BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತುಮಕೂರು: ಶ್ರೀಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯಲು ಯತ್ನ
  • ಕೆ.ಎನ್.ರಾಜಣ್ಣ ಸಚಿವ ಸಂಪುಟದಿ0ದ ವಜಾ
  • ವಿವಿಧ ಬೇಡಿಕೆಗಳನ್ನು ಈಡೇರುಸುವಂತೆ ಆಗ್ರಹ
  • ಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನದ ಚುನಾವಣೆಗೆ ಕೆ.ಎನ್. ರಾಜಣ್ಣ ನಾಮಪತ್ರ ಸಲ್ಲಿಕೆ
  • ತುಮಕೂರು: ಕಾಣೆಯಾದ ಮಹಿಳೆಯ ಕೊಲೆ
  • ತುಮಕೂರಿನಿಂದ ಜೋಗ್ ಫಾಲ್ಸ್ ವಿಶೇಷ ಪ್ಯಾಕೇಜ್
  • ಕ್ವಿಟ್ ಇಂಡಿಯಾ ಚಳುವಳಿ ಭಾರತೀಯ ಸ್ವಾತಂತ್ರ÷್ಯ ಹೋರಾಟದಲ್ಲಿ ಮಹತ್ವದ ಹೆಜ್ಜೆ: ಜಿ.ಚಂದ್ರಶೇಖರ ಗೌಡ
  • ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಯಶಸ್ವಿಯಾದ ಮಾನವ ಅಂಗಾಂಗ ಕಸಿ
ಇತರೆ ಸುದ್ಧಿಗಳು

