BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪ್ರೌಢಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾವಳಿ
  • ‘ನಮ್ಮ ಸಂಸ್ಕೃತಿ, ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಿ’
  • ನಗರದ ಅಮಾನಿಕೆರೆಗೆ ಡೀಸಿ ಭೇಟಿ ಬೋಟಿಂಗ್ ಪುನಃ ಆರಂಭಕ್ಕೆ ಸೂಚನೆ
  • ಕಾಂಗ್ರೆಸ್ ಸರ್ಕಾರ ರೈತರ ಹಿತ ಕಡೆಗಣಿಸಿದೆ
  • ಆಗಸ್ಟ್ ೧೬ ರಂದು ಬಳ್ಳಾರಿಯಲ್ಲಿ ಸಮಾವೇಶ
  • ಆ. ೫: ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ: ಡಾ. ಜಿ. ಪರಮೇಶ್ವರ
  • ಸುಪ್ತ ಪ್ರತಿಭೆಗಳನ್ನು ಹೊರ ಹಾಕಲು ಕಲಾ ತರಬೇತಿ ಸಹಕಾರಿ: ಎಡಿಸಿ
  • ಮತ್ತೊಮ್ಮೆ ಸಿಎಂ ಪಟ್ಟಣಕ್ಕೆ: ಶಾಸಕ ಎಚ್.ವಿ. ವೆಂಕಟೇಶ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಹಿಂದುಳಿದ ವರ್ಗದವರಿಗೆ ಕಾಂಗ್ರೆಸ್ ಯೋಜನೆಗಳನ್ನು ತಿಳಿಸಿ
ಇತರೆ ಸುದ್ಧಿಗಳು

