BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ
  • ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ
  • ಮಕ್ಕಳ ಉತ್ತಮ ಭವಿಷ್ಯವೇ ದೇಶದ ನಿಜವಾದ ಸ್ವಾತಂತ್ರ: ಕೃಷ್ಣಪ್ಪ
  • ಭಗತ್‌ಕ್ರಾಂತಿ ಸೇನೆಯಿಂದ ಭಕ್ತಿಯ ಪಂಜಿನ ಮೆರವಣಿಗೆ
  • ವಿಕಸಿತ ಭಾರತ ನಿರ್ಮಾಣದಲ್ಲಿ ಯುವಜನತೆಯ ಪಾತ್ರ ನಿರ್ಣಾಯಕ
  • ೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ
  • ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ
  • ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕಾಂಗ್ರೆಸ್ ಕಚೇರಿಯಲ್ಲಿ ನೆಹರು ಜಯಂತಿ ಕಾರ್ಯಕ್ರಮ
ಇತರೆ ಸುದ್ಧಿಗಳು

ಕಾಂಗ್ರೆಸ್ ಕಚೇರಿಯಲ್ಲಿ ನೆಹರು ಜಯಂತಿ ಕಾರ್ಯಕ್ರಮ

By News Desk BenkiyabaleUpdated:November 15, 2022 3:42 pm

ತುಮಕೂರು

ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರದಿದ್ದರೆ ಭವಿಷ್ಯದ ಭಾರತ ಅತ್ಯಂತ ಕೆಟ್ಟ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ಅಭಿಪ್ರಾಯಪಟ್ಟಿದ್ದಾರೆ.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ದೇಶದ ಮೊದಲ ಪ್ರಧಾನಿ ನೆಹರು ಅವರ 134 ಜನ್ಮ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡುತಿದ್ದ ಅವರು,ಸ್ವಾತಂತ್ರ ಬಂದಾಗ ದೇಶದಲ್ಲಿ ತಿನ್ನಲು ಅನ್ನವಿಲ್ಲದೆ, ಪ್ರತಿಯೊಂದಕ್ಕೂ ಪರಾವಲಂಭಿಯಾಗಿದ್ದ ಭಾರತವನ್ನು ಪಂಚವಾರ್ಷಿಕ ಯೋಜನೆಗಳ ಮೂಲಕ ಹಂತ ಹಂತವಾಗಿ ಕಟ್ಟಿ, ದುಡಿಯುವ ಕೈಗಳಿಗೆ ಉದ್ಯೋಗ ಒದಗಿಸಿದ್ದು ನೆಹರು ಅವರು, ಆದರೆ ಇಂದಿನ ಪ್ರಧಾನಿ ಸಾರ್ವಜನಿಕ ಸಂಸ್ಥೆಗಳನ್ನು ಮಾರಾಟ ಮಾಡಿ, ದೇಶವನ್ನು ಮತ್ತೊಮ್ಮೆ ಅದೋಗತಿಗೆ ತಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ. ಇದೇ ಪರಿಸ್ಥಿತಿ ಮುಂದುವರೆದರೆ ಭಾರತ ಮತ್ತೊಮ್ಮೆ ನೆರೆ ಹೊರೆ ರಾಷ್ಟ್ರಗಳಲ್ಲಿ ತಿನ್ನುವ ಅನ್ನಕ್ಕೂ ಭೀಕ್ಷೆ ಬೇಡುವಂತಹ ಪರಿಸ್ಥಿತಿ ಎದುರಾದರೂ ಆಶ್ಚರ್ಯವಿಲ್ಲ ಎಂದರು.
