BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನಿದ್ದೆಗೆ ಜಾರಿದ ಕಂದಾಯ ಇಲಾಖೆ
  • ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು
  • ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ
  • ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ
  • ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ
  • ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ
  •  ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ
  • ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಾರ್ಚ್ 26 ರಂದು ದೇವರ ದಾಸಿಮಯ್ಯ ಜಯಂತಿ
ಇತರೆ ಸುದ್ಧಿಗಳು

ಮಾರ್ಚ್ 26 ರಂದು ದೇವರ ದಾಸಿಮಯ್ಯ ಜಯಂತಿ

By News Desk BenkiyabaleUpdated:March 24, 2023 3:47 pm

ತುಮಕೂರು


ಇದೇ ಮಾರ್ಚ್ 26 ರಂದು ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ, ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕಸಾಪ ಹಾಗೂ ತುಮಕೂರು ಜಿಲ್ಲೆಯ ನೇಕಾರರ ಸಮುದಾಯಗಳಾದ ದೇವಾಂಗ, ಕುರುಹೀನ ಶೆಟ್ಟಿ,ಪದ್ಮಶಾಲಿ ಹಾಗೂ ತೊಗಟವೀರ ಸಮುದಾಯಗಳ ವತಿಯಿಂದ ಅದ್ಯ ವಚನಕಾರ ದೇವರ ದಾಸಿಮಯ್ಯ ಅವರ 1044ನೇ ಜಯಂತಿ ಆಚರಣೆ ಆರಂಭವಾಗಿ ಹೊರಪೇಟೆಯಲ್ಲಿರುವ ಶ್ರೀನೀಲಕಂಠೇಶ್ವರ ದೇವಾಲಯದ ಅವರಣದಲ್ಲಿ ಜಿಲ್ಲಾ ನೇಕಾರರ ಒಕ್ಕೂಟದ ಪೂರ್ವಭಾವಿ ಸಭೆ ನಡೆಯಿತು.
ಜಿಲ್ಲಾ ನೇಕಾರರ ಸಮುದಾಯಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಧನಿಯಕುಮಾರ್,ಉಪಾಧ್ಯಕ್ಷ ಎನ್.ವೆಂಕಟೇಶ್,ಪ್ರಧಾನ ಕಾರ್ಯದರ್ಶಿ ಆರ್.ರಾಮಕೃಷ್ಣಪ್ಪ,ಕಾರ್ಯದರ್ಶಿ ರೇವಣ್ಣಕುಮಾರ್,ನೇಕಾರರ ಮಹಿಳಾ ಒಕ್ಕೂಟದ ಜಿಲ್ಲಾಧ್ಯಕ್ಷ ಶ್ರೀಮತಿ ಚಂದ್ರಕಲಾ ದೇವರಾಜು,ಸಂಘಟನಾ ಕಾರ್ಯದರ್ಶಿ ಅನಿಲ್‍ಕುಮಾರ್,ನಿರ್ದೇಶಕರಾದ ರಂಗಸ್ವಾಮಿ, ಜೈರಂಗಶೆಟ್ಟಿ ಅವರುಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ನೇಕಾರರ ಸಮುದಾಯಗಳ ಒಕ್ಕೂಟದ ಧನಿಯಕುಮಾರ್ ಮಾತನಾಡಿ,ನೇಕಾರರ ಸಮುದಾಯ ತನ್ನದೇ ಆದ ಇತಿಹಾಸವನ್ನು ಹೊಂದಿರುವ ಸಮುದಾಯ.ಈ ಸಮುದಾಯಕ್ಕೆ ಸೇರಿದ ಅದ್ಯ ವಚನಕಾರ ದೇವರ ದಾಸಿಮಯ್ಯ ಅನುಭವ ಮಂಟಪದ ಪ್ರಮುಖರಲ್ಲಿ ಒಬ್ಬರಾಗಿದ್ದು, ಬಸವಣ್ಣನವರಿಗಿಂತಲೂ ಹಿರಿಯರು.