ಹಿಂದುಳಿದ ವರ್ಗದವರಿಗೆ ಕಾಂಗ್ರೆಸ್ ಯೋಜನೆಗಳನ್ನು ತಿಳಿಸಿ

By News Desk BenkiyabaleUpdated:April 10, 2023 4:10 pm

ತುಮಕೂರು


ತುಮಕೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಪಂಚಾಯತ್ ಮತ್ತು ಬೂತ್ ಮಟ್ಟದ ಅಧ್ಯಕ್ಷರು, ಮುಂಚೂಣಿ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳ ಸಭೆಯನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ತುಮಕೂರು ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಕೆಂಪಣ್ಣ,ಕಳೆದ ಮೂರು ಚುನಾವಣೆಗಳಿಗೆ ಹೊಲಿಕೆ ಮಾಡಿದರೆ ಕಾಂಗ್ರೆಸ್ ಪಕ್ಷ ಕುಸಿಯುತ್ತಿರುವುದು ಸ್ಪಷ್ಟವಾಗಿರುವ ಹಿನ್ನೇಲೆಯಲ್ಲಿ, ಅತಿ ಹೆಚ್ಚು ದಲಿತ, ಹಿಂದುಳಿದ ಮತದಾರರನ್ನು ಹೊಂದಿರುವ ಗ್ರಾಮಾಂತರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನೆಲೆ ಕಲ್ಪಿಸುವ ನಿಟ್ಟಿನಲ್ಲಿ ಈ ಬಾರಿ ಹಿಂದುಳಿದ ವರ್ಗದ ಅಭ್ಯರ್ಥಿಯೊಬ್ಬರನ್ನು ಕಣಕ್ಕೆ ಇಳಿಸುವ ಚಿಂತನೆಯಲ್ಲಿ ಕಾಂಗ್ರೆಸ್ ಪಕ್ಷವಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯಕರ್ತರು, ಮುಖಂಡರ ಸಭೆಯನ್ನು ಆಯೋಜಿಸಿದ್ದು, ಹಿಂದುಳಿದ ವರ್ಗದ ಕಾಡುಗೊಲ್ಲ ಸಮುದಾಯಕ್ಕೆ ಸೇರಿದ ನಿವೃತ್ತ ಎಇಇ ಜಿ.ಹೆಚ್.ಷಣ್ಮುಖಪ್ಪ, ಸೂರ್ಯಮುಕುಂದರಾಜ್, ಶ್ರೀನಿವಾಸ್, ಆರ್.ನಾರಾಯಣ್, ಹೆಚ್.ನಿಂಗಪ್ಪ, ನರಸಿಂಹರಾಜು ಅವರುಗಳು ಪ್ರಬಲ ಆಕಾಂಕ್ಷಿಗಳಿದ್ದು, ಸಾಮಾಜಿಕ ನ್ಯಾಯದ ಹಿನ್ನೆಲೆಯಲ್ಲಿ ಜಿ.ಹೆಚ್.ಷಣ್ಮುಖಪ್ಪ ಅವರು ಅಭ್ಯರ್ಥಿಯಾಗುವ ಎಲ್ಲಾ ನಿರೀಕ್ಷೆಗಳಿದ್ದು, ನಾವೆಲ್ಲರೂ ಅವರ ಗೆಲುವಿಗೆ ಶಕ್ತಿ ಮೀರಿ ಪ್ರಯತ್ನಿಸಬೇಕೆಂದು ಮನವಿ ಮಾಡಿದರು.
ಡಿಸಿಸಿ ಮಾಜಿ ಅಧ್ಯಕ್ಷ ಆರ್.ರಾಮಕೃಷ್ಣಪ್ಪ ಮಾತನಾಡಿ, ತುಮಕೂರು ಗ್ರಾಮಾಂತರದಲ್ಲಿ ಎಸ್ಸಿ, ಎಸ್ಟಿ, ಓಬಿಸಿಯ ಸುಮಾರು 1.50ಲಕ್ಷ ಮತದಾರರಿದ್ದಾರೆ. ಇವರುಗಳನ್ನು ಕೇಂದ್ರೀಕರಿಸಿದರೆ ಗೆಲುವು ಸಾಧ್ಯ. ಬಡವರು, ದಲಿತರು, ಹಿಂದುಳಿದ ವರ್ಗದವರಿಗೆ ಅನ್ನ, ಆಶ್ರಯ, ಶಿಕ್ಷಣ ನೀಡಿದಂತಹ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸುವ ಕೆಲಸವನ್ನು ಮಾಡಿದರೆ ಹಾಲಿ ಮತ್ತು ಮಾಜಿ ಶಾಸಕರಿಗೆ ಸಡ್ಡು ಹೊಡೆಯಬಹುದಾಗಿದೆ ಎಂದರು.