ನೆಹರು ಅವರಿಗೆ ಮಕ್ಕಳೆಂದರೆ ಪಂಚಪ್ರಾಣ.ಹಾಗಾಗಿ ತಮ್ಮ ಜನ್ಮ ದಿನವನ್ನು ಮಕ್ಕಳ ದಿನವಾಗಿ ಆಚರಿಸಲು ಕೋರಿಕೊಂಡರು. ಸಂಕಷ್ಟದ ಸಂದರ್ಭದಲ್ಲಿ ದೇಶದ ಚುಕ್ಕಾಣಿ ಹಿಡಿದು,ಆಹಾರ,ಕೈಗಾರಿಕೆ,ಶಿಕ್ಷಣ ಹೀಗೆ ಎಲ್ಲಾ ಕ್ಷೇತ್ರಗಳಲ್ಲಿ ದೇಶ ಅಭಿವೃದ್ದಿ ಶೀಲ ರಾಷ್ಟ್ರವಾಗಲು ದುಡಿದವರಲ್ಲಿ ನೆಹರು ಮೊದಲಿಗರು. ಇಂತಹ ವ್ಯಕ್ತಿ ಕಾಂಗ್ರೆಸ್ ಪಕ್ಷದ ಮುಖಂಡರು ಎಂದು ಹೇಳಿಕೊಳ್ಳಲು ಹೆಮ್ಮೆ ಎನಿಸುತ್ತದೆ ಎಂದು ಆರ್.ರಾಮಕೃಷ್ಣ ನುಡಿದರು.
ಮಾಜಿ ಶಾಸಕ ಡಾ.ರಫೀಕ್ ಅಹಮದ್ ಮಾತನಾಡಿ, ನಾಡಿನಾದ್ಯಂತ ಚಾಚು ನೆಹರು ಅವರ ಜನ್ಮ ದಿನವನ್ನು ಆಚರಿಸಲಾಗುತ್ತಿದೆ. ದೇಶಕ್ಕೆ ಸ್ವಾತಂತ್ರ ದೊರೆತಾಗ ಭಾರತ ಎಲ್ಲಾ ಕ್ಷೇತ್ರಗಳಲ್ಲಿಯೂ ಬಹಳ ಹಿಂದುಳಿದಿತ್ತು. ಜಾತ್ಯಾತೀತ ರಾಷ್ಟ್ರದ ಪರಿಕಲ್ಪನೆಯಲ್ಲಿ ಹೊಸ ಹೊಸ ಯೋಜನೆ ತಂದು ದೇಶವನ್ನು ಅಭಿವೃದ್ದಿ ಪಥಕ್ಕೆ ತಂದರು. 1947 ನಿಂದ 1964ರವರೆಗೆ ತಂದ ಹಲವಾರು ಯೋಜನೆಗಳ
ಫಲವಾಗಿ,ಶೈಕ್ಷಣಿಕವಾಗಿ,ಕೈಗಾರಿಕಾ ಕ್ಷೇತ್ರ, ಮಾಹಿತಿ ತಂತ್ರಜ್ಞಾನ, ಕೃಷಿಗೂ ಒತ್ತು ನೀಡಿ ದೇಶವನ್ನು ಅಭಿವೃದ್ದಿಯತ್ತ ಸಾಗುವಂತೆ ಮಾಡಿದರು. ಆದರೆ ಇದರ ಅರಿವಿಲ್ಲದ ಬಿಜೆಪಿ ದೇಶಕ್ಕೆ ಕಾಂಗ್ರೆಸ್ ಕೊಡುಗೆ ಏನು ಎಂದು ಪ್ರಶ್ನಿಸುತ್ತಿದೆ. ಹಾಗಾಗಿ ಕಾಂಗ್ರೆಸ್ ಕೊಡುಗೆಯನ್ನು ಜನರ ಮುಂದಿಡುವ ಪ್ರಯತ್ನವನ್ನು ಕಾರ್ಯಕರ್ತರು ಮಾಡಬೇಕಿದೆ.ದೇಶದಲ್ಲಿ ಅಲ್ಪಸಂಖ್ಯಾತರು, ಇತರೆ ಸಮುದಾಯದವರು ನೆಮ್ಮದಿಯಿಂದ ಬದುಕಬೇಕಾದರೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಾಗಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ಜಿ.ಪಂ.