BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ
  • ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು
  • ಮದರ್ ಥೆರೆಸಾರವರ ಜನ್ಮದಿನಾಚರಣೆ
  • ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ
  • ಅಪಘಾತವಲ್ಲ, ಅದು ಪೂರ್ವಯೋಜಿತ ಕೊಲೆ: ಗ್ರಾಮಸ್ಥರಿಂದ ಪ್ರತಿಭಟನೆ
  • ಬೆಂಗಳೂರಿನಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟದ ರಜತ ಮಹೋತ್ಸವ
  • ಅಡಿಕೆ ತೋಟದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಗಿಡಗಳು ನೆಲಸಮ
  • ಗ್ರಾಮ ದೇವತೆ ಅಮ್ಮನವರ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವಿಧಾನಸಭಾ ಚುನಾವಣೆ : ಜಿಲ್ಲಾಡಳಿತ ಸಕಲ ಸಿದ್ದತೆ
ಇತರೆ ಸುದ್ಧಿಗಳು

ವಿಧಾನಸಭಾ ಚುನಾವಣೆ : ಜಿಲ್ಲಾಡಳಿತ ಸಕಲ ಸಿದ್ದತೆ

By News Desk BenkiyabaleUpdated:May 09, 2023 4:42 pm

ತುಮಕೂರು


ರಾಜ್ಯದಲ್ಲಿ ಇಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ 2683 ಮತಗಟ್ಟೆಗಳಲ್ಲಿ ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸಲು ಚುನಾವಣಾ ಆಯೋಗದ ಸೂಚನೆ ಮೇರೆಗೆ ಜಿಲ್ಲಾಡಳಿತ ಸಕಲ ಸಿದ್ದತೆ ಕೈಗೊಂಡಿದೆ.
ನಾಳೆ ಜಿಲ್ಲೆಯ 2683 ಮತಗಟ್ಟೆಗಳಲ್ಲಿ ನಡೆಯುವ ಮತದಾನ ಕಾರ್ಯಕ್ಕೆ 11644 ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಈ ಅಧಿಕಾರಿಗಳು ಮತ್ತು ಸಿಬ್ಬಂದಿ ಇಂದು ಜಿಲ್ಲಾ ಕೇಂದ್ರ ತುಮಕೂರು ಸೇರಿದಂತೆ 10 ತಾಲ್ಲೂಕು ಕೇಂದ್ರಗಳಿಂದಲೂ 11 ವಿಧಾನಸಭಾ ಕ್ಷೇತ್ರಗಳಿಗೆ ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿಪ್ಯಾಟ್‍ಗಳನ್ನು ಪಡೆದು ಬಸ್‍ಗಳಲ್ಲಿ ನಿಯೋಜನೆಗೊಂಡಿರುವ ಮತಗಟ್ಟೆಗಳಿಗೆ ತೆರಳಿದರು.
ಚಿಕ್ಕನಾಯಕನಹಳ್ಳಿ ಕ್ಷೇತ್ರದ 262 ಮತಗಟ್ಟೆಗಳಿಗೆ 1152 ಅಧಿಕಾರಿಗಳು ಮತ್ತು ಸಿಬ್ಬಂದಿ, ತಿಪಟೂರು ಕ್ಷೇತ್ರದ 233 ಮತಗಟ್ಟೆಗಳಿಗೆ 1024 ಅಧಿಕಾರಿಗಳು, ತುರುವೇಕೆರೆ ಕ್ಷೇತ್ರದ 229 ಮತಗಟ್ಟೆಗಳಿಗೆ 1008 ಅಧಿಕಾರಿಗಳು, ಕುಣಿಗಲ್ ಕ್ಷೇತ್ರದ 264 ಮತಗಟ್ಟೆಗಳಿಗೆ 1160 ಅಧಿಕಾರಿಗಳು, ತುಮಕೂರು ನಗರ ಕ್ಷೇತ್ರದ 254 ಮತಗಟ್ಟೆಗಳಿಗೆ 1116 ಅಧಿಕಾರಿಗಳು ಮತ್ತು ಸಿಬ್ಬಂದಿ, ತುಮಕೂರು ಗ್ರಾಮಾಂತರ ಕ್ಷೇತ್ರದ 226 ಮತಗಟ್ಟೆಗಳಿಗೆ 996 ಅಧಿಕಾರಿಗಳು ಮತ್ತು ಸಿಬ್ಬಂದಿ, ಕೊರಟಗೆರೆ ಕ್ಷೇತ್ರದ 242 ಮತಗಟ್ಟೆಗಳಿಗೆ 904 ಅಧಿಕಾರಿಗಳು, ಗುಬ್ಬಿ ಕ್ಷೇತ್ರದ 212 ಮತಗಟ್ಟೆಗಳಿಗೆ 932 ಸಿಬ್ಬಂದಿ, ಸಿರಾ ಕ್ಷೇತ್ರದ 267 ಮತಗಟ್ಟೆಗಳಿಗೆ 1176 ಅಧಿಕಾರಿಗಳು, ಪಾವಗಡ ಕ್ಷೇತ್ರದ 246 ಮತಗಟ್ಟೆಗಳಿಗೆ 1084 ಅಧಿಕಾರಿಗಳು ಹಾಗೂ ಮಧುಗಿರಿ ಕ್ಷೇತ್ರದ 248 ಮತಗಟ್ಟೆಗಳಿಗೆ 1092 ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಲಾಗಿದೆ.