ಬಯಲು ಸೀಮೆ ಅಭಿವೃದ್ದಿ ಮಂಡಳಿ ಮಾಜಿ ಅಧ್ಯಕ್ಷ ಕೆ.ಎ.ದೇವರಾಜು ಮಾತನಾಡಿ,ಗ್ರಾಮಾಂತರದಲ್ಲಿ ಸ್ಥಳೀಯರಿಗೆ ಟಿಕೇಟ್ ನೀಡದ ಪರಿಣಾಮ ಕಾರ್ಯಕರ್ತರ ಸಂಖ್ಯೆ ಕುಸಿಯುತ್ತಿದೆ.ಸಮರ್ಥ ನಾಯಕನ ಅಗತ್ಯವಿದೆ.ಹಾಗಾಗಿ ಕೆ.ಪಿ.ಸಿ.ಸಿ. ಜಿ.ಹೆಚ್.ಷಣ್ಮುಖಪ್ಪ ಅವರಿಗೆ ಟಿಕೇಟ್ ನೀಡಿದರೆ ಪಕ್ಷದಿಂದ ದೂರ ಸರಿದಿರುವ ಕಾರ್ಯಕರ್ತರನ್ನು ಒಗ್ಗೂಡಿಸಿ, ಪಕ್ಷದ ಅಭ್ಯರ್ಥಿಯ ಗೆಲುವಿಗೆ ನಾವೆಲ್ಲರೂ ಕೆಲಸ ಮಾಡಬೇಕಿದೆ.ಸಂಭಾವ್ಯ ಅಭ್ಯರ್ಥಿಯಾಗಿರುವ ಷಣ್ಮುಖಪ್ಪ ಇಂದಿನಿಂದಲೇ ಕ್ಷೇತ್ರದಲ್ಲಿ ಪ್ರಚಾರ ಅರಂಭಿಸಲಿ,ಇದರ ಜೊತೆಗೆ ಜಿಲ್ಲೆಯ ಎಲ್ಲಾ ನಾಯಕರು ಒಗ್ಗೂಡಿ ಸಮಾವೇಶ ನಡೆಸಿ, ಪಕ್ಷದ ಅಭ್ಯರ್ಥಿಗೆ ಬಲ ತುಂಬುವ ಕೆಲಸ ಮಾಡಬೇಕಾಗಿದೆ ಎಂದರು.
ಸಭೆಯಲ್ಲಿ ಕಾರ್ಯಕರ್ತರ ಅಭಿಪ್ರಾಯ ಮಂಡಿಸಿದ ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಕಾರ್ಯದರ್ಶಿ ಕೆ.ಜಿ.ವೆಂಕಟೇಶ್, ಗ್ರಾಮಾಂತರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷದವರು,ಕಾಂಗ್ರೆಸ್ ಕಾರ್ಯಕರ್ತರು ಜೋಕರ್‍ಗಳ ರೀತಿ ನೋಡುತ್ತಾರೆ.ಕಾಂಗ್ರೆಸ್ ಮತದಾರರಿದ್ದರೂ ಅವರನ್ನು ಸಂಘಟಿಸುವಂತಹ ನಾಯಕತ್ವದ ಕೊರತೆ ಇದೆ.ಚುನಾವಣೆಗೆ ಅಭ್ಯರ್ಥಿಯಾಗುವವರು ನಂತರ ಕಾಣೋಲ್ಲ. ಹಾಗಾಗಿ ಕಾರ್ಯಕರ್ತರ ಜೊತೆ ಸದಾ ಇರುವ ಸ್ಥಳೀಯರಿಗೆ ದೊರೆತರೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.
ಕ್ಷೇತ್ರದ ಹಲವಾರು ಕಾರ್ಯಕರ್ತರು ತಮ್ಮ ಅಭಿಪ್ರಾಯ ಮಂಡಿಸಿದಲ್ಲದೆ,ಕ್ಷೇತ್ರವನ್ನು ಕಾಂಗ್ರೆಸ್ ಮುಖಂಡರು ಕಡೆಗಣಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಭೆಯಲ್ಲಿ ಮುಖಂಡರಾದ ಸೂರ್ಯ ಮುಕುಂದರಾಜ್,ಎಸ್ಟಿ ಘಟಕದ ನರಸಿಂಹಯ್ಯ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನರಸಿಂಹಮೂರ್ತಿ,ಎಸ್ಸಿ ಘಟಕದ ಲಿಂಗರಾಜು,ಓಬಿಸಿ ಘಟಕದ ಪುಟ್ಟರಾಜು,ಕಾರ್ಮಿಕ ಘಟಕದ ಸೈಯದ್ ದಾದಾಪೀರ್, ಸಂಜೀತಕುಮಾರ್,ಕೈದಾಳ ರಮೇಶ್, ಓ.ಸಿ.ಕೃಷ್ಣಪ್ಪ,ಗೂಳರಿಮೆ ನಾಗರಾಜು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