ಯಶಸ್ವಿಯಾದ ಮಾನವ ಅಂಗಾಂಗ ಕಸಿ

By News Desk BenkiyabaleUpdated:December 24, 2022 4:34 pm

ತುಮಕೂರು

ಕರ್ನಾಟಕದಲ್ಲಿಯೇ ಮೊದಲ ಬಾರಿಗೆ ಶ್ರೀ ಸಿದ್ಧಾರ್ಥ ವೈದ್ಯಕೀಯ ಮತ್ತು ಕಾಲೇಜಿನಲ್ಲಿ ಯಶಸ್ವಿಯಾಗಿ ಅಂಗಾಂಗ ಕಸಿ ಮಾಡಲಾಗಿದೆ ಎಂದು ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿಗಳು, ಆಸ್ಪತ್ರೆಯ ನಿರ್ದೇಶಕರು ಮತ್ತು ಕರ್ನಾಟಕ ಸರ್ಕಾರದ ಮಾಜಿ ಉಪಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ನಗರದ ಅಗಳಕೋಟೆಯಲ್ಲಿರುವ ಶ್ರೀ ಸಿದ್ಧಾರ್ಥ ವೈದ್ಯಕೀಯ ಆಸ್ಪತ್ರೆ ಮತ್ತು ಕಾಲೇಜಿನಲ್ಲಿ ಆಯೋಜಿಸಿರುವ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವೈದ್ಯಕೀಯ ವಿಜ್ಞಾನ ಬೆಳೆಯುತ್ತಿದ್ದಂತೆ ನೇತ್ರದಾನ, ದೇಹ ದಾನ, ಅಂಗಾಂಗ ದಾನಗಳೂ ತಮ್ಮ ಮಹತ್ವ ಹೆಚ್ಚಿಸಿಕೊಳ್ಳುತ್ತವೆ. ಜೀವ ಉಳಿಸುವುದಕ್ಕಿಂತ ದೊಡ್ಡ ದಾನ ಬೇರಿಲ್ಲ. ಗ್ರಾಮೀಣ ಜನರಿಗೆ ಅಂಗಾಂಗ ದಾನ ಮಾಡುವ ಕುರಿತು ಜಾಗೃತಿ ಮೂಡಿಸುವ ಕೆಲಸವಾಗಬೇಕಿದೆ ಎಂದರು.
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ರೈತ ದಿವಂಗತ ಬಲರಾಮ್(47) ಅವರು ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಮೆದುಳು ನಿಷ್ಕ್ರೀಯೆಗೊಂಡಿತು. ಈ ವಿಷಯವನ್ನು ತುಮಕೂರು ಜಿಲ್ಲಾ ಆಸ್ಪತ್ರೆ ಅಧಿಕಾರಿಗಳು ಶ್ರೀ ಸಿದ್ಧಾರ್ಥ ವೈದ್ಯಕೀಯ ಆಸ್ಪತ್ರೆಯ ಸಹಾಯಕ ಕುಲಸಚಿವರಾದ ಡಾ. ಪವನ್ ಆರ್ ಅವರ ಗಮನಕ್ಕೆ ತಂದರು. ಆಗ ಮೆದುಳು ನಿಷ್ಕ್ರೀಯೆಗೊಂಡಿರುವ (ಬ್ರೈನ್‍ಡೆಡ್) ಬಲರಾಮ್ ಅವರ ದೇಹವನ್ನು ಜೀವಸಾರ್ಥಕತೆ ಸಂಸ್ಥೆಯ ಸಹಾಯದೊಂದಿಗೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯ ಡಾ.ವಿಶ್ವನಾಥ್ ತಂಡ ಪರೀಶೀಲಿಸಿ ಬ್ರೈನ್‍ಡೆಡ್ ಎಂದು ದೃಢೀಕರಿಸಿತ್ತು.
ಬಲರಾಮ ಅವರ ಪತ್ನಿ ಶ್ರೀಮತಿ ಲತಾ ಮತ್ತು ಅವರ ಪುತ್ರ ಇಂದ್ರಜೀತ್ ಅವರ ಗಮನಕ್ಕೆ ತಂದಾಗ ಅಂಗಾಂಗ ದಾನಕ್ಕೆ ಒಪ್ಪಿಕೊಂಡರು. ನಂತರ ಶ್ರೀ ಸಿದ್ಧಾರ್ಥ ಆಸ್ಪತ್ರೆಯ ವೈದ್ಯರ ತಂಡ ಬ್ರೈನ್‍ಡೆಡ್ ಗೆ ಒಳಗಾಗಿದ್ದ ಬಲರಾಮ್ ಅವರ ದೇಹದ ಭಾಗಗಳನ್ನು ರಕ್ಷಿಸುವ ಕಾರ್ಯಕ್ಕೆ ಮುಂದಾಯಿತು ಎಂದು ಮಾಜಿ ಉಪಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ ಅವರು ತಿಳಿಸಿದರು.
ಉದ್ಯೋಗದ ಭರವಸೆ:
ದೇಹ ದಾನ ಮಾಡಿದ ಬಲರಾಮ ಅವರ ಕುಟುಂಬಕ್ಕೆ ಸಂಸ್ಥೆ ಅಭಾರಿಯಾಗಿದೆ. ಅವರ ಕುಟಂಬಕ್ಕೆ ಸರ್ವ ರೀತಿಯ ವೈದ್ಯಕೀಯ ನೆರವು ನೀಡುವುದರ ಜೊತೆಗೆ ಪುತ್ರ ಇಂದ್ರಜೀತ್ ಅವರಿಗೆ ಸಂಸ್ಥೆಯಲ್ಲಿ ಉದ್ಯೋಗ ನೀಡುವುದಾಗಿ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಪ್ರಕಟಿಸಿದರು.
ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯ ಮೂತ್ರಕೋಶ ತಜ್ಞರಾದ ಡಾ.ನವೀನ್ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ಮೂಲಕ 2ಕಿಡ್ನಿಗಳನ್ನು ತೆಗೆದು ಬಿಜಿಎಸ್ ಗ್ಲೋಬಲ್ ಹಾಸ್ಪಿಟಲ್ ಮತ್ತು ಮೈಸೂರಿನ ಜೆಎಸ್‍ಎಸ್ ಆಸ್ಪತ್ರೆಗೆ ಕಳುಹಿಸಲಾಯಿತು. ಹಾಗೆಯೇ ಹೃದಯ ಕವಾಟನ್ನು (ಊeಚಿಡಿಣ vಚಿಟves) ತೆಗೆದು ಜಯದೇವ ಹಾಸ್ಪಿಟಲ್‍ಗೆ ಕಳುಹಿಸಲಾಯಿತು.
ನೇತ್ರ ತಜ್ಞ ಡಾ.ರವಿಕುಮಾರ್ ಅವರ ತಂಡದಿಂದ ಕಾರ್ನೀಯಾವನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದು ತುಮಕೂರು ಜಿಲ್ಲಾ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು. ಶ್ರೀ ನಾಗರಾಜ್ ಅವರ ನೇತೃತ್ವದ ತಂಡ ಚರ್ಮದ ಕೋಶಗಳನ್ನು ತೆಗೆದು ಬೆಂಗಳೂರಿನ ವಿಕ್ಟೋರಿಯಾ ಸ್ಕಿನ್ ಬ್ಯಾಂಕ್‍ನ ರವಾನಿಸಲಾಗಿದೆ.
ಶ್ರೀ ಸಿದ್ಧಾರ್ಥ ವೈದ್ಯಕೀಯ ಆಸ್ಪತ್ರೆ ಮತ್ತು ಕಾಲೇಜು ಆರೋಗ್ಯ ಜೊತೆಗೂಡಿ ಇಲಾಖೆ ಜೀವ ಸಾರ್ಥಕತೆ ಸಂಸ್ಥೆಯು ದಾನಿಗಳಿಂದ ಅಂಗಾಗಗಳನ್ನು ಸಂಗ್ರಹಿಸಿ ಅಗತ್ಯವಿರುವವರಿಗೆ ಅದನ್ನು ತಲುಪಿಸಿ ಜೀವ ಉಳಿಸುವ ಪುಣ್ಯದ ಕೆಲಸವನ್ನು ಜೀವ ಸಾರ್ಥಕತೆ ಸಂಸ್ಥೆ ಮಾಡುತ್ತಿದೆ. ಕರ್ನಾಟಕದಲ್ಲಿ 5 ಜೋನ್‍ಗಳಲ್ಲಿ ಈ ಸಂಸ್ಥೆಯು ಕೆಲಸ ಮಾಡುತ್ತಿದೆ. ಇಲ್ಲಿಯವರೆಗೆ 147 ಜನ ಅಂಗಾಂಗ ದಾನ ಮಾಡಿರುವ ಪ್ರಕರಣಗಳು ದಾಖಲಾಗಿದೆ. ಅಂಗಾಂಗ ದಾನ ಮಾಡುವ ಪ್ರಕ್ರಿಯೆಯಲ್ಲಿ ಭಾರತ ದೇಶವು 2ನೇ ಸ್ಥಾನದಲ್ಲಿದೆ.
ಪತ್ರಿಕಾಗೋಷ್ಠಿಯಲ್ಲಿ ಸಾಹೇ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಬಾಲಕೃಷ್ಣ ಶೆಟ್ಟಿ, ರಿಜಿಸ್ಟ್ರಾರ್ ಡಾ. ಎಂ.ಝೆಡ್ ಕುರಿಯನ್, ಸಹಾಯಕ ಕುಲಸಚಿವರಾದ ಡಾ. ಪವನ್ ಆರ್, ಕುಲಾಧಿಪತಿಗಳ ಸಲಹೆಗಾರರಾದ ಡಾ.ವಿವೇಕ್ ವೀರಯ್ಯ, ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಶೀಲ್‍ಚಂದ್ರ ಮಹಾಪಾತ್ರ, ಉಪ ಪ್ರಾಂಶುಪಾಲರಾದ ಡಾ.ಪ್ರಭಾಕರ್, ನೇಪ್ರಾಲಜಿಯ ಮುಖ್ಯಸ್ಥರಾದ ಡಾ.ಸಂಜೀವ್, ಡಾ.ಶ್ರೀರಾಮ್, ಡಾ. ರಾಘವೇಂದ್ರ, ಡೆಂಟಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರವೀಣ್ ಕುಡವ, ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿ ಡಾ. ಮಂಜುನಾಥ, ಜೀವಸಾರ್ಥಕತೆ ಸಂಸ್ಥೆಯ ನೌಶದ್ ಮತ್ತು ಚೇತನ್ ಹಾಜರಿದ್ದರು.

