ ನಡೆಸಲಾಗುವುದು

June 20, 2025 3:38 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ಕೆಎನ್‌ಆರ್ ಅವರ ಅಮೃತ ಮಹೋತ್ಸವ ಯಶಸ್ವಿಗೊಳಿಸಿ: ದೊರೈರಾಜು ಅಭಿಪ್ರಾಯ

June 20, 2025 3:41 pm
ತುಮಕೂರು

ವಿವಿ ಕ್ಯಾಂಪಸ್‌ನಲ್ಲಿ ೭೫ ಗಿಡ ನೆಟ್ಟು ಕೆ.ಎನ್.ಆರ್‌ಗೆ ಗೌರವ

June 20, 2025 3:40 pm
ತುಮಕೂರು

ಮುಂದಿನ ದಿನಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಥಾ ನಡೆಸಲಾಗುವುದು

June 20, 2025 3:38 pm
ತುಮಕೂರು

ಜೆಡಿಎಸ್ ಪಕ್ಷವನ್ನು ಮುಳುಗಿಸಲು ಯಾರಿಂದಲೂ ಸಾದ್ಯವಿಲ್ಲ

June 20, 2025 3:37 pm
ತುಮಕೂರು

ಕೆ.ಎನ್.ರಾಜಣ್ಣ ಸಹಕಾರಿ ಸಚಿವರಾಗಿ ಅಜಾತಶತೃವಾಗಿದ್ದಾರೆ

June 20, 2025 3:36 pm
ತುಮಕೂರು

ಮುಂದಿನ ದಿನಗಳಲ್ಲಿ ಯಾವ ಅಧಿಕಾರವೂ ಬೇಡ, ಪ್ರೀತಿ, ವಿಶ್ವಾಸ ಉಳಿಸಿಕೊಂಡು ಹೋದರೆ ಸಾಕು: ಕೆಎನ್‌ಆರ್

June 20, 2025 3:35 pm
Our Youtube Channel
Our Picks

ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ

June 16, 2025 2:21 pm

ಶೋಷಿತರಲ್ಲಿ ಹೋರಾಟದ ಕಿಚ್ಚು ಹತ್ತಿಸಿದವರು ಪ್ರೊ.ಬಿ.ಕೃಷ್ಣಪ್ಪ

June 16, 2025 1:56 pm

ಸಾರ್ವಜನಿಕರು ಸರ್ಕಾರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ

June 05, 2025 2:29 pm

ನಗರದಲ್ಲಿ ಪ್ರಾದೇಶಿಕ ತೆಂಗು ಅಭಿವೃದ್ಧಿ ಮಂಡಳಿ ಕಚೇರಿ ತೆರೆಯಿರಿ

May 31, 2025 3:29 pm

ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ

May 29, 2025 4:18 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ಕೆಎನ್‌ಆರ್ ಅವರ ಅಮೃತ ಮಹೋತ್ಸವ ಯಶಸ್ವಿಗೊಳಿಸಿ: ದೊರೈರಾಜು ಅಭಿಪ್ರಾಯ

By News Desk BenkiyabaleJune 20, 2025 3:41 pm

ತುಮಕೂರು: ಶೋಷಿತರ ಧ್ವನಿಯಾಗಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಿಗೆ ನೈತಿಕ ಶಕ್ತಿಯನ್ನು ತುಂಬುವ ನಿಟ್ಟಿನಲ್ಲಿ ಅಮೃತ ಮಹೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು…

ವಿವಿ ಕ್ಯಾಂಪಸ್‌ನಲ್ಲಿ ೭೫ ಗಿಡ ನೆಟ್ಟು ಕೆ.ಎನ್.ಆರ್‌ಗೆ ಗೌರವ

June 20, 2025 3:40 pm

ಮುಂದಿನ ದಿನಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಥಾ ನಡೆಸಲಾಗುವುದು

June 20, 2025 3:38 pm

ಜೆಡಿಎಸ್ ಪಕ್ಷವನ್ನು ಮುಳುಗಿಸಲು ಯಾರಿಂದಲೂ ಸಾದ್ಯವಿಲ್ಲ

June 20, 2025 3:37 pm
News by Date
June 2025
M T W T F S S
 1
2345678
9101112131415
16171819202122
23242526272829
30  
« May    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.