ಸುಮಾರು 176ಕ್ಕೂ ಹೆಚ್ಚು ವಚನಗಳನ್ನು ರಚಿಸಿ ಅವುಗಳ ಮೂಲಕ ಸಮಾಜದ ಓರೆಕೋರೆ ತಿದ್ದುವ ಕೆಲಸ ಮಾಡಿದ್ದಾರೆ.ಇಂತಹ ವ್ಯಕ್ತಿಯನ್ನು ಗುರುತಿಸಿ ಸರಕಾರ ದೇವರದಾಸಿಮಯ್ಯ ಜಯಂತಿಯನ್ನು ಸರಕಾರಿ ಕಾರ್ಯಕ್ರಮವಾಗಿ ಆಚರಣೆಗೆ ಮುಂದಾಗಿ ರುವುದು ಇಡೀ ನೇಕಾರರ ಸಮುದಾಯ ಹೆಮ್ಮೆ ಪಡುವಂತಹ ವಿಚಾರವಾಗಿದೆ.ಇದಕ್ಕಾಗಿ ಸರಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ತಿಳಿಸಿದರು.
ನೇಕಾರರ ಸಮುದಾಯ ಅರ್ಥಿಕವಾಗಿ, ಸಾಮಾಜಿಕವಾಗಿ ಕುಸಿಯುತ್ತಿರುವ ಸಂದರ್ಭದಲ್ಲಿ ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು 2015ರಲ್ಲಿ ಆಗಸ್ಟ್ 07 ದಿನಾಂಕವನ್ನು ನೇಕಾರರ ದಿವಸ್ ಎಂದು ಘೋಷಿಸಿದ ಪರಿಣಾಮ, ಸಮಾಜದಲ್ಲಿ ಮತ್ತಷ್ಟು ಘನತೆ ಪಡೆಯುವಂತಾಯಿತು.ಇದರ ಭಾಗವಾಗಿ ರಾಜ್ಯ ಸರಕಾರವೂ ಸ್ಪಂದಿಸಿ,ನೇಕಾರರಿಗೆ ವಿವಿಧ ಸವಲತ್ತುಗಳ ಜೊತೆಗೆ,ನೇಕಾರರ ಅಭಿವೃದ್ದಿ ನಿಗಮ ಸ್ಥಾಪಿಸಿದೆ.ಅಲ್ಲದೆ ನೇಕಾರರ ಸಮುದಾಯಕ್ಕೆ ಕೋವಿಡ್ ಪರಿಹಾರವಾಗಿ ನೀಡುತ್ತಿದ್ದ ಮಾಸಿಕ 2000 ರೂಗಳನ್ನು ಐದು ಸಾವಿರ ರೂಗಳಿಗೆ ಹೆಚ್ಚಳ ಮಾಡಿದೆ.ಈ ಎಲ್ಲಾ ಬೆಳವಣಿಗೆಯ ಹಿನ್ನೆಲೆಯಲ್ಲಿ ರಾಜ್ಯ ಸರಕಾರವನ್ನು ಎಲ್ಲಾ ನೇಕಾರ ಬಂಧುಗಳು ಹೃಪೂರ್ವಕವಾಗಿ ಅಭಿನಂದಿಸುವುದಾಗಿ ಧನಿಯಕುಮಾರ್ ತಿಳಿಸಿದರು.
ಮಾ.26ರ ಭಾನುವಾರ ಸರಕಾರವತಿಯಿಂದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಅದ್ಯ ವಚನಕಾರ ದೇವರ ದಾಸಿಮಯ್ಯನ ಜಯಂತಿ ಆಚರಿಸಲಾಗುತ್ತಿದೆ. ಈ ಬಾರಿಯ ಕಾರ್ಯಕ್ರಮದಲ್ಲಿ ನಿವೃತ್ತ ಕೆ.ಪಿ.ಟಿ.ಸಿ.ಎಲ್ ಇಂಜಿನಿಯರ್ ಕೆ.ಹೆಚ್.ರಾಮಸ್ವಾಮಿ, ತುರುವೇಕೆರೆಯ ರಾಘವ,ಎಸ್.ಬಿ.ಐ ನ ನಿವೃತ್ತ ಮುಖ್ಯ ಕ್ಯಾಷಿಯರ್ ಡಿ.ಪಿ.ಶಾಮಣ್ಣ, ಅಂತರರಾಷ್ಟ್ರೀಯ ವೇಗದ ನಡಿಗೆ ಕ್ರೀಡಾಪಟು ನರೇಶ್,ನೇಕಾರರ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಎಸ್.ಲಿಂಗರಾಜು ಅವರುಗಳನ್ನು ಸನ್ಮಾನಿಸಲಾಗುವುದು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಳೀಯ ಶಾಸಕರಾದ ಜಿ.ಜಿ.ಜೋತಿಗಣೇಶ್ ವಹಿಸಲಿದ್ದು,ಕೇಂದ್ರದ ಮಂತ್ರಿ ಎ.ನಾರಾಯಣಸ್ವಾಮಿ ಅವರ ಉಪಸ್ಥಿತಿಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಅರಗಜ್ಞಾನೇಂದ್ರ ಕಾರ್ಯಕ್ರಮ ಉದ್ಘಾಟಿಸುವರು.ಸಂಸದರಾದ ಜಿ.ಎಸ್.ಬಸವರಾಜು,ಜಿಲ್ಲೆಯ ಎಲ್ಲಾ ಸಚಿವರು, ಶಾಸಕರು,ವಿಧಾನಪರಿಷತ್ ಸದಸ್ಯರು, ಪಾಲಿಕೆಯ ಮೇಯರ್ ಶ್ರೀಮತಿ ಪ್ರಭಾವತಿ ಸುಧೀಶ್ವರ್ ಸೇರಿದಂತೆ ಗಣ್ಯರು ಉಪಸ್ಥಿತರಿರುವರು ಎಂದರು.
ಅರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿರುವ ಸಮುದಾಯಕ್ಕೆ ರಾಜಕೀಯ ಬಲ ನೀಡುವ ನಿಟ್ಟಿನಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ರಾಜ್ಯದ 224 ಸೀಟುಗಳಲ್ಲಿ ಕನಿಷ್ಠ 5 ಸೀಟುಗಳನ್ನು ನೇಕಾರರ ಸಮುದಾಯಕ್ಕೆ ಮೀಸಲಿಡಬೇಕು ಹಾಗೂ ಶೈಕ್ಷಣಿಕ ಅಭಿವೃದ್ದಿಗಾಗಿ ಹೆಣ್ಣು ಮಕ್ಕಳ ಹಾಸ್ಟಲ್ ನಿರ್ಮಿಸಬೇಕು,ರೈತರ ಸಾಲ ಮನ್ನಾ ರೀತಿ, ನೇಕಾರರ ಸಾಲಮನ್ನಾ ಮಾಡಬೇಕು, ರೈತ ಸನ್ಮಾನ್ ನಿಧಿಯಂತೆ ನೇಕಾರರ ಸನ್ಮಾನ್ ನಿಧಿಯನ್ನು ಪ್ರಾರಂಭಿಸಬೇಕೆಂಬುದು ರಾಜ್ಯ ನೇಕಾರರ ಒಕ್ಕೂಟದ ಒತ್ತಾಯವಾಗಿದೆ. ಈಗಾಗಲೇ ಈ ನಿಟ್ಟಿನಲ್ಲಿ ಸೋಮಶೇಖರ್ ಅಧ್ಯಕ್ಷರಾಗಿ ನೇಮಕವಾದ ನಂತರ ಇಡೀ ರಾಜ್ಯ ತಿರುಗಿ ಸಂಘಟಿಸಿ, ಉತ್ತಮ ಕೆಲಸ ಮಾಡಲಾಗಿದೆ.ಜಿಲ್ಲೆಯ11 ತಾಲೂಕುಗಳ ನೇಕಾರ ಬಂಧುಗಳು ಮಾ.26 ರಂದು ತಮ್ಮ ಗ್ರಾಮ ಹಾಗೂ ತಾಲೂಕು ಕೇಂದ್ರದಲ್ಲಿ ನಡೆಯುವ ದೇವರ ದಾಸಿಮಯ್ಯ ಜಯಂತಿಯನ್ನು ಮುಗಿಸಿಕೊಂಡು ಬೆಳಗ್ಗೆ 11 ಗಂಟೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಒಗ್ಗಟ್ಟು ಪ್ರದರ್ಶಿಸುವಂತೆ ಧನಿಯಕುಮಾರ್ ಮನವಿ ಮಾಡಿದ್ದಾರೆ.
ಜಿಲ್ಲಾ ನೇಕಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಆರ್.ರಾಮಕೃಷ್ಣಪ್ಪ ಮಾತನಾಡಿ,ಅನುಭವ ಮಂಟಪದ ಹಿರಿಯರಾಗಿ, ಅಣ್ಣ ಬಸವಣ್ಣನವರ ಸಮಕಾಲಿನರಾಗಿದ್ದ ದೇವರ ದಾಸಿಮಯ್ಯ, ಮಹಿಳಾ ಶಿಕ್ಷಣ ಮತ್ತು ಸಬಲೀಕರಣದ ಬಗ್ಗೆ ಹೆಚ್ಚು ಒತ್ತು ನೀಡಿದವರು.ಅಂತಹವರ ಜಯಂತಿ ಆಚರಿಸುವ ಮೂಲಕ ಸರಕಾರ ತಳ ಸಮುದಾಯಗಳಿಗೆ ಮನ್ನಣೆ ನೀಡಿದೆ.ಸರಕಾರ ರೈತರ ರೀತಿ ನೇಕಾರರಿಗೂ ಕಡಿಮೆ ಬಡ್ಡಿಯಲ್ಲಿ ಸಾಲ ನೀಡಬೇಕೆಂಬುದು ನಮ್ಮ ಕೋರಿಕೆಯಾಗಿದೆ ಎಂದರು.
ಜಿಲ್ಲಾ ನೇಕಾರರ ಸಂಘದ ಉಪಾಧ್ಯಕ್ಷ ಎನ್.ವೆಂಕಟೇಶ್ ಮಾತನಾಡಿ,ಮಾರ್ಚ್ 6 ರಂದು ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನೇಕಾರ ಬಂಧುಗಳು ಕುಟುಂಬ ಸಮೇತ ಭಾಗವಹಿಸುವಂತೆ ಮನವಿ ಮಾಡಿದರು.
ಜಿಲ್ಲಾ ನೇಕಾರರ ಮಹಿಳಾ ಘಟಕದ ಅಧ್ಯಕ್ಷ ಶ್ರೀಮತಿ ಚಂದ್ರಕಲಾ ಮಾತನಾಡಿ,ಎಲ್ಲಾ ಸಮುದಾಯಗಳಲ್ಲಿಯೂ ಹೆಣ್ಣು ಮಕ್ಕಳು ಸಮುದಾಯದ ಸಂಘಟನೆಯಲ್ಲಿ ತೊಡಗಿದ್ದು, ಈ ನಿಟ್ಟಿನಲ್ಲಿ ನೇಕಾರರ ಸಮುದಾಯದಹೆಣ್ಣು ಮಕ್ಕಳು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