(Visited 1 times, 1 visits today)
tumkur
Previous Articleವ್ಹೀಲ್‍ಚೇರ್ ಕ್ರಿಕೆಟ್ ಟೂರ್ನಮೆಂಟ್
Next Article ನಕಲಿ ಆಹ್ವಾನ ಪತ್ರಿಕೆ ಸಲ್ಲಿಸುವವರ ವಿರುದ್ಧ ಕಠಿಣ ಕ್ರಮ: ಜಿಲ್ಲಾಧಿಕಾರಿ
News Desk Benkiyabale

Related Posts

ಪ್ರೌಢಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾವಳಿ

August 04, 2025 4:02 pm ಇತರೆ ಸುದ್ಧಿಗಳು

‘ನಮ್ಮ ಸಂಸ್ಕೃತಿ, ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಿ’

August 04, 2025 4:01 pm ಇತರೆ ಸುದ್ಧಿಗಳು

ನಗರದ ಅಮಾನಿಕೆರೆಗೆ ಡೀಸಿ ಭೇಟಿ ಬೋಟಿಂಗ್ ಪುನಃ ಆರಂಭಕ್ಕೆ ಸೂಚನೆ

August 04, 2025 4:00 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಪ್ರೌಢಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾವಳಿ

August 04, 2025 4:02 pm
ಇತರೆ ಸುದ್ಧಿಗಳು

‘ನಮ್ಮ ಸಂಸ್ಕೃತಿ, ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಿ’

August 04, 2025 4:01 pm
ಇತರೆ ಸುದ್ಧಿಗಳು

ನಗರದ ಅಮಾನಿಕೆರೆಗೆ ಡೀಸಿ ಭೇಟಿ ಬೋಟಿಂಗ್ ಪುನಃ ಆರಂಭಕ್ಕೆ ಸೂಚನೆ

August 04, 2025 4:00 pm
ತುಮಕೂರು

ಕಾಂಗ್ರೆಸ್ ಸರ್ಕಾರ ರೈತರ ಹಿತ ಕಡೆಗಣಿಸಿದೆ

August 04, 2025 3:55 pm
ತುಮಕೂರು

ಆಗಸ್ಟ್ ೧೬ ರಂದು ಬಳ್ಳಾರಿಯಲ್ಲಿ ಸಮಾವೇಶ

August 02, 2025 3:21 pm
ತುಮಕೂರು

ಆ. ೫: ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ: ಡಾ. ಜಿ. ಪರಮೇಶ್ವರ

August 02, 2025 3:18 pm
Our Youtube Channel
Our Picks

ಪ್ರೌಢಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾವಳಿ

August 04, 2025 4:02 pm

‘ನಮ್ಮ ಸಂಸ್ಕೃತಿ, ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಿ’

August 04, 2025 4:01 pm

ನಗರದ ಅಮಾನಿಕೆರೆಗೆ ಡೀಸಿ ಭೇಟಿ ಬೋಟಿಂಗ್ ಪುನಃ ಆರಂಭಕ್ಕೆ ಸೂಚನೆ

August 04, 2025 4:00 pm

ಮತ್ತೊಮ್ಮೆ ಸಿಎಂ ಪಟ್ಟಣಕ್ಕೆ: ಶಾಸಕ ಎಚ್.ವಿ. ವೆಂಕಟೇಶ್

August 01, 2025 1:37 pm

ನಗರಾಭಿವೃದ್ಧಿಗೆ ಸ್ಲಂ ನಲ್ಲಿರುವ ಬಡವರ ಕೊಡುಗೆ ಅಪಾರ: ಶಾಸಕ ಜ್ಯೋತಿ ಗಣೇಶ್ ಹೇಳಿಕೆ

August 01, 2025 1:36 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಪ್ರೌಢಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾವಳಿ

By News Desk BenkiyabaleAugust 04, 2025 4:02 pm

ತುಮಕೂರು: ಯಂಗ್ ಚಾಲೆಂಜರ್ಸ್ ಸಂಸ್ಥೆ ಭಾನುವಾರ ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಹಿರಿಯ ಕ್ರೀಡಾಪಟು ದಿ.ಕೆ.ಎಸ್.ಶಂಕರ್ ಸ್ಮರಣಾರ್ಥ ಪ್ರೌಢಶಾಲಾ…

‘ನಮ್ಮ ಸಂಸ್ಕೃತಿ, ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಿ’

August 04, 2025 4:01 pm

ನಗರದ ಅಮಾನಿಕೆರೆಗೆ ಡೀಸಿ ಭೇಟಿ ಬೋಟಿಂಗ್ ಪುನಃ ಆರಂಭಕ್ಕೆ ಸೂಚನೆ

August 04, 2025 4:00 pm

ಕಾಂಗ್ರೆಸ್ ಸರ್ಕಾರ ರೈತರ ಹಿತ ಕಡೆಗಣಿಸಿದೆ

August 04, 2025 3:55 pm
News by Date
August 2025
M T W T F S S
 123
45678910
11121314151617
18192021222324
25262728293031
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.