ತುಮಕೂರು ನಗರ ಕ್ಷೇತ್ರದ ಮತಗಟ್ಟೆಗಳಿಗೆ ಸರ್ಕಾರಿ ಪ.ಪೂ. ಕಾಲೇಜು ಮಸ್ಟರಿಂಗ್ ಕೇಂದ್ರದಿಂದ ಅಧಿಕಾರಿಗಳು ಮತ್ತು ಸಿಬ್ಬಂದಿ ಮತಯಂತ್ರಗಳೊಂದಿಗೆ ತೆರಳಿದರು. ತುಮಕೂರು ಗ್ರಾಮಾಂತರ ಕ್ಷೇತ್ರದ ಮತಗಟ್ಟೆಗಳಿಗೆ ಸರ್ವೋದಯ ಪ್ರಥಮ ದರ್ಜೆ ಕಾಲೇಜು ಮಸ್ಟರಿಂಗ್ ಕೇಂದ್ರದಿಂದ, ಚಿಕ್ಕನಾಯಕನಹಳ್ಳಿ ಕ್ಷೇತ್ರದ ಮತಗಟ್ಟೆಗಳಿಗೆ ಚಿ.ನಾ.ಹಳ್ಳಿಯ ಸರ್ಕಾರಿ ಸ್ವತಂತ್ರ ಪ.ಪೂ. ಕಾಲೇಜು ಮಸ್ಟರಿಂಗ್ ಕೇಂದ್ರದಿಂದ, ತಿಪಟೂರು ಕ್ಷೇತ್ರದ ಮತಗಟ್ಟೆಗಳಿಗೆ ತಿಪಟೂರಿನ ಸರ್ಕಾರಿ ಬಾಲಕರ ಪ.ಪೂ. ಕಾಲೇಜು, ತುರುವೇಕೆರೆಯ ಮತಗಟ್ಟೆಗಳಿಗೆ ತುರುವೇಕೆರೆ ಸರ್ಕಾರಿ ಪ.ಪೂ. ಕಾಲೇಜು, ಕುಣಿಗಲ್ ಮತಗಟ್ಟೆಗಳಿಗೆ ಸರ್ಕಾರಿ ಮಹಾತ್ಮಗಾಂಧಿ ಪ.ಪೂ. ಕಾಲೇಜು, ಗುಬ್ಬಿ ಮತಗಟ್ಟೆಗಳಿಗೆ ಮಾರನಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕೊರಟಗೆರೆಯ ಸರ್ಕಾರಿ ಪ.ಪೂ. ಕಾಲೇಜು, ಸಿರಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾವಗಡ ಸರ್ಕಾರಿ ಪ.ಪೂ. ಕಾಲೇಜು ಹಾಗೂ ಮಧುಗಿರಿ ಕ್ಷೇತ್ರಕ್ಕೆ ಮಧುಗಿರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಸ್ಟರಿಂಗ್ ಕೇಂದ್ರಗಳಿಂದ ಮತಗಟ್ಟೆ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಬಸ್‍ಗಳಲ್ಲಿ ನಿಯೋಜನೆಗೊಂಡಿರುವ ಮತಗಟ್ಟೆಗಳಿಗೆ ಕರೆದೊಯ್ಯಲಾಯಿತು.
ಜಿಲ್ಲೆಯಲ್ಲಿ ಒಟ್ಟು 1120698 ಪುರುಷ ಮತದಾರರು, 1127126 ಮಹಿಳಾ ಮತದಾರರು, 108 ಇತರೆ ಸೇರಿದಂತೆ ಜಿಲ್ಲೆಯಲ್ಲಿ 2247932 ಮತದಾರರು ಹಾಗೂ 776 ಸೇವಾ ಮತದಾರರು ನಾಳೆ ತಮ್ಮ ಮತ ಚಲಾಯಿಸುವ ಮೂಲಕ ಅಭ್ಯರ್ಥಿಗಳ ಹಣೆಬರಹ ಬರೆಯಲಿದ್ದಾರೆ.
2683 ಮತಗಟ್ಟೆಗಳಿಗೆ 362 ಬಸ್‍ಗಳು, 106 ಜೀಪ್ ಬುಲೇರೋ, ಮಿನಿಬಸ್ ಸೇರಿದಂತೆ ಒಟ್ಟು 564 ವಾಹನಗಳನ್ನು ಬಳಸಿಕೊಳ್ಳಲಾಗುವುದು ಎಂದ ಅವರು, 2683 ಮತಗಟ್ಟೆಗಳ ಪೈಕಿ 510 ಕ್ರಿಟಿಕಲ್ ಮತಗಟ್ಟೆಗಳು(ವಲ್ನರೆಬಲ್) ಹಾಗೂ 1363 ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಅಳವಡಿಸಪೆÇಲೀಸರು ಮತ್ತು 500 ತಮಿಳುನಾಡು ಪೆÇಲೀಸರು ಹಾಗೂ ಹೋಂಗಾರ್ಡ್ಸ್‍ಗಳನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