ಸದಸ್ಯ ಕೆಂಚಮಾರಯ್ಯ ಮಾತನಾಡಿ, ಮಕ್ಕಳ ಅಚ್ಚುಮೆಚ್ಚಿನ ಚಾಚಾ ಆಗಿದ್ದ ನೆಹರು, ಶ್ರೀಮಂತ ಮನೆತನದಲ್ಲಿ ಹುಟ್ಟಿ, ದೇಶದ ಸ್ವಾತಂತ್ರಕ್ಕಾಗಿ ಸಾಮಾನ್ಯರಂತೆ ಹೋರಾಟ ಮಾಡಿ,ತನ್ನ ಆಸ್ತಿ ಪಾಸ್ತಿಯನ್ನು ದೇಶಕ್ಕೆ ತ್ಯಾಗ ಮಾಡಿದವರು. ತಾಯ್ನಾಡಿಗಾಗಿ 9 ವರ್ಷಗಳ ಕಾಲ ಜೈಲುವಾಸ ಅನುಭವಿಸಿದ್ದ ನೆಹರು,ಅನೇಕ ತ್ಯಾಗ ಬಲಿದಾನ ಮಾಡಿದವರು.ಇವರ ಬಗ್ಗೆ ಮಾತನಾಡುವ ನೈತಿಕ ಹಕ್ಕು ಬಿಜೆಪಿಯ ಯಾವ ಮುಖಂಡರಿಗೂ ಇಲ್ಲ.ಸಾಕ್ಷರತೆ ಇಲ್ಲದ ನಾಡಿನ ದೇಶದ ಅರ್ಥಿಕ,ಸಾಮಾಜಿಕ,ಶೈಕ್ಷಣಿಕ ಯೋಜನೆಗಳನ್ನು ಜಾರಿ ಮಾಡಿ ದೇಶವನ್ನು ಅಭಿವೃದ್ದಿಯತ್ತ ಮುನ್ನೆಡೆಸಿದವರು ಎಂದರು.
ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಸ್.ಷಪಿಅಹಮದ್ ಮಾತನಾಡಿ,ಆಧುನಿಕ ಭಾರತದ ನಿಮಾತೃ ಎಂದು ಯಾರನ್ನಾದರೂ ಕರೆಯುವಂತಿದ್ದರೆ,
ಅದಕ್ಕೆ ನೆಹರು ಮಾತ್ರ ಆರ್ಹರು.ಮಹಾತ್ಮಗಾಂಧಿಗೆ ಸಲ್ಲುವ ಎಲ್ಲಾ ಗೌರವಗಳು ನೆಹರುಗೆ ಸಲ್ಲಸಬೇಕು.ಆದರೆ ಇಂದಿನ ಪ್ರಧಾನಿ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳು ನೆಹರು ಅವರನ್ನು ಅವಮಾನಿಸುವ ಮೂಲಕ ಜನತೆಯ ಮುಂದೆ ತಾವೇ ಬೆತ್ತಲೆಯಾಗುತ್ತಿದ್ದಾರೆ.
ಹಾಗಾಗಿ ಕಾಂಗ್ರೆಸ್ ಕಾರ್ಯಕರ್ತರೆಲ್ಲಾ ಒಂದಾಗಿ ದೇಶದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸಬೇಕಿದೆ
ಎಂದರು.
ಕಾರ್ಯಕ್ರಮದಲ್ಲಿ ಕೆಂಪಣ್ಣ,ಮರಿಚನ್ನಮ್ಮ,ಮಂಜಣ್ಣï ರಾಜಣ್ಣ,ಮೆಹಬೂಬ್ ಪಾಷ, ಸಂಜೀವಕುಮಾರ್, ಸೇವಾದಳದ ಶಿವಪ್ರಸಾದ್,ಗೀತಾ,ಲಕ್ಷ್ಮಣ ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)
tumkur
Previous Articleಬರದಲ್ಲಿ ಸಾಗುತ್ತಿರುವ ಸಿಂಥಟಿಕ್ ಟ್ರಾಕ್ ನಿರ್ಮಾಣ
Next Article ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಒನಕೆ ಓಬವ್ವ ಜಯಂತಿ
News Desk Benkiyabale