(Visited 1 times, 1 visits today)
tumkur Tumkur dc yspatil
Previous Articleನೂತನ ಕೃಷಿ ಕಚೇರಿ ಕಟ್ಟಡದ ಗುದ್ದಲಿ ಪೂಜೆ
Next Article ಕೊನೆಯ ಸಂಪುಟ ಸಭೆಯ ಅಧ್ಯಕ್ಷತೆ ವಹಿಸಲಿರುವ ಸಿಎಂ…!
News Desk Benkiyabale

Related Posts

ನಿದ್ದೆಗೆ ಜಾರಿದ ಕಂದಾಯ ಇಲಾಖೆ

June 18, 2026 4:44 pm news

ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು

June 18, 2026 1:49 pm news

ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ

June 18, 2026 1:46 pm news
ತಾಜಾ ಸುದ್ಧಿಗಳು

ನಿದ್ದೆಗೆ ಜಾರಿದ ಕಂದಾಯ ಇಲಾಖೆ

June 18, 2026 4:44 pm

ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು

June 18, 2026 1:49 pm

ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ

June 18, 2026 1:46 pm

ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ

June 18, 2026 1:42 pm

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm
Our Youtube Channel
Our Picks

ನಿದ್ದೆಗೆ ಜಾರಿದ ಕಂದಾಯ ಇಲಾಖೆ

June 18, 2026 4:44 pm

ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು

June 18, 2026 1:49 pm

ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ

June 18, 2026 1:46 pm

ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ

June 18, 2026 1:42 pm

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ನಿದ್ದೆಗೆ ಜಾರಿದ ಕಂದಾಯ ಇಲಾಖೆ

By News Desk BenkiyabaleJune 18, 2026 4:44 pm

ತುಮಕೂರು: ತುಮಕೂರು ತಾಲ್ಲೂಕು ಕೋರ ಹೋಬಳಿ ಬೆಳಧರ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ರಾಜಾರೋಷವಾಗಿ ನಡೆಯುತ್ತಿದ್ದು ಇದಕ್ಕೆ ಕಡಿವಾಣ…

ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು

June 18, 2026 1:49 pm

ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ

June 18, 2026 1:46 pm

ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ

June 18, 2026 1:42 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.