 

(Visited 1 times, 1 visits today)
tumkur
Previous Articleಮತದಾನ ಮಾಡಲು 12 ಪರ್ಯಾಯ ದಾಖಲೆಗಳು
Next Article ಚುನಾವಣೆ : ಸಕಲ ಸಿದ್ಧತೆ
News Desk Benkiyabale

Related Posts

ವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ

August 28, 2026 5:44 pm news

ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು

August 28, 2026 5:12 pm news

ಮದರ್ ಥೆರೆಸಾರವರ ಜನ್ಮದಿನಾಚರಣೆ

August 28, 2026 5:11 pm news
ತಾಜಾ ಸುದ್ಧಿಗಳು
news

ವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ

August 28, 2026 5:44 pm
news

ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು

August 28, 2026 5:12 pm
news

ಮದರ್ ಥೆರೆಸಾರವರ ಜನ್ಮದಿನಾಚರಣೆ

August 28, 2026 5:11 pm
news

ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ

August 28, 2026 5:09 pm
news

ಅಪಘಾತವಲ್ಲ, ಅದು ಪೂರ್ವಯೋಜಿತ ಕೊಲೆ: ಗ್ರಾಮಸ್ಥರಿಂದ ಪ್ರತಿಭಟನೆ

August 28, 2026 5:08 pm
news

ಬೆಂಗಳೂರಿನಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟದ ರಜತ ಮಹೋತ್ಸವ

August 28, 2026 5:06 pm
Our Youtube Channel
Our Picks

ವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ

August 28, 2026 5:44 pm

ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು

August 28, 2026 5:12 pm

ಮದರ್ ಥೆರೆಸಾರವರ ಜನ್ಮದಿನಾಚರಣೆ

August 28, 2026 5:11 pm

ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ

August 28, 2026 5:09 pm

ಅಪಘಾತವಲ್ಲ, ಅದು ಪೂರ್ವಯೋಜಿತ ಕೊಲೆ: ಗ್ರಾಮಸ್ಥರಿಂದ ಪ್ರತಿಭಟನೆ

August 28, 2026 5:08 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ

By News Desk BenkiyabaleAugust 28, 2026 5:44 pm

ತುಮಕೂರು: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ.ಬಿ.ವಿ ಅವರು ಜಿಲ್ಲಾ ಪಂಚಾಯತಿಯಲ್ಲಿAದು ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್…

ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು

August 28, 2026 5:12 pm

ಮದರ್ ಥೆರೆಸಾರವರ ಜನ್ಮದಿನಾಚರಣೆ

August 28, 2026 5:11 pm

ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ

August 28, 2026 5:09 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.