Related Posts

ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ

August 15, 2026 5:33 pm news

ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ

August 15, 2026 5:32 pm news

ಮಕ್ಕಳ ಉತ್ತಮ ಭವಿಷ್ಯವೇ ದೇಶದ ನಿಜವಾದ ಸ್ವಾತಂತ್ರ: ಕೃಷ್ಣಪ್ಪ

August 15, 2026 5:30 pm news
ತಾಜಾ ಸುದ್ಧಿಗಳು
news

ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ

August 15, 2026 5:33 pm
news

ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ

August 15, 2026 5:32 pm
news

ಮಕ್ಕಳ ಉತ್ತಮ ಭವಿಷ್ಯವೇ ದೇಶದ ನಿಜವಾದ ಸ್ವಾತಂತ್ರ: ಕೃಷ್ಣಪ್ಪ

August 15, 2026 5:30 pm
news

ಭಗತ್‌ಕ್ರಾಂತಿ ಸೇನೆಯಿಂದ ಭಕ್ತಿಯ ಪಂಜಿನ ಮೆರವಣಿಗೆ

August 15, 2026 5:28 pm
news

ವಿಕಸಿತ ಭಾರತ ನಿರ್ಮಾಣದಲ್ಲಿ ಯುವಜನತೆಯ ಪಾತ್ರ ನಿರ್ಣಾಯಕ

August 15, 2026 5:26 pm
news

೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ

August 14, 2026 5:46 pm
Our Youtube Channel
Our Picks

ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ

August 15, 2026 5:33 pm

ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ

August 15, 2026 5:32 pm

ಮಕ್ಕಳ ಉತ್ತಮ ಭವಿಷ್ಯವೇ ದೇಶದ ನಿಜವಾದ ಸ್ವಾತಂತ್ರ: ಕೃಷ್ಣಪ್ಪ

August 15, 2026 5:30 pm

ಭಗತ್‌ಕ್ರಾಂತಿ ಸೇನೆಯಿಂದ ಭಕ್ತಿಯ ಪಂಜಿನ ಮೆರವಣಿಗೆ

August 15, 2026 5:28 pm

ವಿಕಸಿತ ಭಾರತ ನಿರ್ಮಾಣದಲ್ಲಿ ಯುವಜನತೆಯ ಪಾತ್ರ ನಿರ್ಣಾಯಕ

August 15, 2026 5:26 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ

By News Desk BenkiyabaleAugust 15, 2026 5:33 pm

ತುಮಕೂರು: ರೈತರು ಬರ ಪರಿಸ್ಥಿತಿ ಸಂದರ್ಭದಲ್ಲಿ ಕೃಷಿಯಲ್ಲಿ ಪರ್ಯಾಯ ಬೆಳೆಗಳನ್ನು ಬೆಳೆಯಬೇಕು ಎಂದು ಕರ್ನಾಟಕ ಪ್ರದೇಶ ಕೃಷಿಕ ಪ್ರದೇಶ ರಾಜ್ಯಾಧ್ಯಕ್ಷ…

ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ

August 15, 2026 5:32 pm

ಮಕ್ಕಳ ಉತ್ತಮ ಭವಿಷ್ಯವೇ ದೇಶದ ನಿಜವಾದ ಸ್ವಾತಂತ್ರ: ಕೃಷ್ಣಪ್ಪ

August 15, 2026 5:30 pm

ಭಗತ್‌ಕ್ರಾಂತಿ ಸೇನೆಯಿಂದ ಭಕ್ತಿಯ ಪಂಜಿನ ಮೆರವಣಿಗೆ

August 15, 2026 5:28 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.