(Visited 1 times, 1 visits today)
tumkur Tumkur dc yspatil
Previous Articleಕ್ರೀಡೆಯಿಂದ ಮಾನಸಿಕ ಒತ್ತಡ ಕಡಿಮೆ : ಜಿಲ್ಲಾಧಿಕಾರಿ
Next Article ಜ.10 : ಮಾಡು, ಇಲ್ಲವೆ ಮಡಿ ಹೋರಾಟ : ಇಮ್ಮಡಿ ಸಿದ್ದರಾಮೇಶ್ವರಮಹಾಸ್ವಾಮೀಜಿ ಕರೆ
News Desk Benkiyabale

Related Posts

ತುಮಕೂರು: ಶ್ರೀಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯಲು ಯತ್ನ

August 13, 2025 3:02 pm ಇತರೆ ಸುದ್ಧಿಗಳು

ಕೆ.ಎನ್.ರಾಜಣ್ಣ ಸಚಿವ ಸಂಪುಟದಿ0ದ ವಜಾ

August 13, 2025 2:48 pm ಇತರೆ ಸುದ್ಧಿಗಳು

ವಿವಿಧ ಬೇಡಿಕೆಗಳನ್ನು ಈಡೇರುಸುವಂತೆ ಆಗ್ರಹ

August 13, 2025 2:32 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ತುಮಕೂರು: ಶ್ರೀಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯಲು ಯತ್ನ

August 13, 2025 3:02 pm
ಇತರೆ ಸುದ್ಧಿಗಳು

ಕೆ.ಎನ್.ರಾಜಣ್ಣ ಸಚಿವ ಸಂಪುಟದಿ0ದ ವಜಾ

August 13, 2025 2:48 pm
ಇತರೆ ಸುದ್ಧಿಗಳು

ವಿವಿಧ ಬೇಡಿಕೆಗಳನ್ನು ಈಡೇರುಸುವಂತೆ ಆಗ್ರಹ

August 13, 2025 2:32 pm
ಇತರೆ ಸುದ್ಧಿಗಳು

ಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನದ ಚುನಾವಣೆಗೆ ಕೆ.ಎನ್. ರಾಜಣ್ಣ ನಾಮಪತ್ರ ಸಲ್ಲಿಕೆ

August 11, 2025 3:25 pm
ಇತರೆ ಸುದ್ಧಿಗಳು

ತುಮಕೂರು: ಕಾಣೆಯಾದ ಮಹಿಳೆಯ ಕೊಲೆ

August 11, 2025 3:24 pm
ಇತರೆ ಸುದ್ಧಿಗಳು

ತುಮಕೂರಿನಿಂದ ಜೋಗ್ ಫಾಲ್ಸ್ ವಿಶೇಷ ಪ್ಯಾಕೇಜ್

August 09, 2025 2:01 pm
Our Youtube Channel
Our Picks

ತುಮಕೂರು: ಶ್ರೀಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯಲು ಯತ್ನ

August 13, 2025 3:02 pm

ಕೆ.ಎನ್.ರಾಜಣ್ಣ ಸಚಿವ ಸಂಪುಟದಿ0ದ ವಜಾ

August 13, 2025 2:48 pm

ವಿವಿಧ ಬೇಡಿಕೆಗಳನ್ನು ಈಡೇರುಸುವಂತೆ ಆಗ್ರಹ

August 13, 2025 2:32 pm

ಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನದ ಚುನಾವಣೆಗೆ ಕೆ.ಎನ್. ರಾಜಣ್ಣ ನಾಮಪತ್ರ ಸಲ್ಲಿಕೆ

August 11, 2025 3:25 pm

ತುಮಕೂರು: ಕಾಣೆಯಾದ ಮಹಿಳೆಯ ಕೊಲೆ

August 11, 2025 3:24 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ತುಮಕೂರು: ಶ್ರೀಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯಲು ಯತ್ನ

By News Desk BenkiyabaleAugust 13, 2025 3:02 pm

ತುಮಕೂರು: ಶ್ರೀಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯಲು ಯತ್ನಿಸಿ, ಧರ್ಮಾಧಿಕಾರಿಗಳಾದ ಶ್ರೀವೀರೇಂದ್ರ ಹೆಗಡೆ ಅವರ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವವರನ್ನು…

ಕೆ.ಎನ್.ರಾಜಣ್ಣ ಸಚಿವ ಸಂಪುಟದಿ0ದ ವಜಾ

August 13, 2025 2:48 pm

ವಿವಿಧ ಬೇಡಿಕೆಗಳನ್ನು ಈಡೇರುಸುವಂತೆ ಆಗ್ರಹ

August 13, 2025 2:32 pm

ಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನದ ಚುನಾವಣೆಗೆ ಕೆ.ಎನ್. ರಾಜಣ್ಣ ನಾಮಪತ್ರ ಸಲ್ಲಿಕೆ

August 11, 2025 3:25 pm
News by Date
August 2025
M T W T F S S
 123
45678910
11121314151617
18192021222324
25262728293031
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.